ಬಾಳುಗೋಡು : ಮರದ ಕಾಲು ಸೇತುವೆ ಕೊಚ್ಚಿ ಹೋಗಿ 11 ಮನೆಗಳ ಸಂಪರ್ಕ ಕಡಿತ – ನಿರ್ಲಕ್ಷ್ಯಕ್ಕೆ ಒಳಗಾದ ಉಪ್ಪುಕಳ

ಬಾಳುಗೋಡು ಗ್ರಾಮದ ಉಪ್ಪುಕಳ ಎಂಬಲ್ಲಿ ಸ್ವಾತಂತ್ರ್ಯ ಬಂದಾಗಿನಿಂದಲೂ ಮರದ ಪಾಲ ನಿರ್ಮಿಸಿ ಮಳೆಗಾಲ ದೈನಂದಿನ ಚಟುವಟಿಕೆಗಳಿಗೆ ತೆರಳುತ್ತಿದ್ದರು. ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದು ಪಾಲ ದಾಟುವ ಸ್ಥಿತಿ ಇಂದಿನವರೆಗೂ ಮುಂದುವರಿದಿದೆ. ಸ್ವಾತಂತ್ರ್ಯ ಬಂದ ಮೇಲಾದರೂ ಸೇತುವೆ ಆಗಬಹುದೆನ್ನುವ ಹಿರಿಯರು ಕನಸು ನನಸಾಗಿಯೇ ಉಳಿದಿದೆ. ಪ್ರತಿ ವರ್ಷ ಮಳೆಗೆ ಮೊದಲು ಈ ಭಾಗದ ನಿವಾಸಿಗಳೇ ಸೇರಿ...

ಸುಳ್ಯ : ವೇತನ ಪರಿಷ್ಕರಣೆ ಮತ್ತು ಉದ್ಯೋಗ ಭದ್ರತೆ ನೀಡಲು ಮೆಸ್ಕಾಂ ಗುತ್ತಿಗೆ ಕಾರ್ಮಿಕರಿಂದ ಸಚಿವರಿಗೆ ಮನವಿ

ಮೆಸ್ಕಾಂ ಇಲಾಖೆಯ ವಿವಿಧ ವಿಭಾಗಗಳಲ್ಲಿ ಸುಮಾರು 15 ವರ್ಷಗಳಿಂದ ಕಡಿಮೆ ವೇತನ ಪಡೆದು ದುಡಿಯುತ್ತಿದ್ದಾರೆ. ಆದುದರಿಂದ ವೇತನ ಪರಿಷ್ಕರಣೆ ಮಾಡುವಂತೆ ಮತ್ತು ಉದ್ಯೋಗ ಭದ್ರತೆ ನೀಡಲು ಒತ್ತಾಯಿಸಿ ಮೆಸ್ಕಾಂ ಗುತ್ತಿಗೆ ಕಾರ್ಮಿಕರಿಂದ ಇಂಧನ ಸಚಿವ ಸುನಿಲ್ ಕುಮಾರ್ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಮೆಸ್ಕಾಂ ಗುತ್ತಿಗೆ ನೌಕರರ ಪರವಾಗಿ ಶಿವಪ್ರಕಾಶ್ ಮನವಿ ಪತ್ರ ಸಲ್ಲಿಸಿದರು. ಈ...
Ad Widget

ಮಳೆಗಾಲದಲ್ಲಿ ಒಂದು ದಿನ

ರಾತ್ರಿ 10:30 ರ ಸಮಯ. ನಾಳೆ ಬೆಳಿಗ್ಗೆ ಬೇಗ ಏಳಬೇಕೆಂದು ಅಲಾರಾಂ ಇರಿಸಿ ಮಲಗಿದೆ. ಆಗತಾನೇ ಮಳೆ ಶುರುವಾಗಿತ್ತು. ಹೊತ್ತು ಕಳೆದು ಬೆಳಗಾಯಿತು. ಬೆಳಿಗ್ಗೆ ಬೇಗ ಏಳಬೇಕೆಂದು ಅಲಾರಾಂ ಇರಿಸಿ ಮಲಗಿದ್ದ ನನಗೆ ಮಳೆಯಿಂದಾಗಿ ಏಳಲು ಮನಸ್ಸಾಗಲಿಲ್ಲ. ಇನ್ನೂ ಸ್ವಲ್ಪ ಹೊತ್ತು ನಿದ್ರಿಸೋಣ ಎಂದು ಪುನಃ ಮಲಗಿದೆ. ಅಲಾರಾಂ ಬಡಿದುಕೊಳ್ಳುತ್ತಲೇ ಇತ್ತು, ಆದರೆ ಏಳಲು ಮನಸ್ಸಾಗಲಿಲ್ಲ....

ತೊಡಿಕಾನ : ಗುಡ್ಡ ಕುಸಿದು ಬಾಳೆಕಜೆ ರಸ್ತೆ ಬಂದ್

ತೊಡಿಕಾನ ಗ್ರಾಮದ ಮುತ್ತುಕೋಡಿ ಮಾವಿನಕಟ್ಟೆ ಬಾಳೆಕಜೆ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು ರಸ್ತೆ ಸಂಪೂರ್ಣ ಬಂದ್ ಆಗಿದೆ. ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತ್ ನವರು ಶೀಘ್ರ ರಸ್ತೆ ಸಂಪರ್ಕ ಸರಿಪಡಿಸಿಕೊಡಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹರಿಹರ ಪಲ್ಲತ್ತಡ್ಕ :- ಭಾರಿ ಮಳೆಗೆ ಕೊಪ್ಪತ್ತಡ್ಕ ಸೇತುವೆಯ ತಡೆಗೋಡೆ ಕುಸಿತ

ಭಾರಿ ಮಳೆಗೆ ಜು.06 ರಂದು ಹರಿಹರ ಪಲ್ಲತ್ತಡ್ಕ ಗ್ರಾಮದ ಕೊಪ್ಪತ್ತಡ್ಕ ಎಂಬಲ್ಲಿರುವ ಸೇತುವೆಯ ಒಂದು ಬದಿಯ ತಡೆಗೋಡೆಯ ಮಣ್ಣು ಕುಸಿದು ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ. ವರದಿ :- ಉಲ್ಲಾಸ್ ಕಜ್ಜೋಡಿ

ರಾಜ್ಯಸಭೆ ಸದಸ್ಯರಾಗಿ ಡಾ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿ ಯೋಜನೆಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ. ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ...

ಜು.7 ರಂದು ರೆಡ್ ಅಲರ್ಟ್ ಘೋಷಣೆ – ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ದಿನಾಂಕ: 7.07.2022 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ, ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ, ಪದವಿ,...

ಬಳ್ಪ : ಭೋಗಾಯನ ಕೆರೆಯ ತಡೆಗೋಡೆ ಕುಸಿತ – ಕಳಪೆ ಆರೋಪ

ಬಳ್ಪದಲ್ಲಿ ಸಂಸದ ನಳಿನ್ ಕುಮಾರ್ ಸಂಸದರ ಆದರ್ಶ ಗ್ರಾಮ ಯೋಜನೆಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಇತಿಹಾಸ ಪ್ರಸಿದ್ಧ ಭೋಗಾಯನ ಕೆರೆ ಅಭಿವೃದ್ಧಿಪಡಿಸಿದ್ದರು. ಇದೀಗ ವ್ಯಾಪಕ ಮಳೆಗೆ ಕೆರೆಯ ಕಟ್ಟೆ ಕುಸಿದುಬಿದ್ದಿದೆ. ಈ ಬಗ್ಗೆ ಕಳಪೆ ಕಾಮಗಾರಿಯ ಆರೋಪ ಕೇಳಿ ಬಂದಿದೆ.

ಅರಂತೋಡು : ನಿರಂತರ ವಿದ್ಯುತ್ ವ್ಯತ್ಯಯ ಬಗ್ಗೆ ಸಚಿವರಿಗೆ ದೂರು – ಪರ್ಯಾಯ ವ್ಯವಸ್ಥೆಗಳ ಬಗ್ಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಮಳೆಗಾಲ ಆರಂಭ ದಿನಗಳಿಂದ ಆರಂತೋಡು, ತೊಡಿಕಾನ ಸಂಪಾಜೆ ಗ್ರಾಮಗಳಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ಜನಪ್ರತಿನಿಧಿಗಳು ಸಚಿವ ಎಸ್. ಅಂಗಾರರಿಗೆ ಮನವಿ ಮಾಡಿದ್ದರು.ಇದಕ್ಕೆ ಸ್ಪಂದಿಸಿದ ಸಚಿವರು ಮೆಸ್ಕಾಂ ನ ಸಹಾಯಕ ತಾಂತ್ರಿಕ ಅಧಿಕಾರಿ ಸುಪ್ರಿತ್ ಅವರನ್ನು ಕಛೇರಿಗೆ ಕರೆಸಿ ನಿರಂತರ ವಿದ್ಯುತ್ ನೀಡಲು ಆಗಬೇಕಾಗಿರುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲು ಆದೇಶಿಸಿದರು....

ಬಳ್ಪ : ರಸ್ತೆ ಬದಿ ಬರೆ ಕುಸಿತ, ಸಂಚಾರಕ್ಕೆ ಅಡಚಣೆ

ಬಳ್ಪ ಗ್ರಾಮದ ಆಲ್ಕಬೆ ಎಂಬಲ್ಲಿ ಗುಡ್ಡ ಕುಸಿತ ಜು.4 ರಂದು ಗುಡ್ಡ ಕುಸಿದಿದ್ದು ಸಂಚಾರಕ್ಕೆ ತಡೆಯುಂಟಾಗಿದೆ.ರಸ್ತೆಯಲ್ಲಿ ಘನ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದ್ದು, ಸಂಪೂರ್ಣವಾಗಿ ಕೆಸರುಮಯವಾಗಿ ಪಾದಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿದೆ ಮಳೆ ಇದೇ ರೀತಿ ಮುಂದುವರಿದರೆ ಗುಡ್ಡ ಇನ್ನಷ್ಟೂ ಕುಸಿಯುವ ಭೀತಿಯಲ್ಲಿದೆ. ಪಂಚಾಯಿತಿಗೆ ಮನವಿ ಮಾಡಿದ್ದರು ಯಾವ ಕ್ರಮ ಇನ್ನು ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವರದಿ...
Loading posts...

All posts loaded

No more posts

error: Content is protected !!