- Friday
- May 8th, 2026
ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಹಾನಿಗೊಂಡ ಕಾಲು ಸೇತುವೆ, ಪದಕದ ಮುಳುಗು ಸೇತುವೆ ಹಾಗೂ ಹರಿಹರದಲ್ಲಿ ಬರೆ ಕುಸಿತದಿಂದ ಹಾನಿಗೊಂಡ ತೇಜಕುಮಾರ್ ಕಜ್ಜೋಡಿಯವರ ಮನೆ ವೀಕ್ಷಣೆ ಮಾಡಿ ಮಾತನಾಡಿದರು. ಬಹಿಷ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯ ಆಗುವುದಿಲ್ಲ. ಯಾರೂ ಕೂಡ ಗೊಂದಲಕ್ಕೆ ಒಳಗಾಗಬಾರದು. ಹಂತಹಂತವಾಗಿ ನಾವು ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇವೆ. ಈಗಾಗಲೇ ಇಲ್ಲಿಗೆ 3 ಸೇತುವೆ ನಿರ್ಮಾಣ ಮಾಡಲಾಗಿದೆ....
ಐನೆಕಿದು ಗ್ರಾಮದ ಕೋಟೆ ಎಂಬಲ್ಲಿ ಸರಕಾರಿ ಬಸ್ಸೊಂದು ಕೆಸರಲ್ಲಿ ಬಾಕಿಯಾದ ಘಟನೆ ಜು.14 ರಂದು ನಡೆದಿದೆ. ಸುಬ್ರಹ್ಮಣ್ಯದಿಂದ ಬಾಳುಗೋಡಿಗೆ ಹೋಗುವ ಬಸ್ಸಿನ ಚಕ್ರ ಕೆಸರಲ್ಲಿ ಹೂತು ಹೋಗಿರುವುದರಿಂದ ಶಾಲಾ ವಿದ್ಯಾರ್ಥಿಗಳು ಪರದಾಡುವಂತಾಯಿತು. ಈ ರಸ್ತೆ ದುರಸ್ತಿ ಕಾಣದೇ ಹಲವಾರು ವರ್ಷಗಳೇ ಕಳೆದಿದೆ. ಈ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಬೇಕಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಜು.14ರಂದು ವಿಜೃಂಭಣೆಯಿಂದ ಜರುಗಿತು. ಶಾಲಾ ಆಡಳಿತ ಮಂಡಳಿಯ ಸಂಚಾಲಕರಾಗಿರುವ ಶ್ರೀಯುತ ರಾಧಾಕೃಷ್ಣ ಬೊಳ್ಳೂರುರವರು ಪ್ರಾಸ್ತಾವಿಕ ನುಡಿಗಳೊಂದಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮೀನುಗಾರಿಕಾ, ಬಂದರು ಮತ್ತು ಒಳನಾಡು ಸಚಿವರಾದ ಶ್ರೀಯುತ ಎಸ್ ಅಂಗಾರ ಅವರು ವಹಿಸಿಕೊಂಡು ಮಾತನಾಡಿ, ಈ ಊರಿನಲ್ಲಿ ಆರಂಭವಾದ...
ಅಜ್ಜಾವರ ಗ್ರಾಮದ ಕೆದ್ಕಾರ್ ರಾಮಣ್ಣ ಗೌಡರ ಕೊಟ್ಟಿಗೆಗೆ ಕಳೆದ ರಾತ್ರಿ ಎರಡು ಗಂಟೆ ಸುಮಾರಿಗೆ ಬೆಂಕಿ ತಗುಲಿ ಸಂಗ್ರಹಿಸಿಟ್ಟಿದ್ದ ಅಡಿಕೆ ಬೆಂಕಿಗೆ ಆಹುತಿಯಾಗಿದೆ. ಕೊಟ್ಟಿಗೆಯಲ್ಲಿದ್ದ ಪ್ರಿಡ್ಜ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗುಲಿದೆ ಎಂದು ತಿಳಿದುಬಂದಿದೆ. ಸುಲಿದು ಇಟ್ಟಿದ್ದ ಅಡಿಕೆ ಕೂಡ ಬೆಂಕಿಗೆ ಆಹುತಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಪೋಲೀಸರು, ಕಂದಾಯ ಹಾಗೂ...
ಪ್ರತಿಷ್ಠಿತ ರೋಟರಾಕ್ಟ್ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯ ಜಿಲ್ಲಾ ನಿರ್ದೇಶಕರಾಗಿ ಕಲ್ಲುಗುಂಡಿಯ ಸುಬ್ರಮಣಿ ಪಿ.ವಿ. 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಸಂಸ್ಥೆಯಲ್ಲಿ ದಿವ್ಯಾಂಗ ಚೇತನರ ಅಭಿವೃದ್ಧಿ ಮತ್ತು ಅವಕಾಶ ಕಲ್ಪಿಸಲು ಗುರುತಿಸಲಾದ ಹುದ್ದೆಗೆ ಇವರನ್ನು ನೇಮಕಗೊಳಿಸಲಾಗಿದೆ.
ಎಲಿಮಲೆ ಅರಂತೋಡು ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಹಲವು ಬಾರಿ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದರೂ ಆಡಳಿತ ಗಮನಹರಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಸ್ತೆಯ 26 ಕಡೆಗಳಲ್ಲಿ ಹಾಕಿದ್ದ ಬ್ಯಾನರ್ ಹಾಕಿದ್ದರು. ಮುಖ್ಯಮಂತ್ರಿಗಳು ಬರುವ ಹಿಂದಿನ ರಾತ್ರಿ 9 ಕಡೆ ಹಾಕಿದ್ದ ಬ್ಯಾನರ್ ಕಳವು ಗೈಯಲ್ಪಟ್ಟಿತ್ತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಬ್ಯಾನರ್ ಕಳುವುಗೈದ ಕಿಡಿಗೇಡಿಗಳ ವಿರುದ್ಧ ದೈವದ ಮೊರೆ ಹೋಗುತ್ತೇವೆ...
ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆಯಲ್ಲಿ ಜು.13 ಬುಧವಾರದಂದು ವೇದವ್ಯಾಸ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಸಹಶಿಕ್ಷಕರಾದ ಶ್ರೀ ಗುರುಪ್ರಸಾದ್ ಭಟ್ ಗುರು ಪೂರ್ಣಿಮೆಯ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯಗುರುಗಳಾದ ಶ್ರೀ ಪ್ರಶಾಂತ್ ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಶ್ರೀ ವಿನೋದ್ ಕುಮಾರ್ ಇವರು ಧನ್ಯವಾದಗೈದರು. ಸಹ ಶಿಕ್ಷಕರಾದ ಶ್ರೀ ಉಮೇಶ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ನಿಂತಿಕಲ್ಲಿನ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ಭುವನೇಶ್ ಕಡೀರ ಅವರ ಮಾಲಕತ್ವದಲ್ಲಿ ಜು.11 ರಂದು ಅಕ್ಷಯ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ಶುಭಾರಂಭಗೊಂಡಿತು. ಮಾಲಕರ ಮಾತೃಶ್ರೀ ಶ್ರೀಮತಿ ಶೇಷಮ್ಮ ಮೋನಪ್ಪ ಗೌಡ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ನ ಮಾಲಕರಾದ ಹಾಗೂ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವೆಂಕಪ್ಪ...
ಸುಳ್ಯ : ತಾಲೂಕಿನ ರೈತರು ಹೆಚ್ಚಾಗಿ ಅಡಿಕೆ ಕೃಷಿಯನ್ನೇ ಹೆಚ್ಚಾಗಿ ಅವಲಂಬಿಸಿದ್ದು ಈ ಬಾರಿ ಸುರಿದ ಕುಂಭದ್ರೋಣ ಮಳೆಗೆ ಅಡಿಕೆ ರಬ್ಬರ್ ಕೃಷಿಕರನ್ನು ಕಂಗಾಲಾಗಿಸಿದೆ. ಕೃಷಿ ಕೂಲಿ ಕಾರ್ಮಿಕರು ಕೂಡ ತೊಂದರೆಗೆ ಸಿಲುಕಿದ್ದಾರೆ. ವಿಪರೀತ ಮಳೆಯ ಪರಿಣಾಮದಿಂದ ತಾಲೂಕಿನ ವಿವಿಧೆಡೆ ಅಡಿಕೆ ತೋಟಗಳಲ್ಲಿ ಕೊಳೆರೋಗ ಕಾಣಿಸಿಕೊಂಡಿದೆ. ಸುಳ್ಯ ತಾಲೂಕಿನ ಮಡಪ್ಪಾಡಿ, ಕಲ್ಮಕಾರು, ಅಜ್ಜಾವರ, ಮರ್ಕಂಜ ಹಾಗೂ...
ತಾಲೂಕಿನ ಹರಿಹರ ಪಲ್ಲತಡ್ಕ ಗ್ರಾಮದ ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತನ ನೂತನ ಮನೆಯು ವಿಪರೀತವಾದ ಮಳೆಯಿಂದಾಗಿ ಪ್ರಕೃತಿ ವಿಕೋಪಕ್ಕೊಳಪಟ್ಟು ಗುಡ್ಡ ಕುಸಿದು ಹಾನಿಗೀಡಾಗಿದ್ದ ವಿಚಾರವನ್ನು ತಿಳಿದ ಕೆಪಿಸಿಸಿ ಸಂಯೋಜಕರಾದ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ನಂದಕುಮಾರ್ ರವರು ತಕ್ಷಣ ಸ್ಥಳಕ್ಕಾಗಮಿಸಿ ಸ್ಥಳೀಯ ಸಮಾಜಸೇವಾ ಸಂಘಟನೆಯಲ್ಲಿ ಒಂದಾದ ಲಯನ್ಸ್ ಕ್ಲಬ್ ರವರ ಜೊತೆಗೆ ಕೈಜೋಡಿಸಿ ಸಹಾಯಹಸ್ತ...
Loading posts...
All posts loaded
No more posts
