- Wednesday
- May 6th, 2026
ದೇಶದ ಸಮಗ್ರತೆಗೆ ಮತ್ತು ಭವಿಷ್ಯಕ್ಕೆ ಎಲ್ಲರೂ ಮಾತದಾನ ಮಾಡುವುದು ಬಹಳ ಮುಖ್ಯ ಎಂದು ಕೆ. ವಿ.ಜಿ.ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಅಭಿಪ್ರಾಯಪಟ್ಟರು. ಅವರು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ವತಿಯಿಂದ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನ ಮತ್ತು ತ್ರಿಲಿಂಗಿಗಳ ಹಕ್ಕು ರಕ್ಷಣಾ...
ಕಡಬ ಮುಖ್ಯ ರಸ್ತೆಯ ಹಳೇ ಸ್ಟೇಶನ್ ಹತ್ತಿರದ ಸುಶಾಂತಿ ಕಾಂಪ್ಲೆಕ್ಸ್ ನಲ್ಲಿ ಮಹೇಶ್ ಎಣ್ಮೂರು ಹಾಗೂ ಲಕ್ಷ್ಮೀಶ ಬೆಳ್ಳಾರೆ ಮಾಲಕತ್ವದಲ್ಲಿ ಶ್ರೀ ಮಹಾಲಕ್ಷ್ಮೀ ಸ್ಪೋರ್ಟ್ಸ್ ಆಂಡ್ ಸೈನ್ಸ್ ಮಳಿಗೆ ಫೆ.18ರಂದು ಶುಭಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ಕಡಬದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಕೃಷ್ಣ ಶೆಟ್ಟಿ , ಪುತ್ತೂರು ವಲಯಾರಣ್ಯಾಧಿಕಾರಿ ಶ್ರೀ ಕಿರಣ್...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಪ್ರತಿಷ್ಠಾ ವಾರ್ಷಿಕೋತ್ಸವದ ನಿಮಿತ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನೆರವೇರಿತು.ರಾತ್ರಿ ಆದಿ ಮೊಗೇರ್ಕಳರು...
ಮಡಪ್ಪಾಡಿ:ಯುವಕ ಮಂಡಲ ( ರಿ.) ಮಡಪ್ಪಾಡಿ ಆಶ್ರಯದಲ್ಲಿ ಫೆಬ್ರವರಿ 12ರಿಂದ ಫೆಬ್ರವರಿ 18ರವರೆಗೆ ಏಳು ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ನಡೆಯಲಿದೆ.ಶಿವಮೊಗ್ಗದ ಶ್ರೀ ಚಂದನ್. ಜಿ. ಮತ್ತು ಶ್ರೀ. ಮಂಜುನಾಥ್. ಎನ್.ರವರು ಚಿಕಿತ್ಸೆ ನೀಡಲಿದ್ದಾರೆ.ಈ ಶಿಬಿರದಲ್ಲಿ ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ,...
ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಪಂಜ ಪರಿಸರದ ಪಲ್ಲೋಡಿ ಕಾಲೋನಿಯಲ್ಲಿ ವಾಸ ಮಾಡುತ್ತಿರುವ ಕಡುಬಡತನದಲ್ಲಿರುವ ನಿವಾಸಿಗಳಿಗೆ ಕ್ಲಬ್ ವತಿಯಿಂದ ಅಕ್ಕಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಳ್ಳಾಕುಲು ಕಲಾ ರಂಗಾ, {ರಿ } ಪಲ್ಲೋಡಿ ಇದರ ಪ್ರಾಯೋಜಕತ್ವದಲ್ಲಿ ಅಧ್ಯಕ್ಷ ಬಾಲಕೃಷ್ಣ ಗೌಡ ಪೂರ್ವ ಅಧ್ಯಕ್ಷ ಪ್ರಕಾಶ್ ಜಾಕೆ ಅತಿಥಿಗಳಾಗಿ ಉಪಸ್ಥಿತರಿದ್ದು ಅಕ್ಕಿಯನ್ನು...
ಅಯ್ಯನಕಟ್ಟೆಯ "ನಮ್ಮ ಆರೋಗ್ಯಧಾಮ" ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣೆ ನಡೆಯಿತು. ಸುಮಾರು 29 ಮಂದಿ ಇದರ ಪ್ರಯೋಜನವನ್ನು ಪಡೆದುಕೊಂಡರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ದೊಡ್ಡತೋಟ ವಲಯದ ವತಿಯಿಂದ ಕಳಂಜ ಜನತಾ ಕಾಲೋನಿಯಲ್ಲಿ ಇಂದು ಶ್ರಮದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಯೋಜಕಿ ಹರ್ಷಿತಾ.ಎ.ಆರ್, ಘಟಕ ಸಂಯೋಜಕರಾದ ವೆಂಕಟ್ರಮಣ, ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಬೇರಿಕೆ, ಗಗನ್ ನಾಲ್ಗುತ್ತು, ಸತೀಶ್ ಕಳಂಜ, ಗಿರಿಧರ ಕಳಂಜ, ರಘುನಾಥ ರೈ ಅಂಕತ್ತಡ್ಕ ಹಾಗೂ ಘಟಕದ...
ಹರಿಹರ ಪಲ್ಲತ್ತಡ್ಕ ಸಮೀಪ ಮಲ್ಲಾರ ಎಂಬಲ್ಲಿ ಸ್ಕೂಟರ್ ಅಪಘಾತದಲ್ಲಿ ಗಾಯಗೊಂಡಪಂಜದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ಜ.31 ರಂದು ವರದಿಯಾಗಿದೆ.ಪಂಜ ಸಮೀಪದ ಕೂತ್ಕುಂಜ ಗ್ರಾಮದ ಕಲ್ಕ ಗೋಪಾಲ ಮತ್ತು ದೇವಕಿ ದಂಪತಿಗಳ ಪುತ್ರಚಿದಾನಂದ (37ವ) ಮೃತ ಯುವಕ.ಘಟನೆಯ ವಿವರ ಜ.30 ರಾತ್ರಿ ಹರಿಹರದ ಕಡೆ ಕಾರ್ಯಕ್ರಮವೊಂದಕ್ಕೆ ಹೋಗಿ ಮನೆಗೆ ಹಿಂತುರುಗುತ್ತಿದ್ದ ವೇಳೆ ಹರಿಹರ...
ರಾಜ್ಯ ಪ್ರಶಸ್ತಿ ಪುರಸ್ಕೃತ ಪೆರುವಾಜೆ ಭಾವೈಕ್ಯ ಯುವಕ ಮಂಡಲವನ್ನು ಪೆರುವಾಜೆಯಲ್ಲಿ ನಡೆದ ಕಟೀಲು ಮೇಳದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಕ್ತ ವೃಂದ ಪೆರುವಾಜೆ ವತಿಯಿಂದ ಸನ್ಮಾನಿಸಲಾಯಿತು.
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01 ಗುರುವಾರದಂದು ನಡೆಯಲಿದೆ. ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಬೆಳಗ್ಗೆ ಗಂಟೆ 10.00ಕ್ಕೆ ಸರಿಯಾಗಿ ನಡೆಯಲಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.
Loading posts...
All posts loaded
No more posts
