ಎನ್.ಎಂ.ಸಿ.ಯಲ್ಲಿ ಎನ್.ಐ.ಐ.ಟಿ ಮಂಗಳೂರು ವತಿಯಿಂದ ಉದ್ಯೋಗ ಮೇಳ ವಿವಿಧ ಕಂಪೆನಿಗಳಿಗೆ ವಿಧ್ಯಾರ್ಥಿಗಳು ಆಯ್ಕೆ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್.ಐ.ಐ.ಟಿ ಮಂಗಳೂರು ವತಿಯಿಂದ "ಉದ್ಯೋಗ ಮೇಳ 2024" ಆಯೋಜಿಸಲಾಗಿದ್ದು, ಉದ್ಘಾಟನಾ ಸಮಾರಂಭವು ಅಕ್ಟೋಬರ್ 22 ಮಂಗಳವಾರದಂದು ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಂಗಳೂರು ಎನ್.ಐ.ಐ.ಟಿ.ಯ ಐ.ಎಫ್.ಬಿ.ಐ ನ ವೃತ್ತಿ ಸಲಹೆಗಾರರಾದ ಶ್ರೀನಿಧಿ ಹಾಗೂ ರಮ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ವಹಿಸಿದ್ದು...

ಕಸಾಪ ಸುಳ್ಯ ವತಿಯಿಂದ ಶಾಲೆಗಳಿಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವ ಚಿತ್ರ ಹಸ್ತಾಂತರ

ದ ಕ ಜಿಲ್ಲಾ ಸಾಹಿತ್ಯ ಪರಿಷತ್,ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ,ಸುಳ್ಯ ಹೋಬಳಿ ಘಟಕಗಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸದ ಸವಿ ನೆನಪಿಗಾಗಿ ಕರ್ನಾಟಕದ ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳನ್ನು ತಾಲೂಕಿನ 105 ವಿದ್ಯಾ ಸಂಸ್ಥೆಗಳಿಗೆ ವಿತರಿಸುವ ಕಾರ್ಯಕ್ರಮವನ್ನು ಅಜ್ಜಾವರ ಮತ್ತು ಮಂಡೆಕೋಲು ಗ್ರಾಮಗಳ ಹತ್ತು ಶಾಲೆಗಳಿಗೆ ಪ್ರಾಯೋಜಕರ...
Ad Widget

ಬೆಳ್ಳಾರೆ : ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಕಾರ್ಯಕ್ರಮ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳ್ಳಾರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ತಾಲೂಕು, ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ನವಜೀವನ ಸಮಿತಿ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ...

ಸುಳ್ಯ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ,ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸುಳ್ಯ, ಸ. ಮಾ. ಹಿ. ಪ್ರಾ.ಶಾಲೆ ಸುಳ್ಯಮತ್ತು ಸ. ಮಾ. ಹಿ. ಪ್ರಾ.ಶಾಲೆ ಜಟ್ಟಿಪಳ್ಳ ಇದರ ಜಂಟಿ ಆಶ್ರಯದಲ್ಲಿ ಸ. ಮಾ. ಹಿ. ಪ್ರಾ.ಶಾಲೆ ಸುಳ್ಯ ಇದರ ಹಿರಿಯ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು...

ನವಂಬರ್ 10 ಕ್ಕೆ ಸುಳ್ಯದಲ್ಲಿ ಅದ್ದೂರಿ ತಮಿಳು ಬಾಂಧವರ ಸುವರ್ಣ ಮಹೋತ್ಸವ.

ಕರ್ನಾಟಕ ಸರಕಾರದ ಸಚಿವರುಗಳ ಸಹಿತ ಅಧಿಕಾರಿಗಳ ದಂಡು ಆಗಮನ. ಸಾಂಸ್ಕೃತಿಕ ಹಾಗೂ ಆಚರಣೆಗಳ ಅನಾವರಣ , ಬೃಹತ್ ಕಾಲ್ನಾಡಿಗೆ ಜಾಥಾ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ತಮ್ಮ ನೆಲೆ ಕಂಡುಕೊಂಡಿರುವ ಸುಮಾರು 10 ಸಾವಿರ ತಮಿಳು ಭಾಂದವರ ಸಮ್ಮಿಲನ ಸ್ವರ್ಣ ಮಹೋತ್ಸವ ಅದ್ದೂರಿ ಕಾರ್ಯಕ್ರಮ ನವಂಬರ್ 10 ರಂದು ಸುಳ್ಯದ...

ದೇಶದಾದ್ಯಂತ ಬಾಂಗ್ಲಾದ ಅಕ್ರಮ ವಲಸಿಗರ ಬಂಧನ ಬೆನ್ನಲ್ಲೇ ಸುಳ್ಯದಲ್ಲಿ ಪೋಲಿಸ್ ಬೀಟ್ ಹೆಚ್ಚಿಸಲು ಆಗ್ರಹ – ದೇಶದ ಭದ್ರತೆಗಾಗಿ ಜಾತಿ ಮತಗಳನ್ನು ಮರೆತು ಜನತೆ ಒಂದಾಗಬೇಕು – ಕಿರಣ್ ರೈ ಮೇನಾಲ.

ವರದಿ: ಮಿಥುನ್ ಕರ್ಲಪ್ಪಾಡಿ. ದೇಶಾದ್ಯಂತ ಬಾಂಗ್ಲಾ ಹಾಗೂ ಪಾಪಿ ಪಾಕಿಸ್ತಾನದ ಪ್ರಜೆಗಳು ಅಕ್ರಮವಾಗಿ ಪ್ರವೇಶಿಸಿ ಕಾನೂನುಬಾಹಿರ ಚಟುವಟಿಕೆ, ಬೇಹುಗಾರಿಕೆ ಸೇರಿದಂತೆ ದುಷ್ಕೃತ್ಯಗಳನ್ನು ಎಸಗಿ ಪರಾರಿ ಆಗುತ್ತಿದ್ದು ಇವುಗಳನ್ನು ಕೇಂದ್ರ ತನಿಖಾ ಸಂಸ್ಥೆಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಜರುಗಿಸುತ್ತಿದ್ದು ಇದೀಗ ಕರಾವಳಿಯಲ್ಲಿಯು ಮೀನುಗಾರಿಕಾ ಬೋಟ್ ಗಳಲ್ಲಿ ಬಾಂಗ್ಲ ವಲಸಿಗರನ್ನು ಗುರುತಿಸಿ ಬಂಧಿಸಲಾಗಿದೆ ಇವೆಲ್ಲದರ...

ಸುಳ್ಯ ಮೆಸ್ಕಾಂ ಕಛೇರಿಯಲ್ಲಿ ಆಯುಧ ಪೂಜೆ.

ಸುಳ್ಯ ಮೆಸ್ಕಾಂ ವತಿಯಿಂದ ಗಣಪತಿ ಹವನ ಮತ್ತು ಆಯುಧ ಪೂಜೆಯು ದಿನಾಂಕ 10-10-2024 ರಂದು ನಡೆಯಿತು. ಮೆಸ್ಕಾಂ ಸುಳ್ಯ ಉಪ ವಿಭಾಗ ದ ಕಛೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ಕೆ ನಾಯ್ಕ್ ಇವರ ನೇತೃತ್ವದಲ್ಲಿ ಭಕ್ತಿ ಸಡಗರದಿಂದ ನಡೆಯಿತು ಈ ಸಂದರ್ಭದಲ್ಲಿ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೇನಾಲ ರಿಕ್ಷಾ ಚಾಲಕ ವಿಷ ಸೇವಿಸಿ ಆತ್ಮಹತ್ಯೆ.

ಅಜ್ಜಾವರ ಗ್ರಾಮದ ಮೇನಾಲ ರಿಕ್ಷಾ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಮಧ್ಯಾಹ್ನದ ಬಳಿಕ ಬಾಸ್ಕರ ರೈ ಯವರು ಕಾಣದೇ ಇದ್ದಾಗ ಮನೆಯವರು ಮತ್ತು ಸ್ಥಳೀಯರು ಹುಡುಕಾಟ ಪ್ರಾರಂಭಿಸಿದ್ದು ಸಂಜೆ ತೋಟದಲ್ಲಿ ವಿಷ ಸೇವಿಸಿ ಸಾವಿಗೆ ಶರಣಾಗಿರುವುದು ಕಂಡುಬಂದಿದ್ದು ಪೋಲಿಸ್ ಇಲಾಖೆಗೆ ಮಾಹಿತಿ ರವಾನಿಸಿ ಇದೀಗ ಮೃತ ದೇಹವನ್ನು ಸರಕಾರಿ ಆಸ್ಪತ್ರೆಗೆ...

ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕಾರ

ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ...

ತಾಲೂಕು ಕಛೇರಿ ಉದ್ಯೋಗಿ ಗಂಗಾಧರ ಪರಿವಾರಕಾನ ನಿಧನ.

ಸುಳ್ಯ ತಾಲೂಕು ಕಛೇರಿ ಸಿಬ್ಬಂದಿ ಗಂಗಾಧರ ಪರಿವಾರಕಾನ ಇಂದು ಮುಂಜಾನೆ ನಿಧನರಾದರು . ಅವರು ಕೆಲ ಸಮಯಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದೀಗ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಮೃತರು ಪತ್ನಿ ಬೇಬಿ ಮತ್ತು ಮಕ್ಕಳು, ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!