ಕಾಂತಮಂಗಲದಲ್ಲಿ ಪ್ರವಾಹ ಭೀತಿ, ಕರಿಯಮೂಲೆ ತೋಟಗಳಿಗೆ ನುಗ್ಗಿದ ನೀರು .

ನಿನ್ನೆ ರಾತ್ರಿಯಿಂದ ಅಜ್ಜಾವರದ ಕರಿಯಮೂಲೆಯ ರಾಮ್ ಪ್ರಸಾದ್ ಕಾರ್ನಿಕ , ವಿಶ್ವನಾಥ ರಾವ್ ಸರಿದಂತೆ ಇತರರ ತೋಟಗಳಿಗೆ ನೀರು ನುಗ್ಗಿದ ಘಟನೆ ವರದಿಯಾಗಿದೆ.ಮೊನ್ನೆಯಿಂದ ಘಟ್ಟ ಹಾಗೂ ಕರಾವಳಿಯಾಧ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಪಯಸ್ವಿನಿ ಉಕ್ಕಿ ಹರಿಯುತ್ತಿದ್ದು ಕಾಂತಮಂಗಲ ರಾಘವೇಂದ್ರ ಮಠ ಹಾಗೂ ಇತರ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿದ್ದು ಮುನ್ನೆಚ್ಚರಿಕೆ ಕೈಗೊಳ್ಳಬೇಕಿದೆ

ಎಣ್ಮೂರು ಪ್ರೌಢಶಾಲೆಯಲ್ಲಿ ಆಟಿ ಆಚರಣೆ ಮತ್ತು ಆಟಿ ತಿನಿಸುಗಳ ಸ್ಪರ್ಧೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಆಟಿ ತಿಂಗಳ ವಿಶಿಷ್ಟ ಖಾದ್ಯಗಳ ಪ್ರದರ್ಶನ ಮತ್ತು ಆಟಿ ಆಚರಣೆ ಜುಲೈ 22 ರಂದು ನಡೆಯಿತು. ತುಳುನಾಡು ಅನೇಕ ವಿಶಿಷ್ಟ ಹಬ್ಬಗಳ ತವರೂರು, ಇಲ್ಲಿನ ಭಾಷೆ ಸಂಸ್ಕೃತಿ ಆಚರಣೆ ಹಬ್ಬ ಹರಿದಿನ ಪ್ರತಿಯೊಂದರಲ್ಲೂ ತುಳುನಾಡಿನ ಮಣ್ಣಿನ ಸೊಗಡು ಘಮಘಮಿಸುತ್ತಿರುತ್ತದೆ. ಇದನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಸದುದ್ದೇಶದಿಂದ ಶಾಲೆಯಲ್ಲಿ ಹಲವಾರು...
Ad Widget

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಆಟಿದ ಲೇಸು” ಕಾರ್ಯಕ್ರಮ

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ ಜು.22ರಂದು ನಡೆಯಿತು. ಕಾರ್ಯಕ್ರಮ ಶಾಲಾ ಆಡಳಿತ ಮಂಡಳಿ ಸಹಕಾರದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಷನ್ ಸೊಸೈಟಿ ಬಾಳಿಲ ಇದರ ಕೋಶಾಧಿಕಾರಿಯಾದ ರಾಧಾಕೃಷ್ಣ ರಾವ್ ಉಡುವೆಕೋಡಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬಾಬು ಅಜಿಲ ಆಟಿ ತಿಂಗಳ ವೈಶಿಷ್ಟ್ಯತೆಯ ಬಗ್ಗೆ ಮಾಹಿತಿ ನೀಡಿದರು. ಅತಿಥಿಗಳಾಗಿ ಶಾಲಾ...

ದಂತ ಚಿಕಿತ್ಸೆಯಲ್ಲಿ ಲೇಸರ್.

ಇತ್ತೀಚಿನ ದಿನಗಳಲ್ಲಿ ದಂತ ವೈದ್ಯಕೀಯ ರಂಗದಲ್ಲಿ ಚಿಕಿತ್ಸೆಗಾಗಿ ಲೇಸರ್ ಬಳಕೆ ಹೆಚ್ಚುತ್ತಿದೆ. ಲೇಸರ್ ಕಿರಣ ಬಳಸಿ ದೇಹದಲ್ಲಿನ ಜೀವಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸಲಾಗುತ್ತದೆ. ಮತ್ತು ಕೆಲವೊಮ್ಮೆ ಅನಗತ್ಯವಾದ ಜೀವಕೋಶಗಳ ಬೆಳವಣಿಗೆಯನ್ನು ನಿಲ್ಲಿಸಲಾಗುತ್ತದೆ. ದಂತ ಚಿಕಿತ್ಸೆಯಲ್ಲಿ ಸೌಂದರ್ಯಕ್ಕೆ ಹೆಚ್ಚು ಗಮನ ನೀಡುವುದರಿಂದ ಹಲ್ಲಿನ ವಸಡಿನ ಸೌಂದರ್ಯವನ್ನು ಹೆಚ್ಚಿಸಲೂ ಇತ್ತೀಚಿಗೆ ಲೇಸರ್ ಕಿರಣಗಳ ಬಳಕೆಯನ್ನು ಹೆಚ್ಚು ಹೆಚ್ಚಾಗಿ ಮಾಡುತ್ತಾರೆ. ದಂತ...

ಸುಳ್ಯದ ಪಾಟ್ಸ್ ವಲ್ಡ್ ನಲ್ಲಿ ಆಮ್ ರೋನ್ ಬ್ಯಾಟರಿಗಳ ಡಿಸ್ಕೌಂಟ್ ಸೇಲ್

ಸುಳ್ಯದ ಅಂಬೆಟಡ್ಕದಲ್ಲಿರುವ ಮಾಣಿಬೆಟ್ಟು ಸಂಕೀರ್ಣದಲ್ಲಿ ಕಾರ್ಯಚರಿಸುತ್ತಿರುವ ಪಾರ್ಟ್ಸ್ ವರ್ಲ್ಡ್‌ ನಲ್ಲಿ ಪ್ರಸಿದ್ದ ಕಂಪನಿಯಾದ ಆಮ್ ರೋನ್ ಕಂಪನಿಯ ಬ್ಯಾಟರಿಗಳ ಮೇಲೆ ಬಾರಿ ದರಕಡಿತ ಮಾರಾಟ ಆಯೋಜಿಸಿದೆ. ಕಾರ್ , ಬೈಕ್ ಮುಂತಾದವುಗಳ ಬ್ಯಾಟರಿಗಳು ಹಾಗೂ ಎಲ್ಲಾ ಬಗೆಯ ಸ್ಪೇರ್ ಪಾರ್ಟ್ಸ್ ಗಳು ಲಭ್ಯವಿದೆ ಎಂದು ಮಾಲಕರಾದ ಅವಿನಾಶ್ ಎ ಜಿ ತಿಳಿಸಿದ್ದಾರೆ.

ಐವರ್ನಾಡು : ಕ್ಷುಲ್ಲಕ ವಿಚಾರಕ್ಕೆ ಹಲ್ಲೆಗೆ ಯತ್ನ – ಪೊಲೀಸ್ ದೂರು

ಐವರ್ನಾಡು ಪೆಟ್ರೋಲ್ ಪಂಪ್ ಬಳಿ ಇರುವ ನಿಸರ್ಗ ಕಾಂಪ್ಲೆಕ್ಸ್ ನಲ್ಲಿ ವಾಸ್ತವ್ಯವಿರುವ ಪ್ರವೀಣ ಎಂಬವರು ಇನ್ನೊರ್ವ ನಿವಾಸಿ ಧರ್ಮಲಿಂಗಂ ಎಂಬವರೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ತಮ್ಮ ವಾಹನದಿಂದ ತಲವಾರು ತೆಗೆದು ಹಲ್ಲೆ ನಡೆಸಲು ಮುಂದಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೂಡಲೇ ಸ್ಥಳೀಯರು ತಡೆದಿದ್ದಾರೆ. ಈ ಬಗ್ಗೆ ಧರ್ಮಲಿಂಗಂ ರವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು...

ಜಾಲ್ಸೂರು ಗೂಡಂಗಡಿಯಿಂದ ಕಳವು

ಜಾಲ್ಸೂರಿನ ಗೋಳಿಕಟ್ಟೆ ನಾರಾಯಣ ಭಟ್ ಅವರ ಅಂಗಡಿಗೆ ನುಗ್ಗಿದ ಕಳ್ಳರು ದಿನಸಿ ಸಾಮಾಗ್ರಿಗಳನ್ನು ಕಳವು ಗೈದ ಘಟನೆ ಜು.20ರಂದು ವರದಿಯಾಗಿದೆ ಜಾಲ್ಸೂರು ಹಾಗೂ ಕನಕಮಜಲು ಪರಿಸರದಲ್ಲಿ ಹಲವು ಕಳವು,ದರೋಡೆ ಪ್ರಕರಣಗಳು ವರದಿಯಾಗಿದ್ದು ಪೊಲೀಸರು ಇನ್ನಷ್ಟು ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ

ನಾಯಿ‌ ಅಡ್ಡ ಬಂದು ಸ್ಕೂಟಿಯಿಂದ ಬಿದ್ದ ಸಂಪಾಜೆ ಪಿಡಿಒ

ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಪಿಂಟೋ ಅವರ ಸ್ಕೂಟಿಗೆ ಐವರ್ನಾಡು ಸಮೀಪ ನಾಯಿ ಅಡ್ಡಬಂದ ಪರಿಣಾಮ ಆಯತಪ್ಪಿ ಬಿದ್ದು ಗಾಯಗೊಂಡ ಘಟನೆ ವರದಿಯಾಗಿದೆ‌.ಜುಲೈ 18ರ ಸಂಜೆ ಬೆಳ್ಳಾರೆಯ ಮನೆಗೆ ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ಜಾಲ್ಲೂರಿನ ಗೂಡಂಗಡಿಯಿಂದ ಬಿಸ್ಕೆಟ್ ಇನ್ನಿತರ ವಸ್ತುಗಳನ್ನು ಎಗರಿಸಿದ ಕಳ್ಳರು.

ಸುಳ್ಯ ತಾಲೂಕಿನ ನಾನಾ ಕಡೆಗಳಲ್ಲಿ ಕೆಲ ದಿನಗಳಿಂದ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಜು.20ರ ರಾತ್ರಿ ಗೂಡಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಅಂಗಡಿ ಸಾಮಾಗ್ರಿಗಳನ್ನು ಕಳವುಗೈದ ಘಟನೆ ವರದಿಯಾಗಿದೆ. ಜಾಲ್ಲೂರಿನ ಗೋಳಿಕಟ್ಟೆಯಲ್ಲಿನ ನಾರಾಯಣ ಭಟ್ ಎಂಬವರ ಗೂಡಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳರು, ಅಂಗಡಿಯಲ್ಲಿದ್ದ ಜ್ಯೂಸ್ ಬಾಟ್ಲಿಗಳು, ಬಿಸ್ಕೆಟ್ ಪ್ಯಾಕೇಟ್, ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಕಳವುಗೈದಿದ್ದಾರೆ ಎಂದು ತಿಳಿದುಬಂದಿದೆ....

ಸ್ಕೂಟಿಯಿಂದ ಬಿದ್ದು ಸಂಪಾಜೆ ಅಭಿವೃದ್ದಿ ಅಧಿಕಾರಿಗೆ ಗಾಯ, ವಿಶ್ರಾಂತಿ .

ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರಿತಾ ಪಿಂಟೋ ರವರು ಸ್ಕೂಟಿಯಿಂದ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರು ಜುಲೈ 18ರ ಸಂಜೆ ಸ್ಕೂಟಿಯಲ್ಲಿ ಬೆಳ್ಳಾರೆಯ ಮನೆಗೆ ಹೋಗುತ್ತಿದ್ದ ಸಂದರ್ಭ ಐವರ್ನಾಡು ಸಮೀಪ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟಿ ಅಪಘಾತಕ್ಕೀಡಾಗಿ ಸರಿತಾರವರು ರಸ್ತೆಗೆ ಬಿದ್ದ ಪರಿಣಾಮ ಅವರ ಕೈ ಮತ್ತು ಕಾಲುಗಳಿಗೆ...
Loading posts...

All posts loaded

No more posts

error: Content is protected !!