- Friday
- May 8th, 2026
ಬಾಲಾವಲಿಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆ. 28 ರಂದು ಕೃಷ್ಣ ವೇಷ ಸ್ಪರ್ಧೆ, ವಿವಿಧ ಮನೋರಂಜನಾ ಮತ್ತು ಆಟೋಟ ಸ್ಪರ್ಧೆಗಳನ್ನು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಸುಳ್ಯ ಇಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯಲ್ಲಿ ದೇವದಾಸ್ ಪ್ರಭು, ಕೇಸರಿ ಪತ್ತುಕುಂಜ, ರಾಧಾಕೃಷ್ಣ ಪೈ...
ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯದ ಯುವ ನಾಯಕರಾದ ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಜತೆಗಿದ್ದರು.
ನಮ್ಮ ಸಂಸ್ಕ್ರತಿ ಆಚರಣೆಗಳನ್ನು ನಮ್ಮ ಮಕ್ಕಳಿಗೆ ತಿಳಿಸುವ ಕೆಲಸ ಆಗಬೇಕು ಎಂದು ನಿವೃತ್ತ ಶಿಕ್ಷಣ ಸಂಯೋಜಕ ಕೇಶವ ಹೇಳಿದರು ಅವರು ಗಣೇಶ ಚತುರ್ಥಿ ಅಂಗವಾಗಿ ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ನಮ್ಮ ಸಂಸ್ಕ್ರತಿ ಆಚರಣೆಗಳನ್ನು ನಾವು ಮರೆಯುತ್ತಿದ್ದೇವೆ. ನಾವು ಆಧುನಿಕತೆಯ ದಾಸರಾಗದೆ ನಮ್ಮತನವನ್ನು ನಾವು ಉಳಿಸಿಕೊಳ್ಳವ ಅಗತ್ಯ...
ಮಂಡೆಕೋಲು ಭಜನಾ ಮಂದಿರದಲ್ಲಿ ಆ.31ರಂದು ಮಂಡೆಕೋಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಇವರ ಆಶ್ರಯದಲ್ಲಿ 15ನೇ ವರ್ಷದ ಗಣೇಶೋತ್ಸವ ಆಚರಣೆ ನಡೆಯಿತುಬೆಳಗ್ಗೆ ಗಣಪತಿ ಹೋಮ ಹಾಗೂ ಗಣಪತಿ ಮೂರ್ತಿ ಪ್ರತಿಷ್ಠೆ. ಬಳಿಕ ಭಜನಾ ಸೇವೆ ಹಾಗೂ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ವಿವಿಧ ಸ್ಪಧೆಗಳು ನಡೆಸಲಾಯಿತು. ಹರಿಕಥಾ ಪ್ರಸಂಗ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಯೇನೆಕಲ್ಲು ಇದರ ಆಶ್ರಯದಲ್ಲಿ 15ನೇ ವರ್ಷದ ಶ್ರೀ ಗಣೇಶೋತ್ಸವ ಆ. 31 ಮತ್ತು ಸೆ.1ರಂದು ಯೇನೆಕಲ್ಲಿನ ಬಾಲಾಡಿ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಿತು. ಎ. 31ರಂದು ಗಣಪತಿ ಹೋಮ, ಗಣೇಶನ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. ಸಂಜೆ ಗಂಟೆ 6.00 ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸೆ.1ರಂದು...
ಹಳೆಗೇಟು ವಸಂತಕಟ್ಟೆ ವಠಾರದಲ್ಲಿ ಆ.31 ರಿಂದ ಸೆ.2 ರ ತನಕ ಸುಳ್ಯ ಹಳೆಗೇಟು ಸಾಂಸ್ಕೃತಿಕ ಸಂಘ ರಿ. ಆಶ್ರಯದಲ್ಲಿ ನಡೆಯಲಿರುವ 39 ನೇ ವರ್ಷದ ಗಣೇಶೋತ್ಸವಕ್ಕೆ ಆ.31 ಚಾಲನೆ ನೀಡಿ ಬೆಳಗ್ಗೆ ಪುರೋಹಿತ್ ನಟರಾಜ್ ಭಟ್ ರವರ ನೇತೃತ್ವದಲ್ಲಿ ಗಣಪತಿ ಹೋಮ, ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶ್ರೀನಿವಾಸ್ ರಾವ್,...
ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕಗಳ ಸಹಯೋಗದೊಂದಿಗೆ ಆ.30 ರಂದು ಪಂಚಾಯತ್ ಸಭಾಭವನದಲ್ಲಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥ ರವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು. ಸ್ಪರ್ಧಾ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ, ಪುಸ್ತಕ ಪ್ರದರ್ಶನ, ಮಕ್ಕಳು ಬಿಡಿಸಿದ ರಂಗ ರವರ...
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ, ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಆ. 29 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ, ಹಾಗೂ ಇದೆ ತಂಡದ ದೇವಿಕಾ.ಕೆ...
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಆ.28 ರಂದು ಐವರ್ನಾಡಿನ ಗೆಳೆಯರ ಬಳಗ ದೇರಾಜೆ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೆಸರ್ ಡಿ ಒಂಜಿ ದಿನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯ.ಸ.ಸದಸ್ಯರಾದ ಅರ್ಚಕ ಪದ್ಮನಾಭ ಭಟ್ಕೂಟದ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಅಧ್ಯಕ್ಷ ನಂದಕುಮಾರ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯ ವತಿಯಿಂದ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಕಬ್, ಬುಲ್ ಬುಲ್, ಸ್ಕೌಟ್, ಗೈಡ್, ರೋವರ್, ರೇಂಜರ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯು ದಿನಾಂಕ 27.08.2022 ಶನಿವಾರದಂದು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಅಲೆಕ್ಕಾಡಿ ಇಲ್ಲಿ ಜರಗಿತು. ಗೀತಗಾಯನ ಸ್ಪರ್ಧೆಯನ್ನು ಮುರುಳ್ಯ ಶಾಲೆಯ ಎಸ್...
Loading posts...
All posts loaded
No more posts
