- Wednesday
- May 6th, 2026
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಸುಳ್ಯ ಉಪ ವಿಭಾಗ ಹಾಗೂ ಸುಬ್ರಹ್ಮಣ್ಯ ಉಪ ವಿಭಾಗದ ಜನ ಸಂಪರ್ಕ ಸಭೆಯು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಮಂಗಳೂರು ವೃತ್ತದ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ ರವರು ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಸುಜಾತ ಕಲ್ಲಾಜೆ, ಉಪಾಧ್ಯಕ್ಷ ವೆಂಕಟೇಶ್ ಎಚ್....
ಸೌಜನ್ಯ ಪರ ನ್ಯಾಯಕ್ಕಾಗಿ ಉಬರಡ್ಕದಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಇದೀಗ ಚಾಲನೆ ದೊರೆತಿದ್ದು ಸಭೆಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ನಿವೃತ್ತ ಪೋಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ , ನ್ಯಾಯವಾದಿ ಮೋಹಿತ್ ಕುಮಾರ್ , ಸೌಜನ್ಯಳ ತಾಯಿ ಕುಸುಮಾವತಿ, ಚಂದ್ರ ಕೋಲ್ಚಾರು, ಕೆದಂಬಾಡಿ ವೆಂಕಟ್ರಮಣ ಗೌಡ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ....
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಮಕ್ಕಳೇ ಶಾಲಾ ಅಂಗಳದಲ್ಲಿ ಬೆಳೆಸಿದ ಭತ್ತ ನಾಟಿ ಕೊಯ್ಲು ಮಾಡಿ ತುಳು ನಾಡಿನ ಸಂಸ್ಕೃತಿಯಲ್ಲಿ ಬಾಳೆಎಲೆಯಲ್ಲಿ 10 ಬಗೆಯ ಪದಾರ್ಥಗಳ ಜೊತೆ ಹೊಸ ಅಕ್ಕಿ ಉಂಡು ಸಂತಸಪಟ್ಟರು. ಶಾಲೆಯ ಬಾಗಿಲುಗಳಿಗೆ ಬೆಳಗ್ಗೆ ಮಾವಿನ ಎಲೆ ಕಟ್ಟಿ ನಂತರ ಮಧ್ಯಾಹ್ನ ಪೋಷಕರ ಜೊತೆಯಲ್ಲಿ ಪುದ್ವಾರ್ ಊಟ ಮಾಡಿ ನಮ್ಮ ಸಂಸ್ಕೃತಿ...
ಗುತ್ತಿಗಾರು ಗ್ರಾಮದ ಕಮಿಲ ಬಳಿ ಮಹಿಳೆಯೊಬ್ಬರು ನೇಣು ಬಿಗಿದು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ವರದಿಯಾಗಿದೆ.ಕಮಿಲದ ಸತೀಶ್ ಕೊಚ್ಚಿ ಎಂಬವರ ಪತ್ನಿ ಗೀತಾ ಎನ್ನುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 38 ವರ್ಷ ವಯಸ್ಸಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸುಬ್ರಹ್ಮಣ್ಯ: ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ದೀಪಾವಳಿ ಅಮವಾಸ್ಯೆಯ ಶುಭದಿನವಾದ ಆದಿತ್ಯವಾರ ಬಲೀಂದ್ರ(ದೀಪಾಲೆ) ಮರವನ್ನು ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಏರಿಸಲಾಯಿತು.ಆರಂಭದಲ್ಲಿ ದೀಪಾಲೆ ಮರವನ್ನು ತಂದು ಶ್ರೀ ದೇವಳದ ಮುಂಭಾಗದಲ್ಲಿ ಇರಿಸಲಾಯಿತು. ಬಳಿಕ ಅದಕ್ಕೆ ಪುಣ್ಯ ತೀರ್ಥ ಸಿಂಪಡಿಸಿ ಪ್ರಸಾದ ಹಚ್ಚಲಾಯಿತು. ನಂತರ ಮರವನ್ನು ಶ್ರೀ ದೇವಳದ ಗರ್ಭಗುಡಿಯ ಮುಂಭಾಗಲ್ಲಿ ಏರಿಸಲಾಯಿತು....
ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ , ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು ಇದರ ಜಂಟಿ ಆಶ್ರಯದಲ್ಲಿ 5 ನೇ ವರ್ಷದ ಗೋಪೂಜೆ ಕಾರ್ಯಕ್ರಮವು ವಿನುತ ಪಾತಿಕಲ್ಲು ಇವರ ಮನೆಯಲ್ಲಿ ನಡೆಯಿತು.ಪಾತಿಕಲ್ಲು ಕುಟುಂಬದ ಹಿರಿಯರಾದ ಚಂದಪ್ಪ ಗೌಡ ಪಾತಿಕಲ್ಲು, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾದ ಪ್ರವೀಣ್ ಜಯನಗರ , ಕಾರ್ಯದರ್ಶಿ ಗುರುರಾಜ್ ಅಜ್ಜಾವರ...
ಸರಕಾರಿ ಪ್ರೌಢಶಾಲೆ ಎಣ್ಮೂರು ಶಾಲಾ ಬಯಲು ರಂಗಮಂದಿರ ನಿರ್ಮಾಣದ ಪ್ರಯುಕ್ತ ಶಾಲಾಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ರಂಗ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಕಲಾ ಸಂಗಮ ಕಲಾವಿದರಿಂದ ಈ ವರ್ಷದ ವಿಶಿಷ್ಟ ತುಳು ನಾಟಕ ಶಿವಧೂತೆ ಗುಳಿಗೆ ನಾಟಕ ನವೆಂಬರ್ 10ರಂದು ಪ್ರದರ್ಶನಗೊಂಡಿತು. ಈ ಸಂದರ್ಭದಲ್ಲಿ ದಾಖಲೆ ಸೃಷ್ಟಿಸಿದ ಈ ನಾಟಕದ ನಿರ್ದೇಶಕರಾದ ಶ್ರೀ ವಿಜಯಕುಮಾರ್...
ಸುಬ್ರಹ್ಮಣ್ಯ: ದೀನ ದಲಿತರ ಮತ್ತು ಬಡವರ ಮುಖದಲ್ಲಿ ನಗು ತರುವ ನಮ್ಮ ಅಂತರಾಷ್ಟ್ರೀಯ ಲಯನ್ಸ್ ನ ಉದ್ದೇಶದೊಂದಿಗೆ ಬಡವರ ಸೇವೆಯನ್ನು ನಿರಂತರವಾಗಿ ಮುಂದುವರಿಸೋಣ, ಹಾಗೆಯೇ ಮೂಕ ಪ್ರಾಣಿ ಪಕ್ಷಿಗಳ ಮನಸ್ಸನ್ನು ಅರ್ಥೈಸಿಕೊಂಡು ಅವುಗಳಿಗೆ ಬೇಕಾದ ಆಹಾರವನ್ನು ಕಾಡಿನ ಅಂಚಿನಲ್ಲಿ ಸುಲಭವಾಗಿ ಸಿಗುವ ಹಾಗೆ ಬೀಜ ಬಿತ್ತನೆ ಹಾಗೂ ಹಣ್ಣಿನ ಗಿಡಗಳನ್ನು ಹೆಚ್ಚಾಗಿ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ...
ನವೆಂಬರ್ 10 ರಂದು ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್ ವಿದ್ಯಾ ಸಂಸ್ಥೆಯಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಸಲಾಯಿತು. ಬಾಲ್ಯ ವಿವಾಹ ಆಚರಣೆಯಿಂದ ಆಗುವ ಶಿಕ್ಷೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಮತ್ತು ಇದರ ದುಷ್ಪರಿಣಾಮಗಳ ಬಗ್ಗೆ ಶಿಕ್ಷಕಿ ಮಿಸ್ರಿಯಾ ರವರು ಸವಿಸ್ತಾರವಾಗಿ ವಿವರಿಸಿದರು. ಸಭಾಧ್ಯಕ್ಷತೆಯನ್ನು...
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತೀ ವರ್ಷ ವಿಭಿನ್ನ ರೀತಿಯ ಶೈಕ್ಷಣಿಕ ಚಟುವಟಿಕೆ ಕೈಗೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಮನಸೆಳೆಯುತ್ತದೆ. ಈ ಬಾರಿ ಶಾಲೆಯ ಅಂಗಳದಲ್ಲೆ ಗದ್ದೆ ನಿರ್ಮಾಣ ಮಾಡಿ ಮಕ್ಕಳಿಗೆ ಭತ್ತದ ಬೇಸಾಯದ ಅರಿವು ಮೂಡಿಸಿದೆ. ಜೂನ್ ತಿಂಗಳಲ್ಲಿ ನೆಟ್ಟ ನೇಜಿ ಕಟಾವಿಗೆ ಬಂದಿದ್ದು, ಇಂದು ಕೊಯ್ಲು ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ...
Loading posts...
All posts loaded
No more posts
