ಹರಿಹರ ಪಲ್ಲತ್ತಡ್ಕ :- ಭಾರಿ ಮಳೆಗೆ ಕೊಪ್ಪತ್ತಡ್ಕ ಸೇತುವೆಯ ತಡೆಗೋಡೆ ಕುಸಿತ

ಭಾರಿ ಮಳೆಗೆ ಜು.06 ರಂದು ಹರಿಹರ ಪಲ್ಲತ್ತಡ್ಕ ಗ್ರಾಮದ ಕೊಪ್ಪತ್ತಡ್ಕ ಎಂಬಲ್ಲಿರುವ ಸೇತುವೆಯ ಒಂದು ಬದಿಯ ತಡೆಗೋಡೆಯ ಮಣ್ಣು ಕುಸಿದು ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ. ವರದಿ :- ಉಲ್ಲಾಸ್ ಕಜ್ಜೋಡಿ

ರಾಜ್ಯಸಭೆ ಸದಸ್ಯರಾಗಿ ಡಾ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮಾಭಿವೃದ್ಧಿ ಯೋಜನೆಯ ಹರಿಕಾರ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳಲಿದ್ದಾರೆ. ಗ್ರಾಮಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ರಾಜ್ಯದ ಹೆಮ್ಮೆಯಾಗಿದೆ. ಗ್ರಾಮೀಣಾಭಿವೃದ್ಧಿಯೆ ಸಾಧನೆಗೆ ಸಂದ ಗೌರವವಾಗಿದೆ. ಈ ಬಗ್ಗೆ ಸ್ಮರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮಸ್ಥಳ ಭೇಟಿ ಹಾಗೂ ಅವರ...
Ad Widget

ಜು.7 ರಂದು ರೆಡ್ ಅಲರ್ಟ್ ಘೋಷಣೆ – ಶಾಲಾ ಕಾಲೇಜುಗಳಿಗೆ ನಾಳೆಯೂ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ದಿನಾಂಕ: 7.07.2022 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ, ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ, ಪದವಿ,...

ಬಳ್ಪ : ಭೋಗಾಯನ ಕೆರೆಯ ತಡೆಗೋಡೆ ಕುಸಿತ – ಕಳಪೆ ಆರೋಪ

ಬಳ್ಪದಲ್ಲಿ ಸಂಸದ ನಳಿನ್ ಕುಮಾರ್ ಸಂಸದರ ಆದರ್ಶ ಗ್ರಾಮ ಯೋಜನೆಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಇತಿಹಾಸ ಪ್ರಸಿದ್ಧ ಭೋಗಾಯನ ಕೆರೆ ಅಭಿವೃದ್ಧಿಪಡಿಸಿದ್ದರು. ಇದೀಗ ವ್ಯಾಪಕ ಮಳೆಗೆ ಕೆರೆಯ ಕಟ್ಟೆ ಕುಸಿದುಬಿದ್ದಿದೆ. ಈ ಬಗ್ಗೆ ಕಳಪೆ ಕಾಮಗಾರಿಯ ಆರೋಪ ಕೇಳಿ ಬಂದಿದೆ.

ಅರಂತೋಡು : ನಿರಂತರ ವಿದ್ಯುತ್ ವ್ಯತ್ಯಯ ಬಗ್ಗೆ ಸಚಿವರಿಗೆ ದೂರು – ಪರ್ಯಾಯ ವ್ಯವಸ್ಥೆಗಳ ಬಗ್ಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಮಳೆಗಾಲ ಆರಂಭ ದಿನಗಳಿಂದ ಆರಂತೋಡು, ತೊಡಿಕಾನ ಸಂಪಾಜೆ ಗ್ರಾಮಗಳಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ಜನಪ್ರತಿನಿಧಿಗಳು ಸಚಿವ ಎಸ್. ಅಂಗಾರರಿಗೆ ಮನವಿ ಮಾಡಿದ್ದರು.ಇದಕ್ಕೆ ಸ್ಪಂದಿಸಿದ ಸಚಿವರು ಮೆಸ್ಕಾಂ ನ ಸಹಾಯಕ ತಾಂತ್ರಿಕ ಅಧಿಕಾರಿ ಸುಪ್ರಿತ್ ಅವರನ್ನು ಕಛೇರಿಗೆ ಕರೆಸಿ ನಿರಂತರ ವಿದ್ಯುತ್ ನೀಡಲು ಆಗಬೇಕಾಗಿರುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲು ಆದೇಶಿಸಿದರು....

ಬಳ್ಪ : ರಸ್ತೆ ಬದಿ ಬರೆ ಕುಸಿತ, ಸಂಚಾರಕ್ಕೆ ಅಡಚಣೆ

ಬಳ್ಪ ಗ್ರಾಮದ ಆಲ್ಕಬೆ ಎಂಬಲ್ಲಿ ಗುಡ್ಡ ಕುಸಿತ ಜು.4 ರಂದು ಗುಡ್ಡ ಕುಸಿದಿದ್ದು ಸಂಚಾರಕ್ಕೆ ತಡೆಯುಂಟಾಗಿದೆ.ರಸ್ತೆಯಲ್ಲಿ ಘನ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದ್ದು, ಸಂಪೂರ್ಣವಾಗಿ ಕೆಸರುಮಯವಾಗಿ ಪಾದಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿದೆ ಮಳೆ ಇದೇ ರೀತಿ ಮುಂದುವರಿದರೆ ಗುಡ್ಡ ಇನ್ನಷ್ಟೂ ಕುಸಿಯುವ ಭೀತಿಯಲ್ಲಿದೆ. ಪಂಚಾಯಿತಿಗೆ ಮನವಿ ಮಾಡಿದ್ದರು ಯಾವ ಕ್ರಮ ಇನ್ನು ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವರದಿ...

ಐವರ್ನಾಡು : ಕಾಂಗ್ರೆಸ್ ಕಾರ್ಯಕರ್ತರ ಸಭೆ – ಕೆಪಿಸಿಸಿ ಮಾಜಿ ಸದಸ್ಯ ಡಾ.ರಘು ಭೇಟಿ

ಐವರ್ನಾಡಿನಲ್ಲಿ ನಡೆದ ನಾ ನಾಯಕಿಯರ ಪೂರ್ವಭಾವಿ ಸಭೆಯು ಜಯಪ್ರಕಾಶ್ ನೆಕ್ರಪ್ಪಾಡಿಯವರ ಮನೆಯಲ್ಲಿ ನಡೆಯಿತು. ಈ ಸಭೆಗೆ ಮಾಜಿ ಕೆಪಿಸಿಸಿ ಸದಸ್ಯರಾದ ಡಾ. ರಘು ಪಾಲ್ಗೊಂಡಿದ್ದರು . ಕಾಂಗ್ರೆಸ್ಸಿನ ಹಿರಿಯರಾದ ನೆಕ್ರಪ್ಪಾಡಿ ಕೃಷ್ಣಪ್ಪಗೌಡ , ಮಾಜಿ ತಾಲೂಕ್ ಪಂಚಾಯತ್ ಸದಸ್ಯ ರಾಜೀವಿ ಉದ್ದಂಪ್ಪಾಡಿ , ಪಂಚಾಯತ್ ಮಾಜಿ ಸದಸ್ಯ ಚಂಚಲಾಕ್ಷಿ ಕತ್ಲಡ್ಕ ಹಾಗೂ ಮಹಿಳೆಯರು ಮತ್ತು ಕಾಂಗ್ರೆಸ್...

ಶಿಥಿಲಗೊಂಡಿರುವ ಕೊಡಿಯಾಲ – ಪೆರುವಾಜೆ ಸಂಪರ್ಕಿಸುವ ಸಾರಕೆರೆ ಕಿಂಡಿ ಅಣೆಕಟ್ಟು, ಸರ್ವಋತು ಸೇತುವೆಗಾಗಿ ನಾಗರಿಕರ ಒತ್ತಾಯ

ಕೊಡಿಯಾಲ - ಪೆರುವಾಜೆ ಗ್ರಾಮಗಳನ್ನು ಸಂಪರ್ಕಿಸುವ ಸಾರಕೆರೆ ಎಂಬಲ್ಲಿ ಸುಮಾರು 45 ವರ್ಷಗಳ ಹಿಂದೆ ನಿರ್ಮಿಸಲಾದ ಕಿಂಡಿ ಅಣೆಕಟ್ಟು ಈಗ ಸಂಪೂರ್ಣ ಶಿಥಿಲಗೊಂಡಿದ್ದು, ಸದ್ರಿ ಅಣೆಕಟ್ಟಿನ ಮೇಲೆ ಇರುವ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುವುದು ದುಸ್ತರವಾಗಿದೆ. ಈ ಕಾಲುದಾರಿಯಲ್ಲಿ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಕೊಡಿಯಾಲ ಗ್ರಾಮದ ಅನಗುರಿ, ಕೆಡೆಂಜಿಮೊಗ್ರು, ಬೇರ್ಯ ಉಡುಕಿ ಕಾಲೋನಿಯ ನಾಗರಿಕರು ಹಾಗೂ...

ಅರಣ್ಯ ಇಲಾಖೆಯಿಂದ 110ಕೆ.ವಿ. ವಿದ್ಯುತ್ ಲೈನ್ ಎಳೆಯಲು ಅನುಮತಿ – ಶೀಘ್ರ ಕಾಮಗಾರಿ ಆರಂಭ : ಸಚಿವ ಅಂಗಾರ

ಸುಳ್ಯಕ್ಕೆ 110 ಕೆವಿವಿದ್ಯುತ್ ಲೈನ್ ಹಾದು ಹೋಗಲು ಅರಣ್ಯ ಇಲಾಖೆಯ ತೊಡಕು ನಿವಾರಣೆಯಾಗಿದ್ದು ಕೇಂದ್ರ ಪರಿಸರ‌ ಇಲಾಖೆ ಅನುಮತಿ ನೀಡಿದೆ. 110 ಕೆ.ವಿ. ಲೈನ್ ಹಾಗೂ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದಲ್ಲಿ...

ಕಲ್ಮಕಾರು :- ಗುಳಿಕ್ಕಾನಕ್ಕೆ ಭೂ ವಿಜ್ಞಾನಿಗಳು ಮತ್ತು ಗಣಿ ಇಲಾಖೆಯ ಅಧಿಕಾರಿಗಳ ಭೇಟಿ : ಸ್ಥಳ ಪರಿಶೀಲನೆ, ಮಾಹಿತಿ ಸಂಗ್ರಹ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಕಾರಿನ ಗುಳಿಕ್ಕಾನದ ಗುಡ್ಡದಲ್ಲಿ 2018 ರಲ್ಲಿ ಭೂಮಿ ಆಳವಾಗಿ ಬಿರುಕು ಬಿಟ್ಟಿತು. ಆ ಸಂದರ್ಭದಲ್ಲಿ ಗುಳಿಕ್ಕಾನದ ಗುಡ್ಡದ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು. ಅಲ್ಲಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿ 4 ವರ್ಷಗಳಾದರೂ ಈವರೆಗೆ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಗುಳಿಕ್ಕಾನ ಪ್ರದೇಶ ಜನರ ವಾಸಕ್ಕೆ ಯೋಗ್ಯವಾಗಿದೆಯೇ ಎಂದು ತಿಳಿಯಲು...
Loading posts...

All posts loaded

No more posts

error: Content is protected !!