- Friday
- May 8th, 2026
ಕೆವಿಜಿ ಐಪಿಎಸ್, ಕೆವಿಜಿ ಐಟಿಐ ಮತ್ತು ಕೆವಿಜಿ ಅಮರಜ್ಯೋತಿ ಪಿಯು ಕಾಲೇಜು ಜಂಟಿಯಾಗಿ ಅ.15 ರಂದು ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು . ಕೆವಿಜಿ ಐಟಿಐ ಸಿಬ್ಬಂದಿ ಭವಾನಿ ಶಂಕರ್ ಅಡ್ತಲೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಸೈನಿಕ ಸಂಘ ಸುಳ್ಯ ಇದರ ಉಪಾಧ್ಯಕ್ಷ ಮಾಧವ ಬಿ....
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಭಾಷಣ, ಯೋಧರ ಚರಿತ್ರೆ ಓದುವುದು, ದೇಶಭಕ್ತಿ ಗೀತೆ ಹಾಡುವುದು ನಡೆಯಿತು. ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಮೋಹನ್ ಉತ್ರಂಬೆ ಮತ್ತು ಮೋಹನ್...
ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯು ಆ.15 ರಂದು ನಡೆಯಿತು. ಬೆಳಗ್ಗೆ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ವಿ.ಸುಬ್ರಾಯ ರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಇವರು ಸ್ವಾತಂತ್ರ್ಯ ಪೂರ್ವದ ನೆನಪುಗಳು, ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, ಸ್ವಾತಂತ್ರ್ಯ...
ಪಂಬೆತ್ತಾಡಿ ಹಾಲು ಉತ್ಪಾದಕರ ಸಂಘದಲ್ಲಿ ಅಧ್ಯಕ್ಷ ಜಯರಾಮ ಭಟ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ಜಾಕೆ ದಯಾನಂದ, ಸಂಘದ ನಿರ್ದೇಶಕರಾದ ಕುಲದೀಪ್, ದಿನೇಶ್ ಪಂಜದ ಬೈಲು, ನಾಗಪ್ಪ ಗೌಡ,ಗಣೇಶ್ ಭಟ್,ಕಾರ್ತಿಕ್ ಭೀಮಗುಳಿ,ಊರಿನ ಪ್ರಮುಖರು ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ಗ್ರಾ.ಪಂ ವತಿಯಿಂದ ಸುಬ್ರಹ್ಮಣ್ಯ ಪಂಚಾಯತ್ ವ್ಯಾಪ್ತಿಯ ಯೇನೆಕಲ್ಲುನ ಬಾನಡ್ಕ-ಬೋಳಡ್ಕ ಪಂಚಾಯತ್ ರಸ್ತೆಗೆ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸೈನಿಕ ರಸ್ತೆ ಎಂದು ನಾಮಕರಣ ಮಾಡಲಾಯಿತು.ಕಡಬ ತಾಲೂಕು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಜೆ.ಪಿ.ಎಂ ಚೆರಿಯನ್ ರಸ್ತೆ ನಾಮಕರಣ ಫಲಕವನ್ನು ಅನಾವರಣಗೊಳಿಸಿದರು.ಈ ಮೂಲಕ ಬಾನಡ್ಕ-ಬೋಳಡ್ಕ ರಸ್ತೆಯು ಅಧಿಕೃತವಾಗಿ ಸೈನಿಕ ರಸ್ತೆ ಎಂದು ಉಲ್ಲೇಖಿತವಾಯಿತು. ಗ್ರಾಮೀಣ...
ಕೊಡಗು ಸಂಪಾಜೆ ಗ್ರಾಮದ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದ್ವಜಾರೋಹಣ ಕಾರ್ಯಕ್ರಮವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಿರ್ಮಲ ಭರತ್ ರವರು ನೆರವೇರಿಸಿದರು. ಈ ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಗದೀಶ್ ಪರಮಲೆ, ಸದಸ್ಯರಾದ ಶ್ರೀಮತಿ ರಮಾದೇವಿ ಕಳಗಿ, ಶ್ರೀ ಕುಮಾರ್ ಚೆದ್ಕಾರ್, ಆಡಳಿತಾಧಿಕಾರಿ ಶ್ರೀ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಆ.12 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚೆಗೆ ಬರೆ ಜರಿದು ಮನೆ ಕಳೆದುಕೊಂಡ ತೇಜಕುಮಾರ್ ಕಜ್ಜೋಡಿ ಮನೆಯವರಿಗೆ ಲಯನ್ಸ್ ಕ್ಲಬ್ ವತಿಯಿಂದ ಸಹಾಯಧನ ವಿತರಿಸಲಾಯಿತು. ತಾರಾಮತಿ ಕಜ್ಜೋಡಿ ಅವರು ಸಹಾಯಧನ ಸ್ವೀಕರಿಸಿದರು. ಹಾಗೂ ಆ.02 ರಂದು ಹರಿಹರ ಪಲ್ಲತ್ತಡ್ಕದ ಸೇತುವೆಯಲ್ಲಿ ಸಿಲುಕಿದ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಂತಿನಗರದಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಶಶಿಕಲಾರವರು ಮುಖ್ಯ ಶಿಕ್ಷಕಿಯಾಗಿ ಭಡ್ತಿ ಪಡೆದು ಅಲೆಕ್ಕಾಡಿ ಸ.ಹಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಆ. 10ರಂದು ಮುರುಳ್ಯ ಶಾಂತಿನಗರ ಶಾಲೆಯಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಿನೇಶ್ ನಡುಬೈಲು ವಹಿಸಿದ್ದರು. ಸನ್ಮಾನ ಕಾರ್ಯಕ್ರಮವನ್ನು...
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ರವರ ಪೆನ್ಸಿಲ್ ಆರ್ಟ್ ಭಾವಚಿತ್ರವನ್ನು ಸುಳ್ಯ ಕಸಬಾದ ಬೆಟ್ಟಂಪಾಡಿ ನಿವಾಸಿ ಪೂಜಾ ರವರು ಬರೆದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ,ಹೇಮನಾಥ ಕೆ.ವಿ,ಜಗದೀಶ್ ಅಡ್ತಲೆ, ರಜತ್ ಅಡ್ಯಾರ್, ನವನೀತ್ ಬೆಟ್ಟಂಪಾಡಿ ಉಪಸ್ಥಿತರಿದ್ದರು.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಮೂಡುಬಿದ್ರೆ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ವಿ.ವಿ.ಗಳ ಕಿರುನಾಟಕ ಸ್ಪರ್ಧೆಯಲ್ಲಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ವಿದ್ಯಾರ್ಥಿಗಳು ಅಭಿನಯಿಸಿದ 'ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ-1837' ನಾಟಕವು ಪ್ರಥಮ ಪ್ರಶಸ್ತಿಯನ್ನು ಪಡೆದಿರುತ್ತದೆ. ಕರ್ನಾಟಕದ ಪ್ರತಿಷ್ಠಿತ 15 ವಿಶ್ವವಿದ್ಯಾನಿಲಯಗಳು ಪ್ರದರ್ಶಿಸಿದ ಒಟ್ಟು 31...
Loading posts...
All posts loaded
No more posts
