ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಭೇಟಿ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಸ್ಮೃತಿ ಇರಾನಿ ಅವರು ಡಿ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.ಬೆಳಿಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು.ಕಿರುಷಷ್ಠಿ ಸಭಾಭವನದಲ್ಲಿ ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಆನಂತರ...

ಶುಭವಿವಾಹ: ಚಿ|ರಾ| ಯತೀಶ್.ಕೆ – ಚಿ|ಸೌ| ದೀಕ್ಷಿತಾ

ಬಾಳಿಲ ಗ್ರಾಮದ ಕುಕ್ಕುತ್ತಡಿ ದಿ|ಜತ್ತಪ್ಪ ಗೌಡರ ಪುತ್ರ ಚಿ|ರಾ| ಯತೀಶ್.ಕೆ ರವರ ವಿವಾಹವು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಪುಳಿತ್ತಡಿ ಪುಟ್ಟಣ್ಣ ಗೌಡರ ಪುತ್ರಿ ಚಿ|ಸೌ| ದೀಕ್ಷಿತಾ ರವರೊಂದಿಗೆ ಡಿ.25ರಂದು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಿತು.
Ad Widget

ಡಿ.30: ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವ

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಲಿದೆ. ಬೆಳಿಗ್ಗೆ ಗಂಟೆ 8.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 9.00ಕ್ಕೆ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ರಾತ್ರಿ ಗಂಟೆ 8.00ಕ್ಕೆ ಅನ್ನಸಂತರ್ಪಣೆ...

ಸುಳ್ಯ: ಜಯನಗರ ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ

ಸ.ಉ.ಹಿ.ಪ್ರಾಥಮಿಕ ಶಾಲೆ ಜಯನಗರ ಇಲ್ಲಿ ಡಿ.17ನೇ ಶನಿವಾರದಂದು ಶಾಲಾ ವಾರ್ಷಿಕೋತ್ಸವನ್ನು ನಡೆಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಮೀನುಗಾರಿಕಾ ನಿಗಮದ ಮಾನ್ಯ ಅಧ್ಯಕ್ಷರಾದ ಶ್ರೀ ಎ.ವಿ ತೀರ್ಥರಾಮ ಇವರು ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಕಂದಡ್ಕ ಇವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಶ್ರೀಮತಿ ಶೀತಲ್ ಯು. ಕೆ K. E....

ಎಡಮಂಗಲ ವಿ.ಹಿಂ.ಪ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಮೇಲೆ ಕೇಸು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ

ಭಜನೆ, ಭಜಕರ ವಿರುದ್ಧ ಅಶ್ಲೀಲವಾಗಿ ಬೇಕಾಬಿಟ್ಟಿ ಬರಹ ಬರೆದು ಹಿಂದೂ ಸಮಾಜದ ಕೆಂಗಣ್ಣಿಗೆ ಗುರಿಯಾದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಮೇಲೆ ಕೇಸು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಎಡಮಂಗಲ ವಿ.ಹಿಂ.ಪ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಎಡಮಂಗಲ ವಿ.ಹಿಂ.ಪ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಇದರ ಗೌರವಾಧ್ಯಕ್ಷರಾದ...

ನಿಂತಿಕಲ್ಲು: ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯ “ಲಕ್ಕೀ ಡ್ರಾ” ಯೋಜನೆಯ ಬಂಪರ್ ಬಹುಮಾನ ಹಸ್ತಾಂತರ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯ ವಿನೂತನ "ಲಕ್ಕೀ ಡ್ರಾ" ಯೋಜನೆಯ ಬಂಪರ್ ಬಹುಮಾನದ ಡ್ರಾ ಇತ್ತೀಚೆಗೆ ನಡೆಯಿತು. ಬಂಪರ್ ಬಹುಮಾನವಾದ ಟಿ.ವಿ.ಎಸ್ ಜ್ಯುಪಿಟರ್ ಸ್ಕೂಟರ್ ಅದೃಷ್ಟಶಾಲಿ ವಿಜೇತರಾದ ನವೀನ್ ಮುಂಡಾಜೆ(ಹರಿಹರ) ಇವರಿಗೆ ಲಭಿಸಿದ್ದು, ವಿಜೇತರಿಗೆ ಸಂಸ್ಥೆಯ ಮಾಲಕರಾದ ಪ್ರಕಾಶ್ ಮಾಣಿಬೈಲು ಬಹುಮಾನವನ್ನು ಹಸ್ತಾಂತರಿಸಿದರು.

ದೈವದ ಕಲದಲ್ಲಿ ಸಂಧಿ ಪಾಡ್ದನದ ಪ್ರಾಮುಖ್ಯತೆ – ಭಾಸ್ಕರ ಗೌಡ ಜೋಗಿಬೆಟ್ಟು

ಮಂತ್ರ ಶ್ಲೋಕವಿಲ್ಲದೆ ಪೂಜಾ ವಿಧಾನಗಳು ಅಪೂರ್ಣವಾಗುವುದಾದರೆ ಸಂಧಿ ಪಾಡ್ದನವಿಲ್ಲದೆ ನೇಮ ಕೋಲಗಳು ಅಪೂರ್ಣವಾಗುವುದಿಲ್ಲವೇ ?? ಹೀಗೊಂದು ಪ್ರಶ್ನೆ ..... ತುಳುನಾಡಿನಲ್ಲಿ ದೈವರಾಧನೆಗೆ ಅತ್ಯಂತ ಪೂಜ್ಯನೀಯ ಸ್ಥಾನಮಾನ ಇದೆ. ದೈವರಾಧನೆಯು ತುಳುನಾಡಿನಲ್ಲಿ ಪ್ರತಿಯೊಬ್ಬರು ಆರಾಧಿಸಿಕೊಂಡು ಬರುತ್ತಿರುವ ಶಕ್ತಿಗಳಾಗಿದ್ದು , ತನ್ನದೆ ಆದ ಕಟ್ಟುಪಾಡುಗಳನ್ನು ಹೊಂದಿದೆ. ದೇವರ ವೈದಿಕ ಪೂಜಾ ವಿಧಾನಗಳಲ್ಲಿ ಮಂತ್ರ ಶ್ಲೋಕಗಳು ಎಷ್ಟು ಮುಖ್ಯವೊ ,ದೈವದ...

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.15ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಆರಂಭಗೊಂಡಿದೆ.ಜಾತ್ರೋತ್ಸವದ ಅಂಗವಾಗಿ ಡಿ.15ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಆಚಾರ್ಯವರಣ, ಸ್ವಸ್ತಿ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗ ಪ್ರಾರಂಭ, ಹಸಿರು ಹೊರೆ ಕಾಣಿಕೆ ಸಮರ್ಪಣೆ, ಸುಹಾಸಿನಿ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ ,ಪ್ರಸಾದ ವಿತರಣೆ ನಡೆದು,...

ಆರೋಗ್ಯಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಿ – ಸಚಿವ ಅಂಗಾರ – ದುಗ್ಗಲಡ್ಕದಲ್ಲಿ ನಮ್ಮ ಕ್ಲಿನಿಕ್ ಸೇವೆ ಆರಂಭ

ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಪ್ರಾರಂಭಿಸುತ್ತಿರುವ “ನಮ್ಮ ಕ್ಲಿನಿಕ್” ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕದಲ್ಲಿ ಡಿ.14ರಂದು ಕಾರ್ಯಾರಂಭಗೊಂಡಿತು. ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರವನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸರಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ...

ಡಿ.17 ರಂದು ಪಂಬೆತ್ತಾಡಿಯಲ್ಲಿ ಗ್ರಾಮ ವಾಸ್ತವ್ಯ – ಪೂರ್ವಭಾವಿ ಸಭೆ

ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಬೆತ್ತಾಡಿ ಗ್ರಾಮದಲ್ಲಿ ಡಿ.17 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಇಂದು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಸುಳ್ಯ, ಬಿ-ಗ್ರೇಡ್ ತಹಶೀಲ್ದಾರರು ತಾಲೂಕು ಕಛೇರಿ ಸುಳ್ಯ, ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಸಿ.ಡಿ.ಪಿ.ಯು ಸುಳ್ಯ ತಾಲೂಕು,...
Loading posts...

All posts loaded

No more posts

error: Content is protected !!