Ad Widget

ಡಾ. ಆರ್. ಕೆ. ನಾಯರ್ ರವರಿಗೆ ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿಯಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳರಿಂದ ಪ್ರಶಸ್ತಿ ಪ್ರಧಾನ

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಎರಡನೇಯ ದಿನದಂದು ಶ್ರೀಗುರುರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರಧಾನ ಸಮಾರಂಭವು ಎ.22 ರಂದು ಮಠದ ಸಭಾಭವನದಲ್ಲಿ ನಡೆಯಿತು. ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದ ಸಚ್ಚಿದಾನಂದ ಭಾರತಿಶ್ರೀಪಾದಂಗಳವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಗ್ರೀನ್ ಹೀರೋ ಆಫ್ ಇಂಡಿಯಾ...

ಪಹಲ್ಗಾಮ್ ಘಟನೆ ಕಲ್ಲುಗುಂಡಿ ಮುಹಿಯುದ್ದೀನ್ ಜುಮಾ ಮಸೀದಿಯ ವಠಾರದಲ್ಲಿ ಕೃತ್ಯಕ್ಕೆ ಖಂಡನೆ

ಭಾರತದ ಹಚ್ಚ ಹಸಿರಿನ ತಾಣ ಕಾಶ್ಮೀರದ ಪಹಲ್ಗಾಮ್ ಬಳಿ ಉಗ್ರಗಾಮಿಗಳಿಂದ ಹುತಾತ್ಮರಾದ ಪ್ರವಾಸಿಗರಿಗೆ ಸಂತಾಪ ಸೂಚಿಸಿ ಮಾತಾನಾಡಿದ ಕಲ್ಲುಗುಂಡಿ ಜುಮಾ ಮಸೀದಿಯ ಧರ್ಮ ಗುರುಗಳಾದ ಬಹು ನಾಸಿರ್ ದಾರಿಮಿ ಇಸ್ಲಾಂ ಧರ್ಮ ಯಾವತ್ತೂ ಉಗ್ರ ವಾದವನ್ನು ಬೆಂಬಲಿಸುವುದಿಲ್ಲ, ಹಾಗು ಉಗ್ರಗಾಮಿಗಳನ್ನು ಬೆಂಬಲಿಸುವುದಿಲ್ಲ . ಹುತಾತ್ಮರಾದ ಎಲ್ಲರ ಕುಟುಂಬ ವರ್ಗಕ್ಕೆ ಸಹನೆ ತಾಳ್ಮೆ ಇರಲಿ ನಾವೆಲ್ಲರೂ ಭಾರತೀಯರು...
Ad Widget

ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಬ್ರಹ್ಮಣ್ಯದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ

ಕುಕ್ಕೆಸುಬ್ರಹ್ಮಣ್ಯದ ಹಿಂದೂ ಪರಿವಾರ ಸಂಘಟನೆಗಳ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ ಎ.25 ರಂದು ಕುಕ್ಕೆಸುಬ್ರಹ್ಮಣ್ಯದ ರಥಬೀದಿಯಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ನಿವೃತ್ತ ಅಧಿಕಾರಿ ಅಶೋಕ್ ಮೂಲೆಮಜಲು, ಉಪನ್ಯಾಸಕ ಪದ್ಮ ಕುಮಾರ್ ಗುಂಡಡ್ಕ ಘಟನೆ...

ಬಿಜೆಪಿ ಪಕ್ಷದ ಬಗ್ಗೆ ಸುಳ್ಯದ ಯೂಟ್ಯೂಬರ್ ನಿಂದ ಕೆಟ್ಟ ಪದ ಬಳಕೆ – ಕ್ಷಮೆ ಯಾಚಿಸಲು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಒತ್ತಾಯ

ಕಾಶ್ಮೀರದ ಪಹಲ್ಗಮ್ ಲ್ಲಿ ನಡೆದ ಉಗ್ರರ ಹೇಯ ಕೃತ್ಯವನ್ನು ಖಂಡಿಸುವ ವಿಚಾರದಲ್ಲಿ ಯೂ ಟ್ಯೂಬ್ ಚಾನೆಲ್ ನಿರೂಪಕರೊಬ್ಬರು ಬಿಜೆಪಿ ಪಕ್ಷದ ಬಗ್ಗೆ ಅಸಹ್ಯಕಾರ, ಕೆಟ್ಟ ಪದ ಬಳಸಿರುವುದನ್ನು ಬಿಜೆಪಿ ಮಂಡಲ ಸಮಿತಿ ಖಂಡಿಸುತ್ತದೆ. ವಿಜೆ ವಿಖ್ಯಾತ್ ಬಗ್ಗೆ ನಮಗೆ ಗೌರವವಿತ್ತು.ಹಳ್ಳಿ, ಬಡತನದಿಂದ ಬಂದ ಹುಡುಗ ಏನೋ ಒಂದಷ್ಟು ಒಳ್ಳೆಯ ಕಾರ್ಯ ಮಾಡುತ್ತಿದ್ದೇನೆಂಬ ಭಾವನೆಯಿತ್ತು. ಆದರೆ ಕಾಶ್ಮೀರದಲ್ಲಿ...

ಬ್ಯಾರಿ ಮೇಳ 2025ರಲ್ಲಿ ಉಬೈಸ್‌ಗೆ ಗೂನಡ್ಕ ಅವರಿಗೆ ಸಾಧನೆ ಪ್ರಶಸ್ತಿ ಪ್ರದಾನ

ಮಂಗಳೂರಿನಲ್ಲಿ ನಡೆದ ಬ್ಯಾರಿ ಮೇಳ 2025ರಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಂದ ಉಬೈಸ್ ಅವರಿಗೆ ಸಾಮಾಜಿಕ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಹ್ಯಾದ್ರಿ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ಮಂಜುನಾಥ್ ಭಂಡಾರಿ, ನಿವೃತ್ತ ಡಿಸಿಪಿ ಜಿ.ಎ. ಬಾವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಮತ್ತು ನಸೀಮಾ ಫೌಂಡೇಶನ್ ಸ್ಥಾಪಕ ಯು.ಟಿ. ಝುಲ್ಫಿಕಾರ್...

ಕಲ್ಲುಗುಂಡಿ : ಬರೆಗೆ ಗುದ್ದಿದ ಟ್ಯಾಂಕರ್ – ಚಾಲಕನ ಕಾಲಿಗೆ ಗಾಯ

ಕಲ್ಲುಗುಂಡಿ ಪೊಲೀಸ್ ಔಟ್ ಪೋಸ್ಟ್ ಬಳಿ ಏ 23 ರಂದು ತಡರಾತ್ರಿ ಸುಮಾರು ಮೂರು ಗಂಟೆಗೆ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಗುದ್ದಿದ್ದು ಘಟನೆಯಿಂದ ಲಾರಿ ಚಾಲಕನ ಕಾಲು ಸಿಲುಕಿಕೊಂಡಿತ್ತು. ಬಳಿಕ ಸ್ಥಳೀಯರ ಸಹಕಾರದಿಂದ ಹೊರತೆಗೆಯಲಾಯಿತು.‌ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕೆ.ಎಸ್.ಎಸ್ ಕಾಲೇಜಿನಲ್ಲಿ ಸ್ಮಾರ್ಟ್ ಇನ್ವೆಸ್ಟಿಂಗ್ ಬಗ್ಗೆ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗ ಮತ್ತು ಐ ಕ್ಯೂ ಎ ಸಿ ಘಟಕದ ಜಂಟಿ ಆಶ್ರಯದಲ್ಲಿ ಸ್ಮಾರ್ಟ್ ಇನ್ವೆಸ್ಟಿಂಗ್ ಬಗ್ಗೆ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಹೆಚ್ ಡಿ ಎಫ್ ಸಿ ಸೆಕ್ಯೂರಿಟಿ ಲಿಮಿಟೆಡ್ ಅದರ...

ಕಾರ್ಪಲ್ ಟನೆಲ್ ಸಿಂಡ್ರೋಮ್

✍️ಡಾ|| ಮುರಲೀ ಮೋಹನ್ ಚೂಂತಾರು ಇದೊಂದು ನರಗಳಿಗೆ ಸಂಬಂಧಿಸಿದ ಖಾಯಿಲೆಯಾಗಿದ್ದು ನರದ ಮೇಲೆ ಬೀಳುವ ಒತ್ತಡದಿಂದಾಗಿ ಕೈ, ಮುಂಗೈ ಮತ್ತು ತೋಳುಗಳಲ್ಲಿ ನೋವು, ಮರಗಟ್ಟಿದ ಅನುಭವ ಅಥವಾ ಇರುವೆ ಹಿಡಿದಂತಹಾ ಅನುಭವ ಉಂಟಾಗುತ್ತದೆ. ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 10 ಮಿಲಿಯನ್ ಮಂದಿ ಈ ತೊಂದರೆಯಿಂದ ಬಳಲುತ್ತಾರೆ. ಬಹಳ ಸುಲಭವಾಗಿ ಗುರುತಿಸಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ...

ಐವರ್ನಾಡು : ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ಪಂಚಾಯತ್ ನಿಂದ ರೂ.‌ 3000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಪೈಚಾರು ನಿವಾಸಿಗಳಿಗೆ ರೂ 3000.00 ದಂಡ ವಿಧಿಸಲಾಯಿತು. ಎ. 21ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ ತ್ಯಾಜ್ಯ ಎಸೆದ...

ಗುತ್ತಿಗಾರು : ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಹತ್ಯೆಯನ್ನು ಖಂಡಿಸಿ ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್ ಯಶಸ್ವಿಯಾಗಿ ನಡೆಯಿತು.ಪ್ರತಿಭಟನಾ ಸಭೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘ, ಜೀಪು ಚಾಲಕ ಮಾಲಕರ ಸಂಘೆ, ಆಟೋ ಚಾಲಕ ಮತ್ತು ಮಾಲಕರ ಸಂಘ, ಹಾಗೂ ಸರ್ವಧರ್ಮದ ನಾಗರಿಕ ಬಂಧುಗಳು ಭಾಗವಹಿಸಿದ್ದರು. ವೆಂಕಟ್ ದಂಬೆಕೋಡಿ ಮಾತನಾಡಿ ಧರ್ಮ ನೋಡಿ...
Loading posts...

All posts loaded

No more posts

error: Content is protected !!