- Friday
- June 26th, 2026
ಯಕ್ಷ ಧ್ರುವ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಪಟ್ಲ ಫೌಂಡೇಶನ್ ವತಿಯಿಂದ ಎಣ್ಮೂರು ಪ್ರೌಢಶಾಲೆಯಲ್ಲಿ ನಡೆಯಲಿರುವ ಯಕ್ಷ ಶಿಕ್ಷಣ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಉಮೇಶ್ ಶೆಟ್ಟಿ ಉಬರಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು. ಯಕ್ಷಗಾನ ಕಲಿಕೆಯಿಂದ ಶಾಲಾ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಇದು ನಮ್ಮಲ್ಲಿ ಏಕಾಗ್ರತೆ...
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದುವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಕಾಡು ಪ್ರಾಣಿಗಳ ಸಂರಕ್ಷಣೆ ಕಾಯ್ದೆಯ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಯಾರು ಉರುಳು...
ಪಾಟಾಳಿಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ಇದರ ವತಿಯಿಂದ ಅ.1ರಂದು ನಡೆಯಲಿರುವ "ಗಾಣಿಗ ಸಮ್ಮಿಲನ -2023" ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ. 27 ರಂದು ಜರುಗಿತು. ಆಮಂತ್ರಣ ಪತ್ರಿಕೆಯನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಪಕ್ಕೀರ ಪಾಟಾಳಿಯವರ ಗಾಣದ ಮನೆಯಲ್ಲಿ ಗಾಣದ ಮನೆಯ ಯಜಮಾನರಾದ ಪಕ್ಕೀರ ಪಾಟಾಳಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ...
ವಿದ್ಯಾಬೋಧೀನಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಜೇನು ಕೃಷಿ ಅಧ್ಯಯನವು ಆ.25ರ ಶುಕ್ರವಾರ ನಡೆಯಿತು. ಗ್ರಾಮ ಜನ್ಯ ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇವರು ಬಾಳಿಲದ ಡಾಕ್ಟರ್ ಶ್ರೇಯಸ್ ಭಾರದ್ವಾಜ್ ಇವರ ಮನೆಯಲ್ಲಿ ಹಮ್ಮಿಕೊಂಡ ಜೇನು ಕೃಷಿ ಮಾಹಿತಿ ಕಾರ್ಯಕ್ರಮಕ್ಕೆ ಬಾಳಿಲ ಪ್ರಾಥಮಿಕ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಭಾರತದ ಬಾಹ್ಯಕಾಶ ಸಂಸ್ಥೆ ಇಸ್ರೋದ ಮಹಾತ್ವಂಕಾಕ್ಷಿ ಚಂದ್ರಯಾನ -3 ಯೋಜನೆ ಯಶಸ್ವಿ ಯಾಗಿ ಉಡ್ಡಯನ ಗೊಂಡು ಚಂದ್ರನ ದಕ್ಷಿಣ ದ್ರುವದಲ್ಲಿ ಯಶಸ್ವಿ ಯಾಗಿ ಲ್ಯಾಂಡ್ ಆಗಿ ಜಗತ್ತಿನಲ್ಲಿ 4 ನೇ ರಾಷ್ಟ್ರವಾಗಿ ಹೊರಹೋಮ್ಮಿದ ಈ ಅಭೂತ ಪೂರ್ವ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕ ಗ್ರಾಮದ ಶ್ರೀ ಅನಂತೇಶ್ವರ ಭಟ್ ರವರ ಪುತ್ರ ಇಸ್ರೋ ವಿಜ್ಞಾನಿ ಶ್ರೀ ವೇಣುಗೋಪಾಲ್...
ಸುಳ್ಯದ ಕೀರ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸಿ, ತನ್ನ ಪರಿಶ್ರಮದಿಂದಲೇ ಚಂದ್ರಯಾನ-3ಯಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿ ಗುಜರಾತ್ ನಲ್ಲಿ ಕೆಲಸ ನಿರ್ವಹಿಸಿದ ಹಳ್ಳಿಯ ಪ್ರತಿಭೆ ಮಾನಸ ಜಯಕುಮಾರ್ ಅವರಿಗೆ ಇಂದು ಸಮುದಾಯ ಹಾಗೂ ಕುಟುಂಬಕ್ಕೆ ಕೀರ್ತಿ ತಂದಿರುವುದನ್ನು ಗುರುತಿಸಿ ಸನ್ಮಾನಿಸಲಾಯಿತು. ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಅಧ್ಯಕ್ಷರಾದ ಪಿಸಿ ಜಯರಾಮ್, ಗೌಡ ಯುವ ಸೇವಾ...
ಸುಳ್ಯ ತಾಲೂಕಿನ ಪ್ಲಾಟಿಂಗ್ ಆಗದೆ ಕಡತ ಬಾಕಿ ಇರುವುದರಿಂದ ಜನರಿಗೆ ಆಗುತ್ತಿರುವ ಸಮಸ್ಯೆ ನಿವಾರಣೆಗೆ ಸುಳ್ಯ ಯುವ ಕಾಂಗ್ರೇಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ ಇವರ ನೇತೃತ್ವದ ತಂಡವು ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೆಗೌಡರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಸುಳ್ಯ ತಾಲೂಕಿನಲ್ಲಿ ಪ್ಲಾಟಿಂಗ್ ಆಗದೆ ಹಲವು ಕಡತಗಳು ಬಾಕಿ ಇದೆ. ಬಹು ಮುಖ್ಯವಾಗಿ ಅಜ್ಜಾವರ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳ ಕಬ್, ಬುಲ್ ಬುಲ್, ಸ್ಕೌಟ್, ಗೈಡ್, ರೋವರ್, ರೇಂಜರ್ ವಿದ್ಯಾರ್ಥಿಗಳಿಗೆ ಗೀತಗಾಯನ ಸ್ಪರ್ಧೆಯು 24.08.2023 ಗುರುವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಪಿನಂಗಡಿಯಲ್ಲಿ ಜರುಗಿತು. ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಮಾಧವ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಚಂದ್ರಯಾನ -3 ಆಗಸ್ಟ್ 23ರಂದು ಸಂಜೆ ಗಂಟೆ 6:04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದರಲ್ಲಿ ಐತಿಹಾಸಿಕ ಗೆಲುವಿಗಾಗಿ, ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತೀಯ ಇಸ್ರೋ ವಿಜ್ಞಾನಿಗಳ ತಂಡದ ಐತಿಹಾಸಿಕ ಸಾಧನೆಯನ್ನು ಪ್ರಶಂಸಿಸಿ, ಆ.24 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಸಂಭ್ರಮವನ್ನು...
ಸೆಪ್ಟೆಂಬರ್ 22 ರಂದು ಸುಬ್ರಹ್ಮಣ್ಯದಲ್ಲಿ ನಡೆದ 2023-2024 ನೇ ಸಾಲಿನ ತಾಲೂಕು ಮಟ್ಟದ ಖೋಖೋ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಎಣ್ಮೂರು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯಿತು. ಬಾಲಕರ ವಿಭಾಗದಲ್ಲಿ ಮಿಲನ್ ಮತ್ತು ಬಾಲಕಿಯರ ವಿಭಾಗದಲ್ಲಿ ಜಶ್ಮಿತಾ ಎನ್ ಮತ್ತು ವೀಕ್ಷಾ ವೈಯಕ್ತಿಕ...
Loading posts...
All posts loaded
No more posts
