ವ್ಯರ್ಥವಾಗದಿರಲಿ ಯೌವ್ವನ ; ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವಾರ್ಷಿಕ ಮಹಾಸಭೆ – ನೂತನ ಸಮಿತಿ ಅಸ್ತಿತ್ವಕ್ಕೆ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವಾರ್ಷಿಕ ಮಹಾ ಸಭೆ ಫೆಬ್ರವರಿ 12ರಂದು ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷ ಅಬ್ದುರ್ರಹ್ಮಾನ್ ಸಖಾಫಿ ಅಧ್ಯಕ್ಷತೆಯಲ್ಲಿ ಬೆಳ್ಳಾರೆ ಸುನ್ನಿ ಸೆಂಟರ್ ನಲ್ಲಿ ಜರಗಿತು. ಸುನ್ನಿ ಜಂಇಯ್ಯತುಲ್ ಉಲಮಾ ಬೆಳ್ಳಾರೆ ಝೋನ್ ಅಧ್ಯಕ್ಷ ಹಸನ್ ಸಖಾಫಿ ಬೆಳ್ಳಾರೆ ಉದ್ಘಾಟಿಸಿದರು. ಎಸ್.ವೈ.ಎಸ್ ಬೆಳ್ಳಾರೆ ಸೆಂಟರ್ ಪ್ರ....

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಆರಂಭ, ಧ್ವಜಾರೋಹಣ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಇಂದು(ಫೆ.13) ಆರಂಭಗೊಂಡಿದ್ದು ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು ರಾತ್ರಿ ಧ್ವಜಾರೋಹಣ ನಡೆಯಿತು. ನಂತರ ಬಲಿ ಹೊರಟು ಉತ್ಸವ, ಶ್ರೀ...
Ad Widget

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭ, ಧ್ವಜಾರೋಹಣ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಇಂದು (ಫೆ.13) ಆರಂಭಗೊಂಡಿದ್ದು, ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು ದೇವಸ್ಥಾನದಲ್ಲಿ ಬೆಳಿಗ್ಗೆ ಉಗ್ರಾಣ ಮುಹೂರ್ತ, ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ ನಡೆಯಿತು. ರಾತ್ರಿ ಧ್ವಜಾರೋಹಣದ ಮೂಲಕ...

ಕಾಂಚೋಡು ಜಾತ್ರೋತ್ಸವ: ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಗಂಧಪ್ರಸಾದ, ಬಟ್ಟಲು ಕಾಣಿಕೆ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವ ನಡೆಯುತ್ತಿದ್ದು, ಇಂದು (ಫೆ.13ರಂದು) ಬೆಳಗ್ಗೆ ದೇವಾಲಯದಲ್ಲಿ ಗಣಪತಿ ಹವನ, ಬೆಳಗಿನ ಪೂಜೆ ನೆರವೇರಿತು. ಬಳಿಕ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ ವಿತರಣೆ, ಬಟ್ಟಲು ಕಾಣಿಕೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ....

ಪ್ರಥಮ ವರ್ಷದ ಐವರ್ನಾಡು ಗೌಡ ಕುಟುಂಬ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿಡುಬೆ ಪೂಜಾರಿಮನೆ ತಂಡ ಪ್ರಥಮ

ಪ್ರಥಮ ವರ್ಷದ ಐವರ್ನಾಡು ಗೌಡ ಕುಟುಂಬ ಕ್ರಿಕೆಟ್ ಪಂದ್ಯಾವಳಿಯು ಇಂದು ನಡೆದಿದ್ದು, ಪಂದ್ಯಾವಳಿಯ ಪ್ರಥಮ ಸ್ಥಾನವನ್ನು ನಿಡುಬೆ ಪೂಜಾರಿಮನೆ ತಂಡವು ಪಡೆದುಕೊಂಡಿದೆ.

ಚಂದ್ರಶೇಖರ ಎರ್ದಡ್ಕ ನಿಧನ

ನಾಲ್ಕೂರು ಗ್ರಾಮದ ಎರ್ದಡ್ಕ ಮೋನಪ್ಪ ಗೌಡರ ಪುತ್ರ ಚಂದ್ರಶೇಖರ ಎಂಬುವವರು ಫೆ.10 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ 45 ವರ್ಷ ವಯಸ್ಸಾಗಿತ್ತು, ಮೃತರು ತಂದೆ, ತಾಯಿ, ಪತ್ನಿ, ಮಕ್ಕಳು, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

ಫೆ.11ರಿಂದ ಫೆ.14: ಕಾಂಚೋಡು ಜಾತ್ರೋತ್ಸವ, ವಿಜೃಂಭಣೆಯಿಂದ ನಡೆದ ಹಸಿರು ಹೊರೆಕಾಣಿಕೆ ಮೆರವಣಿಗೆ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಇಂದಿನಿಂದ ಆರಂಭಗೊಂಡಿದ್ದು, ಫೆ.14ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಜೆ ದೇವಾಲಯಕ್ಕೆ ತಂತ್ರಿಗಳವರ ಆಗಮನ ಕಾರ್ಯಕ್ರಮ ನಡೆಯಿತು. ನಂತರ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಶ್ರೀ ದೇವಳಕ್ಕೆ...

ಸುಳ್ಯ : ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಯುವಕರಿಬ್ಬರು ನೀರು ಪಾಲು

ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಈಶ್ವರಮಂಗಲದ ಯುವಕರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ದೊಡ್ಡೇರಿಯಲ್ಲಿ ನಡೆದಿದೆ. ದೊಡ್ಡೇರಿಯಲ್ಲಿ ಇರುವ ಗೆಳೆಯರೊಬ್ಬರ ಮನೆಗೆ ಬಂದಿದ್ದ ಯುವಕರು ಪಕ್ಕದ ಪಯಸ್ವಿನಿ ಹೊಳೆಗೆ ಈಜಾಡಲು ತೆರಳಿದ್ದು ಈ ವೇಳೆ ಇಬ್ಬರು ಯುವಕರು ನೀರುಪಾಲಾದರೆಂದು ತಿಳಿದು ಬಂದಿದೆ. ಒರ್ವನನ್ನು ರಕ್ಷಿಸಲು ಹೋಗಿ ಮತ್ತೋರ್ವ ನೀರು ಪಾಲಾದರೆಂದೂ ತಿಳಿದುಬಂದಿದೆ. ಮೃತಪಟ್ಟ ಯುವಕರು ಜಿತೇಶ್ ಹಾಗೂ...

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.13 ರಿಂದ ಫೆ.17 ರವರೆಗೆ ನಡೆಯಲಿದ್ದು, ಇಂದು (ಫೆ.09 ರಂದು) ಗೊನೆ ಮುಹೂರ್ತ ಕಾರ್ಯಕ್ರಮ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು. ಸಹಾಯಕ ಅರ್ಚಕ ಹೆಚ್.ವೆಂಕಟ್ರಮಣ ಭಟ್ ಸಹಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಸುರೇಶ್ ಕುಮಾರ್...

ಲಕ್ಷ್ಮೀ ಅಮ್ಮ ದೇವ – ‘ಪಾರೆಮನೆ’ ನಿಧನ

ದೇವಚಳ್ಳ ಗ್ರಾಮದ ದೇವ ಪಾರೆಮನೆ ದಿ.ಕಾಚಿಲ ವೆಂಕಪ್ಪಯ್ಯನವರ ಪತ್ನಿ ಲಕ್ಷ್ಮಿ ಅಮ್ಮನವರು ಫೆ. 6 ರಂದು ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಸೂರ್ಯನಾರಾಯಣ, ಶಂಕರ ನಾರಾಯಣ, ಸುಬ್ರಹ್ಮಣ್ಯ, ಪುತ್ರಿಯರಾದ ಸ್ವರ್ಣಲತಾ, ಸವಿತಾ ಕುಮಾರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.‌
Loading posts...

All posts loaded

No more posts

error: Content is protected !!