- Friday
- June 26th, 2026
ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಪಂಜ ಪರಿಸರದ ಪಲ್ಲೋಡಿ ಕಾಲೋನಿಯಲ್ಲಿ ವಾಸ ಮಾಡುತ್ತಿರುವ ಕಡುಬಡತನದಲ್ಲಿರುವ ನಿವಾಸಿಗಳಿಗೆ ಕ್ಲಬ್ ವತಿಯಿಂದ ಅಕ್ಕಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಳ್ಳಾಕುಲು ಕಲಾ ರಂಗಾ, {ರಿ } ಪಲ್ಲೋಡಿ ಇದರ ಪ್ರಾಯೋಜಕತ್ವದಲ್ಲಿ ಅಧ್ಯಕ್ಷ ಬಾಲಕೃಷ್ಣ ಗೌಡ ಪೂರ್ವ ಅಧ್ಯಕ್ಷ ಪ್ರಕಾಶ್ ಜಾಕೆ ಅತಿಥಿಗಳಾಗಿ ಉಪಸ್ಥಿತರಿದ್ದು ಅಕ್ಕಿಯನ್ನು...
ಅಯ್ಯನಕಟ್ಟೆಯ "ನಮ್ಮ ಆರೋಗ್ಯಧಾಮ" ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಉಚಿತ ಕನ್ನಡಕ ವಿತರಣೆ ನಡೆಯಿತು. ಸುಮಾರು 29 ಮಂದಿ ಇದರ ಪ್ರಯೋಜನವನ್ನು ಪಡೆದುಕೊಂಡರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ದೊಡ್ಡತೋಟ ವಲಯದ ವತಿಯಿಂದ ಕಳಂಜ ಜನತಾ ಕಾಲೋನಿಯಲ್ಲಿ ಇಂದು ಶ್ರಮದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಯೋಜಕಿ ಹರ್ಷಿತಾ.ಎ.ಆರ್, ಘಟಕ ಸಂಯೋಜಕರಾದ ವೆಂಕಟ್ರಮಣ, ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಬೇರಿಕೆ, ಗಗನ್ ನಾಲ್ಗುತ್ತು, ಸತೀಶ್ ಕಳಂಜ, ಗಿರಿಧರ ಕಳಂಜ, ರಘುನಾಥ ರೈ ಅಂಕತ್ತಡ್ಕ ಹಾಗೂ ಘಟಕದ...
ಹರಿಹರ ಪಲ್ಲತ್ತಡ್ಕ ಸಮೀಪ ಮಲ್ಲಾರ ಎಂಬಲ್ಲಿ ಸ್ಕೂಟರ್ ಅಪಘಾತದಲ್ಲಿ ಗಾಯಗೊಂಡಪಂಜದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ಜ.31 ರಂದು ವರದಿಯಾಗಿದೆ.ಪಂಜ ಸಮೀಪದ ಕೂತ್ಕುಂಜ ಗ್ರಾಮದ ಕಲ್ಕ ಗೋಪಾಲ ಮತ್ತು ದೇವಕಿ ದಂಪತಿಗಳ ಪುತ್ರಚಿದಾನಂದ (37ವ) ಮೃತ ಯುವಕ.ಘಟನೆಯ ವಿವರ ಜ.30 ರಾತ್ರಿ ಹರಿಹರದ ಕಡೆ ಕಾರ್ಯಕ್ರಮವೊಂದಕ್ಕೆ ಹೋಗಿ ಮನೆಗೆ ಹಿಂತುರುಗುತ್ತಿದ್ದ ವೇಳೆ ಹರಿಹರ...
ರಾಜ್ಯ ಪ್ರಶಸ್ತಿ ಪುರಸ್ಕೃತ ಪೆರುವಾಜೆ ಭಾವೈಕ್ಯ ಯುವಕ ಮಂಡಲವನ್ನು ಪೆರುವಾಜೆಯಲ್ಲಿ ನಡೆದ ಕಟೀಲು ಮೇಳದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಕ್ತ ವೃಂದ ಪೆರುವಾಜೆ ವತಿಯಿಂದ ಸನ್ಮಾನಿಸಲಾಯಿತು.
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01 ಗುರುವಾರದಂದು ನಡೆಯಲಿದೆ. ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಬೆಳಗ್ಗೆ ಗಂಟೆ 10.00ಕ್ಕೆ ಸರಿಯಾಗಿ ನಡೆಯಲಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿ ಜ.29ರಂದು ಸಂಪನ್ನಗೊಂಡಿತು. ಜಾತ್ರೋತ್ಸವವು ಜ.26ರಂದು ಮೊದಲ್ಗೊಂಡಿದ್ದು, ಬೆಳಿಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗತಂಬಿಲ, ವಿಶೇಷ ತಂಬಿಲ ನಡೆಯಿತು. ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಬೆಳಿಗ್ಗೆ ಗಂಟೆ 11 ರಿಂದ ನಾಗತಂಬಿಲ,...
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವೈಭವದಿಂದ ಜರುಗುತ್ತಿದ್ದು, ಜ.28ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ವಿಶ್ರಾಂತ ಅಧ್ಯಾಪಕರಾದ ಸದಾಶಿವ ಭಟ್ ಜೋಗಿಬೆಟ್ಟು ಭಾಗವಹಿಸಿದ್ದರು. ಮುಖ್ಯ ಅತಿಥಿಯಾಗಿ...
ಜ. 28ರಂದು ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನೆರವೇರಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಬಳಿಕ ಪರಿವಾರ ದೈವಗಳಾದ...
Loading posts...
All posts loaded
No more posts
