ರೆಂಜಾಳ : 2ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದಲ್ಲಿ ಆ.21ರಂದು ಮರ್ಕಂಜದ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲದ ವತಿಯಿಂದ 2ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು. ಬೆಳಗ್ಗೆ ಕಾರ್ಯಕ್ರಮ ಉದ್ಘಾಟನೆ ನಂತರ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು. ಗ್ರಾಮ ಪಂಚಾಯತ್ ಅಧ್ಯಕ್ಷ ಪವಿತ್ರ ಗುಂಡಿ, ಉಪಾಧ್ಯಕ್ಷ ಗೋವಿಂದ ಆಳವುಪಾರೆ, ಮಾಜಿ ಗ್ರಾ.ಪಂ...

ಬೊಳುಬೈಲು ಸಮೀಪ ಕಾರು ಅಪಘಾತ

ಬೊಳುಬೈಲು ಸಮೀಪ ಮಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಘಟನೆ ಕಳೆದ ರಾತ್ರಿ ನಡೆದಿದೆ. ಗಾಂಧಿನಗರದ ಅಶ್ರಫ್ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆನ್ನಲಾಗಿದೆ.
Ad Widget

ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ ಶಾಲಾ ವಠಾರದಲ್ಲಿ ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.18 ರಂದು ನಡೆಯಿತು. ಕಾರ್ಯಕ್ರವನ್ನು ಪರಮೇಶ್ವರ ಪೆರಂಗಜೆ ಉದ್ಘಾಟಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಜಾರುಕಂಬ ಸ್ಪರ್ಧೆ ನಡೆಸಲಾಯಿತು. ಸಭಾ...

ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ 2022 ರ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಜೇತರಾದ ತಾಲೂಕಿನ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ

ಇತ್ತೀಚೆಗೆ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ 2022 ರ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಜೇತರಾದ ತಾಲೂಕಿನ ಕ್ರೀಡಾಪಟುಗಳನ್ನು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್ ನ ಸಭಾಭವನದಲ್ಲಿ ಆ. 19 ರಂದು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್, ಲಯನ್ಸ್ ಕ್ಲಬ್ ಸುಳ್ಯ ಮತ್ತು ಮಹಿಳಾ ಸಮಾಜ ಇದರ ಸಹಯೋಗದಲ್ಲಿ ಅಭಿನಂದಿಸುವ ಕಾರ್ಯಕ್ರಮ...

ಸೆ. 4ರಂದು ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.

ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸುಳ್ಯದ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘದ ಗಿರಿದರ್ಶಿನಿ ಸಭಾ ಭವನದಲ್ಲಿ ಸೆ. 4ರಂದು ಪೂ. 10:30 ಕ್ಕೆ ನಡೆಯಲಿದೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸೀತಾನಂದ ಬೇರ್ಪಡ್ಕರವರು ವಹಿಸಲಿದ್ದಾರೆ. ಸಂಘದ ವತಿಯಿಂದ ಕೊಡಮಾಡುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು...

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಯಲ್ಲಿ ರೋಟರಿ ಕಾಲೇಜ್ ನ ವಿದ್ಯಾರ್ಥಿಗಳು ಚಾಂಪಿಯನ್ .

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಆ. 17 ರಂದು ಸುಳ್ಯದ ಅಮೃತ ಭವನದಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಕಾಲೇಜಿನ ವಿದ್ಯಾರ್ಥಿನಿಯರ ತಂಡ - ದಿಶಾಲಕ್ಷ್ಮೀ ವಿ , ಆಶಿಕಾ ಜೆ, ಶ್ರಾವ್ಯ ಜೆ ಶೆಟ್ಟಿ, ಅಶ್ವಿನಿ ಎಸ್, ನೇಹಾ ಡಿ ಮತ್ತು ಬಾಲಕರ...

ಬೆಳ್ಳಾರೆ: ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಾಹಿತಿ ಕಾರ್ಯಾಗಾರ

ಬೆಳ್ಳಾರೆ: ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಗ್ರಾ.ಪಂ. ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ಳಾರೆ, ಮಾಸ್ತಿಕಟ್ಟೆ, ನೆಟ್ಟಾರು, ಪಾಟಾಜೆ,...

ಅತ್ಯುತ್ತಮ ಕೃಷಿಕ ಹಾಗೂ ಹೈನುಗಾರಿಕೆ ಪ್ರಶಸ್ತಿಗೆ ಸಿ.ಹೆಚ್. ಮಹಮ್ಮದ್ ಅಶ್ರಫ್ ಚಂಡಮೂಲೆ ಆಯ್ಕೆ.

ದೇಲಂಪಾಡಿ: ಸುಳ್ಯದ ಇಂಡಿಯನ್ ಗ್ರಾನೈಟ್ಸ್ & ಟೈಲ್ಸ್ ಮಾಲಕ ಕೃಷಿಕರಾದ ಸಿ.ಹೆಚ್. ಮಹಮ್ಮದ್ ಅಶ್ರಫ್ ಚಂಡಮೂಲೆ ಅವರಿಗೆ ಗ್ರಾಮ ಪಂಚಾಯತ್ ವತಿಯಿಂದ ನೀಡಲಾಗುವ ಅತ್ಯುತ್ತಮ ಕೃಷಿಕ ಹಾಗೂ ಹೈನುಗಾರಿಕೆ ಪ್ರಶಸ್ತಿಯು ಗ್ರಾಮ ಪಂಚಾಯತ್‌ನಲ್ಲಿ ನಡೆದ ಕೃಷಿ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೂಲತಃ ಪರಪ್ಪೆಯವರಾದ ಅಶ್ರಫ್‌ರವರು ಅತ್ಯುತ್ತಮ ಪ್ರಗತಿ ಪರ ಕೃಷಿಕರು ಹಾಗೂ ಉತ್ತಮ...

ಕರಿಕೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿಯಾಗಿ ಡಾ.ಪಲ್ಲವಿ ಕೆ.ಸಿ. ನೇಮಕ

ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಗೆ ಕೆಪಿಎಸ್ಸಿ ಮೂಲಕ ನೇಮಕಾತಿ ನಡೆದಿದ್ದು, ಡಾ. ಪಲ್ಲವಿ ಕೆ.ಸಿ.ಯವರು ಮಡಿಕೇರಿ ತಾಲ್ಲೂಕಿನ ಕರಿಕೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಕ್ಕೆ ಸೇವೆಗೆ ನೇಮಕಾತಿಗೊಂಡಿದ್ದಾರೆ.ಮೂಲತಃ ಸುಳ್ಯ ತಾಲ್ಲೂಕಿನ ಅರಂತೋಡು ಗ್ರಾಮದ ಕರಿ0ಬಿ ಮನೆ ಚಿನ್ನಪ್ಪ ಗೌಡ ಮತ್ತು ಪುಷ್ಪಾವತಿ ಶಿಕ್ಷಕ ದಂಪತಿಗಳ ಪುತ್ರಿಯಾಗಿರುವ ಇವರು, 2006ರಿಂದ 2021ವರೆಗೆ ಸುದೀರ್ಘ 15 ವರ್ಷಗಳ ಕಾಲ ಕೊಲ್ಲಮೊಗ್ರ...

ಅಮರ ಮುಡ್ನೂರು : ಸುಳ್ಯ ಅಮರ ಸಂಘಟನಾ ಸಮಿತಿಯ ವಾರ್ಷಿಕ ಮಹಾಸಭೆ

ಸುಳ್ಯ ಅಮರ ಸಂಘಟನಾ ಸಮಿತಿಯ ವಾರ್ಷಿಕ ಮಹಾಸಭೆಯು ಆ. 14 ರಂದು ಅಮರ ಮುಡ್ನೂರು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕುಸುಮಾಧರ ರವರು ವಹಿಸಿದ್ದರು. ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷ ಕುಸುಮಾಧರ ಹುಟ್ಟೂರು, ಅಧ್ಯಕ್ಷ ಪ್ರವೀಣ್ ಕುಲಾಲ್ ಪೈಲಾರ್, ಉಪಾಧ್ಯಕ್ಷ ಜಯಪ್ರಸಾದ್ ಸಂಕೇಶ, ಕಾರ್ಯದರ್ಶಿ ಭವಿತ ಬೇರಿಕೆ, ಜತೆಕಾರ್ಯದರ್ಶಿ...
Loading posts...

All posts loaded

No more posts

error: Content is protected !!