ಛಲವಿದ್ದರೆ ಮನದಲ್ಲಿ, ಗೆಲ್ಲಬಹುದು ಬದುಕಿನಲ್ಲಿ…

ಬದುಕು ಕಲಿಸುತ್ತಿದೆ ನೂರಾರು ಪಾಠ,ಮನವು ಹೇಳುತ್ತಿದೆ ಇದು ನಿನ್ನದೇ ಓಟ,ಸೋಲು ಗೆಲುವುಗಳೇ ಜೀವನ ಪಾಠ,ಕಷ್ಟ ನಷ್ಟಗಳೇ ಬದುಕಿನ ಪರೀಕ್ಷೆ…ಕನಸೆಂಬುವುದು ಗೆಲುವಲ್ಲ,ಕನಸಿನೊಳಗಡೆ ಗೆಲುವಡಗಿಹುದು,ಹುಡುಕಿ ಸಾಗಿದಾಗಲೇ ಕೈಗೆ ಸಿಗುವುದು, ಗೆಲುವು ಕೈಗೆ ಸಿಗುವುದು…ಇಲ್ಲಿ ನೋವು ಬದುಕ ಅಂತ್ಯವಲ್ಲ,ಕಷ್ಟ ಕನಸ ಮರೆಸೋದಿಲ್ಲ,ಸೋಲೆಂಬುವುದು ಶಾಶ್ವತವಲ್ಲ,ಸೋಲನ್ನು ಸೋಲಿಸುವ ಕ್ಷಣವು ಬರುವುದು,ಬದುಕಿನಲ್ಲಿ ಅವಮಾನಕ್ಕುತ್ತರಿಸುವ ದಿನವು ಬರುವುದು ಛಲವಿದ್ದರೆ ಮನದಲ್ಲಿ, ಗೆಲ್ಲುವ ಛಲವಿದ್ದರೆ ಮನದಲ್ಲಿ… ✍️ಉಲ್ಲಾಸ್...

ಸುಬ್ರಹ್ಮಣ್ಯ : ಭಕ್ತಿ ಸಂಭ್ರಮದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ

ಅಖಿಲ ಭಾರತ ಶ್ರೀ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ ಮತ್ತು ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ಹದಿನಾಲ್ಕನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಭಕ್ತಿ ಸಂಭ್ರಮದಿಂದ ಉಮೇಶ್ ಗುರುಸ್ವಾಮಿಗಳ ನೇತೃತ್ವದಲ್ಲಿ ಶನಿವಾರ ರಾತ್ರಿ ಜರುಗಿತು.ಈ ಪ್ರಯುಕ್ತ ಬೆಳಗ್ಗೆ ಶ್ರೀ ಗಣಪತಿ ಹೋಮ ನಡೆಯಿತು.ಮದ್ಯಾಹ್ನ...
Ad Widget

ಸಂಪಾಜೆ : ಕಬಡ್ಡಿ ಪಂದ್ಯಾಟ – ಸತ್ಯ ದೇವತೆ ಪೆರಾಜೆ ತಂಡಗಳಿಗೆ ಒಲಿದ ಪ್ರಥಮ ಹಾಗೂ ದ್ವಿತೀಯ ಬಹುಮಾನ

ಪಯಸ್ವಿನಿ ಪ್ರೆಂಡ್ಸ್ ಕ್ಲಬ್ ಸಂಪಾಜೆ ಕೊಡಗು ಇದರ ವತಿಯಿಂದ ನಡೆದ 18 ವರ್ಷಗಳಿಗೆ ಒಳಪಟ್ಟು ಯುವಕರ ಕಬಡ್ಡಿ ಪಂದ್ಯಾವಳಿಯು ಜ.1 ರಂದು ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದ ಗದ್ದೆಯಲ್ಲಿ ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ ನೆರವೇರಿಸಿದರು.ಈ ಶುಭ ಸಂದರ್ಭದಲ್ಲಿ ತೀರ್ಥಪ್ರಸಾದ್ ದುಗ್ಗಳ ಅಧ್ಯಕ್ಷರು, ಪಯಸ್ವಿನಿ...

ಬೆಳ್ಳಾರೆ ಜಿ.ಪಂ.ಕ್ಷೇತ್ರದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರರವರಿಂದ ಚಾಲನೆ

ಸುಳ್ಯ ತಾಲೂಕಿನ ಪೆರುವಾಜೆ, ಕೊಡಿಯಾಲ, ಮುರುಳ್ಯ, ಬಾಳಿಲ ಹಾಗೂ ಬೆಳ್ಳಾರೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರೂ.3.15 ಕೋಟಿ ಮೊತ್ತದ ವಿವಿಧ ರಸ್ತೆ ಕಾಮಗಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಪೆರುವಾಜೆ ಗ್ರಾಮದ ಮಠತ್ತಡ್ಕ ಎಸ್.ಸಿ.ಕಾಲನಿ ರಸ್ತೆ ಅಭಿವೃದ್ಧಿಗೆ 10 ಲಕ್ಷ, ಪೆರುವಾಜೆ ಗ್ರಾಮದ ಕೊಲ್ಯ ಸಂಪರ್ಕ ರಸ್ತೆ...

ಮರ್ಕಂಜ: ನಿವೃತ್ತ ಶಿಕ್ಷಕ ಅಚ್ಚುತ.ಪಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಸರಕಾರಿ ಪ್ರೌಢಶಾಲೆ ಮರ್ಕಂಜ ಇಲ್ಲಿ ಸುಮಾರು 27 ವರ್ಷಗಳಿಂದ ಸೇವೆ ಸಲ್ಲಿಸಿ ಡಿ.31ರಂದು ನಿವೃತ್ತರಾದ ಅಚ್ಚುತ ಪಿ. ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಮರ್ಕಂಜ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಆನಂದ ಬಾಣೂರು ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಚಿಪಿಲಿ, ಗ್ರಾಮ ಪಂಚಾಯತ್ ಅಧ್ಯಕ್ಷೆ...

ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವ

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಿತು. ಬೆಳಿಗ್ಗೆ ಗಣಹೋಮ ನಂತರ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ಬಳಿಕ ಅನ್ನಸಂತರ್ಪಣೆ ನಡೆಯಿತು. ಆ ಬಳಿಕ ಶ್ರೀ ಕೊರಗಜ್ಜ ದೈವದ ನೇಮೋತ್ಸವ...

ಡಿ.31: ಮರ್ಕಂಜ ಸರಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಅಚ್ಯುತ.ಪಿ ಸೇವಾ ನಿವೃತ್ತಿ

ಮರ್ಕಂಜ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಅಚ್ಯುತ.ಪಿ ರವರು ಡಿ.31ರಂದು ತಮ್ಮ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.ಶ್ರೀ ಅಚ್ಯುತ.ಪಿ ರವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರ, ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢ ಶಾಲೆ ಗುತ್ತಿಗಾರಿನಲ್ಲಿ ಪಡೆದು, ಪಿ. ಯು. ಶಿಕ್ಷಣವನ್ನು ಎಸ್.ಎಸ್ ಪಿ.ಯು. ಕಾಲೇಜು ಸುಬ್ರಹ್ಮಣ್ಯದಲ್ಲಿ ಪೂರೈಸಿರುತ್ತಾರೆ. ಧರ್ಮಸ್ಥಳ ಮಂಜುನಾಥೇಶ್ವರ...

ನಿನಾದ ಸಾಂಸ್ಕೃತಿಕ ಕೇಂದ್ರದಿಂದ ಕಲಾವಿದರ ತಂಡ ರಚನೆಗಾಗಿ ಆಸಕ್ತ ಉದಯೋನ್ಮುಖ ಕಲಾವಿದರಿಗೆ ಆಹ್ವಾನ

ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಕಳಂಜ ಕಳೆದ ನಾಲ್ಕು ವರ್ಷಗಳಲ್ಲಿ ವಿವಿಧ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆಯೋಜಿಸುತ್ತಿದ್ದು, ಇದೀಗ ನಿನಾದ ತನ್ನದೇ ಆದ ಕಲಾವಿದರ ತಂಡ ರಚನೆಗಾಗಿ ಸುಳ್ಯ, ಪುತ್ತೂರು ಹಾಗೂ ಕಡಬ ಪರಿಸರದ ಉದಯೋನ್ಮುಖ ಹಾಗೂ ನುರಿತ ಕಲಾವಿದರನ್ನು ಒಗ್ಗೂಡಿಸಿ ವಿವಿಧ ತಂಡಗಳನ್ನು ರಚಿಸಿ ಜಿಲ್ಲೆ, ರಾಜ್ಯ ಹಾಗೂ...

ಜ.01: ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್ ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನ ಬಯಲಾಟ ನಾಗ ಸಂಜೀವನ

ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿಯಲ್ಲಿ ಜ.01ರಂದು ತಂಟೆಪ್ಪಾಡಿ ಶಾಲೆಯಲ್ಲಿ 12 ವರ್ಷ ಸೇವೆ ಸಲ್ಲಿಸಿರುವ ಪ್ರಸಿದ್ಧ ಚೆಂಡೆ ವಾದಕರಾಗಿದ್ದ ಬಾಬು ಮಾಸ್ಟರ್ ರವರನ್ನು ನೆನಪಿಸುವ ಸಲುವಾಗಿ "ಬಾಬು ಮಾಸ್ಟರ್ ನೆನಪು" ಕಾರ್ಯಕ್ರಮ ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್...

ಕೆ.ವಿ.ಜಿ.ಡೆಂಟಲ್ ಕಾಲೇಜಿನಲ್ಲಿ ರ‌್ಯಾಗಿಂಗ್ ನಡೆದಿಲ್ಲ – ಪ್ರಾಂಶುಪಾಲರ ಸ್ಪಷ್ಟನೆ

ಕೆ.ವಿ.ಜಿ. ದಂತಮಹಾವಿದ್ಯಾಲಯದ ವಿದ್ಯಾರ್ಥಿಗಳ ಮಧ್ಯೆ ಡಿ.29 ರಂದು ನಡೆದ ಕಲಹದ ಕುರಿತು ಪ್ರಾಂಶುಪಾಲರು ಸ್ಪಷ್ಟಿಕರಣ ನೀಡಿದ್ದಾರೆ. ರ‌್ಯಾಗಿಂಗ್ ನಡೆದಿದೆ ಎಂದು ಪ್ರಚಾರ ಪಡೆದಿರುವ ವಿಚಾರಗಳು ಸತ್ಯಕ್ಕೆ ದೂರವಾಗಿದೆ. ಡಾ| ಪಲ್ಲವಿ ಎನ್.ಪಿ. ನಮ್ಮ ಸಂಸ್ಥೆಯ 3ನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ಮೂಲತ: ಬೆಂಗಳೂರಿನ ವೈಟ್ ಫೀಲ್ಡ್ ನವರಾಗಿರುತ್ತಾರೆ. ಡಾ. ಪಲ್ಲವಿಯವರು ನಮ್ಮದೇ, ಕೆ.ವಿ.ಜಿ. ದಂತ ಮಹಾವಿದ್ಯಾಲಯದ...
Loading posts...

All posts loaded

No more posts

error: Content is protected !!