ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2024-25 ನೇ ಸಾಲಿನ ಪ್ರಥಮ ವರ್ಷದ ಬಿ.ಇ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪುನಷ್ಚೇತನ ಕಾರ್ಯಕ್ರಮ

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ. ಸಮುದಾಯ ಭವನ, ಅಮರಶ್ರೀಭಾಗ್‌ನಲ್ಲಿ ಸೆ.11ರಂದು ನಡೆಯಿತು. ವಿದ್ಯಾರ್ಥಿನಿಯರಾದ ತೃಶಾಲಿ ಹಾಗೂ ಪೂಜ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ. ಸ್ವಾಗತಿಸಿ ಕಾಲೇಜಿನ ಬಗ್ಗೆ ಪರಿಚಯಿಸಿ, ವಿದ್ಯಾರ್ಥಿ ಪ್ರವೇಶ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಶ್ರೀಯುತ ಮೌರ್ಯ ಆರ್. ಪ್ರಸಾದ್ ಇವರು...

ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತ್ಯು

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೀರಮಂಗಲ ನಿವಾಸಿ ಡಾ.ಅಚ್ಚುತ ಪೂಜಾರಿಯವರ ಪತ್ನಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ...
Ad Widget

ಜೇಸಿಐ ಸುಳ್ಯ ಪಯಸ್ವಿನಿ(ರಿ) ಸುಳ್ಯ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಆರೋಗ್ಯ ಮಾಹಿತಿ ಮತ್ತು ತಪಾಸಣಾ ಶಿಬಿರ

ಜೆಸಿಐ ಸಪ್ತಾಹ 2024ರ ಅಂಗವಾಗಿ ಬಿ.ಸಿ.ಎಂ ಹಾಸ್ಟೆಲ್ ಕುರುಂಜಿಭಾಗ್ ಇಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಮತ್ತು ತಪಾಸಣಾ ಶಿಬಿರ ಸೆ.10ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಸುಳ್ಯ ಪಯಸ್ವಿನಿ (ರಿ) ಇದರ ಅಧ್ಯಕ್ಷರಾದ ಜೇಸಿ. ಗುರುಪ್ರಸಾದ್ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಪೂರ್ವ ವಲಯಾದ್ಯಕ್ಷರಾದ ಜೇಸಿ, ಹೆಚ್.ಜಿ.ಎಫ್ ದೇವಿಪ್ರಸಾದ್ ಕುದ್ಪಾಜೆ ಭಾಗವಹಿಸಿ ಶುಭ ಹಾರೈಸಿದರು....

ಸುಳ್ಯ ಮಂಡಲ ಎಂದಿಗೂ ಪಕ್ಷದ ಕೆಲಸಗಳಲ್ಲಿ ಹಿಂದೆ ಉಳಿದಿಲ್ಲಾ – ಕುಂಪಲ,ಶಾಲೆಗಳಿಗೆ ಸೇರಿದಂತೆ ಯಾವುದೇ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರ ಅನುದಾನ ನೀಡುತ್ತಿಲ್ಲ – ಶಾಸಕಿ ಕಿಡಿ

ಬಿಜೆಪಿ ಸುಳ್ಯ ಮಂಡಲ ವಿಶೇಷ ಕಾರ್ಯಕಾರಿ ಸಭೆಯನ್ನು ಉದ್ಘಾಟಿಸಿ ಸತೀಶ್ ಕುಂಪಲ ಮಾತನಾಡುತ್ತಾ ಇಡೀ ಜಿಲ್ಲೆಯಲ್ಲಿ ಸುಳ್ಯ ಮಂಡಲ ಎಂದಿಗೂ ಪಕ್ಷದ ಕೆಲಸಗಳಲ್ಲಿ ಹಿಂದೆ ಉಳಿದಿಲ್ಲಾ ಅಲ್ಲದೇ ಕೇವಲ 6 ದಿನಗಳಲ್ಲಿ ಸುಳ್ಯದಲ್ಲಿ 2675 ಸದಸ್ಯತ್ವ ಸ್ವೀಕರಿಸಿದ್ದಾರೆ. ಅದು ಮುಂದಿನ ನವೆಂಬರ್‌ ಆಗುವಾಗ 1 ಲಕ್ಷದ ಗಡಿಗಳನ್ನು ದಾಟಬೇಕು ಎಂದು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹೇಳಿದರು....

ಸುಳ್ಯ : ಮಕ್ಕಳೇ ರಚಿಸಿದ ಗಣಪನಿಗೆ ಮಕ್ಕಳಿಂದಲೇ ಆರಾಧನೆ – ಮಕ್ಕಳ ಸಂಭ್ರಮ ಹೇಗಿತ್ತು ನೋಡಿ

ರಾಜೇಶ್ ಶೆಟ್ಟಿ ಮೇನಾಲ ಅವರ ಮನೆಯಲ್ಲಿ ಸಂಭ್ರಮದ ಗಣೇಶ ಚೌತಿ ನಡೆಯಿತು. ವಿಶೇಷತೆ ಏನಂದರೇ ಮಕ್ಕಳೇ ತಯಾರಿಸಿದ ಮಣ್ಣಿನ ಗಣಪ, ಅವಲಕ್ಕಿ ಪ್ರಸಾದ, ದೀಪ, ದೂಪದ ಆರತಿ ಎಲ್ಲಾ ನೇತೃತ್ವ ಮಕ್ಕಳದ್ದೇ. ಇದಕ್ಕಾಗಿ ಒಂದು ವಾರದ ತಯಾರಿ ಮಣ್ಣು ತಂದು ಹದಗೊಳಿಸಿ ಗಣಪತಿ ಮೂರ್ತಿ ತಯಾರಿಸಿ, ಅದನ್ನು ನೆರಳಲ್ಲಿ ಒಣಗಿಸಿ ಜೆಲ್ ಪೆನ್ನಿಂದ ಕಣ್ಣು ಬಿಡಿಸಿ...

ಗಣೇಶೋತ್ಸವದ ಉದ್ದೇಶ ಇಡೇರಿಸಲು ಮುಂದಾದ ಸಮಿತಿ – ಪುಟಾಣಿ ಮಕ್ಕಳ ಪ್ರತಿಭೆ ಬೆಳಗಲು ಪ್ರಥಮ ಪ್ರಾಶಸ್ತ್ಯ – ಅಂಗನವಾಡಿ ಮಕ್ಕಳ ಜತೆ ಕುಣಿದ ಮಗು.

ವರದಿ:ಮಿಥುನ್ ಕರ್ಲಪ್ಪಾಡಿ ಸುಳ್ಯ. ಮಂಡೆಕೋಲು : ಗಣೇಶೋತ್ಸವದ ಉದ್ದೇಶ ಇಡೇರಿಸಲು ಮುಂದಾದ ಸಮಿತಿ - ಪುಟಾಣಿ ಮಕ್ಕಳ ಪ್ರತಿಭೆ ಬೆಳಗಲು ಪ್ರಥಮ ಪ್ರಾಶಸ್ತ್ಯ - ಅಂಗನವಾಡಿ ಮಕ್ಕಳ ಜತೆ ಕುಣಿದ ಮಗು ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿ ಗ್ರಾಮವಾಗಿದ್ದು ಈ ಹಿಂದೆ ಈ ಗ್ರಾಮವು ಕುಗ್ರಾಮ ಎಂದೆ ಹಣೆಪಟ್ಟಿ ಕಟ್ಟಿಕೊಂಡಿದ್ದು ಇದೀಗ ಅಭಿವೃದ್ಧಿಯ ಶಕೆಯನ್ನೆ...

ಸುಳ್ಯ : ಮುಖ್ಯ ರಸ್ತೆಯಲ್ಲಿ ಪಾರ್ಕಿಂಗ್, ಕೋಳಿ ಅಂಕ, ಅಕ್ರಮ ಮರಳು ದಂದೆ ಸೇರಿದಂತೆ ಅಕ್ರಮಗಳಿಗೆ ಕಡಿವಾಣ – ಉಪ ನಿರೀಕ್ಷಕ ಸಂತೋಷ್ ಬಿ.ಪಿ.

ಸುಳ್ಯ ಪೊಲೀಸ್‌ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಸಂತೋಷ್ ರವರು ಸೆ. 5ರಂದು ಅಧಿಕಾರ ಸ್ವೀಕರಿಸಿದ್ದು, ಪತ್ರಕರ್ತರ ಜೊತೆಗೆ ಮಾತನಾಡುತ್ತಾ ಸುಳ್ಯದಲ್ಲಿ ಸಮಗ್ರ ಮಾಹಿತಿ ತಿಳಿದೇ ಸುಳ್ಯಕ್ಕೆ ಬಂದಿದ್ದು ಎಲ್ಲಾ ಅಕ್ರಮಗಳಿಗೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು. ಸುಳ್ಯದ ಮುಖ್ಯ ಪೇಟೆಯಲ್ಲಿ ಬಹಳ ವರ್ಷಗಳಿಂದ ಸವಾಲಾಗಿರುವ ಟ್ರಾಫಿಕ್ ಸಮಸ್ಯೆಗಳಿಗೆ ಇತ್ಯರ್ಥ ಮಾಡಲಾಗುವುದು. ಅದಕ್ಕಾಗಿ ಓರ್ವ ಸಿಬ್ಬಂದಿಯನ್ನು ಬಳಸಿಕೊಂಡು...

ಸದೃಢ ಸುಶಿಕ್ಷಿತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅನನ್ಯ: ಡಾ|ಉಜ್ವಲ್ ಯು.ಜೆ

ಸುಶಿಕ್ಷಿತ ಮತ್ತು ಸುದೃಢ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅನನ್ಯ. ಪ್ರಗತಿಯುತ್ತ ಸಾಗುತ್ತಿರುವ ದೇಶವನ್ನು ಮುನ್ನಡೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ)ಕಮಿಟಿ “ಬಿ” ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಉಜ್ವಲ್.ಯು.ಜೆ ಹೇಳಿದರು. ಅವರು ದಿನಾಂಕ 5.09.2024ರಂದು ಜಾನಕಿ ವೆಂಕಟ್ರಮಣ ಗೌಡ ಸಭಾಂಗಣದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ”ಬಿ”ಇದರ ಆಶ್ರಯದಲ್ಲಿ ನಡೆದ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯಅಂತಿಮ ವರ್ಷದ ಪದವಿ ಫಲಿತಾಂಶ ಪ್ರಕಟ – ಶೇ.90 ಫಲಿತಾಂಶ ದಾಖಲು

ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ, ಬೆಂಗಳೂರು ಜುಲೈ –ಆಗೋಸ್ಟ್-2024ರಲ್ಲಿ ನಡೆಸಿದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಕೆ.ವಿ.ಜಿಆಯುರ್ವೇದ ವೈದ್ಯಕೀಯ ಕಾಲೇಜಿಗೆ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 41 ವಿದ್ಯಾರ್ಥಿಗಳು ಪ್ರಥಮದರ್ಜೆಯಲ್ಲಿ ಉತೀರ್ಣರಾಗಿದ್ದಾರೆ.ಅಂತಿಮ ವರ್ಷದ ಬಿ.ಎ.ಎಂ.ಎಸ್ ಪದವಿ ವಿಭಾಗದ ೫೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜಾರಾಗಿದ್ದು, ಅಂಜನಾವಿ. ಪಿ., ಅಧೀನಾ ಪಿ.,...

ಸುಳ್ಯ ಎನ್ನೆoಪಿಯುಸಿಯಲ್ಲಿ  ಶಿಕ್ಷಕರ ದಿನಾಚರಣೆ.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ತಜ್ಞರಾಗಿ, ರಾಷ್ಟ್ರಪತಿಯಾಗಿ ಈ ದೇಶಕ್ಕೆ ದೊಡ್ಡ ಕೊಡುಗೆಯನ್ನು ನೀಡಿದವರು.ನಾವು ನಮ್ಮ ಬದುಕಿಗೆ ದಾರಿ ತೋರಿದ ಎಲ್ಲಾ ಶಿಕ್ಷಕರನ್ನು ನೆನಪಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಲ್ಲದೆ ಶಿಕ್ಷಕರಿಲ್ಲ. ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳಿಲ್ಲ ಎಂದು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಾoಶುಪಾಲರಾದ ಮಿಥಾಲಿ ಪಿ ರೈ  ಹೇಳಿದರು. ಅವರು ಸಂಸ್ಥೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಅಧ್ಯಕ್ಷತೆ...
Loading posts...

All posts loaded

No more posts

error: Content is protected !!