ಅಡ್ಕಾರು : ಕಾಂಗ್ರೆಸ್ ಮುಖಂಡನ ಮೇಲೆ ಯುವಕನಿಂದ ಹಲ್ಲೆ.

ಕಾಂಗ್ರೆಸ್ ಹಿರಿಯ ನಾಯಕನ ಮೇಲೆ ಹಲ್ಲೆ ನಡೆದಿರುವ ಘಟನೆ ಇಂದು ಸುಳ್ಯದ ಅಡ್ಕಾರು ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಬೋಜಪ್ಪ ನಾಯ್ಕ ಎಂದು ತಿಳಿದು ಬಂದಿದೆ. ಅಡ್ಕಾರಿನ ವಿನೋಭಾ ನಗರದ ಬಳಿ ಅಡ್ಕಾರ್ ಕೋನಡ್ಕ ಪದವು ದೀಕ್ಷಿತ್ ಎಂಬ ಯುವಕ ಪೂರ್ವ ದ್ವೇಷದ ಹಿನ್ನಲೆಯಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದ್ದು ಹಲ್ಲೆಗೊಳಗಾದ ವ್ಯಕ್ತಿಯನ್ನು ಇದೀಗ ಆಸ್ಪತ್ರೆಗೆ...

ಅಜ್ಜಾವರ ಗ್ರಾಮ ಪಂಚಾಯತ್ ಗ್ರಾಮ ಸಭೆ , ಗ್ರಾಮಸ್ಥರ ಪ್ರಶ್ನೆಗಳಿಗೆ ಮೌನವಾದ ಜನಪ್ರತಿನಿಧಿಗಳು ,ಅಭಿವೃದ್ಧಿ ಅಧಿಕಾರಿಗಳಿಂದ ಉತ್ತರ ನೀಡಲು ಪ್ರಯತ್ನ !

ಅಜ್ಜಾವರ ಸ್ಮಶಾನ ಜಾಗ ಉಳಿಸಲು ಗ್ರಾಮ ಸಭೆಯಲ್ಲೇ ಪ್ರತಿಭಟನೆ , ಮೊದಲ ಭಾರಿಗೆ ಲಿಖಿತ ಹೇಳಿಕೆ ಪಡೆದುಕೊಂಡ ಗ್ರಾಮಸ್ಥರು. ಕುಡಿಯುವ ನೀರು ಹಾಗೂ ಇತರೆ ವಿಚಾರಗಳ ಬಗ್ಗೆ ಪ್ರಶ್ನೆ ಅಸಮರ್ಪಕ ಉತ್ತರ , ಅಧಿಕಾರಿಗಳ ಗೈರಿಗೆ ನೋಟಿಸ್ ನೀಡಲು ತೀರ್ಮಾನ. ಅಜ್ಜಾವರ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ‌ಬೇಬಿ‌ ಕಲ್ತಡ್ಕರ ಅಧ್ಯಕ್ಷತೆಯಲ್ಲಿ, ಮೇನಾಲ ಅಂಬೇಡ್ಕರ್ ಭವನದಲ್ಲಿ...
Ad Widget

ಕಲ್ಮಕಾರು : ಹಿಂದಿನ ಕಾಲದ ಸುರಂಗ ಪತ್ತೆ

ಕಲ್ಮಕಾರು ಗ್ರಾಮದ ಬಿಳಿಮಲೆ ಎಂಬಲ್ಲಿ ವೃತ್ತಾಕಾರದ ಗುಹೆಯೊಂದು ಪತ್ತೆಯಾಗಿದೆ. ಬಿಳಿಮಲೆ ಉಮೇಶ್ ಅವರ ಮನೆಯ ಪಕ್ಕದಲ್ಲಿ ಈ ಗುಹೆ ಪತ್ತೆಯಾಗಿದೆ. ಗುಹೆಯ ಮೇಲ್ಭಾಗಕ್ಕೆ ಮುಚ್ಚಳದಂತೆ ಕಲ್ಲೊಂದನ್ನು ಕೆತ್ತಿದಂತೆ ಕಾಣುತ್ತಿದೆ. ಬಿಳಿಮಲೆ ಉಮೇಶ್‌ ಅವರ ರಬ್ಬರ್‌ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಇದು ಪತ್ತೆಯಾಗಿದೆ. ಅಗೆತ ವೇಳೆ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದಾಗ...

ಸುಳ್ಯ :  ಪಂಚ ಗ್ಯಾರಂಟಿ ಸಮಾವೇಶ – ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾದ ಫಲಾನುಭವಿಗಳು

ಸುಳ್ಯ ದಕ್ಷಿಣ ಕನ್ನಡ ಜಿಲ್ಲಾಡಳಿತ ಸುಳ್ಯ ತಾಲೂಕು ಆಡಳಿತದ ವತಿಯಿಂದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶವು  ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಹಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯನ್ನು ದಿನೇಶ್ ಗುಂಡುರಾವ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು . ಈ ಸಂದರ್ಭದಲ್ಲಿ...

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ‌.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ತನ್ನನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು. ಬಳಿಕ ಕಾಂಗ್ರೆಸ್ ಮುಖಂಡರು ವೇದಿಕೆಗೆ ಆಗಮಿಸಿ...

ಸುಳ್ಯ : ಗ್ಯಾರಂಟಿ ಸಮಾವೇಶ – ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ತರಾಟೆಗೆತ್ತಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು ಈ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ಅವರನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು . ಬಳಿಕ ಕಾಂಗ್ರೆಸ್ ಮುಖಂಡರು...

ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಬುಡ್ಲೆಗುತ್ತು ಹಾಗೂ ಬೊಳ್ಳೂರು ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ರಾಧಾಕೃಷ್ಣ ಬೊಳ್ಳೂರು ರವರು ಆಯ್ಕೆ ಗೊಂಡಿರುತ್ತಾರೆ.

ಐವರ್ನಾಡು: ‘ಜಾಗೃತಿ ಸುಳ್ಯ’ ವತಿಯಿಂದ ಬೇಂಗಮಲೆ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ

ಸುಳ್ಯ ತಾಲೂಕಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳ ಮಿತ್ರ ಬಳಗ 'ಜಾಗೃತಿ ಸುಳ್ಯ' ಇದರ ವತಿಯಿಂದ ಮಾ.01 ರಂದು ಐವರ್ನಾಡು ಗ್ರಾಮದ ಬೇಂಗಮಲೆ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಅಭಿಯಾನದ ಅಂಗವಾಗಿ ಬೇಂಗಮಲೆ ಬಸ್ಸು ತಂಗುದಾಣ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. 'ಸಾಮಾಜಿಕ ಜವಾಬ್ದಾರಿಯ ಅರಿವು' ಎಂಬ ಧ್ಯೇಯದೊಂದಿಗೆ 'ಜಾಗೃತಿ ಸುಳ್ಯ'ದ ಸದಸ್ಯರು ತಮ್ಮ...

ಮಾ.1-7 ಶ್ರೀಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಸಂಭ್ರಮ

ಸುಳ್ಯ:ಪಾಟಾಳಿ ಯಾನೆ ವಾಣಿಯ ಗಾಣಿಗ ಸಮುದಾಯದ ಕುಲದೇವತೆ, ಕಾಸರಗೋಡು ಜಿಲ್ಲೆಯ ಕಣ್ಣೂರು ಸಮೀಪದ ಕುಂಬಳೆ ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಸುಮಾರು 20 ವರ್ಷಗಳ ನಂತರ ನಡೆಯುವ ಕಳಿಯಾಟ ಮಹೋತ್ಸವು ಮಾ.1ರಂದು ಅದ್ದೂರಿಯಾಗಿ ಚಾಲನೆ ದೊರೆಯಲಿದೆ. https://youtube.com/@amarasuddiamarasuddi7408?si=ihQTNbajE7mlB6ls ಶ್ರೀ ಕ್ಷೇತ್ರವು ತನ್ನ ಶಾಂತಿಯುತ ಮತ್ತು ಕರುಣಾಮಯಿ ದೇವತೆಯಾದ ಶ್ರೀ ಪೆರ್ನೆ ಮುಚ್ಚಿಲೋಟ್ ಭಗವತಿಗೆ ಹೆಸರುವಾಸಿಯಾಗಿದೆ....

ಮಾ.01-ಮಾ.02: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ 22ನೇ ವರ್ಷದ ಏಕಾಹ ಭಜನೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಾ.01 ಶುಕ್ರವಾರ ಸೂರ್ಯೋದಯದಿಂದ ಮಾ.02 ಶನಿವಾರ ಸೂರ್ಯೋದಯದವರೆಗೆ ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ ಹಾಗೂ ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವರ ಸಂಯುಕ್ತ ಆಶ್ರಯದಲ್ಲಿ 22ನೇ ವರ್ಷದ ಏಕಾಹ ಭಜನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತಾಧಿಕಾರಿಗಳು ವಿನಂತಿಸಿದ್ದಾರೆ.
Loading posts...

All posts loaded

No more posts

error: Content is protected !!