- Friday
- May 8th, 2026
ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಪ್ರಣಮ್ಯ ಕಾರ್ ಕೇರ್ ಸಂಸ್ಥೆಯಲ್ಲಿ ಆಯುಧಪೂಜೆ ಕಾರ್ಯಕ್ರಮ ಅ.04ರಂದು ನಡೆಯಿತು. ಪ್ರಶಾಂತ್ ಕಿಲಂಗೋಡಿ ಪೂಜಾ ವಿಧಿವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಣಮ್ಯ ಕಾರ್ ಕೇರ್ ಸಂಸ್ಥೆಯ ಮಾಲಕರಾದ ಶಾಂತಮೂರ್ತಿ ಕಿಲಂಗೋಡಿ ಹಾಗೂ ರಮೇಶ್ ಮಠತ್ತಡ್ಕ, ಸಿಬ್ಬಂದಿಗಳಾದ ಮಧುಸೂದನ್, ಅಲೆಕ್ಸ್ ಡಿ'ಸೋಜ, ಪ್ರವೀಣ್, ರಮೇಶ್ ಹಾಗೂ ಚಂದ್ರಶೇಖರ ತಂಟೆಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.
ಪಂಜ ಲಯನ್ಸ್ ಕ್ಲಬ್ ವತಿಯಿಂದ ಅ.2ರಂದು ಪಾಂಡಿಗದ್ದೆ ದ.ಕ ಜಿ. ಪ.ಸ.ಕಿ. ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ ಅಂಗವಾಗಿ ದತ್ತು ನಿಧಿ ಸ್ಥಾಪನೆ ಮತ್ತು ಸ್ವಚ್ಛತಾ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷ ಪುರುಷೋತ್ತಮ ದಂಬೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಂಡಿಗದ್ದೆ ಎಸ್.ಡಿ ಎಂ. ಸಿ ಅಧ್ಯಕ್ಷ ವಾಚಣ್ಣ...
ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜಿನಲ್ಲಿ ಅ.2 ರಂದು ಶಿಕ್ಷಕ ರಕ್ಷಕ ಸಂಘದ ವತಿಯಿಂದ 52ನೇ ವರ್ಷ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶಾರದಾ ಪೂಜೆ ನಡೆಯಿತು. ಪೂಜಾ ವಿಧಾನ ಪೂರೈಸಿ ಮಧ್ಯಾಹ್ನ ಮಹಾ ಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು.ಈ ಸಂದರ್ಭದಲ್ಲಿ ಕಲಾವಿದ ಗಣೇಶ್ ಪರ್ವತಮುಖಿ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ನೆರವೇರಿತು. ಕಲಾವಿದ...
ಸುಳ್ಯ: ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗಮಯೂರಿ ಕಲಾ ಶಾಲೆಯಲ್ಲಿ ಅ.3 ರಂದು ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಶ್ರೀ ಶಾರದಾ ದೇವಿ ಪೂಜೆ ನೆರವೇರಿತು.ಬೆಳಗ್ಗೆ ಗಣಪತಿ ಹವನ ನಡೆದ ಬಳಿಕ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಶಾಸ್ತ್ರೀಯ ಸಂಗೀತ ಶಿಕ್ಷಕ ಮಹಾಬಲೇಶ್ವರ ಬೀರ್ಮಕಜೆ ಮತ್ತು ಸುಗಮ ಸಂಗೀತ ಶಿಕ್ಷಕಿ ಶ್ರೀಮತಿ ಸುಮನಾ...
ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಅ.04ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯ ಮಾಲಕರಾದ ಗಗನ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ತಡ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ಧಾರುಣ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ನಾರಾಯಣ ಎಂದು ತಿಳಿದು ಬಂದಿದೆ. ಘಟನೆಯಿಂದ ಸುಜಿತ್ ಎಂಬುವರಿಗೆ ಗಾಯಾಳಾಗಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಜಾಲ್ಸೂರಿನ ಸಫಿಕ್ ಕಾಂಪ್ಲೆಕ್ಸ್ನಲ್ಲಿ ಜನನಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಅ. 3 ರಂದು ಶುಭಾರಂಭಗೊಂಡಿತು. ವಿಶ್ವೇಶ್ವರ ಪುರೋಹಿತ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮನೆಯವರು, ಊರಿನವರು ಉಪಸ್ಥಿತರಿದ್ದರು. ನಮ್ಮಲ್ಲಿ ಪೈಬರ್ ಡೋರ್, ಪ್ಲಸ್ ಡೋರ್, ಫೈವುಡ್ ಡೋರ್, ಮರದ ಡೋರ್, ಡಿಜಿಟಲ್ ಡೋರ್ ಹಾಗೂ ಎಲ್ಲಾ ತರದ ಅಲ್ಯೂಮಿನಿಯಂ ಕೆಲಸಗಳನ್ನು ಮಾಡಿಕೊಡುತ್ತೇವೆ ಎಂದು ಮ್ಹಾ.ಮನೋಜ್ ಅವರು ತಿಳಿಸಿದ್ದಾರೆ.
ಬೆಳ್ಳಾರೆ ಅಮ್ಮ ಮೋಟಾರ್ ವರ್ಕ್ಸ್ ಸ್ಥಳಾಂತರಗೊಂಡು ಮಣಿಕ್ಕಾರ ಕಾಂಪ್ಲೆಕ್ಸ್ ಹಿಂದುಗಡೆ ಅ.4 ರಂದು ಆಯುಧಪೂಜೆಯೊಂದಿಗೆ ಶುಭಾರಂಭಗೊಳ್ಳಲಿದೆ. ಈ ಶುಭಾರಂಭಕ್ಕೆ ತಾವೆಲ್ಲರೂ ಬಂದು ದೇವರ ಪ್ರಸಾದ ಸ್ವೀಕರಿಸುವಂತೆ ಮಾಲೀಕರಾದ ದಾಮೋದರ ಪಾಲೆಪ್ಪಾಡಿ, ನವೀನ ಕುಮಾರ್, ರಾಮಕುಮೋರ್ ತಿಳಿಸಿದ್ದಾರೆ.
ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ ಮತ್ತು ಯುವಕ ಮಂಡಲ ( ರಿ.) ಮಡಪ್ಪಾಡಿ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಸಾರ್ವಜನಿಕ ಆಯುಧ ದುರ್ಗಾ ಪೂಜೆ ಮತ್ತು ವಾಹನ ಪೂಜೆ ಅ.2 ರಂದು ಮಡಪ್ಪಾಡಿ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು, ಯುವಕ ಮಂಡಲ ಅಧ್ಯಕ್ಷರು ಮತ್ತು...
Loading posts...
All posts loaded
No more posts
