ದೊಡ್ಡೇರಿ ಶಾಲಾ ಮಂತ್ರಿಮಂಡಲ ರಚನೆ – ಮುಖ್ಯಮಂತ್ರಿಯಾಗಿ ಪ್ರಣೀಶ್ ಎ.ಪಿ.

ದೊಡ್ಡೇರಿ ಸ.ಕಿ.ಪ್ರಾ.ಶಾಲಾ 2024-25 ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಪ್ರಣೀಶ್ ಎ.ಪಿ., ವಿದ್ಯಾಮಂತ್ರಿಯಾಗಿ ಸುಪ್ರೀತ್, ನೀರಾವರಿ ಮಂತ್ರಿಯಾಗಿ ರಿತೇಶ್ ಕುಮಾರ್, ಸ್ವಚ್ಛತಾ ಮಂತ್ರಿಯಾಗಿ ದ್ರುವಿ, ಹಣಕಾಸು ಮಂತ್ರಿಯಾಗಿ ಮನ್ವಿತ್, ಆರೋಗ್ಯ ಮಂತ್ರಿ ಆರ್ಯ ಎನ್.ಜಿ., ರಕ್ಷಣಾ ಮಂತ್ರಿ ಜೀವನ್, ಸಾಂಸ್ಕೃತಿಕ ಮಂತ್ರಿ ಪೂರ್ವಿ ಡಿ.ಬಿ., ವಾರ್ತಾ ಮಂತ್ರಿ ಇಂಚರ ಡಿ.ಜೆ. ಆಯ್ಕೆಯಾದರು.

ಪೆರುವಾಜೆ: ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಗಳ ತೆರವು

ಪೆರುವಾಜೆ ಗ್ರಾಮದ ಪೆರುವಾಜೆ-ಮಠತ್ತಡ್ಕದಲ್ಲಿ ಹಾದು ಹೋಗುವ ವಿದ್ಯುತ್ ಲೈನಿಗೆ ತಾಗಿಕೊಂಡಿರುವ ಮರಗಳನ್ನು ಶೌರ್ಯ ವಿಪತ್ತು ತಂಡದಿಂದ ಜೂ.09ರಂದು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರುಗಳಾದ ರಮೇಶ್ ಮಠತ್ತಡ್ಕ, ಶೇಷಪ್ಪ ಮಠತ್ತಡ್ಕ, ಸುಂದರ ನಾಯ್ಕ್, ನಾರಾಯಣ ಮಠತ್ತಡ್ಕ, ರಾಜೇಶ್ ಮಠತ್ತಡ್ಕ, ಪುರುಷೋತ್ತಮ್ ನಾಯ್ಕ್ , ವೆಂಕಪ್ಪ ನಾಯ್ಕ, ಸೀತಾರಾಮ ಆಚಾರ್ಯ,ಯಶವಂತ್, ರಾಜೇಶ್ ಸಾರಕರೆ, ಲೈನ್ ಮಾನ್ ವಸಂತ...
Ad Widget

ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ.

ಸುಳ್ಯ:ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ ರಿ ಸುಳ್ಯ ಇದರ ವಾರ್ಪಿಕ ಮಹಾಸಭೆ ಮತ್ತು ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ದಿನಾಂಕ 16/06/24ರಂದು ನಡೆಯಲಿದ್ದು ವಾರ್ಷಿಕ ಮಹಾಸಭೆ ಮತ್ತು ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯು ದಿನಾಂಕ 02/06/24ರಂದು ಸಂಧ್ಯಾರಶ್ಮಿ ಸಭಾಭವನದಲ್ಲಿ ಬಿಡುಗಡೆ ಗೊಳಿಸಲಾಯಿತು. ಸಂಘವು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಪೂರ್ವಾಭಾವಿ ಸಭೆ...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ- ಪ್ರತಿಭಾ ಪುರಸ್ಕಾರ

"ಕನ್ನಡ ಮಾಧ್ಯಮ ಎಂಬ ಅಳುಕು ಬಿಟ್ಟು ಬಿಡಿ, P-Q-R-S -T ಸೂತ್ರವನ್ನು ಪಾಲಿಸಿ, ಓದುವಿಕೆಯಲ್ಲಿ ಕಠಿಣ ಶ್ರಮ ಅಗತ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ, ಉತ್ತಮ ಸಂಸ್ಕಾರಗಳನ್ನೂ ರೂಢಿಸಿಕೊಳ್ಳಿ" ಹೀಗೆಂದು ಡಾ| ರಾಧಿಕಾ.ಡಿ, ಬಾಳಿಲ ವಿದ್ಯಾಬೋಧಿನೀಹಿರಿಯ ವಿದ್ಯಾರ್ಥಿ ಹಾಗೂ ಅರಿವಳಿಕೆ ಮತ್ತು ನೋವು ನಿವಾರಣಾ ತಜ್ಞೆ, ಮೈಸೂರು ಇವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ...

ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಡಬ ತಾಲೂಕಿನ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಬಿ ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಡೆಪ್ಪಾಜೆ ಫಾರ್ಮ್ ಹೌಸ್ ಮತ್ತು ನರ್ಸರಿ ಮರ್ದಾಳ ಇವರ ಸಹಯೋಗದಲ್ಲಿ...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ರಾಧಾಕೃಷ್ಣ ರಾವ್, ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್ ಪ್ರಸಾದ್, ಶಾಲಾ ಮುಖ್ಯ ಗುರು ಉದಯ ಕುಮಾರ್ ರೈ ಎಸ್, ಶಾಲಾ ಎಸ್ಡಿಎಂಸಿ ,ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕೋಟ ಶ್ರೀನಿವಾಸ್ ಪೂಜಾರಿ ಗೆಲುವು

ಉಡುಪಿ :ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರವರು ಒಂದು ಲಕ್ಷದ ನಲುವತ್ತೆಲು ಸಾವಿರದ ಎಳುನೂರ ಅರುವತ್ತಾರು ಮತಗಳ ಅಂತರವನ್ನು ಕಾಯ್ದುಕೊಂಡು ಗೆಲುವಿನ ನಗೆ ಬೀರಿದು. ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ವಿರುದ್ದ ತಮ್ಮ ಗೆಲುವನ್ನು ಪಡೆದುಕೊಂಡರು .

ಕೊಂಬಾರು ಸ.ಉ.ಹಿ.ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಚಿದಾನಂದ ಗೌಡ ನಿವೃತ್ತಿ

ಕಡಬ ತಾಲೂಕಿನ ಕೊಂಬಾರು ಸ.ಉ.ಹಿ.ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ, ಶಿಕ್ಷಣ ಕ್ಷೇತ್ರದಲ್ಲಿ 34 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿರುವ ಚಿದಾನಂದ ಗೌಡರವರು ಮೇ.31ರಂದು ನಿವೃತ್ತರಾದರು. ಕಡಬ ತಾಲೂಕಿನ ಕೊಂಬಾರು ಗ್ರಾಮದ ಶ್ರೀಯುತ ಶಿವಣ್ಣ ಗೌಡ ಹಾಗೂ ಶ್ರೀಮತಿ ವೆಂಕಮ್ಮ ದಂಪತಿಗಳ ಪುತ್ರನಾಗಿ ದಿನಾಂಕ 01.06.1964 ರಂದು ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಕೊಂಬಾರು ಇಲ್ಲಿ...

ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ.ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾಗಿ ಉದಯಕುಮಾರ ರೈ ಎಸ್

ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಕೃಷ್ಣಮೂರ್ತಿಯವರ ವಯೋ ನಿವೃತ್ತಿಯಿಂದ ತೆರವಾದ ಸ್ಥಾನದ ಪ್ರಭಾರವನ್ನು, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶನ ಹಾಗೂ ಆಡಳಿತ ಮಂಡಳಿಯ ಸೂಚನೆಯಂತೆ ವಿದ್ಯಾಬೋಧಿನೀ ಪ್ರೌಢಶಾಲೆಯ ಸಹಶಿಕ್ಷಕರಾದ ಉದಯಕುಮಾರ ರೈ ಎಸ್ ರವರು ವಹಿಸಿಕೊಂಡರು. ಈ ಸಂದರ್ಭ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕ ಪಿ ಜಿ ಎಸ್ ಎನ್ ಪ್ರಸಾದ್, ವಿದ್ಯಾಬೋಧಿನೀ...

ಅರಂತೋಡು : ಬೈಕ್ – ಕಾರು ಡಿಕ್ಕಿ – ಸವಾರ ಆಸ್ಪತ್ರೆಗೆ ದಾಖಲು

ಅರಂತೋಡು : ಸುಳ್ಯದ ಅರಂತೋಡು ಸೊಸೈಟಿ ಮುಂಭಾಗದಲ್ಲಿ ಇದೀಗ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ. ಬೈಕ್ ಮಡಿಕೇರಿ ಕಡೆಯಿಂದ ಸುಳ್ಯಕ್ಕೆ ಆಗಮಿಸುತ್ತಿದ್ದು ಕಾರು ಸುಳ್ಯದಿಂದ ಮಡಿಕೇರಿ ಕಡೆಗೆ ಚಲಾಯಿಸಲಾಗುತ್ತಿತ್ತು ಗಾಯಗೊಂಡವರನ್ನು ಚೆಂಬು ಮೂಲದ ವ್ಯಕ್ತಿ ಎಂದು ತಿಳಿದುಬಂದಿದ್ದು ಇದೀಗ ಗಾಯಗೊಂಡ ವ್ಯಕ್ತಿಯನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
Loading posts...

All posts loaded

No more posts

error: Content is protected !!