ಅಡ್ಕಾರ್ ಸ್ಟೋರ್ ಮಾಲಕರಿಂದ ತಂದೆಯ ಪುಣ್ಯಸ್ಮರಣೆ ಪ್ರಯುಕ್ತ ಆಂಬುಲೆನ್ಸ್ ಸೇವಾ ಯೋಜನೆಗೆ ಸಹಾಯಧನ ವಿತರಣೆ

ನೆಲ್ಲೂರು ಕೆಮ್ರಾಜೆ ಗ್ರಾಮದ ಬೆಟ್ಟ ಎಂಬಲ್ಲಿ ಜಿನಸು ಅಂಗಡಿ ವ್ಯಾಪಾರ ನಡೆಸುತ್ತಿರುವ ಜಾಲ್ಸೂರು ಗ್ರಾಮದ ಸತೀಶ್ ಅಡ್ಕಾರ್ ರವರು ತನ್ನ ತಂದೆ ಅಡ್ಕಾರ್ ದಿ.ಕೃಷ್ಣಪ್ಪ ಗೌಡ ಅವರ ಪುಣ್ಯಸ್ಮರಣೆ ಪ್ರಯುಕ್ತ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಆಂಬುಲೆನ್ಸ್ ಸೇವಾ ಯೋಜನೆಗೆ ಸಹಾಯಧನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ...

ಕಲ್ಲಪಳ್ಳಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಜಗದೀಶ್ ಪಿ.ಬಿ ನಿಧನ

ಕಲ್ಲಪಳ್ಳಿ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಜಗದೀಶ್ ಪಿ.ಬಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅನಾರೋಗ್ಯದಿಂದ ಬಳಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಮೃತರು ತಾಯಿ,ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಎಲ್ಲರೊಂದಿಗೆ ಆತ್ಮೀಯರಾಗಿದ್ದ ಇವರು ನಾಟಿ ವೈದ್ಯರಾಗಿಯೂ...
Ad Widget

ಅಯ್ಯನಕಟ್ಟೆ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ ಜ.29ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಇಂದು (ಜ.14ರಂದು) ನಡೆಯಿತು. ಮೊದಲಾಗಿ ಮೂರುಕಲ್ಲಡ್ಕ ದೈವಸ್ಥಾನದಲ್ಲಿ ಸಂಕ್ರಮಣ ತಂಬಿಲ ಸೇವೆ ನಡೆಯಿತು. ತದನಂತರ ಆಮಂತ್ರಣ ಪತ್ರಿಕೆಯನ್ನು ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು(ರಿ.) ಮೂರುಕಲ್ಲಡ್ಕ ಹಾಗೂ ಅಯ್ಯನಕಟ್ಟೆ ಜಾತ್ರೋತ್ಸವ...

ಮೂರುಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ ಒಕ್ಕೂಟದಿಂದ ಶ್ರಮದಾನ

ಬಾಳಿಲ ಗ್ರಾಮದ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ 'ಅಯ್ಯನಕಟ್ಟೆ ಜಾತ್ರೆ'ಯು ಆರಂಭಗೊಳ್ಳಲಿದ್ದು, ಇದರ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ ಒಕ್ಕೂಟದ ಸದಸ್ಯರಿಂದ ಜ.12ರಂದು ಶ್ರಮದಾನ ನಡೆಯಿತು. ಶ್ರಮದಾನದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಜ.15 – ಜ.21 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ಜಾತ್ರಾ ಮಹೋತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರವರೆಗೆ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.10 ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಜ.15 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ,...

ಅಡುಗೆ ಸ್ಪರ್ಧೆ: ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ

ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಸುಳ್ಯ ತಾಲೂಕು ಮಟ್ಟದ ಅಡುಗೆ ಸಿಬ್ಬಂದಿಗಳ ಅಡುಗೆ ತಯಾರಿ ಸ್ಪರ್ಧೆ ಜ.08ರಂದು ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ನಡೆಯಿತು. ಅಡುಗೆ ತಯಾರಿ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಪ್ರಥಮ ಸ್ಥಾನ ಪಡೆದಿದೆ. ಅಡುಗೆ ಸಿಬ್ಬಂದಿಗಳಾದ ಗಿರಿಜಾ ಕೆ, ಜಾನಕಿ ಮತ್ತು ಸಾವಿತ್ರಿ ಇವರುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕಳಂಜ: 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಏಕಾಹ ಭಜನೆ ಕಾರ್ಯಕ್ರಮ

ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್(ರಿ.) ಕಳಂಜ ಇದರ ವತಿಯಿಂದ 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಏಕಾಹ ಭಜನೆ ಕಾರ್ಯಕ್ರಮ ಜ.05 ಹಾಗೂ ಜ.06 ರಂದು ಜರುಗಿತು. ಜ.05 ಸಂಜೆ ಸೂರ್ಯಾಸ್ತದಿಂದ ಆರಂಭವಾದ ಏಕಾಹ ಭಜನೆ ಕಾರ್ಯಕ್ರಮವು ಜ.06 ಸಂಜೆ ಸೂರ್ಯಾಸ್ತದವರೆಗೆ ಜರುಗಿದ್ದು, ಕಾರ್ಯಕ್ರಮದಲ್ಲಿ ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು. ಜ.06ರಂದು...

ಯೋಗಾಸನದಲ್ಲಿ ಮೋನಿಷ್ ತಂಟೆಪ್ಪಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಜಿಲ್ಲಾ ಪಂಚಾಯತ್ ಶಿವಮೊಗ್ಗ, ತಾಲೂಕು ಪಂಚಾಯತ್ ಶಿವಮೊಗ್ಗ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿಯೊಳಗಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷದ ವಯೋಮಿತಿಯೊಳಗಿನ ಬಾಲಕರ...

ಬಾಲಕಿ ಮೋಟ್ನೂರು ನಿಧನ

ಗುತ್ತಿಗಾರು ಗ್ರಾಮದ ವಳಲಂಬೆ ಮೋಟ್ನೂರು ದಿ. ವೀರಪ್ಪ ಗೌಡರ ಧರ್ಮಪತ್ನಿ ಬಾಲಕಿ ಮೋಟ್ನೂರು ಜ.2 ರಂದು ನಿಧನರಾದರು. ಮೃತರು ಪುತ್ರಿಯರಾದ ಮೀನಾಕ್ಷಿ ಕಡ್ಲಾರು, ಜಯ, ಇಂದಿರಾ , ರೇವತಿ, ಪುತ್ರ ಶಿವಪ್ರಸಾದ್, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್ ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನ ಬಯಲಾಟ ನಾಗ ಸಂಜೀವನ

ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿಯಲ್ಲಿ ಜ.01ರಂದು ತಂಟೆಪ್ಪಾಡಿ ಶಾಲೆಯಲ್ಲಿ 12 ವರ್ಷ ಸೇವೆ ಸಲ್ಲಿಸಿರುವ ಪ್ರಸಿದ್ಧ ಚೆಂಡೆ ವಾದಕರಾಗಿದ್ದ ಬಾಬು ಮಾಸ್ಟರ್ ರವರನ್ನು ನೆನಪಿಸುವ ಸಲುವಾಗಿ "ಬಾಬು ಮಾಸ್ಟರ್ ನೆನಪು" ಕಾರ್ಯಕ್ರಮ ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್...
Loading posts...

All posts loaded

No more posts

error: Content is protected !!