- Thursday
- June 25th, 2026
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಅಂಚೆ ವಿಮೆ ನೋಂದಣಿ, ಆರೋಗ್ಯ ಕಾರ್ಡ್ ವಿತರಣೆ ಹಾಗೂ ಮಾಹಿತಿ ಕಾರ್ಯಗಾರ ಸೆ. 13 ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಉದ್ಘಾಟನೆಗೊಂಡಿತು. ದ.ಕ.ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ ಕಾರ್ಯಕ್ರಮ ಉದ್ಘಾಟಿಸಿ...
ಮೊದಲಬಾರಿಗೆ ಪೋಲಿಸ್ ಮಹಾ ನೀರಿಕ್ಷಕರಾದ ಅಮಿತ್ ಸಿಂಗ್ ಸುಬ್ರಹ್ಮಣ್ಯ ಪೋಲಿಸ್ ಠಾಣೆಗೆ ಭೇಟಿ ಮಾಡಿ ಕುಂದು ಕೊರತೆಗಳ ಬಗ್ಗೆ ಪೊಲೀಸ್ ಸಿಬ್ಬಂದಿಗಳ ಜೊತೆ ಚರ್ಚೆ ಮಾಡಿ ಹೊಸ ಪೊಲೀಸ್ ಠಾಣೆಯ ವಿಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ವತಿಯಿಂದ ಗೌರವಿಸಲಾಯಿತು. ಪತ್ರಕರ್ತರ ಜೊತೆಗೆ ಮಾತನಾಡಿದ ಅವರು ಪಶ್ಚಿಮ ವಲಯಕ್ಕೆ ಸಂಬಂಧ ಪಟ್ಟ...
ನಾಗಮಂಗಲ ದಲ್ಲಿ ಗಣಪತಿ ಮೆರವಣಿಗೆ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿರುವುದು ಖಂಡನೀಯವೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೇಶದ ಪ್ರತಿ ಹಳ್ಳಿ-ಗಲ್ಲಿಗಳಲ್ಲಿ ನೂರಾರು ವರ್ಷಗಳಿಂದ ಹಿಂದೂ ಸಮಾಜ ಗಣೇಶೋತ್ಸವ ವನ್ನು ಆಚರಣೆ ಮಾಡುತ್ತ ಬಂದಿದೆ, ಸ್ವಾತಂತ್ರ್ಯ ದಂತ ಹೋರಾಟಕ್ಕೆ ಈ ಉತ್ಸವ...
ಅಜ್ಜಾವರ : ಶತಮಾನೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಅಜ್ಜಾವರ ಶಾಲೆಯ ನೂತನ ವಿವೇಕ್ ಕೊಠಡಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪುಷ್ಪಲತ ಕರ್ಲಪ್ಪಾಡಿ ಅಧ್ಯಕ್ಷತೆಯಲ್ಲಿ ಸೆ 12 ರಂದು ನಡೆಯಿತು. ನೂತನವಾಗಿ ನಿರ್ಮಿಸಿದ ವಿವೇಕ್ ಶಾಲಾ ಕೊಠಡಿಯನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಶಾಲೆಯಲ್ಲಿನ ಅವ್ಯವಸ್ಥೆಗಳ ಬಗ್ಗೆ ಸರಕಾರದ ಗಮನಕ್ಕೆ...
ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮದ ಪರಿಸರದಲ್ಲಿ ಹಲವು ದಿನಗಳಿಂದ ನಿರಂತರ ಆನೆ ದಾಳಿಯಿಂದ ಅಪಾರ ಪ್ರಮಾಣದಲ್ಲಿ ಕೃಷಿ ನಾಶವಾಗಿದ್ದು ಈ ಪ್ರದೇಶಕ್ಕೆ ವಲಯ ಅರಣ್ಯ ಅಧಿಕಾರಿ ಮಂಜುನಾಥ್ ಅವರು ಇಂದು ಭೇಟಿ ನೀಡಿದ್ದರು.ಆಲೆಟ್ಟಿ ಗ್ರಾಮದ ತುದಿಯಡ್ಕ, ಪಡ್ಪು, ಕಳಗಿ, ಗುಡ್ಡೆಮನೆ, ಚಳ್ಳಂಗಾರು ಭಾಗದಲ್ಲಿ ಕೆಲ ದಿನಗಳಿಂದ ಸುಮಾರು 6 ರಿಂದ 8 ಆನೆಗಳು ರಾತ್ರಿಯ ಸಮಯದಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ದಿನಾಂಕ 12.09.2024 ರಂದು ಮಿಯವಕಿ ಮೆಥಡ್ ಆಫ್ ಎ ಫಾರೆಸ್ಟ್ ಸ್ಟೇಷನ್ ಇದರ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಪರಿಸರದಲ್ಲಿ ಹಮ್ಮಿಕೊಳ್ಳಲಾಯಿತು. ಉಡುಪಿ ಕಟಪಾಡಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಪರಿಸರವಾದಿ ಕೆ. ಮಹೇಶ್ ಶೆಣೈ ಪಿ...
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ. ಸಮುದಾಯ ಭವನ, ಅಮರಶ್ರೀಭಾಗ್ನಲ್ಲಿ ಸೆ.11ರಂದು ನಡೆಯಿತು. ವಿದ್ಯಾರ್ಥಿನಿಯರಾದ ತೃಶಾಲಿ ಹಾಗೂ ಪೂಜ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ. ಸ್ವಾಗತಿಸಿ ಕಾಲೇಜಿನ ಬಗ್ಗೆ ಪರಿಚಯಿಸಿ, ವಿದ್ಯಾರ್ಥಿ ಪ್ರವೇಶ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಶ್ರೀಯುತ ಮೌರ್ಯ ಆರ್. ಪ್ರಸಾದ್ ಇವರು...
ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೀರಮಂಗಲ ನಿವಾಸಿ ಡಾ.ಅಚ್ಚುತ ಪೂಜಾರಿಯವರ ಪತ್ನಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ...
ಜೆಸಿಐ ಸಪ್ತಾಹ 2024ರ ಅಂಗವಾಗಿ ಬಿ.ಸಿ.ಎಂ ಹಾಸ್ಟೆಲ್ ಕುರುಂಜಿಭಾಗ್ ಇಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಮತ್ತು ತಪಾಸಣಾ ಶಿಬಿರ ಸೆ.10ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಸುಳ್ಯ ಪಯಸ್ವಿನಿ (ರಿ) ಇದರ ಅಧ್ಯಕ್ಷರಾದ ಜೇಸಿ. ಗುರುಪ್ರಸಾದ್ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಪೂರ್ವ ವಲಯಾದ್ಯಕ್ಷರಾದ ಜೇಸಿ, ಹೆಚ್.ಜಿ.ಎಫ್ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿ ಶುಭ ಹಾರೈಸಿದರು....
ಬಿಜೆಪಿ ಸುಳ್ಯ ಮಂಡಲ ವಿಶೇಷ ಕಾರ್ಯಕಾರಿ ಸಭೆಯನ್ನು ಉದ್ಘಾಟಿಸಿ ಸತೀಶ್ ಕುಂಪಲ ಮಾತನಾಡುತ್ತಾ ಇಡೀ ಜಿಲ್ಲೆಯಲ್ಲಿ ಸುಳ್ಯ ಮಂಡಲ ಎಂದಿಗೂ ಪಕ್ಷದ ಕೆಲಸಗಳಲ್ಲಿ ಹಿಂದೆ ಉಳಿದಿಲ್ಲಾ ಅಲ್ಲದೇ ಕೇವಲ 6 ದಿನಗಳಲ್ಲಿ ಸುಳ್ಯದಲ್ಲಿ 2675 ಸದಸ್ಯತ್ವ ಸ್ವೀಕರಿಸಿದ್ದಾರೆ. ಅದು ಮುಂದಿನ ನವೆಂಬರ್ ಆಗುವಾಗ 1 ಲಕ್ಷದ ಗಡಿಗಳನ್ನು ದಾಟಬೇಕು ಎಂದು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹೇಳಿದರು....
Loading posts...
All posts loaded
No more posts
