- Thursday
- May 7th, 2026
ಸುಳ್ಯ ತಾಲೂಕು ೨೬ನೇ ಸಾಹಿತ್ಯ ಸಮ್ಮೇಳನ ಡಿ.10 ರಂದು ನಡೆಯಲಿದ್ದು, ಸುಳ್ಯ ತಾಲೂಕು ೨೬ನೇ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿರುವ ಉಮ್ಮರ್ ಬೀಜದಕಟ್ಟೆ ಕಾರ್ಯಕ್ರಮದ ವಿವರ ನೀಡಿದರು. ಗ್ರಾಮೀಣ ಭಾಗದಲ್ಲಿ ಸಾಹಿತ್ಯ ಸಮ್ಮೇಳನದ ಮಹತ್ವ ಏನು ಅನ್ನುವುದರ ಬಗ್ಗೆ ವಿವರಿಸಿದರು. ಸಂಪಾಜೆ, ಗೂನಡ್ಕ, ಸುಳ್ಯ ತಾಲೂಕಿನ ಹಲವು ಭಾಗಗಳು ಸರಣಿ ಭೂಕಂಪದಿಂದ ಜನ ಭಯಭೀತರಾಗಿದ್ದಾರೆ....
ಪತ್ರಕರ್ತರು ನಿಖರ, ನೇರ ವರದಿ ಮಾಡುವ ಮೂಲಕ ಜನರ ವಿಶ್ವಾಸ ಗಳಿಸುವ ಕೆಲಸವಾಗಬೇಕಿದೆ. ನಮ್ಮ ಸ್ಪಷ್ಟತೆ, ಉದ್ದೇಶದಲ್ಲಿ ಯಾವುದೇ ರಾಜಿಮಾಡಿಮಾಡದೇ ನಮ್ಮ ಕೆಲಸದ ಬಗ್ಗೆ ಪ್ರಯತ್ನಿಸಿದಾಗ ಯಶಸ್ಸು ಸಾಧ್ಯ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಬುಧವಾರ ಸುಳ್ಯದ ಅಂಬಟಡ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಳ್ಯ ಪ್ರೆಸ್ ಕ್ಲಬ್ ಸುಳ್ಯನ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಿನ್ನದ ಪದಕ ಪುರಸ್ಕೃತ ಚಾಲಕ ಸೂರಪ್ಪ ಗೌಡ ಆಲೇಕಿ ನ.30ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಸುದೀರ್ಘ 28 ವರ್ಷಗಳ ಕಾಲ ಅಪಘಾತ ರಹಿತ ಸೇವೆ ಸಲ್ಲಿಸಿದ ಇವರಿಗೆ 2006ರಲ್ಲಿ ಕರ್ನಾಟಕ ಸರಕಾರ ಬೆಳ್ಳಿಯ ಪದಕ ಹಾಗೂ ನಗದು ಬಹುಮಾನ ನೀಡಿದೆ. 2015ರಲ್ಲಿ ಇವರ ಅತ್ಯುತ್ತಮ ಚಾಲನೆಗೆ ಜೆಸಿಐ ಪುತ್ತೂರು...
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತಿಯಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರಿಗೆ ನೀರಿನ ಗುಣಮಟ್ಟದ ಪರೀಕ್ಷಣಾ ವಿಧಾನದ ಬಗ್ಗೆ ನ.28ರಂದು ತರಬೇತಿ ನೀಡಲಾಯಿತು. ಪುತ್ತೂರು ಉಪವಿಭಾಗದ ನೀರು ಪರೀಕ್ಷಾ ಪ್ರಯೋಗಾಲಯದ ಸಿಬ್ಬಂದಿ ಜಗದೀಶ್.ಎಂ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಪ್ರೆಸ್ ಕ್ಲಬ್ ಸುಳ್ಯದ ವತಿಯಿಂದ ಸುಳ್ಯದ ಅಂಬಟಡ್ಕದಲ್ಲಿ ನಿರ್ಮಾಣಗೊಂಡ 'ಪತ್ರಕರ್ತರ ಸಮುದಾಯ ಭವನ'ದ ನೆಲ ಅಂತಸ್ತಿನ ಉದ್ಘಾಟನೆ ನ.30 ರಂದು ನಡೆಯಲಿದೆ ಎಂದು ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಹೇಳಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ಪ್ರೆಸ್ ಕ್ಲಬ್ಗೆ ತಾಲೂಕು ಪಂಚಾಯತ್ ನೀಡಿದ ನಿವೇಶನದಲ್ಲಿ ನೂತನ ಕಟ್ಟಡ ನಿರ್ಮಾಣಗೊಂಡಿದೆ....
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23 ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು, ಇದಕ್ಕೆ ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್.ಅಂಗಾರ ರವರು ನವೆಂಬರ್ 14 ರಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು"ಸರಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆಯನ್ನು ನೀಡುತ್ತಿದ್ದು...
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ ಮಂಗಳೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ, ಐಟಿಡಿಪಿ ದ.ಕ. ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬುಡಕಟ್ಟು ಗೌರವ ದಿನ, ಸ್ವಾತಂತ್ರ್ಯದ ಅಮೃತ ಮಹೋತ್ಸವ, ಪ್ರಧಾನ ಮಂತ್ರಿ ವಿಷನ್ ಫಾರ್ ಇಂಡಿಯಾ 2047 ಕುರಿತು ವಿಶೇಷ ಕಾರ್ಯಕ್ರಮ ಹಾಗೂ ಛಾಯಾಚಿತ್ರ ಪ್ರದರ್ಶನದ ಉದ್ಘಾಟನಾ ಸಮಾರಂಭ...
ಪೆರಾಜೆಯ ಕುಂಡಾಡು ಸ.ಕಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಕ್ರೀಡಾಕೂಟ ಸಮಾರಂಭ ನ.14 ರಂದು ನಡೆಯಿತು. ಶಾಲಾಭಿವೃದ್ಧಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ವಿದ್ಯಾರ್ಥಿಗಳು ಮತ್ತು ಪೋಷಕರು ಸೇರಿದಂತೆ ಸಾರ್ವಜನಿಕರ ಉಪಸ್ಥಿತಿಯಲ್ಲಿ ಕ್ರೀಡಾಕೂಟದ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಸ್ಥಳ ದಾನಿಗಳಾದ ಶ್ರೀಮತಿ ಕುಸುಮಾವತಿ ಸುಬ್ಬಯ್ಯ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಪೆರಾಜೆ ಗ್ರಾ.ಪಂ....
ಸುಳ್ಯದ ಕಲ್ಲುಗುಂಡಿ ಸಮೀಪ ಕಡಪಾಲ ಸೇತುವೆ ಬಳಿ ಲಾರಿ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಮೃತಪಟ್ಟು, ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.ಗಾಯಾಳುಗಳನ್ನು ಅಂಬ್ಯುಲೆನ್ಸ್ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ...
ಕಾರ್ಮೆಲ್ ಬಾಲಕಿಯರ ಪ್ರೌಢಶಾಲೆ ಮೊಡಂಕಾಪು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್. ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ಇವರು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ .ಇವರಿಗೆ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ...
Loading posts...
All posts loaded
No more posts
