- Wednesday
- May 6th, 2026
ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಆಗಸ್ಟ್ 04 ಭಾನುವಾರದಂದು ಮಧ್ಯಾಹ್ನ 2:30 - 4:30 ತನಕ ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ತಜ್ಞ ವೈದ್ಯರಾದ ಡಾl ನರಸಿಂಹ ಶಾಸ್ತ್ರೀ ಮಂಗಳೂರು ಇವರು ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರವನ್ನು ನೀಡಲಿದ್ದಾರೆ.ಇದೇ ಸಂದರ್ಭದಲ್ಲಿ ಉಚಿತವಾಗಿ ಶ್ವಾಸಕೋಶದ ಪರೀಕ್ಷೆ (Spirometry ) ಮತ್ತು Nebulization Machine...
ಜೇಸೀಐ ಮಂಗಳೂರು ಶ್ರೇಷ್ಠ ಆತಿಥ್ಯದಲ್ಲಿ ನಡೆದ "ವೈಭವ" ವಲಯ ವ್ಯವಹಾರ ಸಮ್ಮೇಳನದಲ್ಲಿ ಸಮಾಜದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಜೇಸಿಐ ಸುಳ್ಯ ಸಿಟಿಯ ಪೂರ್ವ ಅಧ್ಯಕ್ಷರಾದ ಜೇಸಿ ಚಂದ್ರಶೇಖರ ಕನಕಮಜಲು ರವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಲಯಾದ್ಯಕ್ಷ ಗಿರೀಶ್ ಎಸ್ಪಿ, ವಲಯ ಉಪಾಧ್ಯಕ್ಷ ಅಭಿಷೇಕ್, ಜೇಸಿ ರವಿಚಂದ್ರ ಪಾಟಾಳಿ,...
ಮಡಪಾಡಿ ಗ್ರಾಮದ ತಳೂರು ಹೂವಪ್ಪ ಗೌಡರ ಧರ್ಮಪತ್ನಿ ಕಮಲ ರವರು ಅಲ್ಪ ಕಾಲದ ಅಸೌಖ್ಯದಿಂದ ಕಳೆದ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು. ಇವರು ಪತಿ ಹೂವಪ್ಪ ಗೌಡ ತಳೂರು,ಮಗ ರವಿ ತಳೂರು, ಮಗಳು ಶ್ರೀಮತಿ ರಶ್ಮಿ ಹಾಗೂ ಕುಟುಂಬಸ್ಥರನ್ನು ಅಗಲಿರುತ್ತಾರೆ.
ಸುಳ್ಯ ನಗರದಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ ಕುರುಂಜಿಗುಡ್ಡೆ ಪಾರ್ಕ್ ನಿರ್ವಹಣೆಯಿಲ್ಲದೆ ಸೊರಗಿದ ಕುರಿತಾಗಿ ಮಾಧ್ಯಮಗಳು ನಿರಂತರ ವರದಿ ಭಿತ್ತರಿಸಿದ ಬೆನ್ನಲ್ಲೇ ಜು.25ರಂದು ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಪಾರ್ಕ್ ಸಮರ್ಪಕ ನಿರ್ವಹಣೆಗೆ ವಾರದೊಳಗೆ ನೀಲಿ ನಕ್ಷೆ ತಯಾರಿಸುವಂತೆ ಮುಖ್ಯಾಧಿಕಾರಿಗೆ ಆದೇಶ ನೀಡಿದರು. ಕುರುಂಜಿಗುಡ್ಡೆ ಪಾರ್ಕ್ ನಿರ್ವಹಣೆ ಇಲ್ಲದೆ ಕಾಡುಗಳು ಬಳ್ಳಿಗಳಿಂದ...
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡಾ ಬೆಳ್ಳಾರೆ ಶಾಖೆಯ ವತಿಯಿಂದ ಬ್ಯಾಂಕಿನ 117ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಜು.20ರಂದು ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ (CSR) ನಿಧಿಯಿಂದ ರೂ 10,000 ಮೌಲ್ಯದ (Ryak) ತೆರೆದ ಕಪಾಟನ್ನು ಕೊಡುಗೆಯಾಗಿ ನೀಡಿದರು. ಈ ಕೊಡುಗೆಯನ್ನು ಬೆಳ್ಳಾರೆ ಶಾಖೆಯ ಹಿರಿಯ ಅಧಿಕಾರಿಯಾಗಿರುವ ಶ್ರೀಮತಿ ಶುಭಶ್ರೀ ಅವರು...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರವು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ 16.07.2024 ಮಂಗಳವಾರದಂದು ಜರುಗಿತು.ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯನ್ನು ಜಿಲ್ಲಾ ಸ್ಕೌಟ್ ಆಯುಕ್ತರಾದ ಮಹಮ್ಮದ್ ತುಂಬೆ ಉದ್ಘಾಟಿಸಿ, ಪಂಜ ಸ್ಥಳೀಯ ಸಂಸ್ಥೆಯ ಕಾರ್ಯಕ್ರಮಗಳ...
31.07.2024ರಂದು ವಯೋನಿವೃತ್ತಿ ಹೊಂದಲಿರುವ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾನ್ಯ ರಮೇಶ್ ಬಿ ಇ ರವರನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಜು.16ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಜರುಗಿದ ವಾರ್ಷಿಕ ಮಹಾಸಭೆ ಮತ್ತು ಮಾಹಿತಿ ಕಾರ್ಯಾಗಾರದಲ್ಲಿ ಅಭಿವಂದಿಸಿ ಸನ್ಮಾನಿಸಲಾಯಿತು. ಶ್ರೀಯುತರನ್ನು ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ ಬಿ...
ರೋಟರಿ ಕ್ಲಬ್ ಸುಳ್ಯ ಸಿಟಿ ಯ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸುಳ್ಯದ ರಥಬೀದಿಯಲ್ಲಿರುವ ರೋಟರಿ ಕಮ್ಯುನಿಟಿ ಹಾಲ್ ನಲ್ಲಿ ಜು.12 ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ರೊ.ಗಿರೀಶ್ ನಾರ್ಕೋಡು ವಹಿಸಿದ್ದರು.ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ರೊ.ಯೋಗಿತಾಗೋಪಿನಾಥ್ ನೂತನ ಪದಾಧಿಕಾರಿಗಳಿಗೆ ಪದ ಪ್ರಧಾನ...
ಪಠ್ಯಾಧಾರಿತ ಶಿಕ್ಷಣದಿಂದ ಮಾತ್ರ ಬದುಕಿನಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ ಬದಲಾಗಿ ಬಾಲ್ಯದಿಂದಲೇ ಬೆಳೆಸಿಕೊಳ್ಳುವ ಉತ್ತಮ ಗುಣಗಳು ಅವನನ್ನು ಉತ್ತುಂಗಕ್ಕೇರಿಸುತ್ತವೆ. ಪ್ರತಿಭಾ ಪ್ರದರ್ಶನವು ವಿದ್ಯಾರ್ಥಿಗಳಿಗೆ ತಮ್ಮ ಸೃಜನ್ಯಶೀಲತೆ ಮತ್ತು ನಾವೀನ್ಯತೆಯನ್ನು ಸಾಬೀತುಪಡಿಸಲು ಅವಕಾಶವನ್ನು ಒದಗಿಸುತ್ತದೆ. ಅದೇ ರೀತಿಯಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಜು.04ರಂದು ನಡೆಯಿತು. ಶಾಲೆಯ ನಾಲ್ಕು ದಳಗಳಾದ ಜ್ಯೋತಿ, ಶಕ್ತಿ ,ಕೀರ್ತಿ...
Loading posts...
All posts loaded
No more posts
