ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕೊರತ್ತೋಡಿ – ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ ಆಯ್ಕೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಇಂದು ಸಂಘದ ಅಧ್ಯಕ್ಷ ಪದ್ಮನಾಭ ಮುಂಡೋಕಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಾಸಭೆಯ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ದಯಾನಂದ ಕೊರತ್ತೋಡಿ, ಕಾರ್ಯದರ್ಶಿ ಯಾಗಿ ದಯಾನಂದ ಕೇರ್ಪಳ, ಖಜಾಂಜಿಯಾಗಿ ದಯಾನಂದ ಕಲ್ನಾರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸತೀಶ್ ಹೊದ್ದೆಟ್ಟಿ, ಜತೆ ಕಾರ್ಯದರ್ಶಿ ಪ್ರಜ್ಞಾ ಎಸ್. ನಾರಾಯಣ್, ನಿರ್ದೇಶಕರಾಗಿ...

ಆ.03 ; ಶಾಲಾ ಕಾಲೇಜುಗಳಿಗೆ ನಾಳೆ ರಜೆ

ವಿಪರೀತ ಮಳೆ ಹಾಗೂ ಪ್ರಾಕೃತಿಕ ವಿಕೋಪದ ಹಿನ್ನಲೆಯಲ್ಲಿ ಸುಳ್ಯ ಹಾಗು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ ಹಾಗು ಕಾಲೇಜುಗಳಿಗೆ ಆ.03 ರಂದು ರಜೆ ಘೋಷಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶ ಮಾಡಿದ್ದಾರೆ.
Ad Widget

ಹರಿಹರ: ಹೊಳೆಗೆ ಬಿದ್ದ ಕ್ರೇನ್ ಆಪರೇಟರ್ -ನೀರಿಗೆ ಹಾರಿ ರಕ್ಷಿಸಿದ ಸೋಮಶೇಖರ ಕಟ್ಟೆಮನೆ

ಹರಿಹರಪಲ್ಲತಡ್ಕದ ಸೇತುವೆಗೆ ಪವಾಹದಲ್ಲಿ ಬಂದಿದ್ದ ಮರದ ದಿಮ್ಮಿಗಳು ಸಿಕ್ಕಿಹಾಕಿಕೊಂಡು ಅವಾಂತರವನ್ನೇ ಸೃಷ್ಟಿಸಿತ್ತು. ಈ ಮರಗಳು ತೆರವು ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕ್ರೇನ್ ಆಪರೇಟರ್ ಶರೀಫ್ ಎಂಬವರು ನದಿಗೆ ಬಿದ್ದಿದ್ದು ಅವರನ್ನು ರಕ್ಷಿಸಿದ ಘಟನೆ ಇಂದು ನಡೆದಿದೆ. ಅಪರೇಟರ್ ನೀರಿಗೆ ಬಿದ್ದ ತಕ್ಷಣ ಸೋಮಶೇಖರ್ ಕಟ್ಟೆಮನೆ ಎಂಬವರು ನೀರಿಗೆ ಅವರನ್ನು ರಕ್ಷಿಸಿದರು. ಸ್ಥಳೀಯರ ಸಹಕಾರದಿಂದ ಅವರನ್ನು...

ಸುಬ್ರಹ್ಮಣ್ಯ : ಮಕ್ಕಳನ್ನು ಕಳೆದುಕೊಂಡ ಕುಟುಂಬಕ್ಕೆ ಸಚಿವ ಎಸ್.ಅಂಗಾರರಿಂದ ಪರಿಹಾರಧನ ಹಸ್ತಾಂತರ

ಸುಬ್ರಹ್ಮಣ್ಯದಲ್ಲಿ ಆ.1 ರಂದು ನಡೆದ ಭೂಕುಸಿತದಿಂದಾಗಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ರೂ.11 ಲಕ್ಷ 5 ಸಾವಿರ ಮೊತ್ತದ ಒಟ್ಟು 3 ಚೆಕ್ ನ್ನು ಸಚಿವ ಎಸ್. ಅಂಗಾರ ಆ. 2 ರಂದು ಕುಸುಮಾಧರಿಗೆ ಕುಸುಮಾಧರರ ತಂದೆ ಬೊಮ್ಮಣ ಗೌಡ ಕರಿಮಜಲುರವರ ನಿವಾಸದಲ್ಲಿ ವಿತರಿಸಿದರು. ಮೃತಪಟ್ಟ ಇಬ್ಬರು ಮಕ್ಕಳಿಗಾಗಿ ಸರಕಾರದಿಂದ ತಲಾ 5 ಲಕ್ಷದಂತೆ ಹಾಗೂ ಮನೆ...

ಎಣ್ಮೂರು: ಶಾಲಾ ಮಟ್ಟದ ಪ್ರತಿಭಾ ಕಾರಂಜಿ

ಮಕ್ಕಳ ಸುಪ್ತ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ನಡೆಸುವ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಪ್ರತಿಭಾ ಕಾರಂಜಿಯ ಶಾಲಾ ಮಟ್ಟದ ಸ್ಪರ್ಧೆಯು ಸರಕಾರಿ ಪ್ರೌಢ ಶಾಲೆ ಎಣ್ಮೂರಿನಲ್ಲಿ ಇಂದು ಜರುಗಿತು. ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ ಇವರು ಸ್ಪರ್ಧೆಯ ಕ್ರಮ ಸಂಖ್ಯೆ ಎತ್ತುವುದರ ಮೂಲಕ ಉದ್ಘಾಟಿಸಿ, ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ...

ಸುಬ್ರಹ್ಮಣ್ಯ: ಮನೆ ಮೇಲೆ ಗುಡ್ಡೆ ಜರಿದು ಇಬ್ಬರು ಮಕ್ಕಳು ಮೃತ್ಯು

ಮನೆ ಮೇಲೆ ಗುಡ್ಡ ಜರಿದು ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿರುವ ಘಟನೆ ಸುಬ್ರಹ್ಮಣ್ಯದ ಕುಮಾರಧಾರ ಸಮೀಪ ನಡೆದಿದೆ. ಕುಸುಮಾಧರ ಎಂಬವರ ಮನೆ ಕುಸಿತವಾಗಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣುಪಾಲಾಗಿದ್ದಾರೆ. ಸದ್ಯ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು, ಜೆಸಿಬಿ ತರಿಸಿ ಮೃತದೇಹಗಳನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ. ಆದರೆ ಕುಮಾರಧಾರದಿಂದ ಪಂಜ ಕಡೆಗೆ ಹೋಗುವ ರಸ್ತೆ...

ಸುಬ್ರಹ್ಮಣ್ಯ : ಉಸ್ತುವಾರಿ ಸಚಿವರ ಸೂಚನೆಯಂತೆ ಎನ್.ಡಿ.ಆರ್.ಎಫ್ ತಂಡ ರವಾನೆ

ದ.ಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು,ಹರಿಹರ,ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಮುಂಜಾಗ್ರತಾ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್ ಡಿಆರ್ ಎಪ್ ತಂಡವನ್ನು ಆ ಭಾಗಕ್ಕೆ ಈಗಾಗಲೆ ಕಳುಹಿಸಿಕೊಡಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ನೆರೆ ಸಂದರ್ಭ ಸಾರ್ವಜನಿಕರು...

ಸಂಪಾಜೆ: ಪಂಚಾಯತ್ ಸಾಮಾನ್ಯ ಸಭೆ

ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು. ಸಭೆಯಲ್ಲಿ ಭೂಕಂಪ ಸಂದರ್ಭದಲ್ಲಿ ಹಾನಿಯದ ಮನೆಗಳಿಗೆ ಪರಿಹಾರ ಸಿಗದಿರುವ ಹಾಗೂ ಬೆಂಕಿ ಅವಘಡ ಆದಾಗ ಪರಿಹಾರ ನೀಡದಿರುವುದನ್ನು ಸದಸ್ಯರುಗಳು ಜಿಲ್ಲಾಧಿಕಾರಿಯವರಿಗೆ...

ಗುತ್ತಿಗಾರು : ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ – 1837ರ ಉಪನ್ಯಾಸ ಕಾರ್ಯಕ್ರಮ

ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಗುತ್ತಿಗಾರು ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ - 1837ರ ಉಪನ್ಯಾಸ ಮಾಲಿಕೆಯ ಮೂರನೇ ಉಪನ್ಯಾಸ ‌ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರುನಲ್ಲಿ ನಡೆಸಲಾಯಿತು....

ಆಳ್ವಾಸ್ ನ “ಅಮರಕ್ರಾಂತಿ” ನಾಟಕ ರಾಜ್ಯ ಮಟ್ಟಕ್ಕೆ ಆಯ್ಕೆ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ನಾಟಕ ಸ್ಪರ್ಧೆಯಲ್ಲಿ ಅಳ್ವಾಸ್ ಕಾಲೇಜು ಮೂಡುಬಿದ್ರೆಯ ವಿದ್ಯಾರ್ಥಿಗಳು ಅಭಿನಯಿಸಿದ "ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ-1837" ನಾಟಕವು ಪ್ರಥಮ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ಇದಕ್ಕೂ ಮೊದಲು ಮಂಗಳೂರಿನ ರಾಮಕೃಷ್ಣ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ.ಫಟಕ ಮಟ್ಟದ ಸ್ಪರ್ಧೆಯಲ್ಲೂ ಈ...
Loading posts...

All posts loaded

No more posts

error: Content is protected !!