ಎಣ್ಮೂರು: ಶಾಲಾ ಮಟ್ಟದ ಪ್ರತಿಭಾ ಕಾರಂಜಿ

ಮಕ್ಕಳ ಸುಪ್ತ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ನಡೆಸುವ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ಪ್ರತಿಭಾ ಕಾರಂಜಿಯ ಶಾಲಾ ಮಟ್ಟದ ಸ್ಪರ್ಧೆಯು ಸರಕಾರಿ ಪ್ರೌಢ ಶಾಲೆ ಎಣ್ಮೂರಿನಲ್ಲಿ ಇಂದು ಜರುಗಿತು. ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ ಇವರು ಸ್ಪರ್ಧೆಯ ಕ್ರಮ ಸಂಖ್ಯೆ ಎತ್ತುವುದರ ಮೂಲಕ ಉದ್ಘಾಟಿಸಿ, ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ...

ಸುಬ್ರಹ್ಮಣ್ಯ: ಮನೆ ಮೇಲೆ ಗುಡ್ಡೆ ಜರಿದು ಇಬ್ಬರು ಮಕ್ಕಳು ಮೃತ್ಯು

ಮನೆ ಮೇಲೆ ಗುಡ್ಡ ಜರಿದು ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿರುವ ಘಟನೆ ಸುಬ್ರಹ್ಮಣ್ಯದ ಕುಮಾರಧಾರ ಸಮೀಪ ನಡೆದಿದೆ. ಕುಸುಮಾಧರ ಎಂಬವರ ಮನೆ ಕುಸಿತವಾಗಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣುಪಾಲಾಗಿದ್ದಾರೆ. ಸದ್ಯ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು, ಜೆಸಿಬಿ ತರಿಸಿ ಮೃತದೇಹಗಳನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ. ಆದರೆ ಕುಮಾರಧಾರದಿಂದ ಪಂಜ ಕಡೆಗೆ ಹೋಗುವ ರಸ್ತೆ...
Ad Widget

ಸುಬ್ರಹ್ಮಣ್ಯ : ಉಸ್ತುವಾರಿ ಸಚಿವರ ಸೂಚನೆಯಂತೆ ಎನ್.ಡಿ.ಆರ್.ಎಫ್ ತಂಡ ರವಾನೆ

ದ.ಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು,ಹರಿಹರ,ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಮುಂಜಾಗ್ರತಾ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್ ಡಿಆರ್ ಎಪ್ ತಂಡವನ್ನು ಆ ಭಾಗಕ್ಕೆ ಈಗಾಗಲೆ ಕಳುಹಿಸಿಕೊಡಲಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ನೆರೆ ಸಂದರ್ಭ ಸಾರ್ವಜನಿಕರು...

ಸಂಪಾಜೆ: ಪಂಚಾಯತ್ ಸಾಮಾನ್ಯ ಸಭೆ

ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು. ಸಭೆಯಲ್ಲಿ ಭೂಕಂಪ ಸಂದರ್ಭದಲ್ಲಿ ಹಾನಿಯದ ಮನೆಗಳಿಗೆ ಪರಿಹಾರ ಸಿಗದಿರುವ ಹಾಗೂ ಬೆಂಕಿ ಅವಘಡ ಆದಾಗ ಪರಿಹಾರ ನೀಡದಿರುವುದನ್ನು ಸದಸ್ಯರುಗಳು ಜಿಲ್ಲಾಧಿಕಾರಿಯವರಿಗೆ...

ಗುತ್ತಿಗಾರು : ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ – 1837ರ ಉಪನ್ಯಾಸ ಕಾರ್ಯಕ್ರಮ

ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಗುತ್ತಿಗಾರು ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ - 1837ರ ಉಪನ್ಯಾಸ ಮಾಲಿಕೆಯ ಮೂರನೇ ಉಪನ್ಯಾಸ ‌ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರುನಲ್ಲಿ ನಡೆಸಲಾಯಿತು....

ಆಳ್ವಾಸ್ ನ “ಅಮರಕ್ರಾಂತಿ” ನಾಟಕ ರಾಜ್ಯ ಮಟ್ಟಕ್ಕೆ ಆಯ್ಕೆ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ನಾಟಕ ಸ್ಪರ್ಧೆಯಲ್ಲಿ ಅಳ್ವಾಸ್ ಕಾಲೇಜು ಮೂಡುಬಿದ್ರೆಯ ವಿದ್ಯಾರ್ಥಿಗಳು ಅಭಿನಯಿಸಿದ "ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ-1837" ನಾಟಕವು ಪ್ರಥಮ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ಇದಕ್ಕೂ ಮೊದಲು ಮಂಗಳೂರಿನ ರಾಮಕೃಷ್ಣ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ.ಫಟಕ ಮಟ್ಟದ ಸ್ಪರ್ಧೆಯಲ್ಲೂ ಈ...

ಪ್ರವೀಣ್ ಹತ್ಯೆಗೆ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡನೆ

ಯುವ ಬಿಜೆಪಿ ಮುಂದಾಳು ಪ್ರವೀಣ್ ನೆಟ್ಟಾರು ಹತ್ಯೆಯನ್ನು ಕ್ರೀಡಾ ಮತ್ತು ಕಲಾಪೋಷಕರಾದ ವೇಣುಗೋಪಾಲ ದೇರಪ್ಪಜ್ಜನಮನೆ ಖಂಡಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು ಪ್ರವೀಣ್ ಹಂತಕರನ್ನು ಕೂಡಲೇ ಬಂಧಿಸಿ ನಡುರಸ್ತೆಯಲ್ಲೇ ಎನ್ ಕೌಂಟರ್ ಮಾಡಬೇಕು, ಅದಾಗಲೇ ‌ಮೃತನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಆಡಳಿತ ಮಾಡುವಾಗ ಎಲ್ಲರಿಗೂ ಸಮಾನವಾಗಿ ಏಕಮಾತ್ರ ತೀರ್ಮಾನ ಮಾಡಬೇಕು-ಭರತ್ ಮುಂಡೋಡಿ

ಬ್ಲಾಕ್ ಕಾಂಗ್ರೆಸ್ ವತಿಯಿಂದ ಜು.30ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಧನಂಜಯ ಅಡ್ಪಂಗಾಯ ಮಾತನಾಡಿ, ಬೆಳ್ಳಾರೆಯು ಸುಳ್ಯ ತಾಲೂಕಿಗೆ ಇಂದು ಕಪ್ಪು ಚುಕ್ಕಿ ತಂದಿದೆ. ಧರ್ಮದ ಹೆಸರಿನಲ್ಲಿ, ರಾಜ್ಯ ಧರ್ಮದ ನೆಲೆಯಲ್ಲಿ ಸಮಾಜದ ಹಿತದೃಷ್ಟಿಯಿಂದ ಚುನಾವಣಾ ಭಾಷಣಗಳು ಮತ್ತು ಪ್ರಚೋದನೆ ಭಾಷಣ ಬದಲಿಗೆ ದೇಶದ ಅಭಿವೃದ್ಧಿಯ ಭಾಷಣ ನಡೆದರೆ ಇಂತಹ ಕೊಲೆ...

ಜು.31 : ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಬೇಕಾಗಿದ್ದ ವಿಚಾರಗೋಷ್ಠಿ ಮುಂದೂಡಿಕೆ

ಜು.31 : ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಬೇಕಾಗಿದ್ದ ವಿಚಾರಗೋಷ್ಠಿ ಮುಂದೂಡಿಕೆ ದ. ಕ ಜಿಲ್ಲಾಧಿಕಾರಿಯರ ಆದೇಶದಂತೆ ದ. ಕ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ಜು.31 ರಂದು ಸುಳ್ಯದ ಅಂಬಟೆಡ್ಕ ಕನ್ನಡ ಭವನದಲ್ಲಿ ನಡೆಯಬೇಕಿದ್ದ 1837ರ ಅಮರ ಸುಳ್ಯ ಹೋರಾಟದ ಕುರಿತಾದ ವಿಚಾರಗೋಷ್ಠಿ ಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕ ವನ್ನು ತಿಳಿಸಲಾಗುವುದು. ಕಾರ್ಯಕ್ರಮದ ಸಂಚಾಲಕರು ಪ್ರಕಟಣೆಯಲ್ಲಿ...

ಮಡಪ್ಪಾಡಿ: ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ಧನ್ಯಕುಮಾರ್ ದೇರುಮಜಲು ರಾಜೀನಾಮೆ

ರಾಜ್ಯದ್ಯಾಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಪಕ್ಷಕ್ಕಿಂತ ಹಿಂದುತ್ವ ಮುಖ್ಯ ಇನ್ನೆಷ್ಟು ಹೆಣಗಳು ಬೇಕು ಸಾಮಾನ್ಯ ಕಾರ್ಯಕರ್ತರದ್ದು ಇಂದು ಪ್ರವೀಣ್ ನೆಟ್ಟಾರು ನಾಳೆ ನಾವು ಇಷ್ಟೇ ಜೀವನ, ಇಂದು ಪ್ರವೀಣ್ ಅಣ್ಣನಿಗೆ ಬಂದ ಪರಿಸ್ಥಿತಿ ನಮಗೆ ಬರುವುದು ಬೇಡ, ಕರ್ನಾಟಕ ಬಿಜೆಪಿಯ ಬೊಗಳೆ...
Loading posts...

All posts loaded

No more posts

error: Content is protected !!