- Thursday
- May 7th, 2026
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ ನಿರ್ಮಾಣವಾಗಲಿದ್ದು ಈ ಹಿನ್ನೆಲೆಯಲ್ಲಿ ರಥ ನಿರ್ಮಾಣ ಕಾರ್ಯಕ್ಕೆ ಕಾಷ್ಟ ಶಿಲ್ಪಿಗೆ ವೀಳ್ಯ ಮುಹೂರ್ತವು ಜೂ.05 ಸೋಮವಾರದಂದು ಬೆಳಗ್ಗೆ ಗಂಟೆ 9.30ಕ್ಕೆ ನಡೆಯಲಿದೆ. ರಥ ನಿರ್ಮಾಣದ ಬಗ್ಗೆ ದೇವಸ್ಥಾನದಲ್ಲಿ ಊರ ಭಕ್ತಾದಿಗಳ ಪೂರ್ವಭಾವಿ ಸಭೆಯು ಇತ್ತೀಚೆಗೆ ನಡೆದಿತ್ತು. ಮಾ.23 ರಂದು ಪನ್ನೆಯಲ್ಲಿ ರಥ ನಿರ್ಮಾಣಕ್ಕೆ ದಾನವಾಗಿ ನೀಡಿದ...
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೇ.31ರಂದು ಹಮ್ಮಿಕೊಳ್ಳಲಾಯಿತು. ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್. ಪ್ರಸಾದ್, ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಉಪ ಕಾರ್ಯದರ್ಶಿಯವರಾದ ಭಾರತಿ ಶಂಕರ್ ಆದಾಳ,ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದು...
ಪುತ್ತೂರು ಹಾಗೂ ಕಡಬ ತಾಲೂಕಿನ ಉಪ್ಪಿನಂಗಡಿ, ರಾಮಕುಂಜ,ಆಲಂಕಾರು, ಕಾಣಿಯೂರು ಮತ್ತು ಸವಣೂರು ಗ್ರಾಮ ಪಂಚಾಯತಿಗಳಲ್ಲಿ ಜಲಜೀವನ್ ಮಿಷನ್ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡ ಬೀದಿನಾಟಕ ಯಶಸ್ವಿಯಾಗಿ ನಡೆಯಿತು. ಎಲ್ಲಾ ಪಂಚಾಯತಿಗಳಲ್ಲೂ ಬಹಳಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು , ಪ್ರಯಾಣಿಕರು, ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಬೀದಿನಾಟಕ ವೀಕ್ಷಿಸಿ ಶ್ಲಾಘನೆ ವ್ಯಕ್ತಪಡಿಸಿದರಲ್ಲದೇ ಮಾಹಿತಿ...
ಕಡಬ ತಾಲೂಕು ಐತ್ತೂರು ಗ್ರಾಮದ ಪೆರಿಯಡ್ಕ ಬಾಲಕೃಷ್ಣ ಗೌಡರ ಪುತ್ರ ಚಿ|ರಾ| ದೀಕ್ಷಿತ್ ರವರ ವಿವಾಹವು ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಕೊಟ್ಟೆಕಾಯಿ ದಿ॥ಶ್ರೀ ಈಶ್ವರ ಗೌಡರ ಪ್ರಥಮ ಪುತ್ರಿ ಚಿ|ಸೌ| ಲಾವಣ್ಯ ರವರೊಂದಿಗೆ ಮೇ.29ರಂದು ಪಂಜ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವಾಲಯದ ಸಭಾಭವನದಲ್ಲಿ ನಡೆಯಿತು.
ಸುಳ್ಯ: ಪಕ್ಷನಿಷ್ಠೆ, ಶ್ರದ್ಧೆ ಧಾರ್ಮಿಕ ನಂಬಿಕೆ ಹಾಗೂ ಎಲ್ಲರೊಡನೊಂದಾಗಿ ಬೆರೆತು ಬದುಕಿದ ನವೀನ್ ಕುಮಾರ್ ಮೇನಾಲ ಓರ್ವ ಅಜಾತಶತ್ರು. ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ ಎಂದು ಸುಳ್ಯದ ಬಿಜೆಪಿ ಮುಂದಾಳುಗಳು ಹೇಳಿದ್ದಾರೆ. ಮೆ.18ರಂದು ದುರಂತಕ್ಕೀಡಾಗಿ ನಿಧನರಾದ ಬಿಜೆಪಿ ಧುರೀಣ ನವೀನ್ ರೈ ಮೇನಾಲರಿಗೆ ಸೋಮವಾರ ಬಿಜೆಪಿ ಮಂಡಲ ಸಮಿತಿ ವತಿಯಿಂದ ಶ್ರದ್ಧಾಂಜಲಿ ಹಾಗೂ ಕಾರ್ಯಕ್ರಮದಲ್ಲಿ...
ಸುಳ್ಯ: ಸ್ವಾರ್ಥತೆಯಲ್ಲಿ ಪರಮಾರ್ಥತೆ ಇರಬೇಕು. ಮನುಷ್ಯತ್ವ ಇದ್ದರೆ ಮಾತ್ರ ಆತ ಮನುಷ್ಯನಾಗುತ್ತಾನೆ. ಆಗ ಜಾತಿ, ಧರ್ಮ, ಕುಲ, ಬಣ್ಣಗಳ ಭೇದವಿಲ್ಲದೆ ನದಿ ನೀರುಣಿಸುವಂತೆ ದೇವರು ನಮ್ಮನ್ನು ಕಾಪಾಡುತ್ತಾನೆ. ಸನಾತನ ಹಿಂದೂ ಧರ್ಮ ಈ ನಾಡಿನ ಎಲ್ಲ ಧರ್ಮದವರನ್ನು ಕಾಪಾಡುತ್ತದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಡಾ. ಆರ್. ಕೆ ನಾಯರ್ ಹೇಳಿದರು. ಅವರು ಸೋಮವಾರ...
ದೇವ ಮತಗಟ್ಟೆಯಲ್ಲಿ ಕೈ ಕೊಟ್ಟ ಮತಯಂತ್ರ.ಈ ಬಾರಿ ಹೊಸದಾಗಿ ಆರಂಭಗೊಂಡ ದೇವಚಳ್ಳ ಗ್ರಾಮದ ದೇವ ಮತಗಟ್ಟೆಯಲ್ಲಿ ಮತದಾನ ಆರಂಭವಾಗಿ ಕೆಲ ಹೊತ್ತಿನಲ್ಲಿ ಮತಯಂತ್ರ ಕೈಕೊಟ್ಟ ಘಟನೆ ನಡೆದಿದೆ. ಬೇರೆ ಮತಯಂತ್ರ ತಂದ ಬಳಿಕ ಮತದಾನ ಪ್ರಕ್ರಿಯೆ ಪುನರಾರಂಭಗೊಂಡಿದ್ದು, 1 ಗಂಟೆ ವಿಳಂಬವಾದ ಕಾರಣ ಜನ ಕ್ಯೂ ನಿಲ್ಲುವ ಪರಿಸ್ಥಿತಿ ಉಂಟಾಯಿತು.
ಸುಳ್ಯ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ.ಜೀವ ರಕ್ಷಿಸುವ ರಕ್ತದಾನ ಕ್ಕಿಂತ ಮಿಗಿಲಾದ ದಾನವಿಲ್ಲ, ಹಕ್ಕು ಮತ್ತು ಕರ್ತವ್ಯದ ಮತದಾನಕ್ಕಿಂತ ಮಿಗಿಲಾದ ಸೇವೆಯಿಲ್ಲ :ಪಿ. ಬಿ. ಸುಧಾಕರ್ ರೈ ಸುಳ್ಯ ರೆಡ್ ಕ್ರಾಸ್ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆಯನ್ನು ವರ್ತಕರ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ರೆಡ್ ಕ್ರಾಸ್ ಸುಳ್ಯ...
ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು ಸರಕಾರಿ ಪ್ರೌಢಶಾಲೆ ಎಲಿಮಲೆಯು 92.72% ಫಲಿತಾಂಶ ಪಡೆದಿರುತ್ತದೆ. ಕೀರ್ತನ್.ಡಿ 601, ಕೃತಿ.ಎ 592, ರಾಧಿಕಾ.ವೈ 591, ದಿಶಾ.ಕೆ.ಟಿ 561, ಯಶ್ವಿತಾ.ಕೆ 547, ಪಾತಿಮತ್ ಸನ.ಐ 546, ಶ್ಯಾವ್ಯಶ್ರಿ.ಎಸ್. 546...
' ಮನದಲ್ಲಿ ಅರಳುವ ಚಿತ್ರಣವನ್ನು ಗಾಯನದ ಮೂಲಕ ಅನಾವರಣಗೊಳಿಸಲು ಸುಗಮ ಸಂಗೀತದಲ್ಲಿ ಸಾಧ್ಯವಿದೆ. ಕವಿತ್ವದ ಅರಳುವಿಕೆ ಇಲ್ಲಿ ಸಾಧ್ಯ ' ಎಂದು ಕವಿ ಸುಬ್ರಾಯ ಚೊಕ್ಕಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಸುಳ್ಯ ರಂಗಮನೆಯಲ್ಲಿ ನಡೆದಸಂಗಮ ಕಲಾ ಕ್ಷೇತ್ರ (ರಿ)ಟ್ರಸ್ಟ್ ಬೆಂಗಳೂರು ಹಾಗೂ ಗಣೇಶ್ ಮ್ಯೂಸಿಕಲ್ಸ್ ಸುಳ್ಯ ದ.ಕ ಹಾಗೂ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ...
Loading posts...
All posts loaded
No more posts
