ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಠಾಣೆ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ.

ಸುಳ್ಯ : ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಠಾಣೆ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ. ಹಿಂದೂ ಪರ ಕಾರ್ಯಕರ್ತರ ಬಂಧನ ಖಂಡಿಸಿ ಹಿಂದೂ ಪರ ಸಂಘಟನೆಗಳು ಕಾರ್ಯಕರ್ತರು ಠಾಣೆಯ ಗೇಟಿನ ಬಳಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದು ಘೋಷಣೆ ಕೂಗಲಾಗುತ್ತಿದೆ

ಗೂನಡ್ಕ: ಸ್ಕೂಟಿ ಮತ್ತು ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ- ಸ್ಕೂಟಿ ಸವಾರ ಗಂಭೀರ

ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ಸ್ಕೂಟಿ ಮತ್ತು ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಾಸರಗೋಡಿನ ಜುನೈದ್ ಅವರು ಎಮ್ಮೆಮಾಡಿಗೆ ಹೋಗಿ ವಾಪಸ್ ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮತ್ತು ಜುನೈದ್ ಅವರ...
Ad Widget

ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ .

ಜೆ.ಡಿ.ಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ನೀಡಿದರು.. ದಂಪತಿ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು ಬಳಿಕ ಪತ್ರಕರ್ತರ ಜೊತೆಗೆ ಮಾತನಾಡುತ್ತಾ ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದುವರೆ ವರ್ಷದ ಆಡಳಿತದ ಅವಧಿಯಲ್ಲಿ ಸಂಪೂರ್ಣ ವಿಫಲತೆಯನ್ನು ಕಾಣುವುದರೊಂದಿಗೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಈ ಬಗ್ಗೆ ರಾಜ್ಯಾದ್ಯಂತ...

ಮಂಗಳೂರು ಆಸ್ಪತ್ರೆಗೆ ಮಗುವನ್ನು ಕರೆದೊಯ್ಯುತ್ತಿದ್ದ ಸುಳ್ಯದ ಅಂಬ್ಯುಲೆನ್ಸ್‌ ಕಬಕದಲ್ಲಿ ಅಪಘಾತ .

ಸುಳ್ಯ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಮಗುವನ್ನು ಚಿಕಿತ್ಸೆಗಾಗಿ ಕೊಂಡೊಯ್ಯುತ್ತಿದ್ದ ಸುಳ್ಯದ ಶಿವ ಅಂಬ್ಯುಲೆನ್ಸ್ ಕಬಕದಲ್ಲಿ ಅಪಘಾತ ವಾಗಿರುವ ಘಟನೆ ಸೆ. 23 ರಂದು ಸಂಜೆ ವರದಿಯಾಗಿದೆ. ಕಬಕ ಬಳಿ ರಸ್ತೆಗೆ ಅಡ್ಡಲಾಗಿ ಬಂದ ದೋಸ್ತ್ ವಾಹನಕ್ಕೆ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದ್ದು ವಾಹನಗಳು ಜಖಂಗೊಂಡಿದೆ. ಮಗುವನ್ನು ಮತ್ತು ಮನೆಯವರನ್ನು ಬೇರೆ ವಾಹನದಲ್ಲಿ ಮಂಗಳೂರಿಗೆ ಕಳುಹಿಸಿ ಕೊಡಲಾಗಿದೆ ಎಂದು...

ಓಮಿನಿ ಕಾರಲ್ಲಿ ಪತ್ತೆಯಾದ ಶವದ ಗುರುತು ಪತ್ತೆ .

ಸುಳ್ಯ ಪರಿವಾರಕಾನದಲ್ಲಿ ರಸ್ತೆ ಬದಿ ಕೆಟ್ಟು ನಿಲ್ಲಿಸಲ್ಪಟ್ಟಿದ್ದ ಓಮಿನಿ ಕಾರಿನಲ್ಲಿ ಇಂದು ಸಂಜೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಶವದ ಗುರುತು ಪತ್ತೆಯಾಗಿದೆ. ಶವವಾಗಿ ಪತ್ತೆಯಾದವನನ್ನು ಮನೋಹರ್ ಎಂದುಗುರುತಿಸಲಾಗಿದ್ದು ಈತನು ಮದ್ಯ ವ್ಯಸನಿಯಾಗಿದ್ದ ಎಂದು ಹೇಳಲಾಗುತ್ತಿದ್ದು ಸದ್ಯ ಈತನ ಸಾವಿಗೆ ಕಾರಣವೇನೆಂಬುದು ತಿಳಿಯದೇ ಇದ್ದು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕೊಲ್ಲಮೊಗ್ರದಲ್ಲಿ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕ ಕಾರ್ಯಕ್ರಮ

ದ ಕ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಕೊಲ್ಲಮೊಗ್ರು ಗ್ರಾಮದ ವಿವಿಧ ಬಾಗಗಳಲ್ಲಿ ಹುಚ್ಚು ನಾಯಿ ನಿರೋಧಕ ಲಸಿಕೆಯನ್ನು ಉಚಿತವಾಗಿ ನೀಡಲಾಯಿತು. ಮುಳ್ಳುಬಾಗಿಲು ಕಾಣಿಕೆ ಹುಂಡಿ ಬಳಿ, ಅಂಬೇಡ್ಕರ್ ಸಭಾಭವನ ಕಟ್ಟ, ಕೊಲ್ಲಮೊಗ್ರು ಪೇಟೆ, ಮಯೂರ ಸರ್ಕಲ್ ಮಲ್ಲಾಜೆ, ಅಗಲಡ್ಕ,...

ಸುಬ್ರಹ್ಮಣ್ಯದಲ್ಲಿ ಕಾರ್ತಿಕ್ ಸಸ್ಯಹಾರಿ ಉಪಾಹಾರ ಕೇಂದ್ರ ಆರಂಭ

ಸುಬ್ರಹ್ಮಣ್ಯ ಸೆ. 23: ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ಇರುವ ಮೋಂಟಿ ಕಂಫರ್ಟ್ಸ್ ನ ನೆಲ ಮಹಡಿಯಲ್ಲಿ ಇಂದು ನೂತನವಾಗಿ ಕಾರ್ತಿಕ್ ಸಸ್ಯಹಾರಿ ಉಪಹಾರ ಕೇಂದ್ರವು ಉದ್ಘಾಟನೆಗೊಂಡಿತು.ಸುಬ್ರಹ್ಮಣ್ಯದ ಸಮಾಜ ಸೇವಕ ಡಾ.ರವಿ ಕಕ್ಕೆಪದವು ಅವರ ಮಾಲಕತ್ವದ ಈ ಉಪಹಾರ ಕೇಂದ್ರವನ್ನು ಸುಬ್ರಹ್ಮಣ್ಯ ರಾಘವೇಂದ್ರ ಹೋಟೆಲ್ ಮಾಲಕ ಯಜ್ಞೇಶ್ ಆಚಾರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಉಪಹಾರ...

ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಅವರ ಸಾಧನೆಗೆ ಒಲಿದ ನೇಷನ್ ಬಿಲ್ಡರ್ ಅವಾರ್ಡ್ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಳ್ಯ ಇವರು ಈ ಬಾರಿ ನೀಡಿದ "ನೇಷನ್ ಬಿಲ್ಡರ್ ಅವಾರ್ಡ್" ಪ್ರತಿಷ್ಠಿತ ನೆಹರು ಮೆಮೋರಿಯಲ್ ಪ ಪೂ ಕಾಲೇಜು ಸುಳ್ಯ ಹಾಗೂ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ.ಅವರಿಗೆ ಲಭಿಸಿದೆ.ದ.ಕ. ಜಿಲ್ಲಾ ಪ.ಪೂ ಕಾಲೇಜುಗಳ ಪ್ರಾಚಾರ್ಯರ ಸಂಘ(ರಿ )ಮಂಗಳೂರು, ವಿವಿಧ ವಿಷಯವಾರು ಉಪನ್ಯಾಸಕರ ಸಂಘ,...

ನಾಳೆ (ಸೆ.24) ಸುಳ್ಯದಲ್ಲಿ ವಿದ್ಯುತ್ ಕಡಿತ

33ಕೆ.ವಿ. ಕಾವು - ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ: 24-09-2024 ಮಂಗಳವಾರ ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು - ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಕಾವು ಹಾಗೂ ಸುಳ್ಯ ವಿದ್ಯುತ್ ಉಪಕೇಂದ್ರದಿಂದ...

ಶ್ರೀರಾಮಸೇನೆಯ ಮಂಗಳೂರು ವಿಭಾಗ ಕಾರ್ಯಾಧ್ಯಕ್ಷರಾಗಿ ಜಯರಾಂ ಅಂಬೆಕಲ್ಲು

ಉಡುಪಿಯ ಹೋಟೆಲ್ ಮಥುರಾ ಕಂಪರ್ಟ್ಸ್ ನಲ್ಲಿ ಆದಿತ್ಯವಾರ ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಗಂಗಾಧರ್ ಕುಲಕರ್ಣಿ ಯವರು ಕಳೆದ 5 ವರ್ಷದಿಂದ ಉಡುಪಿ ಜಿಲ್ಲಾಧ್ಯಕ್ಷರಾಗಿದ್ದ ಜಯರಾಂ ಅಂಬೆಕಲ್ಲು ರವರನ್ನು ಮಂಗಳೂರು ವಿಭಾಗ( ದ.ಕ, ಉಡುಪಿ, ಉ.ಕ) ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ಘೋಷಿಸಿದರು. ಜಯರಾಂ ಅಂಬೆಕಲ್ಲುರವರು ಈ ಹಿಂದೆ ಉಡುಪಿ ನಗರ...
Loading posts...

All posts loaded

No more posts

error: Content is protected !!