ಜೇಸಿಐ ಸುಳ್ಯ ಸಿಟಿ ವತಿಯಿಂದ ರಕ್ತದಾನ ಶಿಬಿರ

ಜೇಸಿ ಸಪ್ತಾಹದ ಅಂಗವಾಗಿ ಜೇಸಿಐ ಸುಳ್ಯ ಸಿಟಿ ಮತ್ತು ಕೆ.ವಿ.ಜಿ ಮೆಡಿಕಲ್ ಕಾಲೇಜು ಸುಳ್ಯ ದ ಸಹಭಾಗಿತ್ವದೊಂದಿಗೆ ಕೆ.ವಿ‌.ಜಿ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಿತು ಸಭಾಧ್ಯಕ್ಷತೆ ಯನ್ನು ಘಟಕಾದ್ಯಕ್ಷ ಬಶೀರ್ ಯು ಪಿ ವಹಿಸಿದ್ದರು ಡಾ| ಶೋಭಾ ಚಿದಾನಂದ ರವರು ಉದ್ಘಾಟಿಸಿದರು. ಅತಿಥಿಗಳಾಗಿ ಡಾ| ನೀಲಾಂಬಿಕಾ ನಟರಾಜನ್, ಡಾ| ಮಹಾಂತಾ ದೇವ್ರು, ಡಾ|...

ಕಬಡ್ಡಿಯಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ

ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ದಲ್ಲಿ ಸೆಪ್ಟೆಂಬರ್ 10 ರಿಂದ 12 ತನಕ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟ ಹಾಗೂ ದಕ್ಷಿಣ ಮಧ್ಯ ಕ್ಷೇತ್ರ ವಿಭಾಗ ಕಬಡ್ಡಿ ಪಂದ್ಯಾಟದಲ್ಲಿ, ಜ್ಞಾನದೀಪದ 17 ರ ವಯೋಮಾನದ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
Ad Widget

ಲೇಖನ :- ಇರುವುದೆಲ್ಲವ ಬಿಟ್ಟು…

ಜೀವನದಲ್ಲಿ ಒಂದು ಹಂತದವರೆಗೆ ನಮಗೆ ಅದು ಬೇಕು, ಇದು ಬೇಕು, ಆ ವಸ್ತು ತಗೊಳ್ಬೇಕು, ಈ ವಸ್ತು ತಗೊಳ್ಬೇಕು ಅನ್ನೋ ಆಸೆ ಇರುತ್ತೆ. ಆದ್ರೆ ಆ ಹಂತ ದಾಟಿದ ನಂತರ ನಮಗೆ ಆ ವಸ್ತು ಬೇಕಾಗಿರಲ್ಲ. ನಾವು ಚಿಕ್ಕವರಿರುವಾಗ ಆಟಿಕೆಗಳು ಬೇಕು ಅಂತ ಹಟ ಮಾಡ್ತೀವಿ ಆದ್ರೆ ದೊಡ್ಡವರಾದ ನಂತರ ನಮಗೆ ಆಟಿಕೆಗಳು ಬೇಕಾಗಿರಲ್ಲ. ಅದೇ...

ಪಂಜ ವನಿತಾ ಸಮಾಜದಿಂದ ಪ್ರೋಟೀನ್ ಪೌಡರ್ ಕೊಡುಗೆ

ಪಂಜದಲ್ಲಿ ನಡೆದ ವಿಶೇಷ ಆರೋಗ್ಯ ತಪಾಸಣಾ ಶಿಬಿರದಲ್ಲಿ ಕಡಿಮೆ ತೂಕದ ಮಕ್ಕಳಿಗೆ ಪ್ರೋಟೀನ್ ಪೌಡರನ್ನು ವನಿತಾ ಸಮಾಜ ಪಂಜ ಇದರ ವತಿಯಿಂದ ಕೊಡುಗೆಯಾಗಿ ನೀಡಲಾಯಿತು.ವನಿತಾ ಸಮಾಜದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ ಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಭಾಗೀರಥಿ ಕರಿಕ್ಕಳ, ಪೂರ್ವಾಧ್ಯಕ್ಷೆ ಶ್ರೀಮತಿ ವೇದಾವತಿ ಮೋನಪ್ಪ, ಸದಸ್ಯರಾದ ಶ್ರೀಮತಿ ಸುಶೀಲಾ ದೇವಪ್ಪ, ಶ್ರೀಮತಿ ರತ್ನಾವತಿ ಬೊಳ್ಳಾಜೆ, ಶ್ರೀಮತಿ...

ವಳಲಂಬೆಯ ಯುವಕ ಬೋವಿಕಾನದಲ್ಲಿ ಆತ್ಮಹತ್ಯೆ

ವಳಲಂಬೆಯ ಯುವಕನೋರ್ವ ಬೋವಿಕಾನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ. ಕಾಸರಗೋಡಿನಲ್ಲಿ ಉದ್ಯೋಗಿಯಾಗಿದ್ದ ಜೈಸನ್ ಕಳೆದ ಶನಿವಾರದಿಂದ ಯಾರಿಗೂ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದರು. ನಿನ್ನೆ ರಾತ್ರಿ ಬೊವಿಕಾನದ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಇವರು ವಳಲಂಬೆಯಲ್ಲಿ ನೆಲೆಸಿರುವ ಥೋಮಸ್ ಎಂಬವರ ಪುತ್ರ. ಮೃತರು ತಾಯಿ, ಸಹೋದರಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಧರ್ಮಪಾಲನಾಥ ಸ್ವಾಮೀಜಿಯವರಿಗೆ “ರಿಕಾಲಿಂಗ್ ಅಮರ ಸುಳ್ಯ” ಪುಸ್ತಕ ಹಸ್ತಾಂತರ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿದ 'ರಿಕಾಲಿಂಗ್ ಅಮರ ಸುಳ್ಯ' ಪುಸ್ತಕ ಬರೆದ ಅನಿಂದಿತ್ ಬಾರಿಕೆ ಅವರು ಒಕ್ಕಲಿಗರ ಸೇವಾ ಸಂಘ, ಮಂಗಳೂರು ಇದರ ಜಿಲ್ಲಾಧ್ಯಕ್ಷರಾದ ಲೋಕಯ್ಯ ಗೌಡ ಕೆ. ಅವರೊಂದಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಗೌರವ ಪ್ರತಿಯನ್ನು ನೀಡಿದರು. ಅಮರ ಸುಳ್ಯ ಕ್ರಾಂತಿಗೆ...

ಐನೆಕಿದು :- ಹಾಲುತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಐನೆಕಿದು ಹಾಲುತ್ಪಾದಕರ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.08 ರಂದು ಅಮೃತ ಸಂಭ್ರಮ ಸಭಾಭವನ ಐನೆಕಿದು ಇಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಶ್ರೀಮತಿ ಪ್ರೇಮಾ.ಕೆ ವರದಿ ವಾಚಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ದ.ಕ ಹಾಲು ಒಕ್ಕೂಟ ಸುಳ್ಯ ಇದರ...

ಪದವಿ ಪೂರ್ವ ಕಾಲೇಜು ಗುತ್ತಿಗಾರಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು,ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 08/09/2022 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತಂಡವು ಫೈನಲ್ ಪಂದ್ಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು...

ಭಾರತ್ ಜೋಡೋ ಯಾತ್ರೆ ಯಶಸ್ವಿಗೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸರ್ವಧರ್ಮ ಪ್ರಾರ್ಥನೆ

ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತದ ಐಕ್ಯತೆ ಮತ್ತು ಏಕತೆಗಾಗಿ ಹಮ್ಮಿಕೊಂಡಿರುವ ಸ್ವಾಂತಂತ್ರೋತ್ತರ ಭಾರತದ ಅಭೂತಪೂರ್ವ ಜನಾಂದೋಲನ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3500 ಕಿ.ಮೀ ದೂರದ ಪಾದಯಾತ್ರೆ, ಇಂದು ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆ ನಿರ್ವಿಘ್ನವಾಗಿ ಯಶಸ್ವೀಯಾಗಲಿ ಎಂದು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ, ಬೀರಮಂಗಲದ ಸಂತ...

ಕುಕ್ಕೆಯಲ್ಲಿ ನಡೆದ ಕಡಬ ತಾಲೂಕು ಮಟ್ಟದ ಕ್ರೀಡಾಕೂಟ

ಏಕಾಗ್ರತೆ ಮತ್ತು ಶಿಸ್ತಿನ ಅನುಸರಣೆಯಿಂದ ಕ್ರೀಡಾಕ್ಷೇತ್ರದಲ್ಲಿ ಅಭ್ಯುದಯವಾಗಲು ಸಾಧ್ಯವಿದೆಸಾಧನೆಗೆ ಸ್ಥಿರವಾದ ಮನಸ್ಸು, ಏಕಾಗ್ರತೆ, ಸದೃಢ ದೇಹ ಅತ್ಯಗತ್ಯ. ಉತ್ತಮ ಆಹಾರ, ಉತ್ತಮ ನಡವಳಿಕೆ, ಉತ್ತಮ ಮನಸು ಎಂಬ ತ್ರಿವಳಿಗಳು ಜೀವನದಲ್ಲಿ ಸಾಧನೆಗೆ ಪೂರಕವಾಗಿದೆ‌. ಶ್ರಮ, ನಿಷ್ಠೆ, ಪರಿಶ್ರಮ, ಕ್ರೀಡೆಯಲ್ಲಿ ಆಸಕ್ತಿ ಬೇಕು. ಕ್ರೀಡೆಯಿಂದ ಮಾನಸಿಕ ಶಾಂತಿ ಮತ್ತು ನೆಮ್ಮದಿ ಪ್ರಾಪ್ತಿಯಾಗುತ್ತದೆ. ಶಿಸ್ತು ಮತ್ತು ಕ್ರೀಡಾಸ್ಪೂರ್ತಿಯಿಂದ ಕ್ರೀಡಾ...
Loading posts...

All posts loaded

No more posts

error: Content is protected !!