- Thursday
- May 7th, 2026
✍️ ಭಾಸ್ಕರ ಜೋಗಿಬೆಟ್ಟು ತುಳುನಾಡು ಮತ್ತು ಕೇರಳ ಪ್ರದೇಶಗಳಲ್ಲಿ ಆರಾಧನಾ ಪದ್ಧತಿಗೆ ವಿಶೇಷವಾದ ಸ್ಥಾನ ಮಾನವಿದೆ. ಇಲ್ಲಿ ಅಲ್ಲಲ್ಲಿ ದೇವಸ್ಥಾನ ಮತ್ತು ದೈವಸ್ಥಾನಗಳು , ಬನಗಳು , ಕಟ್ಟೆಗಳನ್ನು ಕಾಣಬಹುದು. ಇಲ್ಲಿನ ಜನರಿಗೆ ನಂಬಿಕೆಯೆ ಮೂಲ ಆಧಾರವಾಗಿದ್ದು, ದೈವಗಳ ಆರಾಧನೆಯನ್ನು ಚಾಚು ತಪ್ಪದೆ ಪಾಲಿಸುತ್ತಾರೆ. ಹಿರಿಯರು ಪಾಲಿಸಿಕೊಂಡು ಬಂದಿರುವ ಆರಾಧನ ಪದ್ಧತಿಯನ್ನು ಕಿರಿಯರು ನೋಡಿ ಕಲಿತು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪ.ಪೂ ಕಾಲೇಜುಗಳಿಗೆ ಜು.26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಹಳೆಗೇಟು ಬಳಿ ನಿನ್ನೆ ಸಂಜೆ ಬೈಕ್ ಗಳ ಮಧ್ಯೆ ಪರಸ್ಪರ ಡಿಕ್ಕಿಯಾಗಿ ಸವಾರರಿಗೆ ಗಾಯವಾದ ಘಟನೆ ನಡೆದಿದೆ. ಬೆಟ್ಟಂಪಾಡಿಯ ಸ್ಮರಣ್ ಗಾಯಗೊಂಡವರು. ಪೈಚಾರ್ ನಿಂದ ಸುಳ್ಯಕ್ಕೆ ಬೈಕ್ ನಲ್ಲಿ ಬರುತ್ತಿದ್ದಾಗ ಸುಳ್ಯದಿಂದ ಪೈಚಾರ್ ಕಡೆಗೆ ಬರುತ್ತಿದ್ದ ಇನ್ನೊಂದು ಬೈಕ್ ಕಾರ್ ಅನ್ನು ಒವರ್ ಟೇಕ್ ಮಾಡುವ ಭರದಲ್ಲಿ ಸ್ಮರಣ್ ರವರ ಬೈಕಿಗೆ ಢಿಕ್ಕಿಯಾಗಿದ್ದು ಅವರು ಅಲ್ಲೆ...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ, ಅರಂಬೂರು ಇಲ್ಲಿ ಮೆಂಡ ಫೌಂಡೇಶನ್, ಎಸ್.ಪಿ. ಗ್ಲೋಬಲ್ ಮತ್ತು ಸೆಲ್ಕೋ ಸೋಲಾರ್ ಸಂಸ್ಥೆಯ ಸಹಯೋಗದೊಂದಿಗೆ ಒಂದು ಲಕ್ಷ 75 ಸಾವಿರ ರೂ. ವೆಚ್ಚದಲ್ಲಿ ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್ ಸಿಸ್ಟಮ್ ನ್ನು ಕೊಡುಗೆಯಾಗಿ ನೀಡಲಾಗಿದ್ದು, ಈ ಸ್ಮಾರ್ಟ್ ಸಿಸ್ಟಮ್ ಉದ್ಘಾಟನಾ ಕಾರ್ಯಕ್ರಮ ಜು.22 ರಂದು ನಡೆಯಿತು. ಸಭಾ...
ನಿನ್ನೆ ರಾತ್ರಿಯಿಂದ ಅಜ್ಜಾವರದ ಕರಿಯಮೂಲೆಯ ರಾಮ್ ಪ್ರಸಾದ್ ಕಾರ್ನಿಕ , ವಿಶ್ವನಾಥ ರಾವ್ ಸರಿದಂತೆ ಇತರರ ತೋಟಗಳಿಗೆ ನೀರು ನುಗ್ಗಿದ ಘಟನೆ ವರದಿಯಾಗಿದೆ.ಮೊನ್ನೆಯಿಂದ ಘಟ್ಟ ಹಾಗೂ ಕರಾವಳಿಯಾಧ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಪಯಸ್ವಿನಿ ಉಕ್ಕಿ ಹರಿಯುತ್ತಿದ್ದು ಕಾಂತಮಂಗಲ ರಾಘವೇಂದ್ರ ಮಠ ಹಾಗೂ ಇತರ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿದ್ದು ಮುನ್ನೆಚ್ಚರಿಕೆ ಕೈಗೊಳ್ಳಬೇಕಿದೆ
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಆಟಿ ತಿಂಗಳ ವಿಶಿಷ್ಟ ಖಾದ್ಯಗಳ ಪ್ರದರ್ಶನ ಮತ್ತು ಆಟಿ ಆಚರಣೆ ಜುಲೈ 22 ರಂದು ನಡೆಯಿತು. ತುಳುನಾಡು ಅನೇಕ ವಿಶಿಷ್ಟ ಹಬ್ಬಗಳ ತವರೂರು, ಇಲ್ಲಿನ ಭಾಷೆ ಸಂಸ್ಕೃತಿ ಆಚರಣೆ ಹಬ್ಬ ಹರಿದಿನ ಪ್ರತಿಯೊಂದರಲ್ಲೂ ತುಳುನಾಡಿನ ಮಣ್ಣಿನ ಸೊಗಡು ಘಮಘಮಿಸುತ್ತಿರುತ್ತದೆ. ಇದನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಸದುದ್ದೇಶದಿಂದ ಶಾಲೆಯಲ್ಲಿ ಹಲವಾರು...
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ ಜು.22ರಂದು ನಡೆಯಿತು. ಕಾರ್ಯಕ್ರಮ ಶಾಲಾ ಆಡಳಿತ ಮಂಡಳಿ ಸಹಕಾರದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಷನ್ ಸೊಸೈಟಿ ಬಾಳಿಲ ಇದರ ಕೋಶಾಧಿಕಾರಿಯಾದ ರಾಧಾಕೃಷ್ಣ ರಾವ್ ಉಡುವೆಕೋಡಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬಾಬು ಅಜಿಲ ಆಟಿ ತಿಂಗಳ ವೈಶಿಷ್ಟ್ಯತೆಯ ಬಗ್ಗೆ ಮಾಹಿತಿ ನೀಡಿದರು. ಅತಿಥಿಗಳಾಗಿ ಶಾಲಾ...
ಇತ್ತೀಚಿನ ದಿನಗಳಲ್ಲಿ ದಂತ ವೈದ್ಯಕೀಯ ರಂಗದಲ್ಲಿ ಚಿಕಿತ್ಸೆಗಾಗಿ ಲೇಸರ್ ಬಳಕೆ ಹೆಚ್ಚುತ್ತಿದೆ. ಲೇಸರ್ ಕಿರಣ ಬಳಸಿ ದೇಹದಲ್ಲಿನ ಜೀವಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸಲಾಗುತ್ತದೆ. ಮತ್ತು ಕೆಲವೊಮ್ಮೆ ಅನಗತ್ಯವಾದ ಜೀವಕೋಶಗಳ ಬೆಳವಣಿಗೆಯನ್ನು ನಿಲ್ಲಿಸಲಾಗುತ್ತದೆ. ದಂತ ಚಿಕಿತ್ಸೆಯಲ್ಲಿ ಸೌಂದರ್ಯಕ್ಕೆ ಹೆಚ್ಚು ಗಮನ ನೀಡುವುದರಿಂದ ಹಲ್ಲಿನ ವಸಡಿನ ಸೌಂದರ್ಯವನ್ನು ಹೆಚ್ಚಿಸಲೂ ಇತ್ತೀಚಿಗೆ ಲೇಸರ್ ಕಿರಣಗಳ ಬಳಕೆಯನ್ನು ಹೆಚ್ಚು ಹೆಚ್ಚಾಗಿ ಮಾಡುತ್ತಾರೆ. ದಂತ...
ಸುಳ್ಯದ ಅಂಬೆಟಡ್ಕದಲ್ಲಿರುವ ಮಾಣಿಬೆಟ್ಟು ಸಂಕೀರ್ಣದಲ್ಲಿ ಕಾರ್ಯಚರಿಸುತ್ತಿರುವ ಪಾರ್ಟ್ಸ್ ವರ್ಲ್ಡ್ ನಲ್ಲಿ ಪ್ರಸಿದ್ದ ಕಂಪನಿಯಾದ ಆಮ್ ರೋನ್ ಕಂಪನಿಯ ಬ್ಯಾಟರಿಗಳ ಮೇಲೆ ಬಾರಿ ದರಕಡಿತ ಮಾರಾಟ ಆಯೋಜಿಸಿದೆ. ಕಾರ್ , ಬೈಕ್ ಮುಂತಾದವುಗಳ ಬ್ಯಾಟರಿಗಳು ಹಾಗೂ ಎಲ್ಲಾ ಬಗೆಯ ಸ್ಪೇರ್ ಪಾರ್ಟ್ಸ್ ಗಳು ಲಭ್ಯವಿದೆ ಎಂದು ಮಾಲಕರಾದ ಅವಿನಾಶ್ ಎ ಜಿ ತಿಳಿಸಿದ್ದಾರೆ.
ಐವರ್ನಾಡು ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರು ಇನ್ನೊರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೂಡಲೇ ಸ್ಥಳೀಯರು ತಡೆದಿದ್ದಾರೆ. ಈ ಬಗ್ಗೆ ಧರ್ಮಲಿಂಗಂ ರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು...
Loading posts...
All posts loaded
No more posts
