ಸುಳ್ಯ ಮೆಸ್ಕಾಂ ಕಛೇರಿಯಲ್ಲಿ ಆಯುಧ ಪೂಜೆ.

ಸುಳ್ಯ ಮೆಸ್ಕಾಂ ವತಿಯಿಂದ ಗಣಪತಿ ಹವನ ಮತ್ತು ಆಯುಧ ಪೂಜೆಯು ದಿನಾಂಕ 10-10-2024 ರಂದು ನಡೆಯಿತು. ಮೆಸ್ಕಾಂ ಸುಳ್ಯ ಉಪ ವಿಭಾಗ ದ ಕಛೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ಕೆ ನಾಯ್ಕ್ ಇವರ ನೇತೃತ್ವದಲ್ಲಿ ಭಕ್ತಿ ಸಡಗರದಿಂದ ನಡೆಯಿತು ಈ ಸಂದರ್ಭದಲ್ಲಿ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೇನಾಲ ರಿಕ್ಷಾ ಚಾಲಕ ವಿಷ ಸೇವಿಸಿ ಆತ್ಮಹತ್ಯೆ.

ಅಜ್ಜಾವರ ಗ್ರಾಮದ ಮೇನಾಲ ರಿಕ್ಷಾ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಮಧ್ಯಾಹ್ನದ ಬಳಿಕ ಬಾಸ್ಕರ ರೈ ಯವರು ಕಾಣದೇ ಇದ್ದಾಗ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ಪ್ರಾರಂಭಿಸಿದ್ದು ಸಂಜೆ ತೋಟದಲ್ಲಿ ವಿಷ ಸೇವಿಸಿ ಸಾವಿಗೆ ಶರಣಾಗಿರುವುದು ಕಂಡುಬಂದಿದ್ದು ಪೋಲಿಸ್ ಇಲಾಖೆಗೆ ಮಾಹಿತಿ ರವಾನಿಸಿ ಇದೀಗ ಮೃತ ದೇಹವನ್ನು ಸರಕಾರಿ ಆಸ್ಪತ್ರೆಗೆ...
Ad Widget

ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕಾರ

ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ...

ತಾಲೂಕು ಕಛೇರಿ ಉದ್ಯೋಗಿ ಗಂಗಾಧರ ಪರಿವಾರಕಾನ ನಿಧನ.

ಸುಳ್ಯ ತಾಲೂಕು ಕಛೇರಿ ಸಿಬ್ಬಂದಿ ಗಂಗಾಧರ ಪರಿವಾರಕಾನ ಇಂದು ಮುಂಜಾನೆ ನಿಧನರಾದರು . ಅವರು ಕೆಲ ಸಮಯಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದೀಗ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಮೃತರು ಪತ್ನಿ ಬೇಬಿ ಮತ್ತು ಮಕ್ಕಳು, ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

ಶ್ರೀರಾಮ ಪೇಟೆಯಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಪರಸ್ಪರ ಡಿಕ್ಕಿ.

ಶ್ರೀರಾಮ ಪೇಟೆಯಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಸ್ಕಿಡ್ ಆಗಿ ಪರಸ್ಪರ ಡಿಕ್ಕಿಯಾದ ಘಟನೆ ಇದೀಗ ವರದಿಯಾಗಿದೆ. ಶ್ರೀ ರಾಮ ಭಜನಾ ಮಂದಿರದ ಬಳಿಯಲ್ಲಿ ಬೈಕ್ ಹಾಗೂ ಸ್ಕೂಟಿ ಮಧ್ಯೆ ಮುಖಾಮುಖಿಯಾಗಿ ಬರುತ್ತಿದ್ದಾಗ ಮಳೆಯ ಪರಿಣಾಮ ಸ್ಕಿಡ್ ಆಗಿ ಡಿಕ್ಕಿಯಾಗಿದ್ದು ಯಾವುದೇ ಗಾಯಗಳಿಲ್ಲದೇ ದ್ವಿಚಕ್ರ ವಾಹನ ಸವಾರರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸರಕಾರದಿಂದ ಅಕ್ರಮ ಪಡಿತರ ಚೀಟಿ ರದ್ದತಿಗೆ ಕ್ರಮ – ಸುಳ್ಯ ತಾಲೂಕಿನಲ್ಲಿ 2900ರಕ್ಕೂ ಅಧಿಕ ಪಡಿತರ ಚೀಟಿದಾರರ ಮಾಹಿತಿ ಕೇಳಿದ ಸರಕಾರ.

ಸುಳ್ಯ ತಾಲ್ಲೂಕಿನಲ್ಲಿ 42 ಬಿಪಿಎಲ್ ಪಡಿತರ ಚೀಟಿ ರದ್ದು , ಗ್ರಾಮವಾರು ಮಾಹಿತಿ ಇಲ್ಲಿದೆ. ವರದಿ: ಮಿಥುನ್ ಕರ್ಲಪ್ಪಾಡಿ ಸುಳ್ಯ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಜಾರಿ ಬೆನ್ನಲ್ಲೇ ನಕಲಿ ಪಡಿತರ ಚೀಟಿದಾರರ ಪತ್ತೆಗೆ ಸರಕಾರವು ಕ್ರಮ ಕೈಗೊಂಡಿದ್ದು ರಾಜ್ಯದಲ್ಲಿ ಲಕ್ಷಾಂತರ ನಕಲಿ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲಾಗಿದೆ. ಸುಳ್ಯ ತಾಲೂಕಿನಲ್ಲಿ 16 ಸಾವಿರಕ್ಕಿಂತ ಹೆಚ್ಚಿನ ಬಿಪಿಎಲ್...

ಅ 10 : ಡಾ| ಪುರುಷೋತ್ತಮ ಬಿಳಿಮಲೆಯವರ ಹುಡುಕಾಟ ಸಂಶೋಧನ ಗ್ರಂಥ ಮುಖ್ಯ ಮಂತ್ರಿಗಳಿಂದ ಬಿಡುಗಡೆ

ಅ 10 :ಡಾIಪುರುಷೋತ್ತಮ ಬಿಳಿಮಲೆಯವರ ಹುಡುಕಾಟ ಸಂಶೋಧನ ಗ್ರಂಥ ಮುಖ್ಯ ಮಂತ್ರಿಗಳಿಂದ ಬಿಡುಗಡೆ, ಕನ್ನಡ ಪ್ರಾಧಿಕಾರದ ಅಧ್ಯಕ್ಷ ಹಾಗೂ ಖ್ಯಾತ ಸಾಹಿತಿ ವಿಮರ್ಶಕ ಡಾI ಪುರುಷೋತ್ತಮ ಬಿಳಿಮಲೆ ವಿರಚಿತಾ "ಹುಡುಕಾಟ " ಸಂಶೋಧನ ಗ್ರಂಥವನ್ನು ಅ 10ರಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ...

ಸುಳ್ಯ : ನಗರದ ವಾಹನ ಪಾರ್ಕಿಂಗ್ ಸಮಸ್ಯೆ ಪರಿಹಾರದ ಜತೆಗೆ ದ್ವಿಚಕ್ರ ವಾಹನ ಸವಾರರ ಜೀವ ರಕ್ಷಕರಾದ ಸಂತೋಷ್

ಸುಳ್ಯ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಿರುವುಗಳು ಹೆಚ್ಚಾಗಿ ಮತ್ತು ದ್ವಿಚಕ್ರ ವಾಹನ ಸವಾರರು ಅತೀ ವೇಗದ ಚಲಾವಣೆ ಮತ್ತು ಜೀವ ರಕ್ಷಕ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿ ಹಲವಾರು ಜನ ಇತ್ತೀಚೆಗೆ ಜೀವ ಕಳೆದುಕೊಂಡಿದ್ದರು. ಜನರ ಜೀವ ಉಳಿಸುವ ನಿಟ್ಟಿನಲ್ಲಿ ಹಾಗೂ ನಗರದ ಪಾರ್ಕಿಂಗ್ ಸಮಸ್ಯೆ ಸರಿಪಡಿಸುವ ಸಲುವಾಗಿ ಪೋಲೀಸರು ನೋಟೀಸ್ ನೀಡಿ, ದಂಡ ಪಾವತಿಸುಂತೆ ಕ್ರಮಕೈಗೊಂಡ...

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ

ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು. ತೂಗು ಸೇತುವೆಯ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ...

ಸುಳ್ಯ ಪೋಲಿಸರ ಕಣ್ಣು ತಪ್ಪಿಸಿ ಪರಾರಿಯಾದವನ ಪತ್ತೆಗೆ ಬಲೆ ಬೀಸಿದ ಫೋಲೀಸರು – ಭಾವಚಿತ್ರ ಬಿಡುಗಡೆ – ಸಾರ್ವಜನಿಕರಿಗೆ ಕಂಡಲ್ಲಿ ಪೋಲಿಸರಿಗೆ ತಿಳಿಸಲು ಸೂಚನೆ.

ಸುಳ್ಯ : ಪೋಲೀಸರ ಕಣ್ಣು ತಪ್ಪಿಸಿ ಪರಾರಿಯಾದ ಆರೋಪಿ ಪತ್ತೆಗೆ ಪೋಲೀಸರು ಕಾರ್ಯಚರಣೆ ಆರಂಭಿಸಿದ್ದು, ಇದೀಗ ಆರೋಪಿಯ ಭಾವಚಿತ್ರವನ್ನು ಬಿಡುಗಡೆ ಗೊಳಿಸಿದ್ದಾರೆ. ಫೋಟೋದಲ್ಲಿ ಕಾಣಿಸಿದ ವ್ಯಕ್ತಿಯನ್ನು ಕಂಡಲ್ಲಿ ಪೋಲಿಸ್ ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ ಪ್ರಕರಣವೊಂದರಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದು ಈತನು ಸುಳ್ಯ ದ ಸುತ್ತ ಮುತ್ತಲಿದ್ದು ಸಾರ್ವಜನಿಕರಿಗೆ ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ...
Loading posts...

All posts loaded

No more posts

error: Content is protected !!