- Saturday
- June 27th, 2026
ಪ್ರಥಮ ವರ್ಷದ ಐವರ್ನಾಡು ಗೌಡ ಕುಟುಂಬ ಕ್ರಿಕೆಟ್ ಪಂದ್ಯಾವಳಿಯು ಇಂದು ನಡೆದಿದ್ದು, ಪಂದ್ಯಾವಳಿಯ ಪ್ರಥಮ ಸ್ಥಾನವನ್ನು ನಿಡುಬೆ ಪೂಜಾರಿಮನೆ ತಂಡವು ಪಡೆದುಕೊಂಡಿದೆ.
ನಾಲ್ಕೂರು ಗ್ರಾಮದ ಎರ್ದಡ್ಕ ಮೋನಪ್ಪ ಗೌಡರ ಪುತ್ರ ಚಂದ್ರಶೇಖರ ಎಂಬುವವರು ಫೆ.10 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ 45 ವರ್ಷ ವಯಸ್ಸಾಗಿತ್ತು, ಮೃತರು ತಂದೆ, ತಾಯಿ, ಪತ್ನಿ, ಮಕ್ಕಳು, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಇಂದಿನಿಂದ ಆರಂಭಗೊಂಡಿದ್ದು, ಫೆ.14ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಜೆ ದೇವಾಲಯಕ್ಕೆ ತಂತ್ರಿಗಳವರ ಆಗಮನ ಕಾರ್ಯಕ್ರಮ ನಡೆಯಿತು. ನಂತರ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಶ್ರೀ ದೇವಳಕ್ಕೆ...
ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಈಶ್ವರಮಂಗಲದ ಯುವಕರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ದೊಡ್ಡೇರಿಯಲ್ಲಿ ನಡೆದಿದೆ. ದೊಡ್ಡೇರಿಯಲ್ಲಿ ಇರುವ ಗೆಳೆಯರೊಬ್ಬರ ಮನೆಗೆ ಬಂದಿದ್ದ ಯುವಕರು ಪಕ್ಕದ ಪಯಸ್ವಿನಿ ಹೊಳೆಗೆ ಈಜಾಡಲು ತೆರಳಿದ್ದು ಈ ವೇಳೆ ಇಬ್ಬರು ಯುವಕರು ನೀರುಪಾಲಾದರೆಂದು ತಿಳಿದು ಬಂದಿದೆ. ಒರ್ವನನ್ನು ರಕ್ಷಿಸಲು ಹೋಗಿ ಮತ್ತೋರ್ವ ನೀರು ಪಾಲಾದರೆಂದೂ ತಿಳಿದುಬಂದಿದೆ. ಮೃತಪಟ್ಟ ಯುವಕರು ಜಿತೇಶ್ ಹಾಗೂ...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.13 ರಿಂದ ಫೆ.17 ರವರೆಗೆ ನಡೆಯಲಿದ್ದು, ಇಂದು (ಫೆ.09 ರಂದು) ಗೊನೆ ಮುಹೂರ್ತ ಕಾರ್ಯಕ್ರಮ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು. ಸಹಾಯಕ ಅರ್ಚಕ ಹೆಚ್.ವೆಂಕಟ್ರಮಣ ಭಟ್ ಸಹಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಸುರೇಶ್ ಕುಮಾರ್...
ದೇವಚಳ್ಳ ಗ್ರಾಮದ ದೇವ ಪಾರೆಮನೆ ದಿ.ಕಾಚಿಲ ವೆಂಕಪ್ಪಯ್ಯನವರ ಪತ್ನಿ ಲಕ್ಷ್ಮಿ ಅಮ್ಮನವರು ಫೆ. 6 ರಂದು ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಸೂರ್ಯನಾರಾಯಣ, ಶಂಕರ ನಾರಾಯಣ, ಸುಬ್ರಹ್ಮಣ್ಯ, ಪುತ್ರಿಯರಾದ ಸ್ವರ್ಣಲತಾ, ಸವಿತಾ ಕುಮಾರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಿಂದ ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.09ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಗೊನೆ ಕಡಿಯಲಾಗುವುದು. ಫೆ.13ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ ಗಂಟೆ 5.30ಕ್ಕೆ ತಂತ್ರಿಗಳ ಆಗಮನ, ಸ್ವಾಗತ,...
ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.13ರಿಂದ ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಫೆ.13ರಂದು ರಾತ್ರಿ 8.00ಕ್ಕೆ ಧ್ವಜಾರೋಹಣ ನಡೆಯಲಿದ್ದು ನಂತರ ಬಲಿ ಹೊರಟು ಉತ್ಸವ, ಶ್ರೀ...
ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚೊಕ್ಕಾಡಿ-ಮುಳ್ಕುಂಜ-ಮಾಳಿಗೆ ರಸ್ತೆಯ ಕಾಂಕ್ರೀಟಿಕರಣ ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಹಿಂದೆ ಫಲಾನುಭವಿಗಳು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್ ಎನ್ ಮನ್ಮಥ ರವರ ಅನುದಾನದ ಕಾಂಕ್ರೀಟಿಕರಣ ಹೊರತುಪಡಿಸಿ ಉಳಿದವು ಬೇಡಿಕೆಯಾಗಿಯೇ ಉಳಿದಿತ್ತು. ಈ ಬಾರಿ ಗ್ರಾಮ ಪಂಚಾಯತ್ ವತಿಯಿಂದ ರೂ.3 ಲಕ್ಷದಲ್ಲಿ ಕಾಂಕ್ರೀಟಿಕರಣಕ್ಕೆ ಚೊಕ್ಕಾಡಿ...
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ನೀಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ 'ಲಕ್ಕೀ ಡ್ರಾ' ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಮಾ.06ರಿಂದ ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್ ಡಿಲಕ್ಸ್ ಬೈಕ್ ಗೆಲ್ಲಬಹುದಾಗಿದೆ. ಈ ಯೋಜನೆಯಲ್ಲಿ...
Loading posts...
All posts loaded
No more posts
