- Saturday
- May 9th, 2026
ಕೊಡಗು ಹಾಗೂ ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ೫ನೇ ಬಾರಿ ಕಂಪನದ ಅನುಭವ ಉಂಟಾಗಿದೆ. ಚೆಂಬು, ಗೂನಡ್ಕ ಹಾಗೂ ಉಬರಡ್ಕದಲ್ಲಿ 10.45 ಕ್ಕೆ ಕಂಪಿಸಿದೆ ಎಂದು ತಿಳಿದು ಬಂದಿದೆ. ಜನರು ಕಂಪನಕ್ಕೆ ಹೆದರಿ ಮನೆಯಿಂದ ಹೊರಗೆ ಬಂದಿದ್ದಾರೆ ಎನ್ನಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಲಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯದ ವತಿಯಿಂದ ಜೂ.28 ರಂದು ಕಲ್ಮಕಾರು ಪದ್ನಡ್ಕದ ಕಮಲ ಎಂಬುವವರ ಮನೆಯ ಮಾಡಿನ ದುರಸ್ತಿ ಕಾರ್ಯ ಮಾಡಲಾಯಿತು. ಜೂ.28 ರಿಂದ ಜೂ.30 ರವರೆಗೆ ದುರಸ್ತಿ ಕಾರ್ಯ ನಡೆಸಲಾಯಿತು. ಜೂ.30 ರಂದು ಮನೆಯ ಸ್ವಚ್ಚತೆ ಮಾಡಿ ಮನೆಯವರಿಗೆ ಬಿಟ್ಟು ಕೊಡಲಾಯಿತು.ಈ ಮಾಡಿನ...
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕುಕ್ಕೆ ಸುಬ್ರಹ್ಮಣ್ಯದಿಂದ ಸುಳ್ಯ ಮಾರ್ಗವಾಗಿ ಮಡಿಕೇರಿಗೆ ಪ್ರಯಾಣಿಸಲಿದ್ದು, ಸುಳ್ಯ ನಗರ ಸೇರಿದಂತೆ ಸುಬ್ರಹ್ಮಣ್ಯ-ಸುಳ್ಯ- ಮಡಿಕೇರಿ ಮಾರ್ಗದಲ್ಲಿ ವಾಹನ ಚಾಲಕರು ಅಡ್ಡಾದಿಡ್ಡಿಯಾಗಿ ವಾಹನ ಪಾರ್ಕಿಂಗ್ ಮಾಡದಂತೆ, ವಾಹನ ಚಲಾಯಿಸದಂತೆ ಪೊಲೀಸ್ ಪ್ರಕಟಣೆ ಹೊರಡಿಸಲಾಗಿದೆ.
ಸುಳ್ಯ : ನಾಲ್ಕನೇ ಬಾರಿಗೆ ಸುಳ್ಯದ ವಿವಿಧೆಡೆ ಭೂಕಂಪದ ಅನುಭವವಾಗಿದೆ. ರಾತ್ರಿ ಗಂಟೆ ಸರಿಸುಮಾರು 1-15 ಕ್ಕೆ ಕಂಪಿಸಿದ ಅನುಭವವಾಗಿದೆ. ಸಂಪಾಜೆ, ಗೂನಡ್ಕ, ಪೆರಾಜೆ, ಅರಂಬೂರು, ಶಾಂತಿನಗರ, ಹಳೆಗೇಟು ಭಾಗದಲ್ಲಿ ಭೂಮಿ ಕಂಪಿಸಿದ್ದು ಇನ್ನು ಹಲವರಿಗೆ ದೊಡ್ಡ ಶಬ್ದದ ಅನುಭವವಾಗಿದೆ ಎಂದು ತಿಳಿದುಬಂದಿದೆ. ರಿಕ್ಟರ್ ಮಾಪಕದಲ್ಲಿ 1.8 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಬಾರಿ...
ಮಂಗಳೂರು: ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ...
ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ...
ವಸ್ತ್ರ ವ್ಯಾಪಾರದಲ್ಲಿ ಹೆಸರುಗಳಿಸಿರುವ ಸುಳ್ಯದ ಕುಮ್ ಕುಮ್ ಪ್ಯಾಶನ್ ನಲ್ಲಿ Zeel ಕಂಪೆನಿಯ ರೈನ್ ಕೋಟ್ ಗಳ ಅಮೋಘ ಸಂಗ್ರಹದೊಂದಿಗೆ ವಿಶೇಷ ರಿಯಾಯಿತಿಯನ್ನು ಗ್ರಾಹಕರಿಗೆ ನೀಡಲಾಗುತ್ತದೆ.ಮಳೆಗಾಲ ಆರಂಭದೊಂದಿಗೆ ಶಾಲಾ ಕಾಲೇಜುಗಳು ಪ್ರಾರಂಭಗೊಂಡಿದ್ದು, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ Zeel ಕಂಪನಿಯ ರೈನ್ ಕೋಟ್ ಗಳ ಅಪೂರ್ವ ಸಂಗ್ರಹ ಮಾಡಲಾಗಿದ್ದು, 10% ರಿಯಾಯಿತಿಯನ್ನೂ ನೀಡಲಾಗುತ್ತದೆ ಎಂದು ಮಾಲಕರು...
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು. ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಮೀನುಗಾರಿಕೆ, ಬಂದರು ಮತ್ತು...
ಮರ್ಕಂಜ ಗ್ರಾಮದ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಗ್ರಾಮಸ್ಥರಿಂದ ಧರಣಿ ಆರಂಭಗೊಂಡಿದೆ.ಗಣಿಗಾರಿಕೆಯಿಂದ ಸ್ಥಳೀಯರಿಗೆ, ಧಾರ್ಮಿಕ ಕಟ್ಟಡಗಳಿಗೆ, ಶಾಲೆ ಹಾಗೂ ಜನವಸತಿ ಪ್ರದೇಶಕ್ಕೆ ಹಾನಿಯಾಗುತ್ತಿದ್ದು ತಕ್ಷಣ ಗಣಿಗಾರಿಕೆ ನಿಲ್ಲಿಸುವಂತೆ ಅಂಬೇಡ್ಕರ್ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮರ್ಕಂಜದ ಹಳೆ ವಿದ್ಯಾರ್ಥಿ ಸಂಘ, ಭಜನಾ ಮಂದಿರದ ಪದಾಧಿಕಾರಿಗಳು, ಗ್ರಾಮಸ್ಥರು ಧರಣಿಯಲ್ಲಿ...
ನಿಂತಿಕಲ್ಲು ಮುಖ್ಯ ಪೇಟೆಯಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಾಣಗೊಂಡ ಸಾರ್ವಜನಿಕ ಶೌಚಾಲಯ ಅವ್ಯವಸ್ಥೆಯಿಂದ ಕೂಡಿದ್ದು ಹಾಳುಬಿದ್ದಿದೆ. ಯಾರಿಗೂ ಉಪಯೋಗಕ್ಕೆ ಬಾರದೇ ಬೆಳೆಯುತ್ತಿರುವ ಪೇಟೆಗೆ ಈ ಶೌಚಾಲಯ ಕಪ್ಪು ಚುಕ್ಕೆಯಂತಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಸೂಕ್ತ ಕ್ರಮ ಕೈಗೊಂಡು ಶೀಘ್ರ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಹಾಗೂ ವರ್ತಕರು ಆಗ್ರಹಿಸಿದ್ದಾರೆ.
Loading posts...
All posts loaded
No more posts
