- Wednesday
- May 6th, 2026
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಆಡಳಿತಕ್ಕೆ ಒಳಪಟ್ಟಂತ ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಇದರ ಸಾಂಸ್ಕೃತಿಕ ತಂಡ ಮೈಸೂರಿನಲ್ಲಿ ನಡೆಯುವ ಯುವ ದಸರ ಕಾರ್ಯಕ್ರಮಕ್ಕೆ ಆಯ್ಕೆಗೊಂಡಿದೆ.ದಿನಾಂಕ 7 /18/2023 ಶನಿವಾರ ಮೈಸೂರಿನಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಈ ಕಾಲೇಜಿನ ತಂಡ ಪ್ರದರ್ಶನವನ್ನು ನೀಡಿತ್ತು. ಈ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ರಾಜ್ಯದ 400 ಕಾಲೇಜುಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು...
ತಂದೆ – ತಾಯಿಯೊಂದಿಗಿದ್ದ ಮಕ್ಕಳಿಬ್ಬರು ಅವರೊಂದಿಗೆ ಜಗಳವಾಡಿ ಏನನ್ನು ಹೇಳದೇ ಮನೆ ತೊರೆದು ಬಂದ ಘಟನೆ ವರದಿಯಾಗಿದೆ. ಈಶ್ವರಮಂಗಳ ಮೂಲದ ದಂಪತಿಗಳ ಇಬ್ಬರು ಮಕ್ಕಳು ಇಂದು ಸಂಜೆ ವೇಳೆಗೆ ಅಜ್ಜಾವರದ ಅಡ್ಪಂಗಾಯ ಬಸ್ ನಿಲ್ದಾಣದಲ್ಲಿ ಇರುವುದನ್ನು ಕಂಡ ಊರವರು ಆ ಮಕ್ಕಳನ್ನು ವಿಚಾರಿಸಿದಾಗ ನಾವು ಈಶ್ವರಮಂಗಲದವರು ಸದ್ಯ ಮಂಡೆಕೋಲು ಗ್ರಾಮದ ಡೆಂಜಿಗುರಿಯಲ್ಲಿ ವಾಸ್ತವ್ಯವಾಗಿದ್ದೆವೆ. ಮನೆಯಲ್ಲಿ ಜಗಳವಾಡಿ...
ಪ್ರತಿಯೊಬ್ಬರೂ ಹುಟ್ಟುಹಬ್ಬ ಆಚರಣೆ ಮಾಡುತ್ತಾರೆ. ಆದರೆ ಮೋಜು ಮಸ್ತಿಯಲ್ಲಿ ದಿನ ಕಳೆದು ಬಿಡ್ತಾರೆ. ಆದ್ರೆ ಅದಕ್ಕೆ ಅಪವಾದ ಎಂಬಂತೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ಚಾರ್ವಾಕದ ದುರ್ಗಾ ಅರ್ಥ್ ಮೂವರ್ಸ್ ಮಾಲಕ ರಾಜೇಶ್ ವಾಲ್ತಾಜೆ ತನ್ನ ಹುಟ್ಟುಹಬ್ಬಕ್ಕೆ ಪ್ರತೀ ವರ್ಷ ಬಡವರ ಮನೆ ಗುರುತಿಸಿ ಅಲ್ಲಿ 250ಕ್ಕೂ ಮಿಕ್ಕಿ ಅಡಿಕೆ ಗಿಡದ ಗುಂಡಿ ತೆಗೆದು ಆ...
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ 42 ವಿದ್ಯಾರ್ಥಿಗಳು ಮತ್ತು 7 ಮಂದಿ ಶಿಕ್ಷಕರ ತಂಡವು ದಿನಾಂಕ 12.10.2023 ಗುರುವಾರದಿಂದ 16.10.2023 ಸೋಮವಾರದವರೆಗೆ ರೈಲು ಪ್ರಯಾಣದ ಮೂಲಕ ಮುಂಬೈ ಮಹಾನಗರದ ಪ್ರೇಕ್ಷಣೀಯ ಸ್ಥಳಗಳಿಗೆ ಶೈಕ್ಷಣಿಕ ಅಧ್ಯಯನ ಪ್ರವಾಸವನ್ನು ಹಮ್ಮಿಕೊಳ್ಳಲಾಯಿತು. ನೆಹರೂ ವಿಜ್ಞಾನ ಕೇಂದ್ರ, ಎಲಿಫೆಂಟಾ ಕೇವ್ಸ್, ಹ್ಯಾಂಗಿಂಗ್ ಗಾರ್ಡನ್, ಗೇಟ್ ವೇ ಆಫ್ ಇಂಡಿಯಾ, ಛತ್ರಪತಿ ಶಿವಾಜಿ ಮಹಾರಾಜ್...
ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಯವರ 154ನೇ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸಂಸ್ಮರಣೆ ಮತ್ತು ಶಾಲಾ ಪರಿಸರ, ನಿಂತಿಕಲ್ಲಿನ ಸಾರ್ವಜನಿಕ ಬಸ್ ನಿಲ್ದಾಣ ಹಾಗೂ ಪೇಟೆಯ ಪರಿಸರದ ಸ್ವಚ್ಛತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರ ಸಹಕಾರದೊಂದಿಗೆ ಇಂದು ಮಾಡಲಾಯಿತು..ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ SDMC...
ಕೊಯನಾಡು : ಸುನ್ನಿ ಮುಸ್ಲಿಂ ಜುಮಾ ಮಸೀದಿ, ನುಸ್ರತುಲ್ ಇಸ್ಲಾಂ ಅಸೋಸಿಯೇಶನ್, ಗಲ್ಫ್ ಸಮಿತಿ, ಕೊಯನಾಡು ಇದರ ಸಂಯುಕ್ತ ಆಶ್ರಯದಲ್ಲಿ ಸೆ.28 ರಂದು ಈದ್ ಮಿಲಾದ್ ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ 9 ಗಂಟೆಗೆ ಸುಬುಲು ಸ್ಸಲಾಂ ಮದ್ರಸ ಸಭಾಂಗಣದಲ್ಲಿ ಜಮಾಅತ್ ಅಧ್ಯಕ್ಷರಾದ ಎಸ್ ಎ ಅಬ್ದುಲ್ ರಜಾಕ್ ರವರು ದ್ವಜರೋಹಣ ಮೂಲಕ ಮಿಲಾದ್ ಸಮಾವೇಶಕ್ಕೆ ಚಾಲನೆ...
ದ.ಕ. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಶಾಲಾ ಶಿಕ್ಷಣ ಇಲಾಖೆ ಬಂಟ್ವಾಳ ಮತ್ತು ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ದಿನಾಂಕ 23 ಸೆಪ್ಟೆಂಬರ್ 2023ರಂದು ನಡೆಯಿತು. ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ...
ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ವಾಹನ ಪತ್ತೆಯಾಗಿದ್ದು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆಪಡೆದ ಘಟನೆ ಸೆ.24 ರಂದು ರಾತ್ರಿ ವರದಿಯಾಗಿದೆ. ಸೆ.24 ರಂದು ರಾತ್ರಿ ಪಂಜದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ರಸ್ತೆಯಲ್ಲಿ ಸಿಲುಕಿ ಮುಂದಕ್ಕೆ ಹೋಗದೆ ಬಾಕಿಯಾಗಿತ್ತು. ಬಳಿಕ ಪಿಕಪ್ ನಲ್ಲಿ ಇದ್ದವರು ಅಲ್ಲಿಂದ ಪರಾರಿಯಾಗಿದ್ದು ವಿಷಯ ತಿಳಿದು ಸುಬ್ರಹ್ಮಣ್ಯ...
ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಸವಾರ ಗಾಯಗೊಂಡ ಘಟನೆ ಸೆ. 23ರಂದು ರಾತ್ರಿ ಸಂಭವಿಸಿದೆ. ಘಟನೆಯಿಂದ ಸ್ಕೂಟಿ ಸವಾರನಿಗೆ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಡಿಕ್ಕಿಯ ರಭಸಕ್ಕೆ ಸ್ಕೂಟಿಯ ಮುಂಭಾಗ ಮತ್ತು ಕಾರಿನ ಹಿಂಭಾಗ ಜಖಂಗೊಂಡಿದ್ದು, ಮಳೆ ಬಂದ ಹಿನ್ನೆಲೆಯಲ್ಲಿ ಸ್ಕೂಟಿ...
ಅರಂತೋಡು ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 21/9/23ರಂದು ನಡೆದ ಸುಳ್ಯ ತಾಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲೆ ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಜಿಲ್ಲಾ ಮಟ್ಟದ ಪಂದ್ಯಾಟವು ಏನೆಕಲ್ ನಲ್ಲಿ ನಡೆಯಲಿದ್ದು, ಈ ಪಂದ್ಯಾಟದಲ್ಲಿ ಬಾಲಕರ ಹಾಗೂ ಬಾಲಕಿಯರ...
Loading posts...
All posts loaded
No more posts
