ಮಡಪ್ಪಾಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಕುರಿತು ಪೂರ್ವಭಾವಿ ಸಭೆ

ಮಡಪ್ಪಾಡಿ ಗ್ರಾಮ ಪಂಚಾಯಿತಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಕುರಿತು ಮತ್ತು ''ಹರ್ ಘರ್ ತಿರಂಗಾ '' ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆಯನ್ನು ಆಗಸ್ಟ್ 8ರಂದು ನಡೆಸಲಾಯಿತು. ನಂತರ ಮನೆಮನೆಗೂ ರಾಷ್ಟ್ರಧ್ವಜವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ,ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು,...

ನಡುಗಲ್ಲು :- ವಿದ್ಯುತ್ ಲೈನ್ ಗೆ ತಾಗುವ ಗೆಲ್ಲು ಕಡಿಯುವ ಮೂಲಕ ಶ್ರಮದಾನ

ಆ.07 ರಂದು ನಡುಗಲ್ಲು ಶಾಲೆಯ ಹತ್ತಿರದಿಂದ ಅಂಬೆಕಲ್ಲು, ಹಲ್ಗುಜಿ, ಕಲ್ಲಾಜೆಯವರೆಗೆ ವಿದ್ಯುತ್ ಲೈನ್ ಗೆ ತಾಗುವ ಗೆಲ್ಲು ಕಡಿಯುವ ಮೂಲಕ ಶ್ರಮದಾನ ಮಾಡಲಾಯಿತು. ಊರಿನವರು ಈ ಶ್ರಮದಾನದಲ್ಲಿ ಭಾಗವಹಿಸಿದ್ದರು. ಹಾಗೂ ಮೆಸ್ಕಾಂ ನವರು ಸಹಕರಿಸಿದರು. ವರದಿ :- ಉಲ್ಲಾಸ್ ಕಜ್ಜೋಡಿ
Ad Widget

ಖುಷಿಯ ನಗುವಿಗಾಗಿ ಸಹಾಯ ಮಾಡಿ

ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸಿ ಜೀವನ ಸಾಗಿಸುತ್ತಿರುವ ಯೋಗೀಶ್ ಹಾಗೂ ಲಲಿತಾ (ರೇಷ್ಮಾ) ದಂಪತಿಗಳ ಪುತ್ರಿ ಖುಷಿ ಇದುವರೆಗೂ ಎಲ್ಲರಂತೆ ಖುಷಿಯಿಂದ ಓಡಾಡಿಕೊಂಡಿದ್ದ ಹುಡುಗಿ. ಯೋಗೀಶ್ ಅವರ ಮೂವರು ಮಕ್ಕಳಲ್ಲಿ ಖುಷಿ (9ವರ್ಷದ) ಎರಡನೆಯವಳು. ದಿನ ತಲೆ ನೋವು ಎಂದು ಅಳುತ್ತಿದ್ದ ಖುಷಿಯನ್ನು ಪರಿಕ್ಷೀಸಿದ ವೈದ್ಯರಿಗೆ ಅಚ್ಚರಿ ಕಾದಿತ್ತು. ಮಗು ಬ್ರೈನ್ ಟ್ಯೂಮರ್ ಕಾಯಿಲೆಯಿಂದಬಳಲುತ್ತಿದ್ದು ಬಾಲಕಿಗೆ...

ಕಳಂಜ: ಪಟ್ಟೆ ಗುಳಿಗನ ಬನದಲ್ಲಿ ಆಟಿಯ ಅಗೇಲು ಸೇವೆ

ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.07ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.

ಲ್ಯಾಂಪ್ಸ್ ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

ಸುಳ್ಯ ತಾಲೂಕು ಲ್ಯಾಂಪ್ಸ್ ಸಹಕಾರ ಸಂಘ 2021-22 ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಪ್ರಗತಿಯನ್ನು ಗುರುತಿಸಿ ವಿಶೇಷ ಪ್ರೋತ್ಸಾಹಕ ಬಹುಮಾನ ಪ್ರಶಸ್ತಿಯನ್ನು ಆ.05 ರಂದು ನಡೆದ ಎಸ್ ಸಿ ಡಿ ಡಿ ಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಸೀತಾನಂದ ಎಸ್. ಮತ್ತು ಕಾರ್ಯದರ್ಶಿ ಚಂದ್ರಶೇಖರ ಡಿ. ಯವರನ್ನು ಪ್ರಶಸ್ತಿ ಸ್ಮರಣಿಕೆ ನೀಡಿ ಸನ್ಮಾಸಿದರು....

ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು, ಆ.05 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಸಂಘದ ಅಧ್ಯಕ್ಷರಾದ ಹರ್ಷಕುಮಾರ್ ದೇವಜನ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನ ಪ್ರಶಸ್ತಿ...

ಮಡಪ್ಪಾಡಿ : ಬಾಳಿಕಳ ಕೇಪಳಕಜೆ ರಸ್ತೆ ಸಂಪರ್ಕ ಕಡಿತ

ಮಡಪ್ಪಾಡಿ ಗ್ರಾಮದ ಬಾಳಿಕಳ ಕೇಪಳಕಜೆ ರಸ್ತೆಯಲ್ಲಿ ಭಾರಿ ಮಳೆಗೆ ಮೋರಿ ಹಾನಿಯಾಗಿ ರಸ್ತೆ ಕುಸಿದಿದೆ. ಇದರಿಂದಾಗಿ ಕೇಪಳಕಜೆ ಭಾಗದ 7 ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಾಗಿದೆ. ಈ ಬಗ್ಗೆ ಸ್ಥಳೀಯಾಡಳಿತ ಶೀಘ್ರ ಗಮನಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಕಲ್ಮಕಾರು :- ಗುಳಿಕ್ಕಾನದ 6 ಮನೆಯ 21 ಜನರು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಬಾಳುಗೋಡು, ಕಲ್ಮಕಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕಲ್ಮಕಾರು ಗ್ರಾಮದ ಗುಳಿಕ್ಕಾನ ಎಂಬಲ್ಲಿ ಗುಡ್ಡ ಜರಿಯುವ ಭೀತಿಯಲ್ಲಿದ್ದ 6 ಕುಟುಂಬಗಳ 21 ಜನರನ್ನು ಕಲ್ಮಕಾರು ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಲ್ಮಕಾರು ಶಾಲೆಯ ಬಿಳಿಮಲೆ ಲಕ್ಷ್ಮೀ ರಾಮಣ್ಣ ರಂಗಮಂದಿರದ ತಾತ್ಕಾಲಿಕ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ವರದಿ...

ಕಂದ್ರಪ್ಪಾಡಿ: ಬರೆ ಕುಸಿದು ರಸ್ತೆ ಹಾನಿ

ಆ.4 ರ ಸಂಜೆ ಸುರಿದ ಭಾರಿ ಮಳೆಗೆ ಕಂದ್ರಪ್ಪಾಡಿ ದೇವ ಮಡಪ್ಪಾಡಿ ಸಂಪರ್ಕಿಸುವ ರಸ್ತೆಯ ಕಂದ್ರಪ್ಪಾಡಿ ಎಂಬಲ್ಲಿ ಬರೆ ಕುಸಿದು ರಸ್ತೆಯಲ್ಲಿ ಸಂಚರಿಸಲು ಸಂಕಷ್ಟವಾಗಿದೆ

ಮರ್ಕಂಜ: ಹೊಸೋಳಿಕೆ ಕೊಟ್ಟಿಗೆ ಬಿದ್ದು ಹಾನಿ

ಆ.3ರಂದು ಮುಂಜಾನೆ ಸುರಿದ ಮಳೆಗೆ ಮರ್ಕಂಜ ಗ್ರಾಮದ ಹೊಸೋಳಿಕೆ ಮೋಹನ್ ನಾಯ್ಕ್ ಎಂಬವರ ಮನೆಯ ಕೊಟ್ಟಿಗೆ ಬಿದ್ದು ಸಂಪೂರ್ಣ ಹಾನಿಗೊಂಡಿದೆ ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!