ವಳಲಂಬೆ : ಸ್ವಚ್ಛ ಭಾರತ ವಿಷನ್ ಯೋಜನೆ ಅಂಗವಾಗಿ ಗಾಂಧಿ ಜಯಂತಿಯಂದು ಸ್ವಚ್ಛತಾ ಕಾರ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಲ್ಪನೆಯ "ಸ್ವಚ್ಛ ಭಾರತ ವಿಷನ್" ಯೋಜನೆ ಅಂಗವಾಗಿ ಗಾಂಧಿ ಜಯಂತಿಯ ದಿನದಂದು ಪ್ರತಿಯೊಬ್ಬ ನಾಗರೀಕನು ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಾಗೂ ಸೇವಾ ಪಾಕ್ಷಿಕ ಕಾರ್ಯಯೋಜನೆ ಮಾಡಬೇಕು ಎಂದು ಕರೆ ನೀಡಿದ್ದರು. ಇದರ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಅಧ್ಯಕ್ಷರಾದ ವೆಂಕಟ್ ವಳಲಂಬೆ ಯವರ ನೇತೃತ್ವದಲ್ಲಿ ಗುತ್ತಿಗಾರು ಶಕ್ತಿ ಕೇಂದ್ರ...

ಉಬರಡ್ಕ : ಗಾಂಧಿಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಉಬರಡ್ಕ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ "ಸ್ವಚ್ಛತೆಯೇ ಸೇವೆ 2024" ಕಾರ್ಯಕ್ರಮದ ಅಂಗವಾಗಿ ಉಬರಡ್ಕ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಈ ಸಂದರ್ಧದಲ್ಲಿ ಪಂಚಾಯತ್ ಅಧ್ಯಕ್ಷರು, ಪಿಡಿಓ, ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆ, ಉಬರಡ್ಕ ಯುವಕ ಮಂಡಲ ಪದಾಧಿಕಾರಿಗಳು ಭಾಗವಹಿಸಿದ್ದರು.
Ad Widget

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹರಿಹರ ಪಳ್ಳತ್ತಡ್ಕ ಕ್ಲಸ್ಟರ್ ನ 10 ಶಾಲೆಗಳಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ವಿತರಣೆ

ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಳ್ಯ ಮತ್ತು ಪಂಜ ಹೋಬಳಿ ಘಟಕಗಳ ಆಶ್ರಯದಲ್ಲಿ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯ ತಾಲೂಕಿನ 105 ಶಾಲೆಗಳಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಭಾವಚಿತ್ರ ವಿತರಣಾ ಕಾರ್ಯಕ್ರಮವು ನಡೆಯುತ್ತಿದ್ದು, ಅ.01 ರಂದು ಹರಿಹರ ಪಳ್ಳತ್ತಡ್ಕ ಕ್ಲಸ್ಟರ್ ನ 10 ಶಾಲೆಗಳಿಗೆ ಜ್ಞಾನಪೀಠ ಪ್ರಶಸ್ತಿ...

ಗಾಂಧಿ‌ಜಯಂತಿ ಪ್ರಯುಕ್ತ ಪಯಸ್ವಿನಿ ಯುವಕ ಮಂಡಲದಿಂದ ಸ್ವಚ್ಚತಾ ಅಭಿಯಾನ

ಸ್ವಚ್ಛತೆಯ ಜಾಗೃತಿ ‌ನಿರಂತರ : ಡಾ.ಗಿರೀಶ್ ಭಾರದ್ವಾಜ್ ಅ.2 ರ ಗಾಂಧಿ ಜಯಂತಿ ಪ್ರಯುಕ್ತ ಸುಳ್ಯ ಕೇರ್ಪಳ ಪಯಸ್ವಿನಿ ಯುವಕ ಮಂಡಲದ ಆಶ್ರಯದಲ್ಲಿ ಸ್ವಚ್ಚತಾ ಅಭಿಯಾನ ಭಸ್ಮಡ್ಕ ಜಂಕ್ಷನ್ ನಿಂದ ಕೆ.ವಿ.ಜಿ. ಕ್ಯಾಂಪಸ್ ರಸ್ತೆಯ‌ ತನಕ ನಡೆಯಿತು. ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ರವರು ಅಭಿಯಾನಕ್ಕೆ ಚಾಲನೆ ನೀಡಿ, ಯುವಕ ಸಂಘಗಳ ಸ್ವಚ್ಚತಾ ಅಭಿಯಾನದಲ್ಲಿ ತೊಡಗಿಸಿಕೊಳ್ಳುವುದರ...

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪುತ್ತೂರಿನ ಕಿಶೋರ್ ಬೊಟ್ಯಾಡಿ

ಕೋಟ ಶ್ರೀನಿವಾಸ ಪೂಜಾರಿಯವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಕಣಕ್ಕಿಳಿಸಲಾಗಿದೆ. ಪುತ್ತೂರಿನವರಾಗಿರುವ ಕಿಶೋರ್ ಕುಮಾ‌ರ್ ಅವರು ಬಿಜೆಪಿಯ ಯುವ ನಾಯಕರಾಗಿದ್ದು, ಈ ಹಿಂದೆ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೂ ಅವರ ಹೆಸರು ಕೇಳಿ ಬಂದಿತ್ತು.

ನಡುಗಲ್ಲು : ಜವಾಹರ್ ಯುವಕ ಮಂಡಲದ ವಾರ್ಷಿಕ ಮಹಾಸಭೆ

ನೂತನ ಅಧ್ಯಕ್ಷರಾಗಿ ಕುಶನ್ ಉತ್ರಂಬೆಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ, ಕೋಶಾಧಿಕಾರಿ ಯುವರಾಜ ತಂಟೆಪ್ಪಾಡಿ ನಾಲ್ಕೂರು ಗ್ರಾಮದ ನಡುಗಲ್ಲಿನ ಜವಾಹರ್ ಯುವಕ ಮಂಡಲ(ರಿ.) ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡುಗಲ್ಲು ಶಾಲಾ ವಠಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಕುಶನ್ ಉತ್ರಂಬೆ ಹಾಗೂ ಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ ಆಯ್ಕೆಯಾದರು.ಜೊತೆಗೆ ವಿವಿಧ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು,...

ಸೂರ್ಯಮನೆ ವಾಸುದೇವ ಗೌಡ ನಿಧನ

ಉಬರಡ್ಕ ಮಿತ್ತೂರು ಗ್ರಾಮದ ಸೂರ್ಯ ಮನೆ ವಾಸುದೇವ ಗೌಡರವರು ಸೆ. 29ರಂದು ಅಸೌಖ್ಯದಿಂದ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಯಮುನಾ, ಪುತ್ರರಾದ ಅಶೋಕ ಜೈಪ್ರಸಾದ್‌, ಸೊಸೆಯಂದಿರು, ಕುಟುಂಬಸ್ಥರು ಬಂಧುಗಳನ್ನು ಅಗಲಿದ್ದಾರೆ

ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಕಮಲಾಕ್ಷ ಆಚಾರ್ಯ ಗೂನಡ್ಕ, ಕಾರ್ಯದರ್ಶಿಯಾಗಿ ತೇಜಸ್ ಆಚಾರ್ಯ ಕಲ್ಕ , ಕೋಶಾಧಿಕಾರಿಯಾಗಿ ಗೋಪಾಲಕೃಷ್ಣ ಆಚಾರ್ಯ ಮರ್ಗಿಲಡ್ಕ

ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘ ಸುಳ್ಯ ತಾಲೂಕು ಇದರ ವಾರ್ಷಿಕ ಮಹಾಸಭೆಯು ತಾಲೂಕು ಸಮಿತಿಯ ಅಧ್ಯಕ್ಷರಾದ ವಾಸುದೇವ ಆಚಾರ್ಯ ಮರ್ಕಂಜ ಇವರ ಅಧ್ಯಕ್ಷತೆಯಲ್ಲಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ( ರಿ) ಬೆಳ್ಳಾರೆಯಲ್ಲಿ ಸೆ. 29 ರಂದು ನಡೆಯಿತು.ನೂತನ ಅಧ್ಯಕ್ಷರಾಗಿ ಕಮಲಾಕ್ಷ ಆಚಾರ್ಯ ಗೂನಡ್ಕ, ಕಾರ್ಯದರ್ಶಿಯಾಗಿ ತೇಜಸ್ ಆಚಾರ್ಯ ಕಲ್ಕ , ಕೋಶಾಧಿಕಾರಿಯಾಗಿ...

ಹರಿಹರ ಪಳ್ಳತ್ತಡ್ಕ : ಬಿಜೆಪಿ ಒ.ಬಿ.ಸಿ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಸದಸ್ಯತ್ವ ಅಭಿಯಾನ

ಹರಿಹರ ಪಳ್ಳತ್ತಡ್ಕದಲ್ಲಿ ಬಿಜೆಪಿ ಒ.ಬಿ.ಸಿ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಸದಸ್ಯತ್ವ ಅಭಿಯಾನ ನಡೆಯಿತು.ಈ ಸಂದರ್ಭದಲ್ಲಿ ಒ.ಬಿ.ಸಿ ಸುಳ್ಯ ಮಂಡಲದ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ, ಒ.ಬಿ.ಸಿ ಮೋರ್ಚಾ ಸದಸ್ಯೆ ಶ್ರೀಮತಿ ಬಿಂದು.ಪಿ, ಯುವ ಮೋರ್ಚಾ ಸದಸ್ಯ ಯತೀಶ್ ವಾಡ್ಯಪ್ಪನ ಮನೆ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯಕುಮಾರ್ ಅಂಙಣ, ಹರಿಹರ ಶಕ್ತಿಕೇಂದ್ರದ ಪ್ರಮುಖ...

ನಡುಗಲ್ಲು : ಜವಾಹರ್ ಯುವಕ ಮಂಡಲದ ವಾರ್ಷಿಕ ಮಹಾಸಭೆ

ನೂತನ ಅಧ್ಯಕ್ಷರಾಗಿ ಕುಶನ್ ನಡುಗಲ್ಲುಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ ನಾಲ್ಕೂರು ಗ್ರಾಮದ ನಡುಗಲ್ಲಿನ ಜವಾಹರ್ ಯುವಕ ಮಂಡಲ(ರಿ.) ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡುಗಲ್ಲು ಶಾಲಾ ವಠಾರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಕುಶನ್ ನಡುಗಲ್ಲು ಹಾಗೂ ಕಾರ್ಯದರ್ಶಿಯಾಗಿ ಯನಿತ್ ಕುಮಾರ್ ಪಡ್ರೆ ಆಯ್ಕೆಯಾದರು.ಜೊತೆಗೆ ವಿವಿಧ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು, ಗೌರವಾಧ್ಯಕ್ಷರಾಗಿ ಪ್ರಶಾಂತ್ ಅಂಬೆಕಲ್ಲು,...
Loading posts...

All posts loaded

No more posts

error: Content is protected !!