ಕಾರು – ಬಸ್ ಮುಖಾಮುಖಿ- ಅಪಾಯದಿಂದ ಪಾರು

ದೊಡ್ಡತೋಟ ತಿರುವಿನಲ್ಲಿ ಡಿ.26ರಂದು ಮುಂಜಾನೆ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಜಖಂಗೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೀಳ್ಕೊಡುಗೆ ಸಮಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಡಿ.23 ಶನಿವಾರದಂದು ಮೆಟ್ರಿಕ್ ಮೇಳ ಹಾಗೂ ವರ್ಗಾವಣೆಗೊಂಡ ಪದವೀಧರ ಶಿಕ್ಷಕಿಕುಮಾರಿ ಸುಧಾರಾಣಿ ಇವರ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮೊದಲಿಗೆ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಗೀತೆ ಹಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪಾರೆಪ್ಪಾಡಿ ಸರ್ವರನ್ನು ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿ ಶಿಕ್ಷಕಿಯ ಪರಿಚಯಿಸುವುದರೊಂದಿಗೆ ಸಾರ್ಥಕ ಸೇವೆಯ...
Ad Widget

ಶುಭವಿವಾಹ: ಮುರಳೀಧರ-ಅಕ್ಷತಾ

ಕಳಂಜ ಗ್ರಾಮದ ಅಳ್ಪೆ ನಾಯರಕೆರೆ ಶ್ರೀಮತಿ ಭಾಗೀರಥಿ ಮತ್ತು ದಿ|ತಿಮ್ಮಪ್ಪ ಗೌಡರ ಸುಪುತ್ರ ಚಿ|ರಾ|ಮುರಳೀಧರ.ಎ ರವರ ವಿವಾಹವು ಸವಣೂರು ಗ್ರಾಮದ ಮಾಲೆತ್ತಾರು ದಿ|ಅಣ್ಣು ಗೌಡರ ಸುಪುತ್ರಿ ಚಿ|ಸೌ|ಅಕ್ಷತಾ.ಎಂ ರೊಂದಿಗೆ ಡಿ.25ರಂದು ಪುಣ್ಚತ್ತಾರು ಶ್ರೀ ಹರಿ ಭಜನಾ ಮಂದಿರದಲ್ಲಿ ನಡೆಯಿತು.

ಸರಕಾರಿ ಪ್ರೌಢ ಶಾಲೆ ಎಣ್ಮೂರು:ಉಚಿತ ಮರುಬಳಕೆಯ ಪ್ಯಾಡ್ ವಿತರಣೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಮುಟ್ಟು ಗುಟ್ಟಲ್ಲ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ Karnataka seaferers trust ವತಿಯಿಂದ ನೀಡಲಾದ ಉಚಿತ ಮರುಬಳಕೆಯ ಪ್ಯಾಡ್ ನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಿತ ಸುವರ್ಣರವರು ವಹಿಸಿದ್ದರು. ಖ್ಯಾತ ಸ್ತ್ರೀ ರೋಗ ತಜ್ಞರಾದ ಡಾl ವೀಣಾ ಅವರು ಹೆಣ್ಣುಮಕ್ಕಳ ಹದಿಹರೆಯದ ಸಮಸ್ಯೆಗಳು...

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಾರ್ಷಿಕೋತ್ಸವವು ಡಿ.20 ರಂದು ನಡೆಯಿತು.ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಪುತ್ತೂರು ಫಿಲೋಮಿನ ಕಾಲೇಜು ಕ್ಯಾಂಪಸ್ ನಿರ್ದೇಶಕ ರೆ.ಪಾ ಸ್ಟಾನಿಪಿಂಟೋ ಉದ್ಘಾಟಿಸಿ ಮಾತನಾಡಿದರು.ಸುಳ್ಯ ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಮಕ್ಕಳ ಅರೋಗ್ಯ ಮತ್ತು ಮಕ್ಕಳ ಸುರಕ್ಷತೆ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.ಸೈಂಟ್ ಜೋಸೆಫ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಪಾ...

ಬೆಳ್ಳಾರೆ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

ಝಖರಿಯ ಜುಮಾ ಮಸೀದಿ ಬೆಳ್ಳಾರೆ ಉರೂಸ್ ಸಮಾರಂಭದ ಪೋಸ್ಟರ್ ಅನ್ನು ಮಸೀದಿಯ ಖತೀಬರಾದ ಮಹಮ್ಮದ್ ಮುಸ್ಲಿಯಾರ್ ಮುಂಡೋಲೆ ಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಅಧ್ಯಕ್ಷರಾದ ಯು.ಎಚ್ ಅಬೂಬಕ್ಕರ್ ಹಾಜಿ ಉರೂಸ್ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಕಾದರ್ ಹಾಜಿ ಬಯಂಬಾಡಿ ಹಾಗೂ ಕಮಿಟಿಯ ಸದಸ್ಯರುಗಳು ಬೆಳ್ಳಾರೆ ಜಮಾಅತಿನ ಸದಸ್ಯರುಗಳು ಮತ್ತು ಉಸ್ತಾದರುಗಳು ಉಪಸ್ಥಿತರಿದ್ದರು.

ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ವಿಶ್ವ ಅವಳಿ ಜವಳಿ ದಿನಾಚರಣೆ

ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು ಆರು ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸೋಮವಾರ ವಿಶ್ವ ಅವಳಿ ಜವಳಿ ದಿನಾಚರಣೆಯ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ವತಿಯಿಂದ ಅವಳಿ ಜವಳಿ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಪ್ರಶಂಶಿಸಲಾಯಿತು. ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯರಾದ ಸುನೈನ ಬಿ ಅವರು...

ನಾಲ್ಕೂರು: ಡ್ಯಾಮ್ ಸ್ವಚ್ಛತೆ ಮಾಡಿದ ಶೌರ್ಯ ವಿಪತ್ತು ಸ್ವಯಂ ಸೇವಕರು

ನಾಲ್ಕೂರು ಗ್ರಾಮದ ಮರಕತ ಕುಡಿಯುವ ನೀರಿನ ಡ್ಯಾಮ್ ನಲ್ಲಿ ಮಳೆಗಾಲದಲ್ಲಿ ಬೃಹತ್ತಾದ ಮರಗಳು ಬಂದು ತುಂಬಿಕೊಂಡಿದ್ದು, ಅದನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ಸ್ವಯಂಸೇವಕರು ತೆರವುಗೊಳಿಸಿದ್ದು, ಸಂಯೋಜಕ ಹರಿಶ್ಚಂದ್ರ ಕುಳ್ಳಂಪ್ಪಾಡಿ, ಪ್ರತಿನಿಧಿ ಸತೀಶ್, ಸ್ವಯಂಸೇವಕರಾದ ಕಾರ್ತಿಕ್, ಲೋಹಿತ್, ಅಶ್ವಥ್, ಪ್ರಜ್ವಲ್, ದೀಪಕ್, ಶೇಷಪ್ಪ ನಾಯ್ಕ್, ಚಂದ್ರಶೇಖರ, ಭರತ್, ಕರುಣಾಕರ್ ಭಾಗವಹಿಸಿದ್ದರು....

ಪಂಜ: ಸ್ಕೌಟ್ ಗೈಡ್ ವಾರ್ಷಿಕ ಮೇಳ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯು ಶಾಲಾ ಶಿಕ್ಷಣ ಇಲಾಖೆ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ ಇವುಗಳ ಸಹಯೋಗದಲ್ಲಿ ದಿನಾಂಕ 24 ಮತ್ತು 25 ನವಂಬರ್ 2023 ರಂದು ಎರಡು ದಿನಗಳ ಕಾಲ ಸ್ಕೌಟ್ ಗೈಡ್ ,ಕಬ್ ಬುಲ್ ಬುಲ್ ಹಾಗೂ ರೋವರ್ ರೇಂಜರ್ ವಿದ್ಯಾರ್ಥಿಗಳ ವಾರ್ಷಿಕ ಮೇಳವನ್ನು...

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡೋತ್ಸವ

ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು, ಹಿರಿಯ ವಿದ್ಯಾರ್ಥಿ ಸಂಘ, ಊರ ವಿದ್ಯಾಭಿಮಾನಿಗಳ ಸಹಭಾಗಿತ್ವದಲ್ಲಿ ದಿನಾಂಕ 19/11/2023ರಂದು ಕ್ರೀಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕ್ರೀಡೋತ್ಸವದ ಧ್ವಜಾರೋಹಣವನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇಲ್ಲಿನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಮಾವಿನಕಟ್ಟೆ ನಡೆಸಿಕೊಟ್ಟರು. ನಂತರ ಸಭಾ ಕಾರ್ಯಕ್ರಮ ನಡೆಯಿತು....
Loading posts...

All posts loaded

No more posts

error: Content is protected !!