- Thursday
- May 7th, 2026
ದಿನಾಂಕ 8 ಮತ್ತು 9 ನವೆಂಬರ್ 2022 ರಂದು ಕೆ.ಪಿ.ಎಸ್.ಬೆಳ್ಳಾರೆ ಇಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಐವರ್ನಾಡು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇದರೊಂದಿಗೆ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ...
ಪಂಜಿಗಾರು ಬಳಿಯಿರುವ ಮಣಿಮಜಲು ಕಾಲುಸೇತುವೆಯ ಎರಡೂ ಬದಿಗಳಲ್ಲಿ ಅಳವಡಿಸಿರುವ ಕಬ್ಬಿಣದ ರಕ್ಷಣಾ ಬೇಲಿ ಮುರಿದುಹೋಗಿದ್ದು ಅಪಾಯದ ಸ್ಥಿತಿಯಲ್ಲಿದೆ. ಕಾಲುಸೇತುವೆ ಅತ್ಯಂತ ಕಿರಿದಾಗಿದ್ದು, ಸಾರ್ವಜನಿಕರು ಸಂಚರಿಸುವಾಗ ಅಪಾಯ ಎದುರಾಗುವ ಸಂಭವವಿದೆ. ಕಳಂಜ-ಮಣಿಮಜಲು ಭಾಗದ ಜನರಿಗೆ ಬೆಳ್ಳಾರೆ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಇರುವ ಪ್ರಮುಖ ಕಾಲುಸೇತುವೆ ಇದಾಗಿದ್ದು ದಿನನಿತ್ಯ ಅನೇಕ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ಈ ಕಾಲುಸೇತುವೆಯನ್ನು...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಪೋಷಕರಾದ ಜಯರಾಮ ಚಾರ್ಮತ ಇವರು ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಂದ ಪ್ರಾರ್ಥನೆ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಕರು ಎಲ್ಲರಿಗೂ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶುಭಾಶಯಗಳನ್ನು ಸಲ್ಲಿಸಿ,...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಥಮ ದರ್ಜೆ ಗುಮಾಸ್ತರಾಗಿರುವ ತಿಮ್ಮಪ್ಪ ಗೌಡ ಕುಕ್ಕುತ್ತಡಿಯವರು ಇಂದು ನಿವೃತ್ತಿ ಹೊಂದಲಿದ್ದಾರೆ. ಇವರು ಸಂಘದ ಪ್ರಧಾನ ಕಚೇರಿ ಕೋಟೆಮುಂಡುಗಾರು ಮತ್ತು ಬಾಳಿಲ ಶಾಖೆಯಲ್ಲಿ ಸುಮಾರು 40 ವರ್ಷಗಳಷ್ಟು ಕಾಲ ಸೇವೆ ಸಲ್ಲಿಸಿರುತ್ತಾರೆ.
ಹರಿಹರ ಪಲ್ಲತ್ತಡ್ಕ ಪ್ರೌಢಶಾಲೆಯಲ್ಲಿ ಅ.28 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಮಾತಾಡ್ ಮಾತಾಡು ಕನ್ನಡ, 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
ಸುಳ್ಯ ತಾಲೂಕು ಲೈಟಿಂಗ್ಸ್, ಸೌಂಡ್ಸ್ ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ನವೆಂಬರ್ 12 ಶನಿವಾರದಂದು ಹೊನಲು ಬೆಳಕಿನ ಆಹ್ವಾನಿತ 6 ತಂಡಗಳ ಲೀಗ್ ಮಾದರಿಯ ಕಬಡ್ಡಿ ಪಂದ್ಯಾಟ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರ ಸಮ್ಮುಖದಲ್ಲಿ ಆಮಂತ್ರಣ...
ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿ ಅಕ್ಟೋಬರ್ 29 ರಂದು ನಡೆದ ಪಂಜ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಎಣ್ಮೂರು 164 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. 17 ವರ್ಷ ಕೆಳಗಿನ ವಯೋಮಾನದ ಬಾಲಕಿಯರ ವಿಭಾಗದಲ್ಲಿ 13 ಪ್ರಥಮ, 8 ದ್ವಿತೀಯ ಹಾಗೂ 2 ತೃತೀಯ ಮತ್ತು ಬಾಲಕರ...
ಸುಳ್ಯ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಗುಂಪು ಸ್ಪರ್ಧೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳಾದ 10ನೇ ತರಗತಿಯ ಯಶ್ವಿತ್ ಎಸ್. ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ವಿಜ್ಞಾನ ಶಿಕ್ಷಕಿ ಸಂಧ್ಯಾಕುಮಾರಿಯವರು ಮಾರ್ಗದರ್ಶನ ನೀಡಿರುತ್ತಾರೆ.
ತಾಲೂಕು ಮಟ್ಟದ ಯುವ ಸಂಸತ್ತು ಸ್ಪರ್ಧಾ ಕಾರ್ಯಕ್ರಮ: ಎಣ್ಮೂರು ಪ್ರೌಢಶಾಲೆಯ 5 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸರಕಾರಿ ಪ್ರೌಢಶಾಲೆ ಗುತ್ತಿಗಾರು ಇಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯುವ ಸಂಸತ್ತು ಸ್ಪರ್ಧಾ ಕಾರ್ಯಕ್ರಮ ಅ.28ರಂದು ನಡೆಯಿತು. ತಾಲೂಕಿನ ವಿವಿಧ ಶಾಲೆಗಳ 7 ತಂಡಗಳು ಭಾಗವಹಿಸಿದ್ದವು. ಬಾಲ್ಯದಿಂದಲೇ ವಿದ್ಯಾರ್ಥಿಗಳಲ್ಲಿ ಸಂವಿಧಾನದ ಬಗ್ಗೆ ಗೌರವ ಭಾವನೆ ಮೂಡಿಸುವ ಮತ್ತು ಉತ್ತಮ ಸಂಸದೀಯ ಪಟುಗಳನ್ನಾಗಿ ಮಾಡುವ ಬಗ್ಗೆ ಅರಿವು ಮೂಡಿಸಲಾಯಿತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಣ್ಮೂರು ಪ್ರೌಢಶಾಲೆಯ ಫಾತಿಮತ್ ಅಮಿರಾ,...
ಕೊಲ್ಲಮೊಗ್ರು ಗ್ರಾಮ ಪಂಚಾಯತು ಸಭಾಂಗಣದಲ್ಲಿ, ಕೊಲ್ಲಮೊಗ್ರು ಗ್ರಾಮ ಪಂಚಾಯತು ವ್ಯಾಪ್ತಿಯ ಕೊಲ್ಲಮೊಗ್ರು ಗ್ರಾಮದಲ್ಲಿ ಪ್ರಾರಂಭವಾಗಿರುವ ಮಧ್ಯ ಮಾರಾಟ ಕೇಂದ್ರದ ಬಗ್ಗೆ, ಚರ್ಚಿಸಲು ವಿಶೇಷ ಸಭೆಯನ್ನು ಅ.25 ರಂದು ಗ್ರಾಮ ಪಂಚಾಯತು ಅಧ್ಯಕ್ಷರಾದ ಉದಯ ಕೊಪ್ಪಡ್ಕ ನೇತೃತ್ವದಲ್ಲಿ ನಡೆಸಲಾಯಿತು. ಗ್ರಾಮ ಪಂಚಾಯತು ಸದರಿ ಮದ್ಯ ಮಾರಾಟ ಕೇಂದ್ರ ನಡೆಸಲು ಯಾವುದೇ ಪರವಾನಿಗೆ ಅಥವಾ ನಿರಾಕ್ಷೇಪಣಾ ಪತ್ರ ನೀಡಿಲ್ಲ...
Loading posts...
All posts loaded
No more posts
