ಹಿಂದು ಕಾರ್ಯಕರ್ತರ ಬಂಧನ ಖಂಡಿಸಿ ನಗರದಲ್ಲಿ ಪರಿವಾರ ಸಂಘಟನೆಗಳಿಂದ ಮೆರವಣಿಗೆ – ದೈವಸ್ಥಾನದಲ್ಲಿ ಪ್ರಾರ್ಥನೆ – ಠಾಣೆಯ ಗೇಟಿನ ಬಳಿ ಪ್ರತಿಭಟನೆ

ಅನ್ಯ ಕೋಮಿನ ಯುವಕ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಸೆ.23 ರಂದು ಸುಳ್ಯ ನಗರ ಭಜರಂಗದಳ ಮುಖಂಡ ವರ್ಷಿತ್ ಮತ್ತು ಮಿಥುನ್ ಎಂಬ ಇಬ್ಬರು ಕಾರ್ಯಕರ್ತರನ್ನು ಹಲ್ಲೆ ಪ್ರಕರಣದ ಸೆಕ್ಷನ್ ಅಳವಡಿಸದೆ ಕೊಲೆಯತ್ನ ಪ್ರಕರಣ ದಾಖಲಿಸಿ ಬಂಧನ ಮಾಡಲಾಗಿದೆ ಎಂದು ಆರೋಪಿಸಿ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮುಂಜಾನೆ 9 ಗಂಟೆಯ ಎಬಿವಿಪಿ...

ಮಂಗಳೂರಿನಲ್ಲಿ ಅಪಘಾತ – ಆಲೆಟ್ಟಿಯ ಯುವಕ ಮೃತ್ಯು

ಮಂಗಳೂರಿನ ಮಾರಿಪಳ್ಳದಲ್ಲಿ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ನಡೆದ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ರವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ದುರ್ಮರಣವನ್ನಪ್ಪಿದ ಘಟನೆ ವರದಿಯಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ ಬೈಕಿನಲ್ಲಿ ಹೋಗುತ್ತಿರುವಾಗ ಮಾರಿಪಳ್ಳ ಎಂಬಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ ಸೇವಂತ್ ರವರು ರಸ್ತೆ ಮೇಲೆ ಬಿದ್ದು...
Ad Widget

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ- ಕಾನೂನು ಅರಿವು ಕಾರ್ಯಕ್ರಮ

ಕಾನೂನು ಸೇವೆಗಳ ಸಮಿತಿ ಸುಳ್ಯ , ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಆಲೆಟ್ಟಿ ಮಿತ್ತಡ್ಕ ಸುಳ್ಯಹಾಗೂ ವಕೀಲರ ಸಂಘ, ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 23 ರಂದು ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹಿರಿಯ ಸಿವಿಲ್...

ಶಿಕ್ಷಕರಿಂದ ಮಾತ್ರ ಉತ್ತಮ ನಾಯಕನ ಸೃಷ್ಟಿ ಸಾಧ್ಯ : ಸವಿತಾರ ಮುಡೂರು

ಬೆಳ್ಳಾರೆ ಜ್ಞಾನದೀಪದಲ್ಲಿ ಪರಿಣಾಮಕಾರಿ ನಾಯಕತ್ವ ತರಬೇತಿ ಪ್ರತಿಯೊಬ್ಬರಲ್ಲೂ ನಾಯಕತ್ವದ ಗುಣವಿರುತ್ತದೆ. ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವದ ಗುಣಗಳನ್ನು ಕಲಿಸಿಕೊಟ್ಟು ಸಮಾಜದ ಉತ್ತಮ ನಾಯಕರನ್ನಾಗಿ ರೂಪಿಸುವ ಕೆಲಸ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಜೇಸಿಐ ವಲಯ ತರಬೇತುದಾರ ಸವಿತಾರ ಮುಡೂರು ಹೇಳಿದರು. ಅವರು ಬೆಳ್ಳಾರೆ ಜೇಸಿಐ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆದ ಪರಿಣಾಮಕಾರಿ ನಾಯಕತ್ವ...

ವಿದ್ಯಾರ್ಥಿವೇತನ,ವಿವಿಧ ಪ್ರಶಸ್ತಿ ಪುರಸ್ಕಾರ ಪ್ರದಾನದೊಂದಿಗೆ ಬೆಳ್ಳಾರೆ ಜೇಸಿ ಸಪ್ತಾಹ ಸಮಾರೋಪ

ವಿವಿಧ ಸಾರ್ವಜನಿಕ ಕಾರ್ಯಕ್ರಮ ಹಾಗೂ ತರಬೇತು ಕಾರ್ಯಕ್ರಮಗಳೊಂದಿಗೆ ನಡೆದ ಬೆಳ್ಳಾರೆ ಜೇಸಿಐನ ಜೇಸಿ ಸಪ್ತಾಹದ ಸಮಾರೋಪ ಸಮಾರಂಭ ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ನಡೆಯಿತು. ಸಮಾರಂಭದಲ್ಲಿ ದಿ. ಜೇಸಿ ಲೋಕೇಶ್ ಪೆರ್ಗಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು 17 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಯುವ ಪುರಸ್ಕಾರವನ್ನು ಡಾ.ಕಿಶನ್ ರಾವ್ ಬಾಳಿಲ, ಪ್ರತಿಭಾ ಪುರಸ್ಕಾರವನ್ನು...

ಪೆರುವಾಜೆಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಜೇಸಿಐ ಬೆಳ್ಳಾರೆಯ ಜೇಸೀ ಸಪ್ತಾಹದ ಅಂಗವಾಗಿ ಬೃಹತ್ ಸ್ವಚ್ಛತಾ ಆಂದೋಲನ ಪೆರುವಾಜೆಯಲ್ಲಿ ನಡೆಯಿತು. ಪೆರುವಾಜೆ ಶ್ರೀ ಜಾಲದುರ್ಗಾ ದೇವಿ ದೇವಸ್ಥಾನದ ಮುಂಭಾಗದಲ್ಲಿ ಸ್ವಚ್ಛತಾ ಆಂದೋಲನಕ್ಕೆ ದೇವಸ್ಥಾನದ ಆಡಳಿತಧಿಕಾರಿ ಮತ್ತು ಪೆರುವಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಚಾಲನೆ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪೆರುವಾಜೆ ಡಾ. ಕೆ ಶಿವರಮ...

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಠಾಣೆ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ.

ಸುಳ್ಯ : ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಠಾಣೆ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ. ಹಿಂದೂ ಪರ ಕಾರ್ಯಕರ್ತರ ಬಂಧನ ಖಂಡಿಸಿ ಹಿಂದೂ ಪರ ಸಂಘಟನೆಗಳು ಕಾರ್ಯಕರ್ತರು ಠಾಣೆಯ ಗೇಟಿನ ಬಳಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದು ಘೋಷಣೆ ಕೂಗಲಾಗುತ್ತಿದೆ

ಗೂನಡ್ಕ: ಸ್ಕೂಟಿ ಮತ್ತು ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ- ಸ್ಕೂಟಿ ಸವಾರ ಗಂಭೀರ

ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ಸ್ಕೂಟಿ ಮತ್ತು ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಾಸರಗೋಡಿನ ಜುನೈದ್ ಅವರು ಎಮ್ಮೆಮಾಡಿಗೆ ಹೋಗಿ ವಾಪಸ್ ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮತ್ತು ಜುನೈದ್ ಅವರ...

ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ .

ಜೆ.ಡಿ.ಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ನೀಡಿದರು.. ದಂಪತಿ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು ಬಳಿಕ ಪತ್ರಕರ್ತರ ಜೊತೆಗೆ ಮಾತನಾಡುತ್ತಾ ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದುವರೆ ವರ್ಷದ ಆಡಳಿತದ ಅವಧಿಯಲ್ಲಿ ಸಂಪೂರ್ಣ ವಿಫಲತೆಯನ್ನು ಕಾಣುವುದರೊಂದಿಗೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಈ ಬಗ್ಗೆ ರಾಜ್ಯಾದ್ಯಂತ...

ಮಂಗಳೂರು ಆಸ್ಪತ್ರೆಗೆ ಮಗುವನ್ನು ಕರೆದೊಯ್ಯುತ್ತಿದ್ದ ಸುಳ್ಯದ ಅಂಬ್ಯುಲೆನ್ಸ್‌ ಕಬಕದಲ್ಲಿ ಅಪಘಾತ .

ಸುಳ್ಯ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಮಗುವನ್ನು ಚಿಕಿತ್ಸೆಗಾಗಿ ಕೊಂಡೊಯ್ಯುತ್ತಿದ್ದ ಸುಳ್ಯದ ಶಿವ ಅಂಬ್ಯುಲೆನ್ಸ್ ಕಬಕದಲ್ಲಿ ಅಪಘಾತ ವಾಗಿರುವ ಘಟನೆ ಸೆ. 23 ರಂದು ಸಂಜೆ ವರದಿಯಾಗಿದೆ. ಕಬಕ ಬಳಿ ರಸ್ತೆಗೆ ಅಡ್ಡಲಾಗಿ ಬಂದ ದೋಸ್ತ್ ವಾಹನಕ್ಕೆ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದ್ದು ವಾಹನಗಳು ಜಖಂಗೊಂಡಿದೆ. ಮಗುವನ್ನು ಮತ್ತು ಮನೆಯವರನ್ನು ಬೇರೆ ವಾಹನದಲ್ಲಿ ಮಂಗಳೂರಿಗೆ ಕಳುಹಿಸಿ ಕೊಡಲಾಗಿದೆ ಎಂದು...
Loading posts...

All posts loaded

No more posts

error: Content is protected !!