- Thursday
- May 7th, 2026
ಬೆಳ್ಳಾರೆಯ ಮಣಿಕ್ಕಾರ ಕಾಂಪ್ಲೆಕ್ಸ್ ನಲ್ಲಿ ಹರ್ಷಿತ್ ಪೆರುವಾಜೆಯವರ ಮಾಲೀಕತ್ವದ ಜಲಧಿ ಸೊಲ್ಯೂಶನ್ಸ್ ಮಾ.17ರಂದು ಶುಭಾರಂಭಗೊಳ್ಳಲಿದೆ. ಸಂಸ್ಥೆಯಲ್ಲಿ ಫೈನಾನ್ಶಿಯಲ್ ಸಂಬಂಧಿತ ಸೇವೆಗಳಾದ ಪರ್ಸನಲ್ ಲೋನ್, ವೆಹಿಕಲ್ ಲೋನ್, ಹೋಮ್ ಲೋನ್, ಬ್ಯುಸಿನೆಸ್ ಲೋನ್, ಮೋರ್ಗೇಜ್ ಲೋನ್ ಹಾಗೂ ಜನರಲ್ ಇನ್ಶೂರೆನ್ಸ್, ವೆಹಿಕಲ್ ಇನ್ಶೂರೆನ್ಸ್ , ಲೈಫ್ ಇನ್ಶೂರೆನ್ಸ್, ಹೆಲ್ತ್ ಇನ್ಶೂರೆನ್ಸ್, ಟ್ರಾವೆಲ್ ಬುಕಿಂಗ್, ಹೋಲಿಡೇ ಪ್ಯಾಕೇಜ್, ಟಿಕೆಟ್...
ಕಳಂಜ ಗ್ರಾಮ ಪಂಚಾಯತಿನಲ್ಲಿ 24 ವರ್ಷಗಳಿಂದ ಗುಮಾಸ್ತರಾಗಿ ಸೇವೆ ಸಲ್ಲಿಸುತ್ತಿದ್ದ ತಿರುಮಲೇಶ್ವರ ಎಂ ಇವರು ಗ್ರೇಡ್ - 2 ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಭಡ್ತಿ ಹೊಂದಿದ್ದಾರೆ. ಗ್ರೇಡ್ - 2 ಕಾರ್ಯದರ್ಶಿಯಾಗಿ ಇವರು ಐವರ್ನಾಡು ಗ್ರಾಮ ಪಂಚಾಯತಿಗೆ ನೇಮಕಗೊಂಡಿರುತ್ತಾರೆ. ಇವರು ಕಳಂಜ ಗ್ರಾಮದ ಚಿನ್ನಪ್ಪ ಗೌಡ ಮುಂಡುಗಾರು ಮತ್ತು ದಿ|ಲೀಲಾವತಿ ಯವರ ಪುತ್ರ.
ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡುಗೆ ತಯಾರಿ ಕಾರ್ಯಕ್ರಮ ನಡೆಯಿತು. ಪದಕ ನಿಮಿತ್ತ ಶಾಲಾ 8 ಪಟಾಲಂನಿಂದ ಸುಮಾರು 60ಕ್ಕೂ ಮಿಕ್ಕಿ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ಬೆಂಕಿ ಬಳಸಿ ಮತ್ತು ಬೆಂಕಿ ಬಳಸದೆ ತಯಾರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಭುವನೇಶ್ವರ್ , ಶಾಲಾ ನಿವೃತ್ತ ಮುಖ್ಯ...
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ನೀಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ 'ಲಕ್ಕೀ ಡ್ರಾ' ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಮಾ.11 ಶನಿವಾರದಂದು ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್ ಡಿಲಕ್ಸ್ ಬೈಕ್ ಗೆಲ್ಲಬಹುದಾಗಿದೆ. ಈ...
ಕೊಡಿಯಾಲ ಗ್ರಾಮದ ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮವು ಮಾ.16ರಿಂದ ಮಾ.17 ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಇಂದು (ಮಾ.05ರಂದು) ಜರುಗಿತು. ಈ ಸಂದರ್ಭ ಕಲ್ಲಪಣೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ದಾರ ಸಮಿತಿ...
ಬೆಳ್ಳಾರೆ: 'ಸಮಸ್ತ' ಇಸ್ಲಾಮಿಕ್ ವಿದ್ಯಾಬ್ಯಾಸ ಮಂಡಳಿ ಸುಮಾರು ಹತ್ತು ಸಾವಿರ ಮದ್ರಸಾಗಳಲ್ಲಿ 5,7,10,12 ತರಗತಿಗಳಿಗೆ ಏಕ ಕಾಲದಲ್ಲಿ ನಡೆಸುವ ಪಬ್ಲಿಕ್ ಪರೀಕ್ಷೆಯು ಇಂದಿನಿಂದ ಮೂರು ದಿನಗಳಲ್ಲಿ ನಡೆಯಲಿರುವುದು. ಬೆಳ್ಳಾರೆ,ಕಲ್ಲೋಣಿ, ಪೆರುವಾಜೆ,ನೆಟ್ಟಾರು, ಐವರ್ನಾಡು ಮದ್ರಸಗಳ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸಾ ಪರೀಕ್ಷಾ ಸೆಂಟರ್ ನಲ್ಲಿ ಪರೀಕ್ಷೆ ಪ್ರಾರಂಭಗೊಂಡಿತು.ಸಮಸ್ತ ವಿದ್ಯಾಬ್ಯಾಸ ಮಂಡಳಿಯ ನೇರ ಮೇಲ್ನೋಟದಲ್ಲಿ ನಡೆಯುವ ಪರೀಕ್ಷೆಯ...
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಳಗುತ್ತಿಗೆ ನೌಕರರ ಸಂಘವು ಯನ್. ಎಚ್. ಯಂ. ಒಳಗುತ್ತಿಗೆ ನೌಕರರನ್ನು ಕಾಯಂ ಮಾಡಲು ದಿನಾಂಕ 13/02/2023 ರಿಂದ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಮುಷ್ಕರ ನಡೆಸುತ್ತಿದ್ದು, ಸುಳ್ಯ ತಾಲೂಕಿನ ಆರೋಗ್ಯ ಇಲಾಖೆಯ ಯನ್. ಎಚ್. ಯಂ ಸಿಬ್ಬಂದಿಗಳು ಕರ್ತವ್ಯಕೆ ಗೈರು ಹಾಜರಾಗಿ ಮುಷ್ಕರ ನಡೆಸುತ್ತಿದ್ದಾರೆ. ಸುಳ್ಯ ತಾಲೂಕು...
ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶಿವರಾತ್ರಿಯ ದಿನ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸಿದ್ದು, ಇದರ ಪರಿಣಾಮ ದೂರದೂರಿಗೆ ಹೋಗುವ ಭಕ್ತರಿಗೆ ಬಸ್ಸಿನ ವ್ಯವಸ್ಥೆಯಲ್ಲಿ ಸಮಸ್ಯೆಯಾಗಿತ್ತು. ಇದರಿಂದಾಗಿ ಕೆಲಕಾಲ ಪ್ರಯಾಣಿಕರು ಪ್ರತಿಭಟನೆಗೆ ಇಳಿಯುವ ಪ್ರಸಂಗವೂ ನಡೆಯಿತು. ಇದನ್ನು ಮನಗಂಡ ಸುಬ್ರಹ್ಮಣ್ಯದ ಸಾಮಾಜಿಕ ಕಾರ್ಯಕರ್ತರಾದ ಶ್ರೀಕುಮಾರ್ ಅವರು ಪೋನ್ ಕರೆಯ ಮೂಲಕ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಸಂಪರ್ಕಿಸಿ ಅವ್ಯವಸ್ಥೆಯ...
ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ನೇತೃತ್ವದಲ್ಲಿ ಕೆ.ವಿ.ಜಿ. ಡೆಂಟಲ್ ಕಾಲೇಜ್ ಮತ್ತು ಆಸ್ಪತ್ರೆ, ಸುಳ್ಯ, ದ.ಕ. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇವರ ಸಹಯೋಗದಲ್ಲಿ ಫೆ.21ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ವಠಾರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಶಿಬಿರವನ್ನು ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷರಾದ...
ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ನೇತೃತ್ವದಲ್ಲಿ ಕೆ.ವಿ.ಜಿ. ಡೆಂಟಲ್ ಕಾಲೇಜ್ ಮತ್ತು ಆಸ್ಪತ್ರೆ, ಸುಳ್ಯ, ದ.ಕ. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇವರ ಸಹಯೋಗದಲ್ಲಿ ಫೆ.21ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ವಠಾರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ. ಶಿಬಿರವು ಪೂರ್ವಾಹ್ನ ಗಂಟೆ 9-00ರಿಂದ...
Loading posts...
All posts loaded
No more posts
