- Wednesday
- May 6th, 2026
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಶ್ವಥ್ ಯಳದಾಳು ಹಾಗೂ ಸದಸ್ಯರುಗಳಾದ ಮಾಧವ ಚಾಂತಾಳ, ಪುಷ್ಪರಾಜ್ ಪಡ್ಪು, ಶ್ರೀಮತಿ ಶಿವಮ್ಮ ಕಟ್ಟ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸಂತೋಷ್ ನಾಯ್ಕ್ ಗಡಿಕಲ್ಲು, ಲೀಲಾವತಿ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಶಿವತೀರ್ಥ ದೊಡ್ಡಣ್ಣ ಶೆಟ್ಟಿ ಕೆರೆಯ ಬಳಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕೆರೆ ಸಮಿತಿಯ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾದ ಅಶ್ವಥ್ ಯಳದಾಳು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಪುಷ್ಪರಾಜ್ ಪಡ್ಪು, ಶ್ರೀಮತಿ ಶಿವಮ್ಮ...
ಹರಿಹರ ಪಲ್ಲತ್ತಡ್ಕದ ಸರಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಿಗ್ಗೆ 9:00 ಗಂಟೆಗೆ ಸರಿಯಾಗಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ತೀರ್ಥರಾಮ ಕಿರಿಭಾಗ ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ನಂತರ ಗ್ರಾಮ ಪಂಚಾಯತ್ ಹಾಗೂ ವಿದ್ಯಾರ್ಥಿಗಳ ಪೋಷಕರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ನೀಡಲಾಯಿತು.ಶಾಲಾ ನಾಯಕಿ ಲಿಶ್ಮಿತಾ...
ಅರಂತೋಡು: 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾಲೇಜಿನ ಕ್ರೀಡಾಂಗಣದಲ್ಲಿ ದಿವಂಗತ ಭಾಸ್ಕರ್ ರೈ ಪೇರಾಜೆ ಕುಟುಂಬಸ್ಥರು ನೀಡಿದ ನೂತನ ಧ್ವಜ ಸ್ತಂಭದಲ್ಲಿ ಧ್ವಜಾರೋಹಣವನ್ನು ಪ್ರಭಾಕರ್ ರೈ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯ ಪುರುಷೋತ್ತಮ ಕಿರ್ಲಾಯ ಭಾಗವಹಿಸಿ, ಮಾತನಾಡಿ ಸ್ವಾತಂತ್ರ್ಯದ ಮಹತ್ವ ಮತ್ತು ದೇಶದ ಪ್ರಜೆಗಳ ಕರ್ತವ್ಯಗಳನ್ನು ನೆನಪಿಸಿ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆ ಆಯೋಜಿಸಿದ ಗೀತಗಾಯನ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಗೈಡ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ತಂಡವನ್ನು ಶಾಲಾ ಸ್ಕೌಟ್ಸ್ ಗೈಡ್ಸ್ ಶಿಕ್ಷಕರು ತರಬೇತುಗೊಳಿಸಿದ್ದರು ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು, ಪುತ್ತೂರುಇದರ ಆಶ್ರಯದಲ್ಲಿ ,ಗೋಸೇವಾ ಗತಿ ವಿಧಿ,ಕರ್ನಾಟಕ ದಕ್ಷಿಣ ಪ್ರಾಂತ ಹಾಗೂ ಅರೋಗ್ಯ ಭಾರತಿ , ಪುತ್ತೂರು ಜಿಲ್ಲೆ ಇದರ ಸಹಯೋಗದಲ್ಲಿ"Answer for cancer " ಖ್ಯಾತಿಯ ಡಾ .ಡಿ .ಪಿ .ರಮೇಶ್ , ಆಯುರ್ವೇದ ತಜ್ಞ ವೈದ್ಯರು ಹಾಗೂ ಪಂಚಗವ್ಯ ಚಿಕಿತ್ಸಾ ತಜ್ಞರು, ಬೆಂಗಳೂರು...
ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಆಗಸ್ಟ್ 04 ಭಾನುವಾರದಂದು ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ತಜ್ಞ ವೈದ್ಯರಾದ ಡಾl ನರಸಿಂಹ ಶಾಸ್ತ್ರೀ ಮಂಗಳೂರು ಹಾಗೂ ಡಾ|ದೀಪಕ್ ಇವರು ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಿದರು. ಇದೇ ಸಂದರ್ಭದಲ್ಲಿ ಶ್ವಾಸಕೋಶದ ಪರೀಕ್ಷೆ...
ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.04ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಅನೇಕ ಭಕ್ತರು ಉಪಸ್ಥಿತರಿದ್ದರು.
ಅಜ್ಜಾವರ :ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳು ಕಾಣಸಿಗುತ್ತಿದ್ದು ಅಂತಹದೇ ಒಂದು ವಿಸ್ಮಯಕಾರಿ ಬಾವಿ ಆಲೇಟ್ಟಿ ಅರಣ್ಯ ವ್ಯಾಪ್ತಿಯ ನೂರಾರು ಎಕ್ರೆ ಪ್ರದೇಶಗಳಿಂದ ಹರಿದು ಬರುವ ಮಳೆ ನೀರು ಮತ್ತು ಒರತೆ ನೀರು ಒಂದೆಡೆ ಸೇರುತ್ತಿದ್ದು ಇದೀಗ ಈ ನೀರು ಸೇರುವ ಜಾಗ ಮತ್ತು ಈ ನೀರು ಯಾವ ಕಡೆಗೆ ಹೋಗುತ್ತಿದೆ ಎಂಬುದು ಮಾತ್ರ ವಿಸ್ಮಯವಾಗಿದೆ. ಅಜ್ಜಾವರ ಗ್ರಾಮದ...
ಮಡಿಕೇರಿ ಆ.03(ಕ.ವಾ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲವರನ್ನು ಸೇರಿಸಿ ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10 - 2024 ಶನಿವಾರ ದಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ...
Loading posts...
All posts loaded
No more posts
