ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಬುಡ್ಲೆಗುತ್ತು ಹಾಗೂ ಬೊಳ್ಳೂರು ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ರಾಧಾಕೃಷ್ಣ ಬೊಳ್ಳೂರು ರವರು ಆಯ್ಕೆ ಗೊಂಡಿರುತ್ತಾರೆ.

ಐವರ್ನಾಡು: ‘ಜಾಗೃತಿ ಸುಳ್ಯ’ ವತಿಯಿಂದ ಬೇಂಗಮಲೆ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ

ಸುಳ್ಯ ತಾಲೂಕಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳ ಮಿತ್ರ ಬಳಗ 'ಜಾಗೃತಿ ಸುಳ್ಯ' ಇದರ ವತಿಯಿಂದ ಮಾ.01 ರಂದು ಐವರ್ನಾಡು ಗ್ರಾಮದ ಬೇಂಗಮಲೆ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಅಭಿಯಾನದ ಅಂಗವಾಗಿ ಬೇಂಗಮಲೆ ಬಸ್ಸು ತಂಗುದಾಣ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. 'ಸಾಮಾಜಿಕ ಜವಾಬ್ದಾರಿಯ ಅರಿವು' ಎಂಬ ಧ್ಯೇಯದೊಂದಿಗೆ 'ಜಾಗೃತಿ ಸುಳ್ಯ'ದ ಸದಸ್ಯರು ತಮ್ಮ...
Ad Widget

ಮಾ.1-7 ಶ್ರೀಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಸಂಭ್ರಮ

ಸುಳ್ಯ:ಪಾಟಾಳಿ ಯಾನೆ ವಾಣಿಯ ಗಾಣಿಗ ಸಮುದಾಯದ ಕುಲದೇವತೆ, ಕಾಸರಗೋಡು ಜಿಲ್ಲೆಯ ಕಣ್ಣೂರು ಸಮೀಪದ ಕುಂಬಳೆ ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಸುಮಾರು 20 ವರ್ಷಗಳ ನಂತರ ನಡೆಯುವ ಕಳಿಯಾಟ ಮಹೋತ್ಸವು ಮಾ.1ರಂದು ಅದ್ದೂರಿಯಾಗಿ ಚಾಲನೆ ದೊರೆಯಲಿದೆ. https://youtube.com/@amarasuddiamarasuddi7408?si=ihQTNbajE7mlB6ls ಶ್ರೀ ಕ್ಷೇತ್ರವು ತನ್ನ ಶಾಂತಿಯುತ ಮತ್ತು ಕರುಣಾಮಯಿ ದೇವತೆಯಾದ ಶ್ರೀ ಪೆರ್ನೆ ಮುಚ್ಚಿಲೋಟ್ ಭಗವತಿಗೆ ಹೆಸರುವಾಸಿಯಾಗಿದೆ....

ಮಾ.01-ಮಾ.02: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ 22ನೇ ವರ್ಷದ ಏಕಾಹ ಭಜನೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಾ.01 ಶುಕ್ರವಾರ ಸೂರ್ಯೋದಯದಿಂದ ಮಾ.02 ಶನಿವಾರ ಸೂರ್ಯೋದಯದವರೆಗೆ ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ ಹಾಗೂ ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವರ ಸಂಯುಕ್ತ ಆಶ್ರಯದಲ್ಲಿ 22ನೇ ವರ್ಷದ ಏಕಾಹ ಭಜನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತಾಧಿಕಾರಿಗಳು ವಿನಂತಿಸಿದ್ದಾರೆ.

ಅರಂಬೂರು ರಸ್ತೆ ಅಪಘಾತ ಪ್ರಕರಣ ವ್ಯಕ್ತಿ ಮೃತ್ಯು.

ಸುಳ್ಯ ಅರಂಬೂರು ಬಳಿಯ ಬಳಿಯಲ್ಲಿ ರಸ್ತೆ ಅಪಘಾತ ನಡೆದ ಕುರಿತು ವರದಿಯಾಗಿತ್ತು ಇದೀಗ ಗಂಭೀರವಾಗಿ ಗಾಯಗೊಂಡು ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪರಮೇಶ್ವರ ಮೃತ್ಯುವಾಗಿದ್ದಾರೆ ಎಂದು ತಿಳಿದು ಬಂದಿದೆ.

ರಾಷ್ಟ್ರಪತಿ ಭೇಟಿ ಮಾಡುವ ಭಾಗ್ಯ ಪಡೆದ ಕೊಲ್ಲಮೊಗ್ರದ ಮೀನಾಕ್ಷಿ ಹಾಗೂ ವನಿತಾ

ಕೊಲ್ಲಮೊಗ್ರದ ಇಬ್ಬರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಆದಿವಾಸಿ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿ ಮಾಡುವ ಭಾಗ್ಯ ಒದಗಿಬಂದಿದ್ದು ವಿಮಾನವೇರುವ ಸಂಭ್ರಮದಲ್ಲಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ "ಸಂಜೀವಿನೀ"ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿದೆ. ಮಾ.1 ರಂದು ರಾಷ್ಟ್ರಪತಿಗಳ ಭೇಟಿ ಹಾಗೂ ಅಮೃತ್ ಉದ್ಯಾನವನಕ್ಕೆ ಭೇಟಿ ನೀಡಲು ಇವರಿಗೆ...

ಕೊಲ್ಲಮೊಗ್ರ : ಕೆ.ವಿ.ಜಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉದಯ ಶಿವಾಲ – ಕಾರ್ಯದರ್ಶಿಯಾಗಿ ನೀಲಾವತಿ ತಂಬಿನಡ್ಕ

ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರ ಇದರ ಹಿರಿಯ ವಿದ್ಯಾರ್ಥಿ ಸಂಘದ ಸಭೆಯು ಕೆ.ವಿ.ಜಿ ಪ್ರೌಢಶಾಲೆಯಲ್ಲಿ ಫೆ.24 ರಂದು ನಡೆಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಕಮಲಾಕ್ಷ ಮುಳ್ಳುಬಾಗಿಲು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೀಲಾವತಿ ತಂಬಿನಡ್ಕ ನೂತನ ಅಧ್ಯಕ್ಷರಾಗಿ ಉದಯ ಶಿವಾಲ ಅವರನ್ನು ಆಯ್ಕೆ ಮಾಡಲಾಯಿತು....

ಕಲ್ಮಡ್ಕ : ಶ್ರೀರಾಮ ಜನರಲ್ ಸ್ಟೋರ್ ನವೀಕೃತಗೊಂಡು ಶುಭಾರಂಭ

ಕಲ್ಮಡ್ಕ ಕಾಚಿಲದಲ್ಲಿರುವ ಶ್ರೀರಾಮ ಜನರಲ್ ಸ್ಟೋರ್ ನವೀಕೃತಗೊಂಡು ಫೆ. 23 ಶುಕ್ರವಾರದಂದು ಶುಭಾರಂಭಗೊಂಡಿತು. ಹಿರಿಯ ಧಾರ್ಮಿಕ ಮುಖಂಡರಾದ ಕೆ ಎನ್ ಪರಮೇಶ್ವರಯ್ಯ ಕಾಚಿಲ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಯನ್ನು ನೆರೆವೇರಿಸಿದರು. ಬೆಳಿಗ್ಗೆ ಗಣಪತಿ ಹವನವನ್ನು ನಡೆಸುವ ಮೂಲಕ ಧಾರ್ಮಿಕ ವಿಧಿ ವಿಧಾನವನ್ನು ನಡೆಸಲಾಯಿತು.‌ಈ ಸಂದರ್ಭದಲ್ಲಿ ಮಾಲಕರಾದ ಶ್ರೀಮತಿ ಪುಷ್ಪಾವತಿ ವಾಸುದೇವ ಗೌಡ ಮತ್ತು ಮನೆಯವರು...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ತಯಾರಿ ಕಾರ್ಯಕ್ರಮ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಬೆಂಕಿ ಬಳಸಿ ಮತ್ತು ಬೆಂಕಿ ಬಳಸದೇ ಅಡುಗೆ ತಯಾರಿ ನಡೆಯಿತು. ಶಾಲೆಯ ಸ್ಕೌಟ್ಸ್ 28 ಮತ್ತು ಗೈಡ್ಸ್ 16 ವಿದ್ಯಾರ್ಥಿಗಳು ಭಾಗವಹಿಸಿದರು. ಗೌರವ ಉಪಸ್ಥಿತಿಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ರಾಧಾಕೃಷ್ಣ ಉಡುವೆಕೋಡಿ, ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ, ಉಪಾಧ್ಯಕ್ಷರಾದ...

ಕೊಲ್ಲಮೊಗ್ರ ಪತ್ರಕರ್ತರ ಗ್ರಾಮ ವಾಸ್ತವ್ಯ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಸಭಾ ಸಭಾಪತಿ ಯು.ಟಿ ಖಾದರ್ ಗೆ ಮನವಿ ಸಲ್ಲಿಕೆ.

ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಫೆ 10 ರಂದು ಕೊಲ್ಲಮೊಗ್ರದಲ್ಲಿ ಜರುಗಿದ ಪತ್ರಕರ್ತರ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಹಲವು ಬೇಡಿಕೆಗಳು ಅಲ್ಲಿ ಬಂದಿದ್ದು ಅದಕ್ಕೆ ಸಂಬಂಧಿಸಿದ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಸಭಾ ಅಧ್ಯಕ್ಷರಾದ ಯು..ಟಿ ಖಾದರ್ ಅವರಿಗೆ ಶಾಸಕಿ ಭಾಗೀರಥಿ ಮುರಳ್ಯರವರ ಸಮ್ಮುಖದಲ್ಲಿ ಮನವಿ ನೀಡಲಾಯಿತು.ಈ...
Loading posts...

All posts loaded

No more posts

error: Content is protected !!