ಸುಳ್ಯ : ಖಾಸಗಿ ಬಸ್ ನಿಲ್ದಾಣದ ಬಳಿ ಜಯಶ್ರೀ ಫೂಟ್ ವೇರ್ ಶುಭಾರಂಭ

ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿರುವ ನಗರ ಪಂಚಾಯತ್ ವಾಣಿಜ್ಯ ಸಂಕೀರ್ಣ ದಲ್ಲಿ ಜಯಶ್ರೀ ಫೂಟ್ ವೇರ್ ಶುಭಾರಂಭಗೊಂಡಿದೆ. ಇಲ್ಲಿ ವಿಕೆಸಿ ಹಾಗೂ ಇತರ ನವನವೀನ ಮಾದರಿಯ ಉತ್ಕೃಷ್ಟ ಗುಣಮಟ್ಟದ ಪ್ರಸಿದ್ಧ ಕಂಪೆನಿಯ ಪುರುಷರ, ಮಹಿಳೆಯರ ಮಕ್ಕಳ ಪಾದರಕ್ಷೆಗಳು ಲಭ್ಯವಿದೆ ಎಂದು ಮಾಲಕರು ತಿಳಿಸಿದ್ದಾರೆ.

ಫೆ.11; ಭಾರತೀಯ ಮಜ್ದೂರ್ ಸಂಘದ ಕಾರ್ಮಿಕ ಸಮುದಾಯ ಭವನ ಲೋಕಾರ್ಪಣೆ

ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ ಹಾಗೂ ಕರ್ನಾಟಕ ಇಂಡಸ್ಟ್ರೀಯಲ್ ಸ್ಟಾಫ್ ಯೂನಿಯನ್ ನ ಜಂಟಿ ಸಂಘಟನೆಯಾದ ಭಾರತೀಯ ಮಜ್ದೂರು ಸೇವಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ನೂತನ ಕಾರ್ಮಿಕ ಸಮುದಾಯ ಭವನ "ತಿಲಕ ಭವನ" ಫೆ.೧೧ರಂದು ಉದ್ಘಾಟನೆಗೊಳ್ಳಲಿದೆ. ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರರವರು ಉದ್ಘಾಟನೆಯನ್ನು ಮಾಡಲಿದ್ದಾರೆ, ಭಾರತೀಯ ಮಜ್ದೂರ್...
Ad Widget

ದೊಡ್ಡತೋಟ : ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ವತಿಯಿಂದ ವೀಲ್ ಚಯರ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸುಳ್ಯ ದೊಡ್ಡ ತೋಟ ವಲಯದ ಅಮರ ಪಡ್ನೂರು ಗ್ರಾಮದ ದೊಡ್ಡಣ್ಣ ಗೌಡ ಕಾಯರ ಇವರಿಗೆ ಜಲಮಂಗಲ ಕಾರ್ಯಕ್ರಮದಲ್ಲಿ ಮಂಜುರಾದ ವೀಲ್ ಚೇರ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಈ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವೀಣಾ ಪಡ್ಪು, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು ನಿಕಟ...

ಜಾಲ್ಸೂರು : ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಭಾರತ ಸೇವಾದಳ ಸುಳ್ಯ ತಾಲೂಕು ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇವರ ಸಂಯೋಜಕತ್ವದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಉದ್ಘಾಟನಾ ಸಮಾರಂಭ ನಡೆಯಿತು.ಧ್ವಜಾರೋಹಣ ವನ್ನು ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ನೆರವೇರಿಸಿದರು.ಸಭಾಕಾರ್ಯಕ್ರಮವನ್ನು ಜಾಲ್ಸೂರು...

ಗುತ್ತಿಗಾರು :- ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ಮಾಹಿತಿ ಕಾರ್ಯಗಾರ

ಜ.06 ರಂದು ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ವತಿಯಿಂದ ಸಂಜೀವಿನಿ ಸದಸ್ಯೆಯರಿಗೆ ಸ್ವ ಉದ್ಯಮ ಹಾಗೂ ಉದ್ಯಮ ನಡೆಸಲು ಬ್ಯಾಂಕ್ ನಿಂದ ಸಿಗುವ ಸಾಲ ಸೌಲಭ್ಯ ಸಹಾಯಧನ ಹಾಗೂ ಕೃಷಿ ಪೌಷ್ಟಿಕ ತೋಟ-ಎಫ್.ಎಸ್.ಎಸ್.ಐ ನೋಂದಣಿ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಕೊಯ್ಲಸ್ ಗ್ರೂಪ್ ಪುತ್ತೂರು ಹಾಗೂ ದೇವಸ್ಥಾನಗಳ ಧಾರ್ಮಿಕ...

ಪಂಜ : ಪಂಚಲಿಂಗೇಶ್ವರ ದೇವರ ಬ್ರಹ್ಮ ರಥೋತ್ಸವ – ಆಕರ್ಷಕ ಕುಣಿತ ಭಜನೆ ಹಾಗೂ ಸಿಡಿಮದ್ದು ಪ್ರದರ್ಶನ

ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ಸಾವಿರಾರು ಭಕ್ತರ ಜಯಘೋಷದೊಂದಿಗೆ ಫೆ.6 ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ ,ಶಯನೋತ್ಸವ, ಕವಾಟ ಬಂಧನ ಜರುಗಿತು.ಈ ಬಾರಿ ಆಕರ್ಷಕ ಸಿಡಿಮದ್ದು ಪ್ರದರ್ಶನ ನಡೆಯಿತು. ದೇವಳದ ಮೈದಾನದಲ್ಲಿ ಭಜನಾ ತಂಡಗಳಿಂದ ಕುಣಿತ ಭಜನೆ...

ಬೆಳ್ಳಾರೆ : ಬಿಜೆಪಿ ವಿಜಯ ಸಂಕಲ್ಪ ಅಭಿಯಾನ

ಭಾರತೀಯ ಜನತಾ ಪಾರ್ಟಿಯ ಬೆಳ್ಳಾರೆ ಶಕ್ತಿ ಕೇಂದ್ರದ ವತಿಯಿಂದ ವಿಜಯ ಸಂಕಲ್ಪ ಅಭಿಯಾನ ಇಂದು ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರ.ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಪಕ್ಷದ ಪ್ರಮುಖರಾದ ಭಾಗೀರಥಿ ಮುರುಳ್ಯ, ವಸಂತ ನಡುಬೈಲು, ಶ್ರೀನಾಥ್ ಬಾಳಿಲ, ಕೂಸಪ್ಪ ಮುಗುಪ್ಪು ಮತ್ತಿತರರು...

ದೇವಚಳ್ಳ : ಕಾಂಕ್ರೀಟ್ ರಸ್ತೆ ಹಾಗೂ ಸರ್ಕಲ್ ಉದ್ಘಾಟನೆ

ರೂ.50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಮಾವಿನಕಟ್ಟೆ - ಗುರುಪುರ - ಮಡಪ್ಪಾಡಿ ರಸ್ತೆ ಕಾಂಕ್ರೀಟೀಕರಣ ಹಾಗೂ ಗುರುಪುರ ಎಂಬಲ್ಲಿ ನಿರ್ಮಾಣವಾದ ಸರ್ಕಲ್ ಉದ್ಘಾಟನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ನೆರವೇರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ...

ದೇವಚಳ್ಳ : ವಿಜಯ ಸಂಕಲ್ಪ ಮಹಾ ಅಭಿಯಾನ – ಸಚಿವ ಅಂಗಾರ ಭಾಗಿ

ಭಾರತೀಯ ಜನತಾ ಪಾರ್ಟಿಯ ವಿಜಯ ಸಂಕಲ್ಪ ಮಹಾ ಅಭಿಯಾನದ ಅಂಗವಾಗಿ ಸಚಿವರಾದ ಎಸ್. ಅಂಗಾರರವರು ಇಂದು ದೇವಚಳ್ಳ ಗ್ರಾಮದ ಹರಿಶ್ಚಂದ್ರ ಕನ್ನಡಕಜೆ ಮತ್ತು ಉಷಾ ಪಡ್ಪು ಹಾಗೂ ಮಡಪ್ಪಾಡಿ ಗ್ರಾಮದ ವಿನಯ್ ಮುಳುಗಾಡು ಮತ್ತು ಎಲ್ಯಣ್ಣ ಗೌಡರ ಮನೆಯಲ್ಲಿ ಸ್ಟಿಕ್ಕರ್, ಕರಪತ್ರ ಹಾಗೂ ಪಕ್ಷದ ಧ್ವಜ ಹಸ್ತಾಂತರಿಸಿ ಸದಸ್ಯತ್ವ ನೋಂದಾಯಿಸುವ ಮೂಲಕ ಅಭಿಯಾನದಲ್ಲಿ ಪಾಲ್ಗೊಂಡರು. ಕರ್ನಾಟಕ...

ಫೆ.13-ಫೆ.17: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಿಂದ ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.09ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಗೊನೆ ಕಡಿಯಲಾಗುವುದು. ಫೆ.13ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ ಗಂಟೆ 5.30ಕ್ಕೆ ತಂತ್ರಿಗಳ ಆಗಮನ, ಸ್ವಾಗತ,...
Loading posts...

All posts loaded

No more posts

error: Content is protected !!