ಕಡಬ : ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

ಬಿಜೆಪಿ ಯುವಮೋರ್ಚಾ, ಸುಳ್ಯ ಮಂಡಲ ಇವರ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 72ನೇ ಜನ್ಮದಿನ ಆಚರಣೆ ಪ್ರಯುಕ್ತ ಕಡಬದ ಶ್ರೀ ಕಂಠ ಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಆಯೋಜಿಸಿದ ರಕ್ತದಾನ ಶಿಬಿರವನ್ನು ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರಾದ ನಳಿನ್ ಕುಮಾರ್ ಕಟೀಲ್, ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಬಿಜೆಪಿ...

ಐವರ್ನಾಡು: ಗ್ರಾಮ ವನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

ಐವರ್ನಾಡಿನ ಕೃಪಾ ಮಡ್ತಿಲ ಕಾಂಪ್ಲೆಕ್ಸ್ ನಲ್ಲಿ ಶ್ರೀಮತಿ ವಿದ್ಯಾ ಸರವಣ, ಬಾಂಜಿಕೋಡಿಯವರು ಪ್ರಾರಂಭಿಸಿರುವ ಕರ್ನಾಟಕ ಸರ್ಕಾರದ ಇ-ಆಡಳಿತದ ಇಲಾಖೆಯಡಿಯಲ್ಲಿ ಕಾರ್ಯಾಚರಿಸುವ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.
Ad Widget

ಲಡಾಖಿನ ತುದಿಗೆ ಹೊರಟ ಮಂಗಳೂರಿನ ರ‍್ಯಾಲಿ – ವಿಶ್ವದ ಎತ್ತರಕ್ಕೆ ಏರಲಿದೆ ‘ರಿಕಾಲಿಂಗ್ ಅಮರ ಸುಳ್ಯ’ ಪುಸ್ತಕ

ಅಮರ ಸುಳ್ಯ ಕ್ರಾಂತಿಯ ಕುರಿತು ದೇಶದೆಲ್ಲೆಡೆ ಅರಿವು ಮೂಡಿಸಲು ಹಮ್ಮಿಕೊಂಡಿರುವ 'ಟೀಂ ಸ್ಕ್ರೂ ರೈಡರ್ಸ್' ಅವರ ಬೈಕ್ ರ‍್ಯಾಲಿಗೆ ಸೆಪ್ಟೆಂಬರ್ 17ರಂದು ಮಂಗಳೂರಿನ ತುಳು ಭವನದಲ್ಲಿ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್ ಅವರಿಂದ ಚಾಲನೆ ಮಾಡಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಲೇಖಕ ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ...

ಸಾಲಮನ್ನಾದ ಬಾಕಿ ಹಣ ಶೀಘ್ರ ಬಿಡುಗಡೆ ಮಾಡಲು ಸಚಿವರಿಗೆ ಸುಳ್ಯದ ನಿಯೋಗ ಒತ್ತಾಯ

ಕರ್ನಾಟಕ ರಾಜ್ಯ ಸರ್ಕಾರದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ರವರನ್ನು ಭೇಟಿಯಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕೆಲವು ಸದಸ್ಯರಿಗೆ ಬಾಕಿ ಇರುವ ಸಾಲಮನ್ನಾ ಮೊತ್ತವನ್ನು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು ಹಾಗೂ ಯಶಸ್ವಿನಿ ಯೋಜನೆಯನ್ನು ಮರುಜಾರಿಗೊಳಿಸಿದ ಬಗ್ಗೆ ಮಾನ್ಯ ‌ಸಚಿವರನ್ನು ಅಭಿನಂದಿಸಲಾಯಿತು. ಈ ನಿಯೋಗದಲ್ಲಿ ಕೆ.ಎಫ್.ಡಿ.ಸಿ ಅಧ್ಯಕ್ಷ ಎ....

ಜೇಸಿಐ ಸುಳ್ಯ ಸಿಟಿ ವತಿಯಿಂದ ರಕ್ತದಾನ ಶಿಬಿರ

ಜೇಸಿ ಸಪ್ತಾಹದ ಅಂಗವಾಗಿ ಜೇಸಿಐ ಸುಳ್ಯ ಸಿಟಿ ಮತ್ತು ಕೆ.ವಿ.ಜಿ ಮೆಡಿಕಲ್ ಕಾಲೇಜು ಸುಳ್ಯ ದ ಸಹಭಾಗಿತ್ವದೊಂದಿಗೆ ಕೆ.ವಿ‌.ಜಿ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಿತು ಸಭಾಧ್ಯಕ್ಷತೆ ಯನ್ನು ಘಟಕಾದ್ಯಕ್ಷ ಬಶೀರ್ ಯು ಪಿ ವಹಿಸಿದ್ದರು ಡಾ| ಶೋಭಾ ಚಿದಾನಂದ ರವರು ಉದ್ಘಾಟಿಸಿದರು. ಅತಿಥಿಗಳಾಗಿ ಡಾ| ನೀಲಾಂಬಿಕಾ ನಟರಾಜನ್, ಡಾ| ಮಹಾಂತಾ ದೇವ್ರು, ಡಾ|...

ಕಬಡ್ಡಿಯಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ದಲ್ಲಿ ಸೆಪ್ಟೆಂಬರ್ 10 ರಿಂದ 12 ತನಕ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟ ಹಾಗೂ ದಕ್ಷಿಣ ಮಧ್ಯ ಕ್ಷೇತ್ರ ವಿಭಾಗ ಕಬಡ್ಡಿ ಪಂದ್ಯಾಟದಲ್ಲಿ, ಜ್ಞಾನದೀಪದ 17 ರ ವಯೋಮಾನದ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಲೇಖನ :- ಇರುವುದೆಲ್ಲವ ಬಿಟ್ಟು…

ಜೀವನದಲ್ಲಿ ಒಂದು ಹಂತದವರೆಗೆ ನಮಗೆ ಅದು ಬೇಕು, ಇದು ಬೇಕು, ಆ ವಸ್ತು ತಗೊಳ್ಬೇಕು, ಈ ವಸ್ತು ತಗೊಳ್ಬೇಕು ಅನ್ನೋ ಆಸೆ ಇರುತ್ತೆ. ಆದ್ರೆ ಆ ಹಂತ ದಾಟಿದ ನಂತರ ನಮಗೆ ಆ ವಸ್ತು ಬೇಕಾಗಿರಲ್ಲ. ನಾವು ಚಿಕ್ಕವರಿರುವಾಗ ಆಟಿಕೆಗಳು ಬೇಕು ಅಂತ ಹಟ ಮಾಡ್ತೀವಿ ಆದ್ರೆ ದೊಡ್ಡವರಾದ ನಂತರ ನಮಗೆ ಆಟಿಕೆಗಳು ಬೇಕಾಗಿರಲ್ಲ. ಅದೇ...

ಪಂಜ ವನಿತಾ ಸಮಾಜದಿಂದ ಪ್ರೋಟೀನ್ ಪೌಡರ್ ಕೊಡುಗೆ

ಪಂಜದಲ್ಲಿ ನಡೆದ ವಿಶೇಷ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಡಿಮೆ ತೂಕದ ಮಕ್ಕಳಿಗೆ ಪ್ರೋಟೀನ್ ಪೌಡರನ್ನು ವನಿತಾ ಸಮಾಜ ಪಂಜ ಇದರ ವತಿಯಿಂದ ಕೊಡುಗೆಯಾಗಿ ನೀಡಲಾಯಿತು.ವನಿತಾ ಸಮಾಜದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ ಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಭಾಗೀರಥಿ ಕರಿಕ್ಕಳ, ಪೂರ್ವಾಧ್ಯಕ್ಷೆ ಶ್ರೀಮತಿ ವೇದಾವತಿ ಮೋನಪ್ಪ, ಸದಸ್ಯರಾದ ಶ್ರೀಮತಿ ಸುಶೀಲಾ ದೇವಪ್ಪ, ಶ್ರೀಮತಿ ರತ್ನಾವತಿ ಬೊಳ್ಳಾಜೆ, ಶ್ರೀಮತಿ...

ವಳಲಂಬೆಯ ಯುವಕ ಬೋವಿಕಾನದಲ್ಲಿ ಆತ್ಮಹತ್ಯೆ

ವಳಲಂಬೆಯ ಯುವಕನೋರ್ವ ಬೋವಿಕಾನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ. ಕಾಸರಗೋಡಿನಲ್ಲಿ ಉದ್ಯೋಗಿಯಾಗಿದ್ದ ಜೈಸನ್ ಕಳೆದ ಶನಿವಾರದಿಂದ ಯಾರಿಗೂ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ನಿನ್ನೆ ರಾತ್ರಿ ಬೊವಿಕಾನದ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಇವರು ವಳಲಂಬೆಯಲ್ಲಿ ನೆಲೆಸಿರುವ ಥೋಮಸ್ ಎಂಬವರ ಪುತ್ರ. ಮೃತರು ತಾಯಿ, ಸಹೋದರಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಧರ್ಮಪಾಲನಾಥ ಸ್ವಾಮೀಜಿಯವರಿಗೆ “ರಿಕಾಲಿಂಗ್ ಅಮರ ಸುಳ್ಯ” ಪುಸ್ತಕ ಹಸ್ತಾಂತರ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿದ 'ರಿಕಾಲಿಂಗ್ ಅಮರ ಸುಳ್ಯ' ಪುಸ್ತಕ ಬರೆದ ಅನಿಂದಿತ್ ಬಾರಿಕೆ ಅವರು ಒಕ್ಕಲಿಗರ ಸೇವಾ ಸಂಘ, ಮಂಗಳೂರು ಇದರ ಜಿಲ್ಲಾಧ್ಯಕ್ಷರಾದ ಲೋಕಯ್ಯ ಗೌಡ ಕೆ. ಅವರೊಂದಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಗೌರವ ಪ್ರತಿಯನ್ನು ನೀಡಿದರು. ಅಮರ ಸುಳ್ಯ ಕ್ರಾಂತಿಗೆ...
Loading posts...

All posts loaded

No more posts

error: Content is protected !!