ಓಮಿನಿ ಕಾರಲ್ಲಿ ಪತ್ತೆಯಾದ ಶವದ ಗುರುತು ಪತ್ತೆ .

ಸುಳ್ಯ ಪರಿವಾರಕಾನದಲ್ಲಿ ರಸ್ತೆ ಬದಿ ಕೆಟ್ಟು ನಿಲ್ಲಿಸಲ್ಪಟ್ಟಿದ್ದ ಓಮಿನಿ ಕಾರಿನಲ್ಲಿ ಇಂದು ಸಂಜೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಶವದ ಗುರುತು ಪತ್ತೆಯಾಗಿದೆ. ಶವವಾಗಿ ಪತ್ತೆಯಾದವನನ್ನು ಮನೋಹರ್ ಎಂದುಗುರುತಿಸಲಾಗಿದ್ದು ಈತನು ಮದ್ಯ ವ್ಯಸನಿಯಾಗಿದ್ದ ಎಂದು ಹೇಳಲಾಗುತ್ತಿದ್ದು ಸದ್ಯ ಈತನ ಸಾವಿಗೆ ಕಾರಣವೇನೆಂಬುದು ತಿಳಿಯದೇ ಇದ್ದು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕೊಲ್ಲಮೊಗ್ರದಲ್ಲಿ ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕ ಕಾರ್ಯಕ್ರಮ

ದ ಕ ಜಿಲ್ಲಾ ಪಂಚಾಯತ್ ಮಂಗಳೂರು, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಕೊಲ್ಲಮೊಗ್ರು ಗ್ರಾಮದ ವಿವಿಧ ಬಾಗಗಳಲ್ಲಿ ಹುಚ್ಚು ನಾಯಿ ನಿರೋಧಕ ಲಸಿಕೆಯನ್ನು ಉಚಿತವಾಗಿ ನೀಡಲಾಯಿತು. ಮುಳ್ಳುಬಾಗಿಲು ಕಾಣಿಕೆ ಹುಂಡಿ ಬಳಿ, ಅಂಬೇಡ್ಕರ್ ಸಭಾಭವನ ಕಟ್ಟ, ಕೊಲ್ಲಮೊಗ್ರು ಪೇಟೆ, ಮಯೂರ ಸರ್ಕಲ್ ಮಲ್ಲಾಜೆ, ಅಗಲಡ್ಕ,...
Ad Widget

ಸುಬ್ರಹ್ಮಣ್ಯದಲ್ಲಿ ಕಾರ್ತಿಕ್ ಸಸ್ಯಹಾರಿ ಉಪಾಹಾರ ಕೇಂದ್ರ ಆರಂಭ

ಸುಬ್ರಹ್ಮಣ್ಯ ಸೆ. 23: ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ಇರುವ ಮೋಂಟಿ ಕಂಫರ್ಟ್ಸ್ ನ ನೆಲ ಮಹಡಿಯಲ್ಲಿ ಇಂದು ನೂತನವಾಗಿ ಕಾರ್ತಿಕ್ ಸಸ್ಯಹಾರಿ ಉಪಹಾರ ಕೇಂದ್ರವು ಉದ್ಘಾಟನೆಗೊಂಡಿತು.ಸುಬ್ರಹ್ಮಣ್ಯದ ಸಮಾಜ ಸೇವಕ ಡಾ.ರವಿ ಕಕ್ಕೆಪದವು ಅವರ ಮಾಲಕತ್ವದ ಈ ಉಪಹಾರ ಕೇಂದ್ರವನ್ನು ಸುಬ್ರಹ್ಮಣ್ಯ ರಾಘವೇಂದ್ರ ಹೋಟೆಲ್ ಮಾಲಕ ಯಜ್ಞೇಶ್ ಆಚಾರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಉಪಹಾರ...

ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಅವರ ಸಾಧನೆಗೆ ಒಲಿದ ನೇಷನ್ ಬಿಲ್ಡರ್ ಅವಾರ್ಡ್ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಳ್ಯ ಇವರು ಈ ಬಾರಿ ನೀಡಿದ "ನೇಷನ್ ಬಿಲ್ಡರ್ ಅವಾರ್ಡ್" ಪ್ರತಿಷ್ಠಿತ ನೆಹರು ಮೆಮೋರಿಯಲ್ ಪ ಪೂ ಕಾಲೇಜು ಸುಳ್ಯ ಹಾಗೂ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ.ಅವರಿಗೆ ಲಭಿಸಿದೆ.ದ.ಕ. ಜಿಲ್ಲಾ ಪ.ಪೂ ಕಾಲೇಜುಗಳ ಪ್ರಾಚಾರ್ಯರ ಸಂಘ(ರಿ )ಮಂಗಳೂರು, ವಿವಿಧ ವಿಷಯವಾರು ಉಪನ್ಯಾಸಕರ ಸಂಘ,...

ನಾಳೆ (ಸೆ.24) ಸುಳ್ಯದಲ್ಲಿ ವಿದ್ಯುತ್ ಕಡಿತ

33ಕೆ.ವಿ. ಕಾವು - ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ: 24-09-2024 ಮಂಗಳವಾರ ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು - ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಕಾವು ಹಾಗೂ ಸುಳ್ಯ ವಿದ್ಯುತ್ ಉಪಕೇಂದ್ರದಿಂದ...

ಶ್ರೀರಾಮಸೇನೆಯ ಮಂಗಳೂರು ವಿಭಾಗ ಕಾರ್ಯಾಧ್ಯಕ್ಷರಾಗಿ ಜಯರಾಂ ಅಂಬೆಕಲ್ಲು

ಉಡುಪಿಯ ಹೋಟೆಲ್ ಮಥುರಾ ಕಂಪರ್ಟ್ಸ್ ನಲ್ಲಿ ಆದಿತ್ಯವಾರ ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಗಂಗಾಧರ್ ಕುಲಕರ್ಣಿ ಯವರು ಕಳೆದ 5 ವರ್ಷದಿಂದ ಉಡುಪಿ ಜಿಲ್ಲಾಧ್ಯಕ್ಷರಾಗಿದ್ದ ಜಯರಾಂ ಅಂಬೆಕಲ್ಲು ರವರನ್ನು ಮಂಗಳೂರು ವಿಭಾಗ( ದ.ಕ, ಉಡುಪಿ, ಉ.ಕ) ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ಘೋಷಿಸಿದರು. ಜಯರಾಂ ಅಂಬೆಕಲ್ಲುರವರು ಈ ಹಿಂದೆ ಉಡುಪಿ ನಗರ...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 105 ಶಾಲೆಗಳಿಗೆ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಜ್ನಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಸ್ತಾಂತರಕ್ಕೆ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ ೧೦೫ ಶಾಲೆಗಳಿಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಚಾಲನೆ ನೀಡಿದರು.ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಇದೊಂದು...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ. ಚಿದಾನಂದ ಕೆ ವಿ ಇವರಿಗೆ ಗೌರವಾರ್ಪಣೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಶಿಷ್ಟ ಸೇವಾ ಪುರಸ್ಕಾರ ಸ್ವೀಕರಿಸಿದ ಡಾ. ಕೆ ವಿ ಚಿದಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಸನ್ಮಾನಿಸಿ ಸಾಹಿತ್ಯ ಪರಿಶತ್ತು ಕಾರ್ಯಕ್ರಮಗಳ ಮಹಾ ಪೋಷಕರಾದ ಡಾ ಕೆ ವಿ ಚಿದಾನಂದ ಇವರನ್ನು ಗೌರವಿಸುವುದು ನಮ್ಮ...

ನಿನ್ನೆ ಬೈಕ್ ಕದ್ದ ಕಳ್ಳನಿಂದ ಇಂದು ಮತ್ತೆ ಕಳ್ಳತನಕ್ಕೆ ಯತ್ನ , ಮಾನಸಿಕ ಅಸ್ವಸ್ಥನಂತೆ ಕಂಡರೂ ಈತ ಕಳ್ಳನೇ, ಪೊಲೀಸ್ ಅಧಿಕಾರಿಗಳೇ ಎಚ್ಚೆತ್ತುಕೊಳ್ಳಿ !

ಅರಂತೋಡು: ನಿನ್ನೆ ಬೈಕ್ ಕದ್ದ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಇದೀಗ ವರದಿಯಾಗಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ವ್ಯಕ್ತಿಯನ್ನು ಕನಕಮಜಲು ಪರಿಸರದಲ್ಲಿ ಸ್ಥಳೀಯರು ತಡೆದು ನಿಲ್ಲಿಸಿ ವಿಚಾರಿಸಿದಾಗ ಆತ ಬೈಕ್ ಕಳ್ಳನೆಂದು ತಿಳಿದಿದ್ದು, ಬಳಿಕ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೆ ಒಪ್ಪಿಸಿದ್ದರು. ಆದರೆ...

ಅ.09 ರಿಂದ 17 ರವರೆಗೆ ವೈಭವದ ದಸರಾಕ್ಕೆ ತೀರ್ಮಾನ – ಮಹಿಳಾ ಹಾಗೂ ಮಕ್ಕಳ ದಸರಾ ಈ ಬಾರಿಯ ವಿಶೇಷ – ರಾಜ್ಯಮಟ್ಟದ ಕಲಾವಿದರಿಂದ ಮೂಡಿಬರಲಿದೆ ಸಾಂಸ್ಕೃತಿಕ ಕಾರ್ಯಕ್ರಮ

ದಸರಾ ಉತ್ಸವ ವೈಭವದಿಂದ ನಡೆಸುವ ಬಗ್ಗೆ ತೀರ್ಮಾನ ಮಾಡಿದ್ದು, 9 ದಿನಗಳು ಕೂಡ ಅದ್ಭುತವಾದ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬರಲಿದೆ ಎಂದು ಶಾರದೋತ್ಸವ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಹೇಳಿದರು. ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಸರ ಉತ್ಸವದ ವಿವರ ನೀಡಿದರು. ಈ ಬಾರಿ ವಿಶೇಷವಾಗಿ ಮಹಿಳೆಯರೇ ನಡೆಸಿಕೊಡುವ ವಿಶೇಷ ಕಾರ್ಯಕ್ರಮ ಮಹಿಳಾ ದಸರಾ ಕಾರ್ಯಕ್ರಮ ನಡೆಯಲಿದೆ. ಮಹಿಳೆಯರೇ...
Loading posts...

All posts loaded

No more posts

error: Content is protected !!