- Thursday
- May 7th, 2026
ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಅರಂತೋಡಿನಿಂದ ಇಂದು ವರದಿಯಾಗಿದೆ. ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ...
ಗ್ರಾಮ ಪಂಚಾಯತ್ ಅಜ್ಜಾವರದ ವತಿಯಿಂದ ದೊಡ್ಡೇರಿ ತೂಗು ಸೇತುವೆಗೆ ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿದ ಅನುದಾನದಲ್ಲಿ ಸೆಲ್ಕೋ ಸೋಲಾರ್ ರವರ ಸೋಲಾರ್ ದೀಪ ಅಳವಡಿಕೆ ಮಾಡಲಾಗಿದೆ. ಸುಳ್ಯದ ಪ್ರಮುಖ ಪ್ರವಾಸಿತಾಣ ಹಾಗೂ ದೊಡ್ಡೇರಿ ಭಾಗದ ಜನರನ್ನು ನಗರಕ್ಕೆ ಜೋಡಿಸುವ ಮುಖ್ಯ ತೂಗುಸೇತುವೆ ಓಡಬಾಯಿಯಲ್ಲಿದ್ದು ಈ ತೂಗು ಸೇತುವೆಗೆ ವಿದ್ಯುತ್ ವ್ಯವಸ್ಥೆ ಬೇಕೆನ್ನುವುದು...
ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಕಾಂಗ್ರೇಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ. ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮೇಲೆ ಮಾನನಷ್ಟ ಮೊಕದ್ದಮೆ ಮತ್ತು ಸಂಸತ್ ಸದಸ್ಯತ್ವದಿಂದ ಅನರ್ಹ ಮತ್ತು 2 ವರ್ಷದ ಶಿಕ್ಷೆ ವಿಧಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿ ಸತ್ಯ,...
ಸುಳ್ಯ ನಗರ ವ್ಯಾಪ್ತಿಯ ಗಾಂಧಿನಗರ ಜನತಾ ಕಾಂಪೌಂಡ್ ಬಳಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಾರ್ಕಿಂಗ್ ಮಾಡಲಾಗಿದ್ದ ಜೀಪು ಮತ್ತು ಇತರ ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾದ ಘಟನೆ ವರದಿಯಾಗಿದೆ. ಪುತ್ತೂರು ತಾಲೂಕಿನ ಕುಂಬ್ರ ಮೂಲದ ಯುವಕ ತನ್ನ ದ್ವಿಚಕ್ರ ವಾಹನದಲ್ಲಿ ಸುಳ್ಯಕ್ಕೆ ಬಂದು ತನ್ನ ಪರಿಚಿತ ವ್ಯಕ್ತಿಯೋರ್ವರ ಸ್ವಿಫ್ಟ್ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ...
ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಪ್ರಥಮ ಮಾಸಿಕ ಮಹಾಸಭೆ ಆ. 5ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜನಾರ್ಧನ ಬಿ. ಕುರುಂಜಿಭಾಗ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ ಅಜ್ಜಾವರ ಸ್ವಾಗತಿಸಿದರು. ಸಂಘದ ಸದಸ್ಯರಾಗಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಚೆನ್ನಕೇಶವರಿಗೆ ರೂ. 5000/- ಧನ ಸಹಾಯ ನೀಡಿದರು. ಕಾರ್ಯಕಾರಿ ಸಮಿತಿಗೆ...
ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶೇಷಚೇತನರ ಸಭೆ 5/08/23ರಂದು ನಡೆಯಿತು. ಈ ಸಭೆಯಲ್ಲಿ ನೂತನವಾಗಿ " ಬೆಳಕು ವಿಶೇಷಚೇತನರ ಸಂಜೀವಿನಿ ಸ್ವ ಸಹಾಯ ಸಂಘ" ರಚಿಸಲಾಯಿತು ಈ ಸಂದರ್ಭದಲ್ಲಿ ತಾಲೂಕಿನ ಎಂ.ಆರ್.ಡಬ್ಲ್ಯು ಶ್ರೀ ಚಂದ್ರಶೇಖರ, ತಾಲೂಕಿನ NRLM ವಲಯ ಮೇಲ್ವಿಚಾರಕ ಅವಿನಾಶ್, ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ,ಉಪಾಧ್ಯಕ್ಷರಾದ ಲೀಲಾ ಮನಮೋಹನ್, ಅಭಿವೃದ್ದಿ ಅಧಿಕಾರಿ...
ದಕ್ಷಿಣ ಕನ್ನಡ ಮತ್ತು ಕೊಡಗು ಗೌಡ ಸಮಾಜ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಮುಕ್ತ ಕೇರಂ ಪಂದ್ಯಾಟದಲ್ಲಿ ಕನಕಮಜಲು ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ.ಸಿಂಗಲ್ಸ್ ವಿಭಾಗದಲ್ಲಿ ಚಂದ್ರಶೇಖರ ಕನಕಮಜಲು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ,ಡಬಲ್ಸ್ ವಿಭಾಗದಲ್ಲಿ ಸತೀಶ್ ಬೊಮ್ಮಟ್ಟಿ ಮತ್ತು ಈಕ್ಷಿತ್ ಕಂಚಿಲ್ ಪಾಡಿ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಸುಳ್ಯ ತಾಲೂಕಿನ ಶಾಲೆಗಳಲ್ಲೆ ಏಕೈಕ ಮಳೆ ಮಾಪನ ಇರುವ ವಿದ್ಯಾಬೋಧಿನೀ ವಿದ್ಯಾಸಂಸ್ಥೆ ಬಾಳಿಲದಲ್ಲಿ ಮಕ್ಕಳಿಗೆ ಪ್ರತಿ ದಿನ ಹವಾಮಾನ ಮಾಹಿತಿ ನೀಡಲಾಗುತ್ತದೆ. ಪ್ರತಿ ದಿನ ಮಕ್ಕಳು ಬೆಳಗ್ಗೆ 9.00ರಿಂದ ಮರುದಿನ 9.00ಗಂಟೆ ವರೆಗೆ ಬೀಳುವ ಮಳೆ ಪ್ರಮಾಣವನ್ನು ಅಳತೆ ಮಾಡಿ ದಾಖಲಿಸುತ್ತಾರೆ. ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ ಪಿ.ಜಿ. ಎಸ್. ಎನ್ ಪ್ರಸಾದ್ ರವರು ಕಳೆದ 45ವರ್ಷಗಳಿಂದಲೂ...
ಅಮರಪಡ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಣಿಯಲ್ಲಿ ಗ್ರಾಮ ಪಂಚಾಯತ್ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಮತ್ತು ಶಿಕ್ಷಣ ಇಲಾಖೆಯ ಜಂಟಿ ಅನುದಾನ ರೂ 5.30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಶೌಚಾಲಯ ಕಟ್ಟಡವನ್ನು ಅಮರಮೂಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾರವರು ಉದ್ಘಾಟಿಸಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶ್ರೀ...
Loading posts...
All posts loaded
No more posts
