ಆ.30 ರಂದು ಸ್ವಾತಂತ್ರ್ಯದ ಅಮೃತಮಹೋತ್ಸವ ಪ್ರಯುಕ್ತ ಜಾಲ್ಸೂರಿನಿಂದ ಸುಳ್ಯದವರೆಗೆ ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮ

ಸುಳ್ಯ: ಸ್ವಾತಂತ್ರ್ಯದ ಅಮೃತಮಹೋತ್ಸವ ಪ್ರಯುಕ್ತ ರಾಜ್ಯಾದ್ಯಂತ ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮದ ಕುರಿತು ಆ.27ರಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮರವರಿಂದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಯಿತು. ಗೋಷ್ಠಿಯಲ್ಲಿ ಮಾತನಾಡಿದ ಅವರು ಆ.30 ರಂದು 75ರ ಸ್ವಾತಂತ್ರ್ಯ ಅಮೃತ ಮಹೋತ್ಸವದ ನೆನಪಿಗಾಗಿ ಜಾಲ್ಸೂರಿನಿಂದ ಸುಳ್ಯದವರೆಗೆ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ...

ಐವರ್ನಾಡು: ವಿಕಲಚೇತನರ ಸಂಜೀವಿನಿ ಸಂಘಗಳ ಉದ್ಘಾಟನೆ

ಐವರ್ನಾಡು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಆ.22 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ವಿಕಲಚೇತನರ ಸಂಜೀವಿನಿ ಸಂಘಗಳ ಉದ್ಘಾಟನೆಯನ್ನು ಸಮಗ್ರ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸಭಾಧ್ಯಕ್ಷರಾದ ಶ್ರೀಮತಿ ರೇವತಿ ಬೋಳುಗುಡ್ಡೆ ದೀಪ ಬೆಳಗಿಸಿ ಸಂಘ ಉದ್ಘಾಟನೆ ಮಾಡಿದರು. ಸುಳ್ಯ ತಾಲೂಕು ಸಂಜೀವಿನಿ ಸಂಘಗಳ ಮೇಲ್ವಿಚಾರಕ ಮಹೇಶ್ ಸಂಜೀವಿನಿ ಸಂಘದ ಮಹತ್ವದ ಬಗ್ಗೆ...
Ad Widget

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯಿಂದ ಜೇನು ಕೃಷಿ ಬಗ್ಗೆ ಅರಿವು ಕಾರ್ಯಕ್ರಮ

ಗ್ರಾಮಜನ್ಯ ,ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇದರ ವತಿಯಿಂದ ಕಡಬ ತಾಲೂಕಿನ ಬೆಳಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಜೇನು ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆ.26 ಶುಕ್ರವಾರದಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಗ್ರಾಮಜನ್ಯ ಸಂಸ್ಥೆಯ ಅಧ್ಯಕ್ಷರೂ, ನಿವೃತ್ತ ಕಸ್ಟಮ್ಸ್ ಅಧಿಕಾರಿಗಳೂ ಆದ ಶ್ರೀ ರಾಮಕೃಷ್ಣ ಭಟ್ ಕುರುಂಬುಡೇಲು ಮಾಹಿತಿ ನೀಡಿದರು. ಯುವ ಜನಾಂಗ...

ಕಡಬ: ಬಿಳಿನೆಲೆ ವೇದವ್ಯಾಸ ವಿದ್ಯಾಲಯಕ್ಕೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಪ್ರಶಸ್ತಿ

ಕಡಬ ತಾಲೂಕಿನ ಬಿಳಿನೆಲೆ ಬೈಲು ಶಾಲೆಯಲ್ಲಿ ಆ.24ರಂದು ನಡೆದ ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಸಂಸ್ಥೆಯು ಕಿರಿಯ ಹಾಗೂ ಹಿರಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಲಜ್ಜಾ ಸಿ. ಶೆಟ್ಟಿ ಸೂರಿಂಜೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ

ಸುಳ್ಯದ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿ ಲಜ್ಜಾ.ಸಿ ಶೆಟ್ಟಿ ಸೂರಿಂಜೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾರೆ. ಇವರು ಮರೀಚ್ಯಾಸನದಲ್ಲಿ 01 ಗಂಟೆ 06 ನಿಮಿಷ 12 ಸೆಕೆಂಡುಗಳ ಕಾಲ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಯೋಗಗುರು ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿರುವ ಇವರು ಇನ್...

ಕೆವಿಜಿ ಕೈಗಾರಿಕಾ ಸಂಸ್ಥೆಗೆ ಲ್ಯಾಪ್ ಟಾಪ್ ವಿತರಣೆ

ಕೆವಿಜಿ ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿಯಾದ ಡಾ. ಉಜ್ವಲ್‌ ಊರುಬೈಲ್ ರವರು ಆಡಳಿತ ಮಂಡಳಿಯ ಪರವಾಗಿ ಕೆ.ವಿ.ಜಿ. ಕೈಗಾರಿಕಾ ಸಂಸ್ಥೆಗೆ ಲ್ಯಾಪ್ ಟಾಪ್ ನೀಡಿದರು. ಲ್ಯಾಪ್ ಟಾಪ್ ನ್ನು ಕೆವಿಜಿ ಕೈಗಾರಿಕಾ ಸಂಸ್ಥೆ ಪರವಾಗಿ ಪ್ರಾಂಶುಪಾಲ ಚಿದಾನಂದ ಗೌಡ ಬಾಳಿಲ ಸ್ವೀಕರಿಸಿದರು.

ಆ.31 ರಂದು ಮುಕ್ಕೂರಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮುಕ್ಕೂರಿನಲ್ಲಿ ಆ.31 ರಂದು 13 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ ಮತ್ತು ಸನ್ಮಾನ ಕಾರ್ಯಕ್ರಮ ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ವನಶ್ರೀ ಕೆ.ಗಣಪಯ್ಯ ಉದ್ಘಾಟಿಸಲಿದ್ದಾರೆ. ಪ್ರಗತಿಪರ ಕೃಷಿಕ ಗಣಪತಿ ಭಟ್ ನೀರ್ಕಜೆ ದೀಪ ಬೆಳಗಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಸನ್ಮಾನ ನೆರವೇರಿಸಲಿದ್ದಾರೆ....

ಕುತ್ಕುಂಜ ಅಟಲ್ ಜೀ ಕ್ರೀಡಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ಕುತ್ಕುಂಜ ಅಟಲ್ ಜೀ ಕ್ರೀಡಾಂಗಣದಲ್ಲಿ ಆ.21 ರಂದು ಶಿವಾಜಿ ಯುವಕ ಮಂಡಲ ಕೂತ್ಕುಂಜ ಇವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ನಡೆಯಿತು. ಕಾರ್ಯಕ್ರಮವನ್ನು ಪಂಜ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕಲ್ಲಾಜೆ ಉದ್ಘಾಟಿಸಿದರು . ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಉಜ್ವಲ್ ಚಿದ್ಗಲ್ಲು ವಹಿಸಿದ್ದರು. ಪ್ರಗತಿಪರ ಕೃಷಿಕ ವೆಂಕಟೇಶ್ವರ ಜೋಯಿಸ ಹೆಬ್ಬಾರಹಿತ್ಲು...

ಮಡಪ್ಪಾಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಯುವಕ ಮಂಡಲ(ರಿ) ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ(ರಿ)ಮಡಪ್ಪಾಡಿ,ಶ್ರೀ ರಾಮ ಭಜನಾಮಂಡಳಿ ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಲ(ರಿ) ಮಡಪ್ಪಾಡಿ, ಶಾಲಾಭಿವೃದ್ಧಿ ಸಮಿತಿ ಮಡಪ್ಪಾಡಿ ಹಾಗೂ ಸಮಸ್ತ ಗ್ರಾಮಸ್ಥರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಧನ್ಯಕುಮಾರ್ ದೇರುಮಜಲು ಅಧ್ಯಕ್ಷತೆ...

ಜಯನಗರ: ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಜಯನಗರ ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಶ್ರೀ ಕೊರಗಜ್ಜನ ದೈವಸ್ಥಾನದ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನಗಳ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನ ಕೊರಂಬಡ್ಕ ಇದರ ಆಡಳಿತ ಸಮಿತಿ ಅಧ್ಯಕ್ಷ ಕೇಶವ ಸಿ.ಎ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು....
Loading posts...

All posts loaded

No more posts

error: Content is protected !!