ಅಡ್ಡನಪಾರೆ : ಮನೆ ಮೇಲೆ ಮರ ಬಿದ್ದು ಸಂಪೂರ್ಣ ಹಾನಿ : ಮಹಿಳೆಯ ತಲೆಗೆ ಗಾಯ

ನಿರಂತರ ಮಳೆಯಿಂದ ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಹಾಗೂ ಮನೆಯೊಳಗಿದ್ದ ಮಹಿಳೆಯ ತಲೆಗೆ ಗಂಭೀರ ಗಾಯಗಳಾದ ಘಟನೆ ಇಂದು ನಡೆದಿದೆ. ದೇವಚಳ್ಳ ಗ್ರಾಮದ ಅಡ್ಡನಪಾರೆ ನಿವಾಸಿ ದೈವ ನರ್ತಕ ಚಿದಾನಂದ ಅವರ ಮನೆಗೆ ಮನೆಗೆ ಮರ ಬಿದ್ದು ಮನೆ ಸಂಪೂರ್ಣ ಕುಸಿದಿದೆ. ಮನೆಯೊಳಗಿದ್ದ ಚಿದಾನಂದ ರವರ ಪತ್ನಿ ಶೀಲಾವತಿಯ ತಲೆಗೆ ಗಂಭೀರ...

ಬೊಳುಬೈಲು : ನವಚೇತನ ಚಿಣ್ಣರ ಕೂಟ ಉದ್ಘಾಟನೆ

ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇದರ ನವಚೇತನ ಚಿಣ್ಣರ ಕೂಟದ ಉದ್ಘಾಟನಾ ಸಮಾರಂಭ ಜು‌.3ರಂದು ಯುವಕ ಮಂಡಲದ ಸಭಾಭವನ ಯುವಸದನ ಬೊಳುಬೈಲುನಲ್ಲಿ ನಡೆಯಿತು.ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯ ಇದರ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ಉದ್ಘಾಟಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದ ಅವರು ಉದ್ಯೋಗದ ಕಾರಣಕ್ಕಾಗಿ ಶಿಕ್ಷಣ ಪಡೆಯುವ ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ...
Ad Widget

ಮತ್ತೆ ಭೂಕಂಪ – ಪೆರಾಜೆ, ಚೆಂಬು ಭಾಗದಲ್ಲಿ ಶಬ್ಧದೊಂದಿಗೆ ಲಘು ಕಂಪನ

ಕೊಡಗು ಹಾಗೂ ದಕ್ಷಿಣ ಕನ್ನಡ ಗಡಿ ಭಾಗದಲ್ಲಿ ನಿರಂತರ ಕಂಪನ ಸಂಭವಿಸುತ್ತಿದ್ದು ಜು‌.3 ರಂದು ರಾತ್ರಿ 9.18 ಕ್ಕೆ ಭೂಮಿ ಕಂಪಿಸಿದೆ. ಮೊದಲಿಗೆ ಶಬ್ಧ ಹಾಗೂ ನಂತರ ಸಣ್ಣ ಮಟ್ಟಿನ ಕಂಪನ ಆಗಿದೆ ಎಂದು ಚೆಂಬು ನಿವಾಸಿಗಳು ಮಾಹಿತಿ ನೀಡಿದ್ದಾರೆ. ಹಿಂದಿನ ಕಂಪನಗಳಿಗೆ ಹೋಲಿಸಿದರೆ ಇದು ಲಘು ಪ್ರಮಾಣದಲ್ಲಿತ್ತು ಎನ್ನಲಾಗಿದೆ.

ನಡುಗಲ್ಲು ಹರಿಹರಪಲ್ಲತ್ತಡ್ಕ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ತಡೆ

ನಡುಗಲ್ಲು ಹರಿಹರಪಲ್ಲತ್ತಡ್ಕ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ತಡೆ ಉಂಟಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸಂಚಾರಕ್ಕೆ ಅಡಚಣೆಯಾಗಿದ್ದು ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ.

ನೀನಾಸಂ ರಂಗ ಶಿಕ್ಷಣಕ್ಕೆ ಮಮತಾ ಕಲ್ಮಕಾರು ಆಯ್ಕೆ

ಕರ್ನಾಟಕದ ಪ್ರತಿಷ್ಠಿತ ರಂಗ ಶಿಕ್ಷಣ ಕೇಂದ್ರವಾಗಿರುವ ನೀನಾಸಂ ನ 2022-23 ನೇ ಸಾಲಿನ ರಂಗಪದವಿ ವಿದ್ಯಾರ್ಥಿನಿಯಾಗಿ, ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯದ ಪ್ರತಿಭೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ರಾಜ್ಯಾದ್ಯಂತ ನಡೆಸಿದ ರಂಗ ಪಯಣದ ಸಾಹೇಬ್ರು ಬಂದವೇ ನಾಟಕದ ಮುಖ್ಯ ನಟಿ ಕುಮಾರಿ ಮಮತಾ ಕಲ್ಮಕಾರು ಇವರು ಆಯ್ಕೆ ಆಗಿರುತ್ತಾರೆ.ಮಮತಾರವರು  ಅರೆಭಾಷೆ...

7ನೇ ಬಾರಿಗೆ ನಡುಗಿದ ಭೂಮಿ – ದಿನದಲ್ಲಿ ಎರಡು ಸಲ ಕಂಪನ

ಚೆಂಬು, ಸಂಪಾಜೆ ಗೂನಡ್ಕ, ತೊಡಿಕಾನ ಸೇರಿದಂತೆ ವಿವಿಧೆಡೆ ಇಂದು ರಾತ್ರಿ 8.28 ಕ್ಕೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ತಿಳಿದು ಬಂದಿದೆ

ಕೊಲ್ಲಮೊಗ್ರ : ವ್ಯಕ್ತಿಯೋರ್ವನಿಗೆ ಚೂರಿ ಇರಿತ – ಗಂಭೀರ ಗಾಯ

ಕೊಲ್ಲಮೊಗ್ರ ಗ್ರಾಮದ ತೋಟದಮಜಲು ಎಂಬಲ್ಲಿ ವ್ಯಕ್ತಿಯೊರ್ವರಿಗೆ ಅಪರಿಚಿತನೋರ್ವ ಚೂರಿ ಇರಿದ ಘಟನೆ ವರದಿಯಾಗಿದೆ. ತೋಟದಮಜಲಿನಲ್ಲಿ ಕಳೆದ 10 ವರ್ಷಗಳಿಂದ ನೆಲೆಸಿದ್ದ ಲೂಕೋಸ್ ಎಂಬವರು ಚೂರಿ ಇರಿತದಿಂದ ಗಾಯಗೊಂಡ ವ್ಯಕ್ತಿ. ದೇಹದ 5 ಕಡೆ ಚೂರಿ ಇರಿತದಿಂದ ಗಾಯಗಳಾಗಿದ್ದು, ಸ್ಥಳೀಯರು ಸುಬ್ರಹ್ಮಣ್ಯ ಪೋಲೀಸರಿಗೆ ಮಾಹಿತಿ ನೀಡಿ ಗಾಯಾಳುವನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಸುಳ್ಯ: ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸುಳ್ಯದ ರಥಬೀದಿಯ ಸಮುದಾಯ ಭವನದಲ್ಲಿ ಜು. 6 ರಂದು ರೋಟರಿ ಕ್ಲಬ್ ಸುಳ್ಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಕುರಿತು ಜು.2 ರಂದು ಪತ್ರಿಕಾ ಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ರೊ. ಚಂದ್ರಶೇಖರ ಪೇರಾಲು ಕಾರ್ಯಕ್ರಮದ ಸಂಪೂರ್ಣ ಮಾಹಿತಿಯನ್ನು ನೀಡಿ, ರೋಟರಿ ಪದಗ್ರಹಣ ಕಾರ್ಯಕ್ರಮವನ್ನು ಪುತ್ತೂರು ರೋಟರಿ ಕ್ಲಬ್ ನ ಅಧ್ಯಕ್ಷರಾಗಿರುವ ರೊ....

ಅರಂತೋಡು : ಪಿಕಪ್ ಪಲ್ಟಿ

ಅರಂತೋಡು ಅಡ್ಯಡ್ಕ ಸಮೀಪ ಅಜ್ಜನಗದ್ದೆ ಎಂಬಲ್ಲಿ ಪಿಕಪ್ ವಾಹನ ಪಲ್ಟಿಯಾದ ಘಟನೆ ಇಂದು ನಡೆದಿದೆ. ಹಂದಿ ಸಾಗಿಸುತ್ತಿದ್ದ ವಾಹನವಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಐವರ್ನಾಡು : ಪ್ರಿಡ್ಜ್ ನಿಂದ ಶಾಕ್ ಹೊಡೆದು 4 ವರ್ಷದ ಬಾಲಕ ಮೃತ್ಯು

ಐವರ್ನಾಡಿನಲ್ಲಿ ಸಂಭವಿಸಿದ ವಿದ್ಯುತ್ ದುರಂತವೊಂದರಲ್ಲಿ ನಾಲ್ಕು ವರ್ಷದ ಬಾಲಕ ದುರ್ಮರಣಕ್ಕೀಡಾದ ಘಟನೆ ಇಂದು ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ, ರಿಕ್ಷಾ ಡ್ರೈವರ್ ಅಜರ್ ಅವರ ಸಹೋದರಿ ಅಪ್ಸರವರ ಮಗ ಹೈದರ್ ಅಲಿ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪ್ರಿಡ್ಜ್ ನ ಮುಟ್ಟಿದಾಗ ಶಾಕ್ ಹೊಡೆದಿದೆ ಎನ್ನಲಾಗಿದೆ.
Loading posts...

All posts loaded

No more posts

error: Content is protected !!