ಸೆ.21 : ಮನೆಯಿಂದಲೇ ನಿರ್ವಹಿಸಬಹುದಾದ ಉದ್ಯೋಗ ಅವಕಾಶಗಳ ಮಾಹಿತಿ ಮತ್ತು ಸಂದರ್ಶನ

ಸುಳ್ಯದ ಸಂಧ್ಯಾ ರಶ್ಮಿ ಸಭಾಭವನ { ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು } ಕುರುಂಜಿಭಾಗ್ ನಲ್ಲಿ ಮೈಲ್ಯಾಂಪ್ ನೇಚರ್ ಕನೆಕ್ಟ್ ಸಂಸ್ಥೆಯ ವತಿಯಿಂದ ಮನೆಯಿಂದಲೇ ನಿರ್ವಹಿಸಬಹುದಾದ ಉದ್ಯೋಗ ಮಾಹಿತಿ ಮತ್ತು ಸಂದರ್ಶನ ಕಾರ್ಯಕ್ರಮ ಸೆಪ್ಟೆಂಬರ್ 21 ಶನಿವಾರದಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1:30ರ ತನಕ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ 50 ಜನರಿಗೆ ಮಾತ್ರ ಅವಕಾಶವಿದ್ದು ಆಸಕ್ತರು...

ಪೆರುವಾಜೆಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಜೇಸಿಐ ಬೆಳ್ಳಾರೆಯ ಜೇಸೀ ಸಪ್ತಾಹದ ಅಂಗವಾಗಿ ಬೃಹತ್ ಸ್ವಚ್ಛತಾ ಆಂದೋಲನ ಪೆರುವಾಜೆಯಲ್ಲಿ ನಡೆಯಿತು. ಪೆರುವಾಜೆ ಶ್ರೀ ಜಾಲದುರ್ಗಾ ದೇವಿ ದೇವಸ್ಥಾನದ ಮುಂಭಾಗದಲ್ಲಿ ಸ್ವಚ್ಛತಾ ಆಂದೋಲನಕ್ಕೆ ದೇವಸ್ಥಾನದ ಆಡಳಿತಧಿಕಾರಿ ಮತ್ತು ಪೆರುವಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಚಾಲನೆ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪೆರುವಾಜೆ ಡಾ. ಕೆ ಶಿವರಮ...
Ad Widget

ಅಕ್ಷರ ಕಲಿಸಿದ ಗುರುವಿಗಾಗಿ ಹೀಗೊಂದು ಹುಡುಕಾಟ..

✍️ಸಿದ್ಧೀಕ್ ಮೆತ್ತಡ್ಕಅಬುಧಾಬಿ, ಯುಎಈ ಐದಾರು ವರ್ಷಗಳಿಂದ ಪ್ರತಿಯೊಂದು ಶಿಕ್ಷಕರ ದಿನಾಚರಣೆ ಬರುವಾಗಲೂ ನೆನಪಾಗಿ ಕಾಡುವುದು ನನಗೆ ಕನ್ನಡದ ಬಾಲಪಾಠವನ್ನು ಕಲಿಸಿದ ಮೊದಲ ಗುರು ಪೂರ್ಣಿಮಾ ಟೀಚರ್…ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಎಂಬ ಕುಗ್ರಾಮದಲ್ಲಿ ಕಲಿತು ವರುಷಗಳು 33 ದಾಟಿದ ಕಾರಣ ಟೀಚರ ಊರಿನ ಹೆಸರೋ ಕನಿಷ್ಟ ಜಿಲ್ಲೆಯ ಹೆಸರೋ ಗೊತ್ತಾಗದೆ ಶಿಕ್ಷಕರ ದಿನಾಚರಣೆಯ ದಿನವೆಲ್ಲಾ...

ಕಾಯರ್ತೊಡಿ : ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆ ಮತ್ತು ಸೋಣ ಶನಿವಾರ ಬಲಿವಾಡು ಸಮಾರಾಧನೆ

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ದೇವರಿಗೆ ವಿಶೇಷ ತುಳಸೀ ಅರ್ಚನೆ ನಡೆಯಿತು. ಮದ್ಯಾಹ್ನ ಮಹಾಪೂಜೆ ನಂತರ ಸೋಣ ಶನಿವಾರ ಪ್ರಯುಕ್ತ ಬಲಿವಾಡು ಸಮಾರಾಧನೆ ನಡೆಯಿತು. ಸಾವಿರಾರು ಭಕ್ತಾದಿಗಳು ಬಲಿವಾಡು ಕೂಟದಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರ ರಾದರು.

ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಅಂಚೆ ವಿಮೆ ನೋಂದಣಿ, ಆರೋಗ್ಯ ಕಾರ್ಡ್ ವಿತರಣೆ ಹಾಗೂ ಮಾಹಿತಿ ಕಾರ್ಯಗಾರ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಅಂಚೆ ವಿಮೆ ನೋಂದಣಿ, ಆರೋಗ್ಯ ಕಾರ್ಡ್ ವಿತರಣೆ ಹಾಗೂ ಮಾಹಿತಿ ಕಾರ್ಯಗಾರ ಸೆ. 13 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಉದ್ಘಾಟನೆಗೊಂಡಿತು. ದ.ಕ.ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ ಕಾರ್ಯಕ್ರಮ ಉದ್ಘಾಟಿಸಿ...

ಪೋಲಿಸ್ ಮಹಾ ನಿರೀಕ್ಷಕ ಅಮಿತ್ ಸಿಂಗ್ ಕುಕ್ಕೆ ಸುಬ್ರಹ್ಮಣ್ಯ ಠಾಣೆ ಭೇಟಿ , ಪ್ರೆಸ್ ಕ್ಲಬ್ ವತಿಯಿಂದ ಗೌರವ

ಮೊದಲಬಾರಿಗೆ ಪೋಲಿಸ್ ಮಹಾ ನೀರಿಕ್ಷಕರಾದ ಅಮಿತ್ ಸಿಂಗ್ ಸುಬ್ರಹ್ಮಣ್ಯ ಪೋಲಿಸ್‌ ಠಾಣೆಗೆ ಭೇಟಿ ಮಾಡಿ ಕುಂದು ಕೊರತೆಗಳ ಬಗ್ಗೆ ಪೊಲೀಸ್‌ ಸಿಬ್ಬಂದಿಗಳ ಜೊತೆ ಚರ್ಚೆ ಮಾಡಿ ಹೊಸ ಪೊಲೀಸ್ ಠಾಣೆಯ ವಿಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ಗೌರವಿಸಲಾಯಿತು. ಪತ್ರಕರ್ತರ ಜೊತೆಗೆ ಮಾತನಾಡಿದ ಅವರು ಪಶ್ಚಿಮ ವಲಯಕ್ಕೆ ಸಂಬಂಧ ಪಟ್ಟ...

ಕಾಂಗ್ರೆಸ್ ಸರ್ಕಾರ ತುಷ್ಟಿಕರಣ ನೀತಿಗಳೇ ಸಮಾಜದಲ್ಲಿ ಗಲಭೆ ಸೃಷ್ಟಿಸಲು ಕಾರಣ – ವೆಂಕಟ್ ವಳಲಂಬೆ

ನಾಗಮಂಗಲ ದಲ್ಲಿ ಗಣಪತಿ ಮೆರವಣಿಗೆ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವುದು ಖಂಡನೀಯವೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೇಶದ ಪ್ರತಿ ಹಳ್ಳಿ-ಗಲ್ಲಿಗಳಲ್ಲಿ ನೂರಾರು ವರ್ಷಗಳಿಂದ ಹಿಂದೂ ಸಮಾಜ ಗಣೇಶೋತ್ಸವ ವನ್ನು ಆಚರಣೆ ಮಾಡುತ್ತ ಬಂದಿದೆ, ಸ್ವಾತಂತ್ರ್ಯ ದಂತ ಹೋರಾಟಕ್ಕೆ ಈ ಉತ್ಸವ...

ಅಜ್ಜಾವರ : ವಿವೇಕ್ ನೂತನ ಶಾಲಾ ಕೊಠಡಿ ಉದ್ಘಾಟನೆ

ಅಜ್ಜಾವರ :  ಶತಮಾನೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಅಜ್ಜಾವರ ಶಾಲೆಯ ನೂತನ ವಿವೇಕ್ ಕೊಠಡಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪುಷ್ಪಲತ ಕರ್ಲಪ್ಪಾಡಿ ಅಧ್ಯಕ್ಷತೆಯಲ್ಲಿ ಸೆ 12  ರಂದು ನಡೆಯಿತು. ನೂತನವಾಗಿ ನಿರ್ಮಿಸಿದ ವಿವೇಕ್ ಶಾಲಾ ಕೊಠಡಿಯನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಾಲೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಸರಕಾರದ ಗಮನಕ್ಕೆ...

ಆಲೆಟ್ಟಿ: ಆನೆ ದಾಳಿ ಅಪಾರ ಕೃಷಿ ನಾಶ- ವಲಯ ವಲಯಾರಣ್ಯಾಧಿಕಾರಿ ಮಂಜುನಾಥ್ ಭೇಟಿ

ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮದ ಪರಿಸರದಲ್ಲಿ ಹಲವು ದಿನಗಳಿಂದ ನಿರಂತರ ಆನೆ ದಾಳಿಯಿಂದ ಅಪಾರ ಪ್ರಮಾಣದಲ್ಲಿ ಕೃಷಿ ನಾಶವಾಗಿದ್ದು ಈ ಪ್ರದೇಶಕ್ಕೆ ವಲಯ ಅರಣ್ಯ ಅಧಿಕಾರಿ ಮಂಜುನಾಥ್ ಅವರು ಇಂದು ಭೇಟಿ ನೀಡಿದ್ದರು.ಆಲೆಟ್ಟಿ ಗ್ರಾಮದ ತುದಿಯಡ್ಕ, ಪಡ್ಪು, ಕಳಗಿ, ಗುಡ್ಡೆಮನೆ, ಚಳ್ಳಂಗಾರು ಭಾಗದಲ್ಲಿ ಕೆಲ ದಿನಗಳಿಂದ ಸುಮಾರು 6 ರಿಂದ 8 ಆನೆಗಳು ರಾತ್ರಿಯ ಸಮಯದಲ್ಲಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ ರೋಟರಿ ಕ್ಲಬ್ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ದಿನಾಂಕ 12.09.2024 ರಂದು ಮಿಯವಕಿ ಮೆಥಡ್ ಆಫ್ ಎ ಫಾರೆಸ್ಟ್ ಸ್ಟೇಷನ್ ಇದರ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಪರಿಸರದಲ್ಲಿ ಹಮ್ಮಿಕೊಳ್ಳಲಾಯಿತು. ಉಡುಪಿ ಕಟಪಾಡಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಪರಿಸರವಾದಿ ಕೆ. ಮಹೇಶ್ ಶೆಣೈ ಪಿ...
Loading posts...

All posts loaded

No more posts

error: Content is protected !!