- Friday
- May 8th, 2026
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಭೇಟಿ ನೀಡಲಿದ್ದಾರೆ. ಬೆಂಗಳೂರು ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 3.30ಕ್ಕೆ ಹೊರಟು 4.25 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 6.30ಕ್ಕೆ ಬೆಳ್ಳಾರೆಗೆ ಆಗಮಿಸಿದ ನಂತರ ಪ್ರವೀಣ್ ನೆಟ್ಟಾರು ಅವರ...
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ ರವರು ಜು 25 ರಂದು ಸಂಘದ ಪದಾಧಿಕಾರಿಗಳೊಂದಿಗೆ ಸುಳ್ಯದಲ್ಲಿ ಉಚಿತ ವಸತಿ ನಿಲಯಕ್ಕಾಗಿ ಮಂಜೂರಾದ ಸ್ಥಳಕ್ಕೆ ಆಗಮಿಸಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಮಾತನಾಡಿ, ಈ ಭಾಗದ ಹೆಚ್ಚಿನ ಗೌಡ ಸಮುದಾಯದವರು ಕೃಷಿ ಆಧಾರಿತ ಜೀವನ...
ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಜುಲೈ 25 ಮತ್ತು 26 ರಂದು ಮೂಡಬಿದಿರೆಯ ಕನ್ನಡ ಭವನದಲ್ಲಿ ನಡೆದ ಅಂತರ್ ಕಾಲೇಜು ವೇಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ಶ್ರೀ ಶಾರದಾ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ರಕ್ಷಾ ಕೆ.ಆರ್.ಗೆ ಮಹಿಳೆಯರ 55 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇವರು ವೇಟ್...
ಪರಮಪೂಜ್ಯಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವ ಗ್ರಾಮೋತ್ಸವ ಗುರುವಂದನೆ ಅಂಗವಾಗಿ ಸುಳ್ಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಶಾಖೆ , ಗುರುದೇವ ಸೇವಾ ಬಳಗ ಸುಳ್ಯ ಕುಕ್ಕುಜಡ್ಕ ಮುರುಳ್ಯ ಇವುಗಳ ಸಹಭಾಗಿತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಕ್ರೀಡೋತ್ಸವವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು....
ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬುವವರ ಭೀಕರ ಹತ್ಯೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಮೊನ್ನೆ ನಡೆದ ಮಸೂದ್ ಎಂಬ ಯುವಕನ ಹತ್ಯೆ, ನಿನ್ನೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಇಂತಹ ದುಷ್ಕೃತ್ಯಗಳನ್ನು ಜಾತಿ, ಮತ, ಪಕ್ಷಗಳನ್ನು ಮೀರಿ ಮನುಕುಲದ ಎಲ್ಲರೂ ಖಂಡಿಸುವುದು ಅನಿವಾರ್ಯವಾಗಿರುತ್ತದೆ. ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು...
ಬೆಳ್ಳಾರೆ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆಯಲ್ಲಿ ಏಳು ಜನರನ್ನು ವಶ ಪಡಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾವನಾ ಸುಗಮ ಸಂಗೀತ ಬಳಗ(ರಿ.)ಸುಳ್ಯ ಇವರ ಸಹಯೋಗದಲ್ಲಿ ನಡೆಯುತ್ತಿರುವ ದೇಶಭಕ್ತಿ ಗೀತೆ ಗಾಯನ ಅಭಿಯಾನ-2022 ಸರಣಿಯ 6 ನೇ ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಲಾ ಸಂಚಾಲಕ ಶ್ರೀ ರಾಧಾಕೃಷ್ಣ ಬೊಳ್ಳೂರು ದೇಶಭಕ್ತಿ ಗೀತೆಗಳ ಗಾಯನದ ಮೂಲಕ ದೇಶ ಪ್ರೇಮವನ್ನು ವಿದ್ಯಾರ್ಥಿಗಳಲ್ಲಿ...
ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನಾ ಇಲಾಖೆ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ತೇಜಸ್ವಿ ಕಡಪಳ ಅವರು ನಿರ್ಮಿಸಿದ್ದ 'ಖುಷಿಯೋಂಕಾ ಆಶಿಯಾನ' ಎಂಬ ಕಿರುಚಿತ್ರ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕದಲ್ಲಿ ಜುಲೈ...
ಜೆ ಸಿ ಐ ಸುಳ್ಯ ಸಿಟಿ ವತಿಯಿಂದ ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯ ಮತ್ತು ಬ್ರದರ್ಸ್ ಬಳ್ಳಡ್ಕ ರವರ ಸಹಯೋಗದೊಂದಿಗೆ ಬಳ್ಳಡ್ಕ ಗದ್ದೆಯಲ್ಲಿ ಕೆಸರ್ ಡ್ ಕಸರತ್ತ್ ಕ್ರೀಡಾಕೂಟ ಜು.24ರಂದು ನಡೆಯಿತು. ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಜೆಸಿಐ ಸುಳ್ಯ ಸಿಟಿ ಅಧ್ಯಕ್ಷ ಬಶೀರ್ ಯುಪಿ ವಹಿಸಿದ್ದರು. ಶಿವರಾಮ ಬಳ್ಳಡ್ಕ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಉಬರಡ್ಕ...
Loading posts...
All posts loaded
No more posts
